Homeಕರ್ನಾಟಕವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

ವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

- Advertisement -
- Advertisement -

ಕೇಂದ್ರ ಸರ್ಕಾರವು 2023ರ ಸೆಪ್ಟೆಂಬರ್ 18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಘೋಷಿಸಿದೆ. ಈ ಅಧಿವೇಶನದ ಕಾರ್ಯಸೂಚಿಯನ್ನು ಬಹಿರಂಗಪಡಿಸಲು ಪ್ರತಿಪಕ್ಷಗಳು ಆಗ್ರಹಿಸಿದ್ದರೂ, ಕೇಂದ್ರ ಸರ್ಕಾರವು ಕಾರ್ಯಸೂಚಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆ ಬಹುತ್ವ ಕರ್ನಾಟಕ ಸಂಘಟನೆ ‘ಸಂಸತ್ತಿನ ವಿಶೇಷ ಅಧಿವೇಶನ- ಜನಸಾಮಾನ್ಯರ ಹಕ್ಕೊತ್ತಾಯ” ಬಿಡುಗಡೆ ಮಾಡಲು ಮುಂದಾಗಿದ್ದು, ಇದಕ್ಕೆ ಜನ ಸಾಮಾನ್ಯರಿಂದ ಅಭಿಪ್ರಾಯವನ್ನು ಕೇಳಿಕೊಂಡಿದೆ.

ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ನಿಮ್ಮ ಅನಿಸಿಕೆ, ಆಸೆಗಳನ್ನು ಕೆಳಗಿನ ಪ್ರಶ್ನಾವಳಿಗೆ ಉತ್ತರಿಸುವ ಮೂಲಕ ಅಭಿಪ್ರಾಯ ಕಳುಹಿಸಿಕೊಡಬೇಕೆಂದು ಈ ಸಂಘಟನೆ ಕೋರಿದೆ.

ಸಂಸತ್ತಿನ ಅಧಿವೇಶನಗಳು ಚುನಾಯಿತ ಸರ್ಕಾರದ ಅತ್ಯಂತ ನಿರ್ಣಾಯಕ ಸಾಂವಿಧಾನಿಕ ಪ್ರಕ್ರಿಯೆಗಳಲ್ಲಿ ಒಂದು. ಸಂಸತ್ತಿನ ಅಧಿವೇಶನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಂಸದರು, ಮಂತ್ರಿಗಳ ಕಾರ್ಯಕ್ಷಮತೆ ಬಗ್ಗೆ ಅಥವಾ ಪ್ರಮುಖ ವಿಷಯಗಳಲ್ಲಿ ಸರ್ಕಾರದ  ವೈಫಲ್ಯತೆ ಬಗ್ಗೆ ಪ್ರಶ್ನೆಗಳನ್ನು ಕೇಳಲು ಸಾಂವಿಧಾನಿಕ ಅವಕಾಶವಿದೆ.

ಆದರೆ ಸೆ.18ರ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಗೌಪ್ಯವಾಗಿರಿಸಿರುವುದು ಮಾತ್ರವಲ್ಲದೆ, ಪ್ರಶ್ನೋತ್ತರ ಅವಧಿ ಮತ್ತು ಶೂನ್ಯ ವೇಳೆಯಂತಹ ಪ್ರಮುಖ ಕಾರ್ಯವಿಧಾನಗಳನ್ನು ಕೂಡ ಸರ್ಕಾರ ಸ್ಥಗಿತಗೊಳಿಸಿದೆ. ಚುನಾಯಿತ ಸರ್ಕಾರದ ಹೊಣೆಗಾರಿಕೆಯನ್ನು ಪಡೆಯಲು ಸ್ಥಾಪಿಸಲಾದ ಸಂಸದೀಯ ಕಾರ್ಯವಿಧಾನಗಳನ್ನು ಈ ಸರ್ಕಾರವು ಅಮಾನತುಗೊಳಿಸಿರುವುದು ಆತಂಕದ ವಿಷಯ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ.

ಈ ವಿಶೇಷ ಅಧಿವೇಶನದಲ್ಲಿ ಜನಸಾಮಾನ್ಯರು ಎದುರಿಸುವ ಮುಖ್ಯ ಸಮಸ್ಯೆಗಳ ಬಗ್ಗೆ ಚರ್ಚಿಸುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸಕ್ರೀಯ ನಾಗರಿಕರಾದ ನಿಮ್ಮಿಂದ, ಈ ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ಅನಿಸಿಕೆ, ಆಸೆಗಳನ್ನು ನಮ್ಮೊಂದಿಗೆ ಕೆಳಗಿನ ಪ್ರಶ್ನಾವಳಿಯ ಮೂಲಕ ಹಂಚಿಕೊಳ್ಳಲು ಕೋರುತ್ತೇವೆ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ ಅಲ್ಲದೆ ಈ ಪ್ರಶ್ನಾವಳಿಗೆ ಉತ್ತರಿಸುವವರ ಹೆಸರು, ಇ-ಮೇಲ್, ವಿಳಾಸ, ಯಾವ ಮಾಹಿತಿಯನ್ನೂ ನಾವು ಸಂಗ್ರಹಿಸುವುದಿಲ್ಲ ಎಂದು ಸಂಘಟನೆ ಹೇಳಿದೆ.

ಪ್ರಶ್ನಾವಳಿಗಳು ಈ ಕೆಳಗಿನ ರೀತಿ ಇರಲಿದೆ..

ಈ ವಿಶೇಷ ಅಧಿವೇಶನದಲ್ಲಿ ಚರ್ಚಿಸಬೇಕೆಂದು ನೀವು ಭಾವಿಸುವ ಪ್ರಮುಖ 3 ವಿಷಯಗಳನ್ನು ಆಯ್ಕೆ ಮಾಡಿ  

ಮಣಿಪುರದಲ್ಲಿ 5 ತಿಂಗಳಿಗಿಂತಲೂ ಹೆಚ್ಚು ಕಾಲ ನಡೆಯುತ್ತಿರುವ ಹಿಂಸಾಚಾರ

ಭಾರತದ ವಿವಿಧ ಭಾಗಗಳಲ್ಲಿ ಪ್ರವಾಹ, ಬರ, ಹೀಟ್ ವೇವ್, ಇತರ ಹವಾಮಾನ ವೈಪರಿತ್ಯದಿಂದಾಗುತ್ತಿರುವ ಅಪಾಯಗಳು

ಮಹಿಳೆಯರ ವಿರುದ್ಧ ನಿರಂತರ ಅಪರಾಧಗಳು

ಹೆಚ್ಚುತ್ತಿರುವ ಅನೈತಿಕ ಪೊಲೀಸ್ ಗಿರಿ, ಗೂಂಡಾಗಿರಿ ಹಾಗೂ ಸರ್ಕಾರದಿಂದ ಜನರ ಮನೆ ಮೇಲೆ ಕಾನೂನು ಬಾಹಿರವಾಗಿ ಬುಲ್ಡೋಜರ್ ಬಳಕೆ

ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು

ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಹೆಚ್ಚುತ್ತಿರುವ ಬೆಲೆಗಳು

ನಿರುದ್ಯೋಗ ಮತ್ತು ಉದ್ಯೋಗ ಅಭದ್ರತೆಯ ಮುಂದುವರಿಯುತ್ತಿರುವ ಬಿಕ್ಕಟ್ಟು

ಅದಾನಿ ಕಂಪನಿಗಳ ಮೇಲಿನ ಭ್ರಷ್ಟಾಚಾರ, ಹಣಕಾಸಿನ ಅಕ್ರಮಗಳ ಆರೋಪಗಳು

ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು

ಈ ಪ್ರಶ್ನೆಗಳಿಗೆ ಉತ್ತರಿಸಿ

ನೀವು ಯಾವ ರಾಜ್ಯದಲ್ಲಿ ವಾಸಿಸುತ್ತೀರಿ?

ನಿಮ್ಮ ಸಂಸದೀಯ ಕ್ಷೇತ್ರ ಯಾವುದು?

ಇದನ್ನು ಓದಿ: ಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...