Homeಮುಖಪುಟಸಂಸತ್ತಿನ ಮಾನ್ಸೂನ್ ಅಧಿವೇಶನ: ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ !

ಸಂಸತ್ತಿನ ಮಾನ್ಸೂನ್ ಅಧಿವೇಶನ: ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ !

ಅಧಿವೇಶನಕ್ಕೆ ಹಾಜರಾಗುವ ಮಾಧ್ಯಮ ವ್ಯಕ್ತಿಗಳ ಕೊರೊನಾ ಪರೀಕ್ಷೆಗೆ ಸಂಬಂಧಿಸಿದಂತೆ ಕಾರ್ಯದರ್ಶಿಗಳು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಕೊರೊನಾ ಪರೀಕ್ಷೆಗೆ ಸಂಬಂಧಿಸಿದ ವೈದ್ಯಕೀಯ ವರದಿಗಳನ್ನು ತಾವಾಗಿಯೇ ನೀಡುವಂತೆ ಕೇಳಲಾಗಿದೆ

- Advertisement -
- Advertisement -

ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿ ದೇಶದಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕೇಂದ್ರ ಸರ್ಕಾರ ಈಗ ಅಧಿವೇಶನಕ್ಕೆ ಮಾಧ್ಯಮಗಳ ಪ್ರವೇಶವನ್ನು ನಿರ್ಬಂಧಿಸಿದೆ.

“ಲೋಕಸಭೆ ಮತ್ತು ರಾಜ್ಯಸಭೆಯ ಅಧಿವೇಶನದ ವರದಿ ಮಾಡಲು ಬೆರಳೆಣಿಕೆಯಷ್ಟು ಮಾಧ್ಯಮಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಒಂದು ದಿನಕ್ಕೆ ವರದಿ ಮಾಡಲು ಲೋಕಸಭೆಯ ಅಧಿವೇಶನದಲ್ಲಿ, ಗರಿಷ್ಠ 24 ಮಾಧ್ಯಮಗಳಿಗೆ ಅನುಮತಿಯಿದ್ದರೆ, ರಾಜ್ಯಸಭೆಯ ಅಧಿವೇಶನದಲ್ಲಿ ಕೇವಲ 15 ಮಾಧ್ಯಮದ ವ್ಯಕ್ತಿಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ” ಎಂದು ಲೋಕಸಭಾ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಒಂದು ದಿನ 39 ಮಾಧ್ಯಮ ವ್ಯಕ್ತಿಗಳನ್ನು ಹೊರತುಪಡಿಸಿ, ಯಾರನ್ನೂ ಸಂಸತ್ತಿನ ಆವರಣದಲ್ಲಿ ಎಲ್ಲಿಯೂ ಅನುಮತಿಸಲಾಗುವುದಿಲ್ಲ. ಸಂಸತ್ತಿನ ಮುಖ್ಯ ಪ್ರವೇಶ ಕೇಂದ್ರಗಳು ಮತ್ತು ಉಭಯ ಸದನಗಳಿಗೆ ಅನುಮತಿ ಪಡೆದ ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಅಧಿವೇಶನಕ್ಕೆ ಹಾಜರಾಗುವ ಮಾಧ್ಯಮ ವ್ಯಕ್ತಿಗಳ ಕೊರೊನಾ ಪರೀಕ್ಷೆಗೆ ಸಂಬಂಧಿಸಿದಂತೆ ಕಾರ್ಯದರ್ಶಿಗಳು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಕೊರೊನಾ ಪರೀಕ್ಷೆಗೆ ಸಂಬಂಧಿಸಿದ ವೈದ್ಯಕೀಯ ವರದಿಗಳನ್ನು ತಾವಾಗಿಯೇ ನೀಡುವಂತೆ ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

“ಒಂದು ಮಾಧ್ಯಮ ಸಂಸ್ಥೆಯು ಏಳು ದಿನಗಳಿಗೊಮ್ಮೆ ಲೋಕಸಭೆಯ ವಿಚಾರಣೆಯನ್ನು ಮಾಡಲು ಪುನರಾವರ್ತನೆಯಾಗುತ್ತದೆ ಎಂದು ಅಧಿಕಾರಿ ಹೇಳಿದರು.

ಒಂದು ಮಾಧ್ಯಮ 7 ದಿನಗಳಿಗೊಮ್ಮೆ ಲೋಕಸಭೆಗೆ ಪುನರಾವರ್ತನೆಯಾಗಿ ಹಾಜರಾಗಬುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊರೊನಾ ಸಂಬಂಧಿತ ಪ್ರೋಟೋಕಾಲ್ ಗಳು ಜಾರಿಯಲ್ಲಿರುವುದರಿಂದ ಕೇವಲ ಒಂದು ಡಝನ್ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...