HomeUncategorizedಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಸಾಂಕ್ರಾಮಿಕ ರೋಗದ ಮಧ್ಯೆಯು ಹಲವಾರು ರಾಜ್ಯಗಳು ತಮ್ಮ ಅಧಿವೇಶನವನ್ನು ನಡೆಸುತ್ತಿವೆ. ಆದರೆ ಅವುಗಳಲ್ಲಿ ಯಾವುದೇ ರಾಜ್ಯಗಳು ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿಲ್ಲ

- Advertisement -
- Advertisement -

ಸಂಸತ್ತಿನ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿರುವುದನ್ನು ಮತ್ತು ಶೂನ್ಯ ವೇಳೆಯ ಅವಧಿಯನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ಮತ್ತು ಅವುಗಳನ್ನು ಪೂರ್ಣಪ್ರಮಾಣದಲ್ಲಿ ನಡೆಸುವಂತೆ ಕೋರಿ, ದೇಶದಾದ್ಯಂತ 800 ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು, ರಾಜಕಾರಣಿಗಳು ಹಾಗೂ ವಿದ್ಯಾರ್ಥಿಗಳು ಸೇರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.

ಜನರು ತಮ್ಮ ಪ್ರತಿನಿಧಿಗಳ ಮೂಲಕ ಸರ್ಕಾರವನ್ನು ಪ್ರಶ್ನಿಸಲು, ಸಂಸತ್ತಿನ ಈ ಪ್ರಶ್ನೋತ್ತರ ಅವಧಿಯನ್ನು ಬಿಟ್ಟರೆ ಬೇರೆ ಯಾವುದೇ ಪ್ರತ್ಯೇಕ ವೇದಿಕೆ ಇಲ್ಲ ಎಂದು ಓಂ ಬಿರ್ಲಾ ಮತ್ತು ವೆಂಕಯ್ಯ ನಾಯ್ಡು ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಸಾಧಾರಣ ಸಂದರ್ಭದಲ್ಲಿ ಮಾತ್ರ ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಲು ಸಾಧ್ಯ. ಅದಾಗ್ಯೂ ಎರಡೂ ಸದನಗಳು ಸರ್ವಾನುಮತದಿಂದ ಒಪ್ಪಿಕೊಂಡಾಗ ಮಾತ್ರ ಇದು ಸಾಧ್ಯ ಎಂದು ಪತ್ರದಲ್ಲಿ ಹೇಳಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಮಾಜಿ ಅಧಿಕಾರಿ ಜವಾಹರ್ ಸಿರ್ಕಾರ್, ಇತಿಹಾಸಕಾರ ಮೃದುಲಾ ಮುಖರ್ಜಿ, ಶಿಕ್ಷಣ ತಜ್ಞರಾದ ಜೋಯಾ ಹಸನ್ ಮತ್ತು ಜಯತಿ ಘೋಷ್, ಸಿಪಿಐನಿಂದ ಅನ್ನಿ ರಾಜಾ, ಸಿಪಿಐ (ಎಂ)ನ ಹನ್ನನ್ ಮೊಲ್ಲಾ ಮತ್ತು ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಸೇರಿದಂತೆ ಇತರರು ಈ ಪತ್ರಕ್ಕೆ ಸಹಿ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

“ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸಿ, ಈ ಅಧಿಕಾರವನ್ನು ಚಲಾಯಿಸಲಾಗಿದ್ದ ಅಪರೂಪದ ಹಿಂದಿನ ನಿದರ್ಶನಗಳು ಇವೆ. ಆದರೆ ಆಗ ಅಸಾಧಾರಣ ಸನ್ನಿವೇಶಗಳಲ್ಲಿ ಮಾತ್ರ ರದ್ದುಗೊಳಿಸಲಾಗಿತ್ತು. ಚೀನೀಯರ ಆಕ್ರಮಣ (1962), ತುರ್ತು ಪರಿಸ್ಥಿತಿ (1975 ಮತ್ತು 1976) ಮತ್ತು ವಿಶ್ವಾಸ ಮತ ಚಲಾಯಿಸುವ ಉದ್ದೇಶದಿಂದ ವಿಶೇಷ ಅಧಿವೇಶನಗಳನ್ನು ಕರೆದಾಗ(ನವೆಂಬರ್ 1990 ಮತ್ತು ಜುಲೈ 2008) ಇದು ರದ್ದುಗೊಂಡಿತ್ತು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಆದರೆ ಪ್ರಸ್ತುತ ಪರಿಸ್ಥಿತಿ ಚೆನ್ನಾಗಿಯೇ ಇದ್ದರೂ ಪ್ರಜಾಪ್ರಭುತ್ವವನ್ನು ಮುನ್ನಡೆಸಲು ಸಹಾಯ ಮಾಡುವ ಪ್ರಶ್ನೆಯ ಅವಧಿಯನ್ನು ರದ್ದುಗೊಳಿಸಲಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಸಾಂಕ್ರಾಮಿಕ ರೋಗದ ಮಧ್ಯೆಯು ಹಲವಾರು ರಾಜ್ಯಗಳು ತಮ್ಮ ಅಧಿವೇಶನವನ್ನು ನಡೆಸುತ್ತಿವೆ. ಆದರೆ ಅವುಗಳಲ್ಲಿ ಯಾವುದೇ ರಾಜ್ಯಗಳು ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ. ಉದಾಹರಣೆಗೆ, ಇತ್ತೀಚೆಗೆ ಮಿಜೋರಾಂ, ಅರುಣಾಚಲ ಪ್ರದೇಶ, ಹರಿಯಾಣ ಮತ್ತು ಚತ್ತೀಸ್‌ಗಢದ ರಾಜ್ಯ ಸಭೆಗಳು ತಮ್ಮ ಅಧಿವೇಶನಗಳನ್ನು ಪ್ರಶ್ನೆ ಅವಧಿಯೊಂದಿಗೆ ಪೂರ್ಣಗೊಳಿಸಿದವು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹಾಗಾಗಿ, ಈ ರಾಜ್ಯಗಳಂತೆಯೇ ಸಂಸತ್ತೂ ಸಹ ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸದೇ ಅಧಿವೇಶನದ ಪೂರ್ಣ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

“ಸರ್ಕಾರದ ಕಾರ್ಯಚಟುವಟಿಕೆಯಲ್ಲಿ ಪಾರದರ್ಶಕತೆ ಪ್ರಜಾಪ್ರಭುತ್ವದಲ್ಲಿ ಪಾಲಿಸಬೇಕಾದ ಆದರ್ಶವಾಗಿದೆ. ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಮುಕ್ತವಾಗಿದೆ. ಪ್ರಸ್ತುತ ಸಂದರ್ಭದಂತೆ, ತೊಂದರೆಗೊಳಗಾದ ಸಮಯದಲ್ಲಿ ಸರ್ಕಾರದ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಕೊರೊನಾ ಬಿಕ್ಕಟ್ಟಿನ ನಡುವೆ ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧ ಪಕ್ಷದ ಸಂಸದರು ಸೇರಿದಂತೆ ಅನೇಕರು ವಿರೋಧಿಸಿದ್ದಾರೆ.

ಲೋಕಸಭೆಯ ಅಧಿವೇಶನ ಮೊದಲ ದಿನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದ್ದು, ಅಧಿವೇಶನ ಮುಗಿಯುವ ಅಕ್ಟೋಬರ್ 1 ರವರೆಗೆ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಮೊದಲ ದಿನ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ಮತ್ತು ಉಳಿದ ದಿನಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದೆ. ವಾರಾಂತ್ಯಗಳು ಸಹ ಕೆಲಸದ ದಿನಗಳಾಗಿವೆ.


ಇದನ್ನೂ ಓದಿ: ಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...