Homeಮುಖಪುಟಸಂಸತ್ ಅಧಿವೇಶನ - ಮುಂದುವರಿದ ವಿಪಕ್ಷಗಳ ಪ್ರತಿಭಟನೆ

ಸಂಸತ್ ಅಧಿವೇಶನ – ಮುಂದುವರಿದ ವಿಪಕ್ಷಗಳ ಪ್ರತಿಭಟನೆ

- Advertisement -
- Advertisement -

ಚಳಿಗಾಲದ ಅಧಿವೇಶನ ಪ್ರಾರಂಭವಾದ ನಂತರ ಸಂಸತ್ತಿನ ಹೊರಗೆ ವಿಪಕ್ಷಗಳು ನಡೆಸುತ್ತಿರುವ ಸರಣಿ ಪ್ರತಿಭಟನೆ ಬುಧವಾರ ಕೂಡಾ ಮುಂದುವರೆದಿದೆ. ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಆವರಣದಲ್ಲಿ ವಿನೂತನ ಪ್ರತಿಭಟನಾ ಪ್ರದರ್ಶನ ನಡೆಸಿದ್ದು, ಬಿಜೆಪಿ ಸಂಸದರಿಗೆ ಕೆಂಪು ಗುಲಾಬಿ ಮತ್ತು ತ್ರಿವರ್ಣ ಧ್ವಜವನ್ನು ನೀಡಿದರು. ಅದಾನಿ ವಿವಾದ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಚರ್ಚೆಗಾಗಿ ವಿಪಕ್ಷಗಳು ಒತ್ತಾಯಿಸುತ್ತಿವೆ. ಸಂಸತ್ ಅಧಿವೇಶನ

ಸಂಸತ್ತಿಗೆ ಆಗಮಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಖುದ್ದು ಗುಲಾಬಿ ಮತ್ತು ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಸಂಸತ್ ಅಧಿವೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಸತ್ತಿನ ಮುಂದೆ ತಮ್ಮ ಕಾರಿನಿಂದ ಕೆಳಗಿಳಿದ ರಾಜನಾಥ್ ಸಿಂಗ್ ಅವರ ಮುಂದೆ ಇತರ ಕಾಂಗ್ರೆಸ್ ನಾಯಕರ ಜೊತೆಯಲ್ಲಿ ತೆರಳಿದ ರಾಹುಲ್ ಗಾಂಧಿ ಅವರು, ಸದನದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಆಡಳಿತ ಪಕ್ಷವನ್ನು ಒತ್ತಾಯಿಸಿದರು. ಸಂಸತ್ತಿನ ಅಧಿವೇಶನಗಳಲ್ಲಿ ಅದಾನಿ ಸಮಸ್ಯೆ ಸೇರಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸಬೇಕು ಎಂದು ಪ್ರತಿಪಕ್ಷ ನಾಯಕರು ಈ ಮೂಲಕ ಆಡಳಿತರೂಢ ಸಂಸದರಿಗೆ ಸೂಚಿಸಿದ್ದಾರೆ.

ಮಂಗಳವಾರ ಸಂಸದರು ಕಡು ನೀಲಿ ಬಣ್ಣದ ‘ಜೋಲಾ(ಬ್ಯಾಗ್‌)’ಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದರು. ಈ ಬ್ಯಾಗ್‌ನ ಒಂದು ಬದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರ ವ್ಯಂಗ್ಯಚಿತ್ರಗಳು ಹಾಗೂ ಮತ್ತೊಂದು ಬದಿಯಲ್ಲಿ ‘ಮೋದಿ-ಅದಾನಿ ಭಾಯಿ-ಭಾಯ್’ ಎಂದು ಬರೆಯಲಾಗಿತ್ತು.

ಸೋಮವಾರ, ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಕೆಲವು ಇಂಡಿಯಾ ಒಕ್ಕೂಟದ ಪಕ್ಷಗಳ ನಾಯಕರು ಸಂಸತ್‌ ಕಟ್ಟಡದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರು ಮೋದಿ ಮತ್ತು ಅದಾನಿ ಮುಖವಾಡಗಳನ್ನು ಧರಿಸಿರುವ ಕಾಂಗ್ರೆಸ್ ಸದಸ್ಯರ ಜೊತೆಗೆ ಅಣಕು ‘ಸಂದರ್ಶನ’ ನಡೆಸಿದ್ದರು.

ಇದನ್ನೂ ಓದಿ: ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...