Homeಮುಖಪುಟಸಂಸದೀಯ ಸಮಿತಿ ಮುಂದೆ ಹಾಜರಾಗದ ಸೆಬಿ ಮುಖ್ಯಸ್ಥೆ ಬುಚ್

ಸಂಸದೀಯ ಸಮಿತಿ ಮುಂದೆ ಹಾಜರಾಗದ ಸೆಬಿ ಮುಖ್ಯಸ್ಥೆ ಬುಚ್

- Advertisement -
- Advertisement -

ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರು ಗುರುವಾರ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗೆ ಗೈರಾಗಿದ್ದು, ಸಭೆಯನ್ನು ಮುಂದೂಡಲಾಗಿದೆ. ಈ ನಡುವೆ ಸಮಿತಿಯ ಮುಖ್ಯಸ್ಥ ಕೆ.ಸಿ. ವೇಣುಗೋಪಾಲ್ ಅವರು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಎನ್‌ಡಿಎ ಸದಸ್ಯರು ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಸಂಸದೀಯ ಸಮಿತಿ

“ಬೆಳಿಗ್ಗೆ 9.30 ಕ್ಕೆ ಬುಚ್‌ ಅವರಿಂದ ಸಮಿತಿಗೆ ಮಾಹಿತಿ ಬಂದಿದ್ದು, ಅತ್ಯಗತ್ಯ ಕಾರಣಕ್ಕೆ ಅವರು ಮತ್ತು ಅವರ ತಂಡವು ಸಮಿತಿಯ ಮುಂದೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ” ಎಂದು ವೇಣುಗೋಪಾಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ತನ್ನ ಮೇಲಿನ ಸಮನ್ಸ್‌ನಗೆ ವಿನಾಯಿತಿ ನೀಡುವಂತೆ ಬುಚ್‌ ಅವರ ಕೋರಿಕೆಯನ್ನು ಈ ಹಿಂದೆ ಸಮಿತಿ ನಿರಾಕರಿಸಿತ್ತು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮಹಿಳೆಯೊಬ್ಬರ ಕೋರಿಕೆಯನ್ನು ಪರಿಗಣಿಸಿ, ಇಂದಿನ ಸಭೆಯನ್ನು ಇನ್ನೊಂದು ದಿನಕ್ಕೆ ಮುಂದೂಡುವುದು ಉತ್ತಮ ಎಂದು ನಾವು ಭಾವಿಸಿದ್ದೇವೆ” ಎಂದು ವೇಣುಗೋಪಾಲ್ ಅವರು ಹೇಳಿದ್ದಾರೆ. ಈ ವೇಳೆ ಇತರ ವಿರೋಧ ಪಕ್ಷದ ಸದಸ್ಯರೊಂದಿಗೆ ಅವರು ಅಲ್ಲಿಂದ ನಿರ್ಗಮಿಸಿದ್ದಾರೆ. ಸಭೆ ಪ್ರಾರಂಭವಾದ ಕೆಲವೇ ನಿಮಿಷಗಳ ನಂತರ ಆಡಳಿತ ಮೈತ್ರಿಕೂಟ ಮತ್ತು ಇಂಡಿಯಾ ಒಕ್ಕೂಟದ ಸಂಸದರ ನಡುವೆ ಚಕಮಕಿ ನಡೆದಿದೆ ಎಂದು ವರದಿಯಾಗಿದೆ. ಸಂಸದೀಯ ಸಮಿತಿ

ಸಭೆ ಪ್ರಾರಂಭವಾಗಲು ಎರಡು ಗಂಟೆಗಳ ಅವಧಿಯಲ್ಲಿ ಬುಚ್ ತನ್ನ ನಿರ್ಧಾರದ ಬಗ್ಗೆ ಸಮಿತಿಗೆ ತಿಳಿಸುವುದು ಸಂಸದೀಯ ಸಮಿತಿಯ ತಿರಸ್ಕಾರಕ್ಕೆ ಸಮಾನವಾಗಿದೆ ಎಂದು ವಿರೋಧ ಪಕ್ಷದ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಈ ನಡುವೆ ಕಾಂಗ್ರೆಸ್‌ನ ಹಿರಿಯ ನಾಯಕ ವೇಣುಗೋಪಾಲ್‌ ಅವರು ತಮ್ಮ ಅಭಿಪ್ರಾಯಗಳನ್ನು ಹೇಳಲು ಬಿಡುತ್ತಿಲ್ಲ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.

ಸಮಿತಿಯ ಸದಸ್ಯ ಮತ್ತು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ಸ್ಥಾಯಿ ಸಮಿತಿಗಳು ವಿವಿಧ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತವೆ ಎಂದು ಅವರು ಹೇಳಿದ್ದಾರೆ.

ಉದಾಹರಣೆಗೆ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೆಲಸವನ್ನು ಹಣಕಾಸು ಸಮಿತಿಯು ಪರಿಶೀಲಿಸುತ್ತದೆ. ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಮಿತಿಯು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವನ್ನು ಪರಿಶೀಲಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ನಮ್ಮ ಮುಖ್ಯ ಆಕ್ಷೇಪವೆಂದರೆ ಅವರು (ವೇಣುಗೋಪಾಲ್) ಇತರ ಸದಸ್ಯರನ್ನು ಸಂಪರ್ಕಿಸದೆ ಸ್ವಯಂ ಪ್ರೇರಿತ ವಿಷಯಗಳ ಆಯ್ಕೆಯನ್ನು ಮಾಡುತ್ತಿದ್ದಾರೆ. ಅವರು ಸಿದ್ಧಪಡಿಸಿದ ಪಟ್ಟಿಯ ಬಗ್ಗೆ ಯಾರಿಗೂ ಸುಳಿವು ಇರಲಿಲ್ಲ” ಎಂದು ರವಿಶಂಕರ್ ಪ್ರಸಾದ್ ಅವರು ಹೇಳಿದ್ದಾರೆ.

ವೇಣುಗೋಪಾಲ್ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಎನ್‌ಡಿಎ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿದ್ದಾರೆ. ಬುಚ್ ಅವರು ಅದಾನಿಗೆ ಸಹಾಯ ಮಾಡಿದ್ದಾರೆ ಎಂದು ಹಿಂಡೆನ್ ಬರ್ಗ್ ವರದಿಯ ನಂತರ ಅವರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿತ್ತು.

ಇದನ್ನೂ ಓದಿ: ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್

ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...