Homeಕರ್ನಾಟಕವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

ವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

- Advertisement -
- Advertisement -

ಕೇಂದ್ರ ಸರ್ಕಾರವು 2023ರ ಸೆಪ್ಟೆಂಬರ್ 18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಘೋಷಿಸಿದೆ. ಈ ಅಧಿವೇಶನದ ಕಾರ್ಯಸೂಚಿಯನ್ನು ಬಹಿರಂಗಪಡಿಸಲು ಪ್ರತಿಪಕ್ಷಗಳು ಆಗ್ರಹಿಸಿದ್ದರೂ, ಕೇಂದ್ರ ಸರ್ಕಾರವು ಕಾರ್ಯಸೂಚಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆ ಬಹುತ್ವ ಕರ್ನಾಟಕ ಸಂಘಟನೆ ‘ಸಂಸತ್ತಿನ ವಿಶೇಷ ಅಧಿವೇಶನ- ಜನಸಾಮಾನ್ಯರ ಹಕ್ಕೊತ್ತಾಯ” ಬಿಡುಗಡೆ ಮಾಡಲು ಮುಂದಾಗಿದ್ದು, ಇದಕ್ಕೆ ಜನ ಸಾಮಾನ್ಯರಿಂದ ಅಭಿಪ್ರಾಯವನ್ನು ಕೇಳಿಕೊಂಡಿದೆ.

ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ನಿಮ್ಮ ಅನಿಸಿಕೆ, ಆಸೆಗಳನ್ನು ಕೆಳಗಿನ ಪ್ರಶ್ನಾವಳಿಗೆ ಉತ್ತರಿಸುವ ಮೂಲಕ ಅಭಿಪ್ರಾಯ ಕಳುಹಿಸಿಕೊಡಬೇಕೆಂದು ಈ ಸಂಘಟನೆ ಕೋರಿದೆ.

ಸಂಸತ್ತಿನ ಅಧಿವೇಶನಗಳು ಚುನಾಯಿತ ಸರ್ಕಾರದ ಅತ್ಯಂತ ನಿರ್ಣಾಯಕ ಸಾಂವಿಧಾನಿಕ ಪ್ರಕ್ರಿಯೆಗಳಲ್ಲಿ ಒಂದು. ಸಂಸತ್ತಿನ ಅಧಿವೇಶನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಂಸದರು, ಮಂತ್ರಿಗಳ ಕಾರ್ಯಕ್ಷಮತೆ ಬಗ್ಗೆ ಅಥವಾ ಪ್ರಮುಖ ವಿಷಯಗಳಲ್ಲಿ ಸರ್ಕಾರದ  ವೈಫಲ್ಯತೆ ಬಗ್ಗೆ ಪ್ರಶ್ನೆಗಳನ್ನು ಕೇಳಲು ಸಾಂವಿಧಾನಿಕ ಅವಕಾಶವಿದೆ.

ಆದರೆ ಸೆ.18ರ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಗೌಪ್ಯವಾಗಿರಿಸಿರುವುದು ಮಾತ್ರವಲ್ಲದೆ, ಪ್ರಶ್ನೋತ್ತರ ಅವಧಿ ಮತ್ತು ಶೂನ್ಯ ವೇಳೆಯಂತಹ ಪ್ರಮುಖ ಕಾರ್ಯವಿಧಾನಗಳನ್ನು ಕೂಡ ಸರ್ಕಾರ ಸ್ಥಗಿತಗೊಳಿಸಿದೆ. ಚುನಾಯಿತ ಸರ್ಕಾರದ ಹೊಣೆಗಾರಿಕೆಯನ್ನು ಪಡೆಯಲು ಸ್ಥಾಪಿಸಲಾದ ಸಂಸದೀಯ ಕಾರ್ಯವಿಧಾನಗಳನ್ನು ಈ ಸರ್ಕಾರವು ಅಮಾನತುಗೊಳಿಸಿರುವುದು ಆತಂಕದ ವಿಷಯ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ.

ಈ ವಿಶೇಷ ಅಧಿವೇಶನದಲ್ಲಿ ಜನಸಾಮಾನ್ಯರು ಎದುರಿಸುವ ಮುಖ್ಯ ಸಮಸ್ಯೆಗಳ ಬಗ್ಗೆ ಚರ್ಚಿಸುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸಕ್ರೀಯ ನಾಗರಿಕರಾದ ನಿಮ್ಮಿಂದ, ಈ ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ಅನಿಸಿಕೆ, ಆಸೆಗಳನ್ನು ನಮ್ಮೊಂದಿಗೆ ಕೆಳಗಿನ ಪ್ರಶ್ನಾವಳಿಯ ಮೂಲಕ ಹಂಚಿಕೊಳ್ಳಲು ಕೋರುತ್ತೇವೆ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ ಅಲ್ಲದೆ ಈ ಪ್ರಶ್ನಾವಳಿಗೆ ಉತ್ತರಿಸುವವರ ಹೆಸರು, ಇ-ಮೇಲ್, ವಿಳಾಸ, ಯಾವ ಮಾಹಿತಿಯನ್ನೂ ನಾವು ಸಂಗ್ರಹಿಸುವುದಿಲ್ಲ ಎಂದು ಸಂಘಟನೆ ಹೇಳಿದೆ.

ಪ್ರಶ್ನಾವಳಿಗಳು ಈ ಕೆಳಗಿನ ರೀತಿ ಇರಲಿದೆ..

ಈ ವಿಶೇಷ ಅಧಿವೇಶನದಲ್ಲಿ ಚರ್ಚಿಸಬೇಕೆಂದು ನೀವು ಭಾವಿಸುವ ಪ್ರಮುಖ 3 ವಿಷಯಗಳನ್ನು ಆಯ್ಕೆ ಮಾಡಿ  

ಮಣಿಪುರದಲ್ಲಿ 5 ತಿಂಗಳಿಗಿಂತಲೂ ಹೆಚ್ಚು ಕಾಲ ನಡೆಯುತ್ತಿರುವ ಹಿಂಸಾಚಾರ

ಭಾರತದ ವಿವಿಧ ಭಾಗಗಳಲ್ಲಿ ಪ್ರವಾಹ, ಬರ, ಹೀಟ್ ವೇವ್, ಇತರ ಹವಾಮಾನ ವೈಪರಿತ್ಯದಿಂದಾಗುತ್ತಿರುವ ಅಪಾಯಗಳು

ಮಹಿಳೆಯರ ವಿರುದ್ಧ ನಿರಂತರ ಅಪರಾಧಗಳು

ಹೆಚ್ಚುತ್ತಿರುವ ಅನೈತಿಕ ಪೊಲೀಸ್ ಗಿರಿ, ಗೂಂಡಾಗಿರಿ ಹಾಗೂ ಸರ್ಕಾರದಿಂದ ಜನರ ಮನೆ ಮೇಲೆ ಕಾನೂನು ಬಾಹಿರವಾಗಿ ಬುಲ್ಡೋಜರ್ ಬಳಕೆ

ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು

ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಹೆಚ್ಚುತ್ತಿರುವ ಬೆಲೆಗಳು

ನಿರುದ್ಯೋಗ ಮತ್ತು ಉದ್ಯೋಗ ಅಭದ್ರತೆಯ ಮುಂದುವರಿಯುತ್ತಿರುವ ಬಿಕ್ಕಟ್ಟು

ಅದಾನಿ ಕಂಪನಿಗಳ ಮೇಲಿನ ಭ್ರಷ್ಟಾಚಾರ, ಹಣಕಾಸಿನ ಅಕ್ರಮಗಳ ಆರೋಪಗಳು

ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು

ಈ ಪ್ರಶ್ನೆಗಳಿಗೆ ಉತ್ತರಿಸಿ

ನೀವು ಯಾವ ರಾಜ್ಯದಲ್ಲಿ ವಾಸಿಸುತ್ತೀರಿ?

ನಿಮ್ಮ ಸಂಸದೀಯ ಕ್ಷೇತ್ರ ಯಾವುದು?

ಇದನ್ನು ಓದಿ: ಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...