Homeಕರ್ನಾಟಕವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

ವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

- Advertisement -
- Advertisement -

ಕೇಂದ್ರ ಸರ್ಕಾರವು 2023ರ ಸೆಪ್ಟೆಂಬರ್ 18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಘೋಷಿಸಿದೆ. ಈ ಅಧಿವೇಶನದ ಕಾರ್ಯಸೂಚಿಯನ್ನು ಬಹಿರಂಗಪಡಿಸಲು ಪ್ರತಿಪಕ್ಷಗಳು ಆಗ್ರಹಿಸಿದ್ದರೂ, ಕೇಂದ್ರ ಸರ್ಕಾರವು ಕಾರ್ಯಸೂಚಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆ ಬಹುತ್ವ ಕರ್ನಾಟಕ ಸಂಘಟನೆ ‘ಸಂಸತ್ತಿನ ವಿಶೇಷ ಅಧಿವೇಶನ- ಜನಸಾಮಾನ್ಯರ ಹಕ್ಕೊತ್ತಾಯ” ಬಿಡುಗಡೆ ಮಾಡಲು ಮುಂದಾಗಿದ್ದು, ಇದಕ್ಕೆ ಜನ ಸಾಮಾನ್ಯರಿಂದ ಅಭಿಪ್ರಾಯವನ್ನು ಕೇಳಿಕೊಂಡಿದೆ.

ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ನಿಮ್ಮ ಅನಿಸಿಕೆ, ಆಸೆಗಳನ್ನು ಕೆಳಗಿನ ಪ್ರಶ್ನಾವಳಿಗೆ ಉತ್ತರಿಸುವ ಮೂಲಕ ಅಭಿಪ್ರಾಯ ಕಳುಹಿಸಿಕೊಡಬೇಕೆಂದು ಈ ಸಂಘಟನೆ ಕೋರಿದೆ.

ಸಂಸತ್ತಿನ ಅಧಿವೇಶನಗಳು ಚುನಾಯಿತ ಸರ್ಕಾರದ ಅತ್ಯಂತ ನಿರ್ಣಾಯಕ ಸಾಂವಿಧಾನಿಕ ಪ್ರಕ್ರಿಯೆಗಳಲ್ಲಿ ಒಂದು. ಸಂಸತ್ತಿನ ಅಧಿವೇಶನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಂಸದರು, ಮಂತ್ರಿಗಳ ಕಾರ್ಯಕ್ಷಮತೆ ಬಗ್ಗೆ ಅಥವಾ ಪ್ರಮುಖ ವಿಷಯಗಳಲ್ಲಿ ಸರ್ಕಾರದ  ವೈಫಲ್ಯತೆ ಬಗ್ಗೆ ಪ್ರಶ್ನೆಗಳನ್ನು ಕೇಳಲು ಸಾಂವಿಧಾನಿಕ ಅವಕಾಶವಿದೆ.

ಆದರೆ ಸೆ.18ರ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಗೌಪ್ಯವಾಗಿರಿಸಿರುವುದು ಮಾತ್ರವಲ್ಲದೆ, ಪ್ರಶ್ನೋತ್ತರ ಅವಧಿ ಮತ್ತು ಶೂನ್ಯ ವೇಳೆಯಂತಹ ಪ್ರಮುಖ ಕಾರ್ಯವಿಧಾನಗಳನ್ನು ಕೂಡ ಸರ್ಕಾರ ಸ್ಥಗಿತಗೊಳಿಸಿದೆ. ಚುನಾಯಿತ ಸರ್ಕಾರದ ಹೊಣೆಗಾರಿಕೆಯನ್ನು ಪಡೆಯಲು ಸ್ಥಾಪಿಸಲಾದ ಸಂಸದೀಯ ಕಾರ್ಯವಿಧಾನಗಳನ್ನು ಈ ಸರ್ಕಾರವು ಅಮಾನತುಗೊಳಿಸಿರುವುದು ಆತಂಕದ ವಿಷಯ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ.

ಈ ವಿಶೇಷ ಅಧಿವೇಶನದಲ್ಲಿ ಜನಸಾಮಾನ್ಯರು ಎದುರಿಸುವ ಮುಖ್ಯ ಸಮಸ್ಯೆಗಳ ಬಗ್ಗೆ ಚರ್ಚಿಸುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸಕ್ರೀಯ ನಾಗರಿಕರಾದ ನಿಮ್ಮಿಂದ, ಈ ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ಅನಿಸಿಕೆ, ಆಸೆಗಳನ್ನು ನಮ್ಮೊಂದಿಗೆ ಕೆಳಗಿನ ಪ್ರಶ್ನಾವಳಿಯ ಮೂಲಕ ಹಂಚಿಕೊಳ್ಳಲು ಕೋರುತ್ತೇವೆ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ ಅಲ್ಲದೆ ಈ ಪ್ರಶ್ನಾವಳಿಗೆ ಉತ್ತರಿಸುವವರ ಹೆಸರು, ಇ-ಮೇಲ್, ವಿಳಾಸ, ಯಾವ ಮಾಹಿತಿಯನ್ನೂ ನಾವು ಸಂಗ್ರಹಿಸುವುದಿಲ್ಲ ಎಂದು ಸಂಘಟನೆ ಹೇಳಿದೆ.

ಪ್ರಶ್ನಾವಳಿಗಳು ಈ ಕೆಳಗಿನ ರೀತಿ ಇರಲಿದೆ..

ಈ ವಿಶೇಷ ಅಧಿವೇಶನದಲ್ಲಿ ಚರ್ಚಿಸಬೇಕೆಂದು ನೀವು ಭಾವಿಸುವ ಪ್ರಮುಖ 3 ವಿಷಯಗಳನ್ನು ಆಯ್ಕೆ ಮಾಡಿ  

ಮಣಿಪುರದಲ್ಲಿ 5 ತಿಂಗಳಿಗಿಂತಲೂ ಹೆಚ್ಚು ಕಾಲ ನಡೆಯುತ್ತಿರುವ ಹಿಂಸಾಚಾರ

ಭಾರತದ ವಿವಿಧ ಭಾಗಗಳಲ್ಲಿ ಪ್ರವಾಹ, ಬರ, ಹೀಟ್ ವೇವ್, ಇತರ ಹವಾಮಾನ ವೈಪರಿತ್ಯದಿಂದಾಗುತ್ತಿರುವ ಅಪಾಯಗಳು

ಮಹಿಳೆಯರ ವಿರುದ್ಧ ನಿರಂತರ ಅಪರಾಧಗಳು

ಹೆಚ್ಚುತ್ತಿರುವ ಅನೈತಿಕ ಪೊಲೀಸ್ ಗಿರಿ, ಗೂಂಡಾಗಿರಿ ಹಾಗೂ ಸರ್ಕಾರದಿಂದ ಜನರ ಮನೆ ಮೇಲೆ ಕಾನೂನು ಬಾಹಿರವಾಗಿ ಬುಲ್ಡೋಜರ್ ಬಳಕೆ

ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು

ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಹೆಚ್ಚುತ್ತಿರುವ ಬೆಲೆಗಳು

ನಿರುದ್ಯೋಗ ಮತ್ತು ಉದ್ಯೋಗ ಅಭದ್ರತೆಯ ಮುಂದುವರಿಯುತ್ತಿರುವ ಬಿಕ್ಕಟ್ಟು

ಅದಾನಿ ಕಂಪನಿಗಳ ಮೇಲಿನ ಭ್ರಷ್ಟಾಚಾರ, ಹಣಕಾಸಿನ ಅಕ್ರಮಗಳ ಆರೋಪಗಳು

ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು

ಈ ಪ್ರಶ್ನೆಗಳಿಗೆ ಉತ್ತರಿಸಿ

ನೀವು ಯಾವ ರಾಜ್ಯದಲ್ಲಿ ವಾಸಿಸುತ್ತೀರಿ?

ನಿಮ್ಮ ಸಂಸದೀಯ ಕ್ಷೇತ್ರ ಯಾವುದು?

ಇದನ್ನು ಓದಿ: ಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...