Homeಮುಖಪುಟಸಂಸತ್ ಚಳಿಗಾಲದ ಅಧಿವೇಶನ : ಕಾರ್ಮಿಕ ಸಂಹಿತೆಗಳ ವಿರುದ್ಧ ಪ್ರತಿಪಕ್ಷಗಳಿಂದ ಪ್ರತಿಭಟನೆ

ಸಂಸತ್ ಚಳಿಗಾಲದ ಅಧಿವೇಶನ : ಕಾರ್ಮಿಕ ಸಂಹಿತೆಗಳ ವಿರುದ್ಧ ಪ್ರತಿಪಕ್ಷಗಳಿಂದ ಪ್ರತಿಭಟನೆ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ, ಇಂಡಿಯಾ ಒಕ್ಕೂಟ ಬುಧವಾರ (ಡಿ.3) ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ದ ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಿತು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಸಮಿತಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಾಲ್ಕು ಕಾರ್ಮಿಕ ಸಂಹಿತೆಗಳು “ಕಾರ್ಪೊರೇಟ್ ಜಂಗಲ್ ರಾಜ್” ಉದ್ಧೇಶ ಹೊಂದಿದೆ. “ಕಾರ್ಪೊರೇಟ್ ಜಂಗಲ್ ರಾಜ್‌ ಬೇಡ, ಕಾರ್ಮಿಕರಿಗೆ ನ್ಯಾಯ ಬೇಕು” ಎಂದು ಬರೆದ ದೊಡ್ಡ ಬ್ಯಾನರ್ ಅನ್ನು ಪ್ರತಿಭಟನಾ ನಿರತರು ಹಿಡಿದಿದ್ದರು.

ಚಳಿಗಾಲದ ಅಧಿವೇಶನ ಪ್ರಾರಂಭಗೊಂಡ ಬಳಿಕ ಬುಧವಾರ ಮೊದಲ ಬಾರಿಗೆ ಉಭಯ ಸದನಗಳ ಕಲಾಪಗಳು ಸುಗಮವಾಗಿ ನಡೆಯುತ್ತಿವೆ. ಡಿಸೆಂಬರ್ 1ರಂದು ಆರಂಭಗೊಂಡ ಅಧಿವೇಶನದ ಮೊದಲ ಎರಡು ದಿನಗಳು ಎಸ್‌ಐಆರ್ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳು ಪ್ರತಿಭಟಿಸಿದ ಕಾರಣ ಗದ್ದಲ ಉಂಟಾಗಿ ಕಲಾಪ ಮುಂದೂಡಿಕೆಯಾಗಿತ್ತು.

ಪ್ರತಿಪಕ್ಷಗಳು ಎರಡು ದಿನಗಳ ಕಾಲ ಪಟ್ಟು ಹಿಡಿದ ಕಾರಣ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ನೇತೃತ್ವದಲ್ಲಿ ಮಂಗಳವಾರ ಸಂಜೆ ಸರ್ವಪಕ್ಷಗಳ ಸಭೆ ನಡೆಸಿದೆ. ಸಭೆಯಲ್ಲಿ ಡಿಸೆಂಬರ್ 9ರಂದು ಚುನಾವಣಾ ಬದಲಾವಣೆಗಳು ಎಂಬ ಹೆಸರಿನಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಹಾಗಾಗಿ, ಬುಧವಾರ ಕಲಾಪಗಳು ಸುಗಮವಾಗಿ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದ ಲಿಂಗಾಯತ ಸಮುದಾಯದ ಮಾನ್ಯ ಪಾಟೀಲ್ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣವನ್ನು ಖಂಡಿಸಿ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳು ಶುಕ್ರವಾರ (ಡಿ.26) ಸಂಜೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವು. ಹುಬ್ಬಳ್ಳಿಯ...

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಎನ್‌ಸಿಆರ್‌...

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌....

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ...

ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್...

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...