Homeಮುಖಪುಟಸಂಸತ್ ಅಧಿವೇಶನ - ಮುಂದುವರಿದ ವಿಪಕ್ಷಗಳ ಪ್ರತಿಭಟನೆ

ಸಂಸತ್ ಅಧಿವೇಶನ – ಮುಂದುವರಿದ ವಿಪಕ್ಷಗಳ ಪ್ರತಿಭಟನೆ

- Advertisement -
- Advertisement -

ಚಳಿಗಾಲದ ಅಧಿವೇಶನ ಪ್ರಾರಂಭವಾದ ನಂತರ ಸಂಸತ್ತಿನ ಹೊರಗೆ ವಿಪಕ್ಷಗಳು ನಡೆಸುತ್ತಿರುವ ಸರಣಿ ಪ್ರತಿಭಟನೆ ಬುಧವಾರ ಕೂಡಾ ಮುಂದುವರೆದಿದೆ. ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಆವರಣದಲ್ಲಿ ವಿನೂತನ ಪ್ರತಿಭಟನಾ ಪ್ರದರ್ಶನ ನಡೆಸಿದ್ದು, ಬಿಜೆಪಿ ಸಂಸದರಿಗೆ ಕೆಂಪು ಗುಲಾಬಿ ಮತ್ತು ತ್ರಿವರ್ಣ ಧ್ವಜವನ್ನು ನೀಡಿದರು. ಅದಾನಿ ವಿವಾದ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಚರ್ಚೆಗಾಗಿ ವಿಪಕ್ಷಗಳು ಒತ್ತಾಯಿಸುತ್ತಿವೆ. ಸಂಸತ್ ಅಧಿವೇಶನ

ಸಂಸತ್ತಿಗೆ ಆಗಮಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಖುದ್ದು ಗುಲಾಬಿ ಮತ್ತು ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಸಂಸತ್ ಅಧಿವೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಸತ್ತಿನ ಮುಂದೆ ತಮ್ಮ ಕಾರಿನಿಂದ ಕೆಳಗಿಳಿದ ರಾಜನಾಥ್ ಸಿಂಗ್ ಅವರ ಮುಂದೆ ಇತರ ಕಾಂಗ್ರೆಸ್ ನಾಯಕರ ಜೊತೆಯಲ್ಲಿ ತೆರಳಿದ ರಾಹುಲ್ ಗಾಂಧಿ ಅವರು, ಸದನದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಆಡಳಿತ ಪಕ್ಷವನ್ನು ಒತ್ತಾಯಿಸಿದರು. ಸಂಸತ್ತಿನ ಅಧಿವೇಶನಗಳಲ್ಲಿ ಅದಾನಿ ಸಮಸ್ಯೆ ಸೇರಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸಬೇಕು ಎಂದು ಪ್ರತಿಪಕ್ಷ ನಾಯಕರು ಈ ಮೂಲಕ ಆಡಳಿತರೂಢ ಸಂಸದರಿಗೆ ಸೂಚಿಸಿದ್ದಾರೆ.

ಮಂಗಳವಾರ ಸಂಸದರು ಕಡು ನೀಲಿ ಬಣ್ಣದ ‘ಜೋಲಾ(ಬ್ಯಾಗ್‌)’ಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದರು. ಈ ಬ್ಯಾಗ್‌ನ ಒಂದು ಬದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರ ವ್ಯಂಗ್ಯಚಿತ್ರಗಳು ಹಾಗೂ ಮತ್ತೊಂದು ಬದಿಯಲ್ಲಿ ‘ಮೋದಿ-ಅದಾನಿ ಭಾಯಿ-ಭಾಯ್’ ಎಂದು ಬರೆಯಲಾಗಿತ್ತು.

ಸೋಮವಾರ, ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಕೆಲವು ಇಂಡಿಯಾ ಒಕ್ಕೂಟದ ಪಕ್ಷಗಳ ನಾಯಕರು ಸಂಸತ್‌ ಕಟ್ಟಡದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರು ಮೋದಿ ಮತ್ತು ಅದಾನಿ ಮುಖವಾಡಗಳನ್ನು ಧರಿಸಿರುವ ಕಾಂಗ್ರೆಸ್ ಸದಸ್ಯರ ಜೊತೆಗೆ ಅಣಕು ‘ಸಂದರ್ಶನ’ ನಡೆಸಿದ್ದರು.

ಇದನ್ನೂ ಓದಿ: ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...