Homeಕರ್ನಾಟಕವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

ವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

- Advertisement -
- Advertisement -

ಕೇಂದ್ರ ಸರ್ಕಾರವು 2023ರ ಸೆಪ್ಟೆಂಬರ್ 18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಘೋಷಿಸಿದೆ. ಈ ಅಧಿವೇಶನದ ಕಾರ್ಯಸೂಚಿಯನ್ನು ಬಹಿರಂಗಪಡಿಸಲು ಪ್ರತಿಪಕ್ಷಗಳು ಆಗ್ರಹಿಸಿದ್ದರೂ, ಕೇಂದ್ರ ಸರ್ಕಾರವು ಕಾರ್ಯಸೂಚಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆ ಬಹುತ್ವ ಕರ್ನಾಟಕ ಸಂಘಟನೆ ‘ಸಂಸತ್ತಿನ ವಿಶೇಷ ಅಧಿವೇಶನ- ಜನಸಾಮಾನ್ಯರ ಹಕ್ಕೊತ್ತಾಯ” ಬಿಡುಗಡೆ ಮಾಡಲು ಮುಂದಾಗಿದ್ದು, ಇದಕ್ಕೆ ಜನ ಸಾಮಾನ್ಯರಿಂದ ಅಭಿಪ್ರಾಯವನ್ನು ಕೇಳಿಕೊಂಡಿದೆ.

ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ನಿಮ್ಮ ಅನಿಸಿಕೆ, ಆಸೆಗಳನ್ನು ಕೆಳಗಿನ ಪ್ರಶ್ನಾವಳಿಗೆ ಉತ್ತರಿಸುವ ಮೂಲಕ ಅಭಿಪ್ರಾಯ ಕಳುಹಿಸಿಕೊಡಬೇಕೆಂದು ಈ ಸಂಘಟನೆ ಕೋರಿದೆ.

ಸಂಸತ್ತಿನ ಅಧಿವೇಶನಗಳು ಚುನಾಯಿತ ಸರ್ಕಾರದ ಅತ್ಯಂತ ನಿರ್ಣಾಯಕ ಸಾಂವಿಧಾನಿಕ ಪ್ರಕ್ರಿಯೆಗಳಲ್ಲಿ ಒಂದು. ಸಂಸತ್ತಿನ ಅಧಿವೇಶನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಂಸದರು, ಮಂತ್ರಿಗಳ ಕಾರ್ಯಕ್ಷಮತೆ ಬಗ್ಗೆ ಅಥವಾ ಪ್ರಮುಖ ವಿಷಯಗಳಲ್ಲಿ ಸರ್ಕಾರದ  ವೈಫಲ್ಯತೆ ಬಗ್ಗೆ ಪ್ರಶ್ನೆಗಳನ್ನು ಕೇಳಲು ಸಾಂವಿಧಾನಿಕ ಅವಕಾಶವಿದೆ.

ಆದರೆ ಸೆ.18ರ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಗೌಪ್ಯವಾಗಿರಿಸಿರುವುದು ಮಾತ್ರವಲ್ಲದೆ, ಪ್ರಶ್ನೋತ್ತರ ಅವಧಿ ಮತ್ತು ಶೂನ್ಯ ವೇಳೆಯಂತಹ ಪ್ರಮುಖ ಕಾರ್ಯವಿಧಾನಗಳನ್ನು ಕೂಡ ಸರ್ಕಾರ ಸ್ಥಗಿತಗೊಳಿಸಿದೆ. ಚುನಾಯಿತ ಸರ್ಕಾರದ ಹೊಣೆಗಾರಿಕೆಯನ್ನು ಪಡೆಯಲು ಸ್ಥಾಪಿಸಲಾದ ಸಂಸದೀಯ ಕಾರ್ಯವಿಧಾನಗಳನ್ನು ಈ ಸರ್ಕಾರವು ಅಮಾನತುಗೊಳಿಸಿರುವುದು ಆತಂಕದ ವಿಷಯ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ.

ಈ ವಿಶೇಷ ಅಧಿವೇಶನದಲ್ಲಿ ಜನಸಾಮಾನ್ಯರು ಎದುರಿಸುವ ಮುಖ್ಯ ಸಮಸ್ಯೆಗಳ ಬಗ್ಗೆ ಚರ್ಚಿಸುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸಕ್ರೀಯ ನಾಗರಿಕರಾದ ನಿಮ್ಮಿಂದ, ಈ ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ಅನಿಸಿಕೆ, ಆಸೆಗಳನ್ನು ನಮ್ಮೊಂದಿಗೆ ಕೆಳಗಿನ ಪ್ರಶ್ನಾವಳಿಯ ಮೂಲಕ ಹಂಚಿಕೊಳ್ಳಲು ಕೋರುತ್ತೇವೆ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ ಅಲ್ಲದೆ ಈ ಪ್ರಶ್ನಾವಳಿಗೆ ಉತ್ತರಿಸುವವರ ಹೆಸರು, ಇ-ಮೇಲ್, ವಿಳಾಸ, ಯಾವ ಮಾಹಿತಿಯನ್ನೂ ನಾವು ಸಂಗ್ರಹಿಸುವುದಿಲ್ಲ ಎಂದು ಸಂಘಟನೆ ಹೇಳಿದೆ.

ಪ್ರಶ್ನಾವಳಿಗಳು ಈ ಕೆಳಗಿನ ರೀತಿ ಇರಲಿದೆ..

ಈ ವಿಶೇಷ ಅಧಿವೇಶನದಲ್ಲಿ ಚರ್ಚಿಸಬೇಕೆಂದು ನೀವು ಭಾವಿಸುವ ಪ್ರಮುಖ 3 ವಿಷಯಗಳನ್ನು ಆಯ್ಕೆ ಮಾಡಿ  

ಮಣಿಪುರದಲ್ಲಿ 5 ತಿಂಗಳಿಗಿಂತಲೂ ಹೆಚ್ಚು ಕಾಲ ನಡೆಯುತ್ತಿರುವ ಹಿಂಸಾಚಾರ

ಭಾರತದ ವಿವಿಧ ಭಾಗಗಳಲ್ಲಿ ಪ್ರವಾಹ, ಬರ, ಹೀಟ್ ವೇವ್, ಇತರ ಹವಾಮಾನ ವೈಪರಿತ್ಯದಿಂದಾಗುತ್ತಿರುವ ಅಪಾಯಗಳು

ಮಹಿಳೆಯರ ವಿರುದ್ಧ ನಿರಂತರ ಅಪರಾಧಗಳು

ಹೆಚ್ಚುತ್ತಿರುವ ಅನೈತಿಕ ಪೊಲೀಸ್ ಗಿರಿ, ಗೂಂಡಾಗಿರಿ ಹಾಗೂ ಸರ್ಕಾರದಿಂದ ಜನರ ಮನೆ ಮೇಲೆ ಕಾನೂನು ಬಾಹಿರವಾಗಿ ಬುಲ್ಡೋಜರ್ ಬಳಕೆ

ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು

ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಹೆಚ್ಚುತ್ತಿರುವ ಬೆಲೆಗಳು

ನಿರುದ್ಯೋಗ ಮತ್ತು ಉದ್ಯೋಗ ಅಭದ್ರತೆಯ ಮುಂದುವರಿಯುತ್ತಿರುವ ಬಿಕ್ಕಟ್ಟು

ಅದಾನಿ ಕಂಪನಿಗಳ ಮೇಲಿನ ಭ್ರಷ್ಟಾಚಾರ, ಹಣಕಾಸಿನ ಅಕ್ರಮಗಳ ಆರೋಪಗಳು

ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು

ಈ ಪ್ರಶ್ನೆಗಳಿಗೆ ಉತ್ತರಿಸಿ

ನೀವು ಯಾವ ರಾಜ್ಯದಲ್ಲಿ ವಾಸಿಸುತ್ತೀರಿ?

ನಿಮ್ಮ ಸಂಸದೀಯ ಕ್ಷೇತ್ರ ಯಾವುದು?

ಇದನ್ನು ಓದಿ: ಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...