HomeUncategorizedಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಸಾಂಕ್ರಾಮಿಕ ರೋಗದ ಮಧ್ಯೆಯು ಹಲವಾರು ರಾಜ್ಯಗಳು ತಮ್ಮ ಅಧಿವೇಶನವನ್ನು ನಡೆಸುತ್ತಿವೆ. ಆದರೆ ಅವುಗಳಲ್ಲಿ ಯಾವುದೇ ರಾಜ್ಯಗಳು ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿಲ್ಲ

- Advertisement -
- Advertisement -

ಸಂಸತ್ತಿನ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿರುವುದನ್ನು ಮತ್ತು ಶೂನ್ಯ ವೇಳೆಯ ಅವಧಿಯನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ಮತ್ತು ಅವುಗಳನ್ನು ಪೂರ್ಣಪ್ರಮಾಣದಲ್ಲಿ ನಡೆಸುವಂತೆ ಕೋರಿ, ದೇಶದಾದ್ಯಂತ 800 ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು, ರಾಜಕಾರಣಿಗಳು ಹಾಗೂ ವಿದ್ಯಾರ್ಥಿಗಳು ಸೇರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.

ಜನರು ತಮ್ಮ ಪ್ರತಿನಿಧಿಗಳ ಮೂಲಕ ಸರ್ಕಾರವನ್ನು ಪ್ರಶ್ನಿಸಲು, ಸಂಸತ್ತಿನ ಈ ಪ್ರಶ್ನೋತ್ತರ ಅವಧಿಯನ್ನು ಬಿಟ್ಟರೆ ಬೇರೆ ಯಾವುದೇ ಪ್ರತ್ಯೇಕ ವೇದಿಕೆ ಇಲ್ಲ ಎಂದು ಓಂ ಬಿರ್ಲಾ ಮತ್ತು ವೆಂಕಯ್ಯ ನಾಯ್ಡು ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಸಾಧಾರಣ ಸಂದರ್ಭದಲ್ಲಿ ಮಾತ್ರ ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಲು ಸಾಧ್ಯ. ಅದಾಗ್ಯೂ ಎರಡೂ ಸದನಗಳು ಸರ್ವಾನುಮತದಿಂದ ಒಪ್ಪಿಕೊಂಡಾಗ ಮಾತ್ರ ಇದು ಸಾಧ್ಯ ಎಂದು ಪತ್ರದಲ್ಲಿ ಹೇಳಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಮಾಜಿ ಅಧಿಕಾರಿ ಜವಾಹರ್ ಸಿರ್ಕಾರ್, ಇತಿಹಾಸಕಾರ ಮೃದುಲಾ ಮುಖರ್ಜಿ, ಶಿಕ್ಷಣ ತಜ್ಞರಾದ ಜೋಯಾ ಹಸನ್ ಮತ್ತು ಜಯತಿ ಘೋಷ್, ಸಿಪಿಐನಿಂದ ಅನ್ನಿ ರಾಜಾ, ಸಿಪಿಐ (ಎಂ)ನ ಹನ್ನನ್ ಮೊಲ್ಲಾ ಮತ್ತು ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಸೇರಿದಂತೆ ಇತರರು ಈ ಪತ್ರಕ್ಕೆ ಸಹಿ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

“ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸಿ, ಈ ಅಧಿಕಾರವನ್ನು ಚಲಾಯಿಸಲಾಗಿದ್ದ ಅಪರೂಪದ ಹಿಂದಿನ ನಿದರ್ಶನಗಳು ಇವೆ. ಆದರೆ ಆಗ ಅಸಾಧಾರಣ ಸನ್ನಿವೇಶಗಳಲ್ಲಿ ಮಾತ್ರ ರದ್ದುಗೊಳಿಸಲಾಗಿತ್ತು. ಚೀನೀಯರ ಆಕ್ರಮಣ (1962), ತುರ್ತು ಪರಿಸ್ಥಿತಿ (1975 ಮತ್ತು 1976) ಮತ್ತು ವಿಶ್ವಾಸ ಮತ ಚಲಾಯಿಸುವ ಉದ್ದೇಶದಿಂದ ವಿಶೇಷ ಅಧಿವೇಶನಗಳನ್ನು ಕರೆದಾಗ(ನವೆಂಬರ್ 1990 ಮತ್ತು ಜುಲೈ 2008) ಇದು ರದ್ದುಗೊಂಡಿತ್ತು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಆದರೆ ಪ್ರಸ್ತುತ ಪರಿಸ್ಥಿತಿ ಚೆನ್ನಾಗಿಯೇ ಇದ್ದರೂ ಪ್ರಜಾಪ್ರಭುತ್ವವನ್ನು ಮುನ್ನಡೆಸಲು ಸಹಾಯ ಮಾಡುವ ಪ್ರಶ್ನೆಯ ಅವಧಿಯನ್ನು ರದ್ದುಗೊಳಿಸಲಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಸಾಂಕ್ರಾಮಿಕ ರೋಗದ ಮಧ್ಯೆಯು ಹಲವಾರು ರಾಜ್ಯಗಳು ತಮ್ಮ ಅಧಿವೇಶನವನ್ನು ನಡೆಸುತ್ತಿವೆ. ಆದರೆ ಅವುಗಳಲ್ಲಿ ಯಾವುದೇ ರಾಜ್ಯಗಳು ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ. ಉದಾಹರಣೆಗೆ, ಇತ್ತೀಚೆಗೆ ಮಿಜೋರಾಂ, ಅರುಣಾಚಲ ಪ್ರದೇಶ, ಹರಿಯಾಣ ಮತ್ತು ಚತ್ತೀಸ್‌ಗಢದ ರಾಜ್ಯ ಸಭೆಗಳು ತಮ್ಮ ಅಧಿವೇಶನಗಳನ್ನು ಪ್ರಶ್ನೆ ಅವಧಿಯೊಂದಿಗೆ ಪೂರ್ಣಗೊಳಿಸಿದವು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹಾಗಾಗಿ, ಈ ರಾಜ್ಯಗಳಂತೆಯೇ ಸಂಸತ್ತೂ ಸಹ ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸದೇ ಅಧಿವೇಶನದ ಪೂರ್ಣ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

“ಸರ್ಕಾರದ ಕಾರ್ಯಚಟುವಟಿಕೆಯಲ್ಲಿ ಪಾರದರ್ಶಕತೆ ಪ್ರಜಾಪ್ರಭುತ್ವದಲ್ಲಿ ಪಾಲಿಸಬೇಕಾದ ಆದರ್ಶವಾಗಿದೆ. ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಮುಕ್ತವಾಗಿದೆ. ಪ್ರಸ್ತುತ ಸಂದರ್ಭದಂತೆ, ತೊಂದರೆಗೊಳಗಾದ ಸಮಯದಲ್ಲಿ ಸರ್ಕಾರದ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಕೊರೊನಾ ಬಿಕ್ಕಟ್ಟಿನ ನಡುವೆ ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧ ಪಕ್ಷದ ಸಂಸದರು ಸೇರಿದಂತೆ ಅನೇಕರು ವಿರೋಧಿಸಿದ್ದಾರೆ.

ಲೋಕಸಭೆಯ ಅಧಿವೇಶನ ಮೊದಲ ದಿನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದ್ದು, ಅಧಿವೇಶನ ಮುಗಿಯುವ ಅಕ್ಟೋಬರ್ 1 ರವರೆಗೆ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಮೊದಲ ದಿನ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ಮತ್ತು ಉಳಿದ ದಿನಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದೆ. ವಾರಾಂತ್ಯಗಳು ಸಹ ಕೆಲಸದ ದಿನಗಳಾಗಿವೆ.


ಇದನ್ನೂ ಓದಿ: ಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....