HomeUncategorizedಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಸಾಂಕ್ರಾಮಿಕ ರೋಗದ ಮಧ್ಯೆಯು ಹಲವಾರು ರಾಜ್ಯಗಳು ತಮ್ಮ ಅಧಿವೇಶನವನ್ನು ನಡೆಸುತ್ತಿವೆ. ಆದರೆ ಅವುಗಳಲ್ಲಿ ಯಾವುದೇ ರಾಜ್ಯಗಳು ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿಲ್ಲ

- Advertisement -
- Advertisement -

ಸಂಸತ್ತಿನ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿರುವುದನ್ನು ಮತ್ತು ಶೂನ್ಯ ವೇಳೆಯ ಅವಧಿಯನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ಮತ್ತು ಅವುಗಳನ್ನು ಪೂರ್ಣಪ್ರಮಾಣದಲ್ಲಿ ನಡೆಸುವಂತೆ ಕೋರಿ, ದೇಶದಾದ್ಯಂತ 800 ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು, ರಾಜಕಾರಣಿಗಳು ಹಾಗೂ ವಿದ್ಯಾರ್ಥಿಗಳು ಸೇರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.

ಜನರು ತಮ್ಮ ಪ್ರತಿನಿಧಿಗಳ ಮೂಲಕ ಸರ್ಕಾರವನ್ನು ಪ್ರಶ್ನಿಸಲು, ಸಂಸತ್ತಿನ ಈ ಪ್ರಶ್ನೋತ್ತರ ಅವಧಿಯನ್ನು ಬಿಟ್ಟರೆ ಬೇರೆ ಯಾವುದೇ ಪ್ರತ್ಯೇಕ ವೇದಿಕೆ ಇಲ್ಲ ಎಂದು ಓಂ ಬಿರ್ಲಾ ಮತ್ತು ವೆಂಕಯ್ಯ ನಾಯ್ಡು ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಸಾಧಾರಣ ಸಂದರ್ಭದಲ್ಲಿ ಮಾತ್ರ ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಲು ಸಾಧ್ಯ. ಅದಾಗ್ಯೂ ಎರಡೂ ಸದನಗಳು ಸರ್ವಾನುಮತದಿಂದ ಒಪ್ಪಿಕೊಂಡಾಗ ಮಾತ್ರ ಇದು ಸಾಧ್ಯ ಎಂದು ಪತ್ರದಲ್ಲಿ ಹೇಳಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಮಾಜಿ ಅಧಿಕಾರಿ ಜವಾಹರ್ ಸಿರ್ಕಾರ್, ಇತಿಹಾಸಕಾರ ಮೃದುಲಾ ಮುಖರ್ಜಿ, ಶಿಕ್ಷಣ ತಜ್ಞರಾದ ಜೋಯಾ ಹಸನ್ ಮತ್ತು ಜಯತಿ ಘೋಷ್, ಸಿಪಿಐನಿಂದ ಅನ್ನಿ ರಾಜಾ, ಸಿಪಿಐ (ಎಂ)ನ ಹನ್ನನ್ ಮೊಲ್ಲಾ ಮತ್ತು ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಸೇರಿದಂತೆ ಇತರರು ಈ ಪತ್ರಕ್ಕೆ ಸಹಿ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

“ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸಿ, ಈ ಅಧಿಕಾರವನ್ನು ಚಲಾಯಿಸಲಾಗಿದ್ದ ಅಪರೂಪದ ಹಿಂದಿನ ನಿದರ್ಶನಗಳು ಇವೆ. ಆದರೆ ಆಗ ಅಸಾಧಾರಣ ಸನ್ನಿವೇಶಗಳಲ್ಲಿ ಮಾತ್ರ ರದ್ದುಗೊಳಿಸಲಾಗಿತ್ತು. ಚೀನೀಯರ ಆಕ್ರಮಣ (1962), ತುರ್ತು ಪರಿಸ್ಥಿತಿ (1975 ಮತ್ತು 1976) ಮತ್ತು ವಿಶ್ವಾಸ ಮತ ಚಲಾಯಿಸುವ ಉದ್ದೇಶದಿಂದ ವಿಶೇಷ ಅಧಿವೇಶನಗಳನ್ನು ಕರೆದಾಗ(ನವೆಂಬರ್ 1990 ಮತ್ತು ಜುಲೈ 2008) ಇದು ರದ್ದುಗೊಂಡಿತ್ತು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಆದರೆ ಪ್ರಸ್ತುತ ಪರಿಸ್ಥಿತಿ ಚೆನ್ನಾಗಿಯೇ ಇದ್ದರೂ ಪ್ರಜಾಪ್ರಭುತ್ವವನ್ನು ಮುನ್ನಡೆಸಲು ಸಹಾಯ ಮಾಡುವ ಪ್ರಶ್ನೆಯ ಅವಧಿಯನ್ನು ರದ್ದುಗೊಳಿಸಲಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಸಾಂಕ್ರಾಮಿಕ ರೋಗದ ಮಧ್ಯೆಯು ಹಲವಾರು ರಾಜ್ಯಗಳು ತಮ್ಮ ಅಧಿವೇಶನವನ್ನು ನಡೆಸುತ್ತಿವೆ. ಆದರೆ ಅವುಗಳಲ್ಲಿ ಯಾವುದೇ ರಾಜ್ಯಗಳು ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ. ಉದಾಹರಣೆಗೆ, ಇತ್ತೀಚೆಗೆ ಮಿಜೋರಾಂ, ಅರುಣಾಚಲ ಪ್ರದೇಶ, ಹರಿಯಾಣ ಮತ್ತು ಚತ್ತೀಸ್‌ಗಢದ ರಾಜ್ಯ ಸಭೆಗಳು ತಮ್ಮ ಅಧಿವೇಶನಗಳನ್ನು ಪ್ರಶ್ನೆ ಅವಧಿಯೊಂದಿಗೆ ಪೂರ್ಣಗೊಳಿಸಿದವು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹಾಗಾಗಿ, ಈ ರಾಜ್ಯಗಳಂತೆಯೇ ಸಂಸತ್ತೂ ಸಹ ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸದೇ ಅಧಿವೇಶನದ ಪೂರ್ಣ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

“ಸರ್ಕಾರದ ಕಾರ್ಯಚಟುವಟಿಕೆಯಲ್ಲಿ ಪಾರದರ್ಶಕತೆ ಪ್ರಜಾಪ್ರಭುತ್ವದಲ್ಲಿ ಪಾಲಿಸಬೇಕಾದ ಆದರ್ಶವಾಗಿದೆ. ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಮುಕ್ತವಾಗಿದೆ. ಪ್ರಸ್ತುತ ಸಂದರ್ಭದಂತೆ, ತೊಂದರೆಗೊಳಗಾದ ಸಮಯದಲ್ಲಿ ಸರ್ಕಾರದ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಕೊರೊನಾ ಬಿಕ್ಕಟ್ಟಿನ ನಡುವೆ ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧ ಪಕ್ಷದ ಸಂಸದರು ಸೇರಿದಂತೆ ಅನೇಕರು ವಿರೋಧಿಸಿದ್ದಾರೆ.

ಲೋಕಸಭೆಯ ಅಧಿವೇಶನ ಮೊದಲ ದಿನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದ್ದು, ಅಧಿವೇಶನ ಮುಗಿಯುವ ಅಕ್ಟೋಬರ್ 1 ರವರೆಗೆ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಮೊದಲ ದಿನ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ಮತ್ತು ಉಳಿದ ದಿನಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದೆ. ವಾರಾಂತ್ಯಗಳು ಸಹ ಕೆಲಸದ ದಿನಗಳಾಗಿವೆ.


ಇದನ್ನೂ ಓದಿ: ಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...