Homeಮುಖಪುಟರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

- Advertisement -
- Advertisement -

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಕಿರಣ್ ರಿಜಿಜು ಸೇರಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿದ್ದ ಭಾಷಣಕ್ಕೆ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್‌ ತಮ್ಮ ನಾಯಕನ ಮಾತನ್ನು ಆಲಿಸುವಂತೆ ತಿಳಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದಲ್ಲಿ ಶ್ರೀಮಂತರು ಮತ್ತು ಬಡವರ ನಡುವೆ ಹೆಚ್ಚುತ್ತಿರುವ ಅಸಮಾನತೆ, ಹೆಚ್ಚುತ್ತಿರುವ ನಿರುದ್ಯೋಗ, ಪೆಗಾಸಸ್‌ ಪ್ರಕರಣದ ಬಗ್ಗೆ ಒಕ್ಕೂಟ ಸರ್ಕಾರವನ್ನು ಟೀಕಿಸಿದ್ದರು. ಬಿಜೆಪಿಗರು ರಾಜನ ಕಲ್ಪನೆ ಮುನ್ನಲೆಗೆ ತರುವ ಮೂಲಕ ಭಾರತದ ರಾಜ್ಯಗಳ ಒಕ್ಕೂಟದ ಕಲ್ಪನೆಯನ್ನು ನಾಶಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ರಾಹುಲ್ ಗಾಂಧಿ ಮಾತುಗಳಿಗೆ ಕಿಡಿಕಾರಿದ್ದಾರೆ. ” ರಾಹುಲ್ ಗಾಂಧಿ, ಭಾರತವು ಒಂದು ರಾಷ್ಟ್ರವಲ್ಲ ಎಂದು ಹೇಳುವ ಗೊಂದಲಮಯ ಮತ್ತು ಬುದ್ದಿಹೀನ ನಾಯಕ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್ ಗಾಂಧಿ ರಾಜ ಎಂದು ಸೂಚಿಸಿದ್ದಾರೆ. ಆದರೆ, ಪ್ರಧಾನಿ ಮೋದಿ ಜನರ ಹೃದಯವನ್ನು ಗೆದ್ದಿದ್ದಾರೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಜನಪ್ರಿಯ ನಾಯಕರಾಗಿದ್ದಾರೆ. ರಾಹುಲ್ ಗಾಂಧಿ ತಮ್ಮ ರಾಜವಂಶದಿಂದಾಗಿ ಕಾಂಗ್ರೆಸ್ ನಾಯಕ ಮತ್ತು ಸಂಸದರಾಗಿದ್ದಾರೆ” ಎಂದು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಪ್ರತಿಭಟನಾ ಮೆರವಣಿಗೆಯ ವಿಡಿಯೊವನ್ನು, ‘RSS ದಾಳಿಗೆ ಹೆದರಿ ವಲಸೆ ಹೋಗುತ್ತಿರುವ ಮುಸ್ಲಿಮರು’ ಎಂದು ವೈರಲ್‌

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ, “ಭಾರತದ ಕಾನೂನು ಮಂತ್ರಿಯಾಗಿ ಮಾತ್ರವಲ್ಲದೆ ಒಬ್ಬ ಸಾಮಾನ್ಯ ಪ್ರಜೆಯಾಗಿಯೂ ಸಹ ನಾನು ಭಾರತದ ನ್ಯಾಯಾಂಗ ಮತ್ತು ಚುನಾವಣಾ ಆಯೋಗದ ಬಗ್ಗೆ ರಾಹುಲ್ ಗಾಂಧಿ ಹೇಳಿರುವುದನ್ನು ಖಂಡಿಸುತ್ತೇನೆ. ಇವು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಸಂಸ್ಥೆಗಳು. ರಾಹುಲ್ ಗಾಂಧಿ ಕೂಡಲೇ ಜನತೆ, ನ್ಯಾಯಾಂಗ ಮತ್ತು ಚುನಾವಣಾ ಆಯೋಗದ ಕ್ಷಮೆಯಾಚಿಸಬೇಕು” ಎಂದಿದ್ದಾರೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ರಾಹುಲ್ ಗಾಂಧಿ ಅವರ ’ಬಿಜೆಪಿ ಚೀನಾ ಮತ್ತು ಪಾಕಿಸ್ತಾನವನ್ನು ಒಟ್ಟಿಗೆ ತಂದಿದೆ’ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, “ಕೆಲವು ಇತಿಹಾಸದ ಪಾಠಗಳು ಕ್ರಮಬದ್ಧವಾಗಿವೆ” ಎಂದಿದ್ದಾರೆ.

1963 ರಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿದ್ದಾಗ ಪಾಕಿಸ್ತಾನವು ಶಾಕ್ಸ್‌ಗಾಮ್ ಕಣಿವೆಯನ್ನು ಚೀನಾಕ್ಕೆ ಅಕ್ರಮವಾಗಿ ಹಸ್ತಾಂತರಿಸಿತು.1970 ರ ದಶಕದಲ್ಲಿ ಚೀನಾ ಪಿಒಕೆ ಮೂಲಕ ಕಾರಕೋರಂ ಹೆದ್ದಾರಿಯನ್ನು ನಿರ್ಮಿಸಿತು. 2013 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಸಿಪಿಇಸಿಯನ್ನು ಪ್ರಾರಂಭಿಸಲಾಯಿತು ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: BJP ಪ್ರತಿ ವರ್ಷ ನೀಡುತ್ತೇವೆ ಎಂದ 2 ಕೋಟಿ ಉದ್ಯೋಗದಲ್ಲಿ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ?: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ನಾಯಕರ ಟೀಕೆಗಳಿಗೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದಾರೆ. ರಾಹುಲ್ ಗಾಂಧಿಯವರ ಭಾಷಣಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ ಎನ್ನುವ ಬಿಜೆಪಿ ನಾಯಕರು ಎಲ್ಲರೂ ಏಕೆ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮಾಜಿ ಸಚಿವ ರಾಜೀವ್ ಶುಕ್ಲಾ ಟ್ವೀಟ್ ಮಾಡಿ, ” ಬಿಜೆಪಿಯ ಉನ್ನತ ನಾಯಕರು ರಾಹುಲ್ ಗಾಂಧಿಯವರ ಭಾಷಣಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ ಎನ್ನುತ್ತಾರೆ. ಆದರೆ, ಎಲ್ಲಾ ಮಂತ್ರಿಗಳು ಅವರ ಭಾಷಣಕ್ಕೆ ಏಕೆ ಪ್ರತಿಕ್ರಿಯಿಸುತ್ತಿದ್ದಾರೆ. ಇದರರ್ಥ ಅವರು ವಿಚಲಿತರಾಗಿದ್ದಾರೆ ಮತ್ತು ಅವರ ಇಂದಿನ ಭಾಷಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

 

ಸಂಸದ ಶಶಿ ತರೂರ್‌ ಕೂಡ ರಾಹುಲ್ ಗಾಂಧಿ ಭಾಷಣವನ್ನು ಪವರ್‌ ಫುಲ್‌ ಮೆಸೇಜ್ ಎಂದಿದ್ದಾರೆ. “ಕಾಂಗ್ರೆಸ್ ದೇಶವು ಅದರ ಆಂತರಿಕ ಏಕತೆ, ಶಕ್ತಿ ಮತ್ತು ಅದರ ಬಾಹ್ಯ ರಾಷ್ಟ್ರೀಯ ಭದ್ರತೆ ಎರಡರಲ್ಲೂ ದುರ್ಬಲಗೊಂಡಿದೆ ಎಂದು ಹೇಳುತ್ತಿದ್ದೇವೆ. ಇದು ಅತ್ಯಂತ ಶಕ್ತಿಯುತ ಮತ್ತು ಪ್ರಮುಖ ಸಂದೇಶವಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ಪರಿಸ್ಥಿತಿಯ ಲಾಭವನ್ನು ಚೀನಾ ಪಡೆಯದಂತೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಯಾವಾಗಲೂ ನೋಡಿಕೊಂಡಿದ್ದರು. ಆದ್ದರಿಂದ ರಾಹುಲ್ ಗಾಂಧಿಯವರ ಮಾತುಗಳನ್ನು ಆಲಿಸುವುದು ಬಹಳ ಮುಖ್ಯ ಎಂದು ನಾನು ಭಾವಿಸುತ್ತೇನೆ” ಎಂದು ಕಾಂಗ್ರೆಸ್ ಸಂಸದರು ಹೇಳಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ, ಪೆಗಾಸಸ್‌ ಪ್ರಕರಣ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ.


ಇದನ್ನೂ ಓದಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಇಂದಿರಾ ಗಾಂಧಿ ಯವರ ಪೀರೇಡನಲ್ಲಿ ಜೋಶಿಯವರ ಹೋಲಗಳೆನಾದರು ಹೋಗಿರಬಹುದು ಅದಕ್ಕೆ ರಾಹುಲ್ ಗಾಂಧಿ ಮಾತಾಡಿದರೆ ಇವರು ಉರಕೂಳತಾರೆ

LEAVE A REPLY

Please enter your comment!
Please enter your name here

- Advertisment -

Must Read