Homeಮುಖಪುಟರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

- Advertisement -
- Advertisement -

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಕಿರಣ್ ರಿಜಿಜು ಸೇರಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿದ್ದ ಭಾಷಣಕ್ಕೆ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್‌ ತಮ್ಮ ನಾಯಕನ ಮಾತನ್ನು ಆಲಿಸುವಂತೆ ತಿಳಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದಲ್ಲಿ ಶ್ರೀಮಂತರು ಮತ್ತು ಬಡವರ ನಡುವೆ ಹೆಚ್ಚುತ್ತಿರುವ ಅಸಮಾನತೆ, ಹೆಚ್ಚುತ್ತಿರುವ ನಿರುದ್ಯೋಗ, ಪೆಗಾಸಸ್‌ ಪ್ರಕರಣದ ಬಗ್ಗೆ ಒಕ್ಕೂಟ ಸರ್ಕಾರವನ್ನು ಟೀಕಿಸಿದ್ದರು. ಬಿಜೆಪಿಗರು ರಾಜನ ಕಲ್ಪನೆ ಮುನ್ನಲೆಗೆ ತರುವ ಮೂಲಕ ಭಾರತದ ರಾಜ್ಯಗಳ ಒಕ್ಕೂಟದ ಕಲ್ಪನೆಯನ್ನು ನಾಶಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ರಾಹುಲ್ ಗಾಂಧಿ ಮಾತುಗಳಿಗೆ ಕಿಡಿಕಾರಿದ್ದಾರೆ. ” ರಾಹುಲ್ ಗಾಂಧಿ, ಭಾರತವು ಒಂದು ರಾಷ್ಟ್ರವಲ್ಲ ಎಂದು ಹೇಳುವ ಗೊಂದಲಮಯ ಮತ್ತು ಬುದ್ದಿಹೀನ ನಾಯಕ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್ ಗಾಂಧಿ ರಾಜ ಎಂದು ಸೂಚಿಸಿದ್ದಾರೆ. ಆದರೆ, ಪ್ರಧಾನಿ ಮೋದಿ ಜನರ ಹೃದಯವನ್ನು ಗೆದ್ದಿದ್ದಾರೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಜನಪ್ರಿಯ ನಾಯಕರಾಗಿದ್ದಾರೆ. ರಾಹುಲ್ ಗಾಂಧಿ ತಮ್ಮ ರಾಜವಂಶದಿಂದಾಗಿ ಕಾಂಗ್ರೆಸ್ ನಾಯಕ ಮತ್ತು ಸಂಸದರಾಗಿದ್ದಾರೆ” ಎಂದು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಪ್ರತಿಭಟನಾ ಮೆರವಣಿಗೆಯ ವಿಡಿಯೊವನ್ನು, ‘RSS ದಾಳಿಗೆ ಹೆದರಿ ವಲಸೆ ಹೋಗುತ್ತಿರುವ ಮುಸ್ಲಿಮರು’ ಎಂದು ವೈರಲ್‌

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ, “ಭಾರತದ ಕಾನೂನು ಮಂತ್ರಿಯಾಗಿ ಮಾತ್ರವಲ್ಲದೆ ಒಬ್ಬ ಸಾಮಾನ್ಯ ಪ್ರಜೆಯಾಗಿಯೂ ಸಹ ನಾನು ಭಾರತದ ನ್ಯಾಯಾಂಗ ಮತ್ತು ಚುನಾವಣಾ ಆಯೋಗದ ಬಗ್ಗೆ ರಾಹುಲ್ ಗಾಂಧಿ ಹೇಳಿರುವುದನ್ನು ಖಂಡಿಸುತ್ತೇನೆ. ಇವು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಸಂಸ್ಥೆಗಳು. ರಾಹುಲ್ ಗಾಂಧಿ ಕೂಡಲೇ ಜನತೆ, ನ್ಯಾಯಾಂಗ ಮತ್ತು ಚುನಾವಣಾ ಆಯೋಗದ ಕ್ಷಮೆಯಾಚಿಸಬೇಕು” ಎಂದಿದ್ದಾರೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ರಾಹುಲ್ ಗಾಂಧಿ ಅವರ ’ಬಿಜೆಪಿ ಚೀನಾ ಮತ್ತು ಪಾಕಿಸ್ತಾನವನ್ನು ಒಟ್ಟಿಗೆ ತಂದಿದೆ’ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, “ಕೆಲವು ಇತಿಹಾಸದ ಪಾಠಗಳು ಕ್ರಮಬದ್ಧವಾಗಿವೆ” ಎಂದಿದ್ದಾರೆ.

1963 ರಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿದ್ದಾಗ ಪಾಕಿಸ್ತಾನವು ಶಾಕ್ಸ್‌ಗಾಮ್ ಕಣಿವೆಯನ್ನು ಚೀನಾಕ್ಕೆ ಅಕ್ರಮವಾಗಿ ಹಸ್ತಾಂತರಿಸಿತು.1970 ರ ದಶಕದಲ್ಲಿ ಚೀನಾ ಪಿಒಕೆ ಮೂಲಕ ಕಾರಕೋರಂ ಹೆದ್ದಾರಿಯನ್ನು ನಿರ್ಮಿಸಿತು. 2013 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಸಿಪಿಇಸಿಯನ್ನು ಪ್ರಾರಂಭಿಸಲಾಯಿತು ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: BJP ಪ್ರತಿ ವರ್ಷ ನೀಡುತ್ತೇವೆ ಎಂದ 2 ಕೋಟಿ ಉದ್ಯೋಗದಲ್ಲಿ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ?: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ನಾಯಕರ ಟೀಕೆಗಳಿಗೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದಾರೆ. ರಾಹುಲ್ ಗಾಂಧಿಯವರ ಭಾಷಣಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ ಎನ್ನುವ ಬಿಜೆಪಿ ನಾಯಕರು ಎಲ್ಲರೂ ಏಕೆ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮಾಜಿ ಸಚಿವ ರಾಜೀವ್ ಶುಕ್ಲಾ ಟ್ವೀಟ್ ಮಾಡಿ, ” ಬಿಜೆಪಿಯ ಉನ್ನತ ನಾಯಕರು ರಾಹುಲ್ ಗಾಂಧಿಯವರ ಭಾಷಣಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ ಎನ್ನುತ್ತಾರೆ. ಆದರೆ, ಎಲ್ಲಾ ಮಂತ್ರಿಗಳು ಅವರ ಭಾಷಣಕ್ಕೆ ಏಕೆ ಪ್ರತಿಕ್ರಿಯಿಸುತ್ತಿದ್ದಾರೆ. ಇದರರ್ಥ ಅವರು ವಿಚಲಿತರಾಗಿದ್ದಾರೆ ಮತ್ತು ಅವರ ಇಂದಿನ ಭಾಷಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

 

ಸಂಸದ ಶಶಿ ತರೂರ್‌ ಕೂಡ ರಾಹುಲ್ ಗಾಂಧಿ ಭಾಷಣವನ್ನು ಪವರ್‌ ಫುಲ್‌ ಮೆಸೇಜ್ ಎಂದಿದ್ದಾರೆ. “ಕಾಂಗ್ರೆಸ್ ದೇಶವು ಅದರ ಆಂತರಿಕ ಏಕತೆ, ಶಕ್ತಿ ಮತ್ತು ಅದರ ಬಾಹ್ಯ ರಾಷ್ಟ್ರೀಯ ಭದ್ರತೆ ಎರಡರಲ್ಲೂ ದುರ್ಬಲಗೊಂಡಿದೆ ಎಂದು ಹೇಳುತ್ತಿದ್ದೇವೆ. ಇದು ಅತ್ಯಂತ ಶಕ್ತಿಯುತ ಮತ್ತು ಪ್ರಮುಖ ಸಂದೇಶವಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ಪರಿಸ್ಥಿತಿಯ ಲಾಭವನ್ನು ಚೀನಾ ಪಡೆಯದಂತೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಯಾವಾಗಲೂ ನೋಡಿಕೊಂಡಿದ್ದರು. ಆದ್ದರಿಂದ ರಾಹುಲ್ ಗಾಂಧಿಯವರ ಮಾತುಗಳನ್ನು ಆಲಿಸುವುದು ಬಹಳ ಮುಖ್ಯ ಎಂದು ನಾನು ಭಾವಿಸುತ್ತೇನೆ” ಎಂದು ಕಾಂಗ್ರೆಸ್ ಸಂಸದರು ಹೇಳಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ, ಪೆಗಾಸಸ್‌ ಪ್ರಕರಣ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ.


ಇದನ್ನೂ ಓದಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂದಿರಾ ಗಾಂಧಿ ಯವರ ಪೀರೇಡನಲ್ಲಿ ಜೋಶಿಯವರ ಹೋಲಗಳೆನಾದರು ಹೋಗಿರಬಹುದು ಅದಕ್ಕೆ ರಾಹುಲ್ ಗಾಂಧಿ ಮಾತಾಡಿದರೆ ಇವರು ಉರಕೂಳತಾರೆ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....