HomeUncategorizedಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಸಾಂಕ್ರಾಮಿಕ ರೋಗದ ಮಧ್ಯೆಯು ಹಲವಾರು ರಾಜ್ಯಗಳು ತಮ್ಮ ಅಧಿವೇಶನವನ್ನು ನಡೆಸುತ್ತಿವೆ. ಆದರೆ ಅವುಗಳಲ್ಲಿ ಯಾವುದೇ ರಾಜ್ಯಗಳು ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿಲ್ಲ

- Advertisement -
- Advertisement -

ಸಂಸತ್ತಿನ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿರುವುದನ್ನು ಮತ್ತು ಶೂನ್ಯ ವೇಳೆಯ ಅವಧಿಯನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ಮತ್ತು ಅವುಗಳನ್ನು ಪೂರ್ಣಪ್ರಮಾಣದಲ್ಲಿ ನಡೆಸುವಂತೆ ಕೋರಿ, ದೇಶದಾದ್ಯಂತ 800 ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು, ರಾಜಕಾರಣಿಗಳು ಹಾಗೂ ವಿದ್ಯಾರ್ಥಿಗಳು ಸೇರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.

ಜನರು ತಮ್ಮ ಪ್ರತಿನಿಧಿಗಳ ಮೂಲಕ ಸರ್ಕಾರವನ್ನು ಪ್ರಶ್ನಿಸಲು, ಸಂಸತ್ತಿನ ಈ ಪ್ರಶ್ನೋತ್ತರ ಅವಧಿಯನ್ನು ಬಿಟ್ಟರೆ ಬೇರೆ ಯಾವುದೇ ಪ್ರತ್ಯೇಕ ವೇದಿಕೆ ಇಲ್ಲ ಎಂದು ಓಂ ಬಿರ್ಲಾ ಮತ್ತು ವೆಂಕಯ್ಯ ನಾಯ್ಡು ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಸಾಧಾರಣ ಸಂದರ್ಭದಲ್ಲಿ ಮಾತ್ರ ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಲು ಸಾಧ್ಯ. ಅದಾಗ್ಯೂ ಎರಡೂ ಸದನಗಳು ಸರ್ವಾನುಮತದಿಂದ ಒಪ್ಪಿಕೊಂಡಾಗ ಮಾತ್ರ ಇದು ಸಾಧ್ಯ ಎಂದು ಪತ್ರದಲ್ಲಿ ಹೇಳಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಮಾಜಿ ಅಧಿಕಾರಿ ಜವಾಹರ್ ಸಿರ್ಕಾರ್, ಇತಿಹಾಸಕಾರ ಮೃದುಲಾ ಮುಖರ್ಜಿ, ಶಿಕ್ಷಣ ತಜ್ಞರಾದ ಜೋಯಾ ಹಸನ್ ಮತ್ತು ಜಯತಿ ಘೋಷ್, ಸಿಪಿಐನಿಂದ ಅನ್ನಿ ರಾಜಾ, ಸಿಪಿಐ (ಎಂ)ನ ಹನ್ನನ್ ಮೊಲ್ಲಾ ಮತ್ತು ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಸೇರಿದಂತೆ ಇತರರು ಈ ಪತ್ರಕ್ಕೆ ಸಹಿ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

“ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸಿ, ಈ ಅಧಿಕಾರವನ್ನು ಚಲಾಯಿಸಲಾಗಿದ್ದ ಅಪರೂಪದ ಹಿಂದಿನ ನಿದರ್ಶನಗಳು ಇವೆ. ಆದರೆ ಆಗ ಅಸಾಧಾರಣ ಸನ್ನಿವೇಶಗಳಲ್ಲಿ ಮಾತ್ರ ರದ್ದುಗೊಳಿಸಲಾಗಿತ್ತು. ಚೀನೀಯರ ಆಕ್ರಮಣ (1962), ತುರ್ತು ಪರಿಸ್ಥಿತಿ (1975 ಮತ್ತು 1976) ಮತ್ತು ವಿಶ್ವಾಸ ಮತ ಚಲಾಯಿಸುವ ಉದ್ದೇಶದಿಂದ ವಿಶೇಷ ಅಧಿವೇಶನಗಳನ್ನು ಕರೆದಾಗ(ನವೆಂಬರ್ 1990 ಮತ್ತು ಜುಲೈ 2008) ಇದು ರದ್ದುಗೊಂಡಿತ್ತು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಆದರೆ ಪ್ರಸ್ತುತ ಪರಿಸ್ಥಿತಿ ಚೆನ್ನಾಗಿಯೇ ಇದ್ದರೂ ಪ್ರಜಾಪ್ರಭುತ್ವವನ್ನು ಮುನ್ನಡೆಸಲು ಸಹಾಯ ಮಾಡುವ ಪ್ರಶ್ನೆಯ ಅವಧಿಯನ್ನು ರದ್ದುಗೊಳಿಸಲಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಸಾಂಕ್ರಾಮಿಕ ರೋಗದ ಮಧ್ಯೆಯು ಹಲವಾರು ರಾಜ್ಯಗಳು ತಮ್ಮ ಅಧಿವೇಶನವನ್ನು ನಡೆಸುತ್ತಿವೆ. ಆದರೆ ಅವುಗಳಲ್ಲಿ ಯಾವುದೇ ರಾಜ್ಯಗಳು ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ. ಉದಾಹರಣೆಗೆ, ಇತ್ತೀಚೆಗೆ ಮಿಜೋರಾಂ, ಅರುಣಾಚಲ ಪ್ರದೇಶ, ಹರಿಯಾಣ ಮತ್ತು ಚತ್ತೀಸ್‌ಗಢದ ರಾಜ್ಯ ಸಭೆಗಳು ತಮ್ಮ ಅಧಿವೇಶನಗಳನ್ನು ಪ್ರಶ್ನೆ ಅವಧಿಯೊಂದಿಗೆ ಪೂರ್ಣಗೊಳಿಸಿದವು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹಾಗಾಗಿ, ಈ ರಾಜ್ಯಗಳಂತೆಯೇ ಸಂಸತ್ತೂ ಸಹ ಪ್ರಶ್ನೋತ್ತರ ಅವಧಿಯನ್ನು ರದ್ದುಗೊಳಿಸದೇ ಅಧಿವೇಶನದ ಪೂರ್ಣ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

“ಸರ್ಕಾರದ ಕಾರ್ಯಚಟುವಟಿಕೆಯಲ್ಲಿ ಪಾರದರ್ಶಕತೆ ಪ್ರಜಾಪ್ರಭುತ್ವದಲ್ಲಿ ಪಾಲಿಸಬೇಕಾದ ಆದರ್ಶವಾಗಿದೆ. ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಮುಕ್ತವಾಗಿದೆ. ಪ್ರಸ್ತುತ ಸಂದರ್ಭದಂತೆ, ತೊಂದರೆಗೊಳಗಾದ ಸಮಯದಲ್ಲಿ ಸರ್ಕಾರದ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಕೊರೊನಾ ಬಿಕ್ಕಟ್ಟಿನ ನಡುವೆ ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧ ಪಕ್ಷದ ಸಂಸದರು ಸೇರಿದಂತೆ ಅನೇಕರು ವಿರೋಧಿಸಿದ್ದಾರೆ.

ಲೋಕಸಭೆಯ ಅಧಿವೇಶನ ಮೊದಲ ದಿನ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದ್ದು, ಅಧಿವೇಶನ ಮುಗಿಯುವ ಅಕ್ಟೋಬರ್ 1 ರವರೆಗೆ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಮೊದಲ ದಿನ ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ ಮತ್ತು ಉಳಿದ ದಿನಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದೆ. ವಾರಾಂತ್ಯಗಳು ಸಹ ಕೆಲಸದ ದಿನಗಳಾಗಿವೆ.


ಇದನ್ನೂ ಓದಿ: ಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...