Homeಮುಖಪುಟಎನ್‌ಪಿಆರ್, ಜನಗಣತಿ ಕುರಿತು ಜನರ ಆತಂಕ ನಿವಾರಿಸುವಂತೆ ಸರಕಾರಕ್ಕೆ ಸಂಸದೀಯ ಸಮಿತಿ ಸೂಚನೆ

ಎನ್‌ಪಿಆರ್, ಜನಗಣತಿ ಕುರಿತು ಜನರ ಆತಂಕ ನಿವಾರಿಸುವಂತೆ ಸರಕಾರಕ್ಕೆ ಸಂಸದೀಯ ಸಮಿತಿ ಸೂಚನೆ

ಜನಗಣತಿಯು ಸರಾಗವಾಗಿ ನಡೆಯುವಂತೆ ಒಂದು ದಾರಿಯನ್ನು ಕೇಂದ್ರ ಗೃಹ ಸಚಿವಾಲಯ ಕಂಡುಕೊಳ್ಳಬೇಕು; ಇಲ್ಲವಾದರೆ ಹಲವಾರು ರಾಜ್ಯಗಳಲ್ಲಿ ಇಡೀ ಪ್ರಕ್ರಿಯೆಯೇ ಬುಡಮೇಲಾಗಬಹುದು.

- Advertisement -
- Advertisement -

ಎನ್‌ಪಿಆರ್ ಮತ್ತು ಜನಗಣತಿಯ ಪ್ರಕ್ರಿಯೆ ಆರಂಭಿಸುವ ಮೊದಲು ಸಾರ್ವಜನಿಕರ ಆತಂಕ ನಿವಾರಣೆಗೆ ಸೂಕ್ತ ಯೋಜನೆಯೊಂದನ್ನು ರೂಪಿಸುವಂತೆ ಸಂಸದೀಯ ಸಮಿತಿಯೊಂದು ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿದೆ.

ಮುಂಬರಲಿರುವ ಎನ್‌ಪಿಆರ್ ಮತ್ತು ಜನಗಣತಿಯ ಕುರಿತು ಜನರಿಗೆ ಅತೃಪ್ತಿ ಮತ್ತು ಭಯವಿದ್ದು, ಯಾವುದೇ ಮಾಹಿತಿ ಸಂಗ್ರಹ ಆರಂಭಿಸುವ ಮೊದಲು ಈ ಭಯವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದೀಯ ಸಮಿತಿಯು ಸರಕಾರಕ್ಕೆ ಸಲಹೆ ಮಾಡಿದೆ. ಈ ಸಲಹೆಯನ್ನು ಮಾಡಿರುವುದು ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ.

ಜನಗಣತಿಯು ಸರಾಗವಾಗಿ ನಡೆಯುವಂತೆ ಒಂದು ದಾರಿಯನ್ನು ಕೇಂದ್ರ ಗೃಹ ಸಚಿವಾಲಯ ಕಂಡುಕೊಳ್ಳಬೇಕು; ಇಲ್ಲವಾದರೆ ಹಲವಾರು ರಾಜ್ಯಗಳಲ್ಲಿ ಇಡೀ ಪ್ರಕ್ರಿಯೆಯೇ ಬುಡಮೇಲಾಗಬಹುದು ಎಂದು ಸಮಿತಿಯು ಎಚ್ಚರಿಕೆ ನೀಡಿದೆ.

ಎನ್‌ಪಿಆರ್ ಎಂದರೇನು?: ಗೃಹ ಸಚಿವಾಲಯದ ವಾದ

ರಾಷ್ಟ್ರೀಯ ಒಮ್ಮತಕ್ಕೆ ಬರುವ ಸಲುವಾಗಿ ಎನ್‌ಪಿ‌ಆರ್‌ಗೆ ಸಂಬಂಧಿಸಿದಂತೆ ಇರುವ ವಿವಿಧ ವಿಷಯಗಳ ಬಗ್ಗೆ ಎಲ್ಲಾ ರಾಜ್ಯಗಳಿಗೆ ಸಂಪೂರ್ಣವಾಗಿ ಮನವರಿಕೆ ಮಾಡಬೇಕು ಎಂದು ಈ ಬಹುಪಕ್ಷೀಯ ಸಮಿತಿ ಹೇಳಿದೆ. ಈ ರೀತಿಯ ಒಮ್ಮತವು ದೇಶಾದ್ಯಂತ ಜನರಲ್ಲಿ ಇರುವ ಭಯವನ್ನು ನಿವಾರಿಸಿ, ಸಂಪೂರ್ಣ ಸ್ಪಷ್ಟತೆ ಮೂಡಿಸುವುದರಿಂದ ಸರಾಗವಾಗಿ ಈ ಪ್ರಕ್ರಿಯೆ ನಡೆಯಲು ಅನುಕೂಲವಾಗುವುದು ಎಂದು ಸಮಿತಿಯು ಹೇಳಿದೆ.

ಹೊಸದಾಗಿ ಮಾಹಿತಿ ಸಂಗ್ರಹ ಕಾರ್ಯಕ್ರಮಕ್ಕೆ ತಗಲುವ ಶ್ರಮ ಮತ್ತು ವೆಚ್ಚ ಮರುಕಳಿಸದಂತೆ ಮಾಡಲು ಆಧಾರ್ ಮಾಹಿತಿಗಳನ್ನೇ ಎನ್‌ಪಿಆರ್ ನವೀಕರಣಕ್ಕೆ ಬಳಸಿಕೊಳ್ಳುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಸಮಿತಿ ಹೇಳಿದೆ.

1955ರ ಪೌರತ್ವ ಕಾಯಿದೆಯ ಆಧಾರದಲ್ಲಿ- 2003ರ ಪೌರತ್ವ ನಿಯಮಗಳ ಅನ್ವಯ 2010ರಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಅಥವಾ ಎನ್‌ಪಿಆರ್ ಮಾಡಲಾಗಿತ್ತು ಮತ್ತು 2015ರಲ್ಲಿ ಅದನ್ನು ನವೀಕರಣ ಮಾಡಲಾಗಿತ್ತು.

“ಹುಟ್ಟು, ಸಾವು ಮತ್ತು ವಲಸೆ ಇತ್ಯಾದಿ ಕಾರಣಗಳಿಂದ ರಾಷ್ಟ್ರೀಯ ಅಂಕಿಅಂಶಗಳನ್ನು ಮತ್ತೊಮ್ಮೆ ನವೀಕರಣ ಮಾಡಬೇಕಾದ ಅಗತ್ಯವಿದ್ದು, ಸರಕಾರ ಎನ್‌ಪಿಆರ್ ನವೀಕರಣದ ನಿರ್ಧಾರ ಕೈಗೊಂಡಿದೆ” ಎಂದು ಗೃಹ ಸಚಿವಾಲಯ ವಾದಿಸಿತು.

ಎನ್‌ಪಿಆರ್ ನವೀಕರಣ ನಡೆಯುತ್ತಿದ್ದು, ಅದನ್ನು ಹೊಸದಾಗಿ ಮಾಡುತ್ತಿಲ್ಲವಾದುದರಿಂದ, ಆಧಾರ್ ಮಾಹಿತಿ ಸಂಗ್ರಹ ( ಡಾಟಾ ಬೇಸ್) ಪ್ರಯೋಜನಕ್ಕೆ ಬರುವುದಿಲ್ಲ ಮತ್ತು ಯಾವುದೇ ಮರುಕಳಿಕೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಗೃಹ ಸಚಿವಾಲಯ ವಾದಿಸಿತು.

ಅದಲ್ಲದೇ “ಆಧಾರ್ ವೈಯಕ್ತಿಕ ಮಾಹಿತಿಯನ್ನು ಹೊಂದಿದ್ದು, ಎನ್‌ಪಿಆರ್ ಕೌಟುಂಬಿಕ ಮಾಹಿತಿಯನ್ನು ಹೊಂದಿರುತ್ತದೆ. ಆಧಾರ್ ಮಾಹಿತಿ ಸಂಗ್ರಹದಿಂದ ಕೌಟುಂಬಿಕ ಮಾಹಿತಿ ಸಂಗ್ರಹ ಸ್ಥಾಪಿಸಲು ಪ್ರತೀ ಮನೆಗೆ ಭೇಟಿ ನೀಡುವ ಅಗತ್ಯವಿದೆ” ಎಂದೂ ಗೃಹ ಸಚಿವಾಲಯ ವಾದಿಸಿತು.

ಆಧಾರ್, ಮತದಾರರ ಗುರುತುಚೀಟಿ, ಪಾಸ್‌ಪೋರ್ಟ್ ಸಂಖ್ಯೆ, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿಗಳ ನಡುವೆ ಕಳೆದುಹೋಗಿರುವ ಕೊಂಡಿಯನ್ನು ಎನ್‌ಪಿಆರ್ ಮರಳಿ ಸ್ಥಾಪಿಸುವುದು, ಮತ್ತು ಮಾಹಿತಿಯ ಮರುಕಳಿಕೆಯನ್ನು ಕೂಡಾ ಅದು ನಿವಾರಿಸುವುದು ಎಂದು ಕೂಡಾ ಗೃಹ ಸಚಿವಾಲಯ ವಾದಿಸಿತು. ಎನ್‌ಪಿಆರ್ ಮಾಹಿತಿಯನ್ನು ಇನ್ನಷ್ಟು ವಿಶ್ವಾಸಾರ್ಹಗೊಳಿಸಿ, ಭವಿಷ್ಯದಲ್ಲಿ ವಿವಿಧ ಯೋಜನೆಗಳ ಅನುಷ್ಟಾನದ ವೇಳೆ ಸರಕಾರದ ಸಂಪನ್ಮೂಲಗಳನ್ನು ಉಳಿತಾಯ ಮಾಡುವುದು ಎಂದೂ ಗೃಹ ಸಚಿವಾಲಯ ವಾದಿಸಿತು.

ಜನನ ಮತ್ತು ಮರಣದ ಮಾಹಿತಿಗಳನ್ನು ಸಂಪರ್ಕಿಸಿ ಪ್ರಸ್ತುತ ಕಾಲದ ಜನಸಂಖ್ಯೆಯ ಪ್ರಸ್ತುತ ಕಾಲದ ಮಾಹಿತಿ ಸಂಗ್ರಹ ಸರಕಾರದ ಆಶಯವಾಗಿದೆ ಎಂದೂ ಗೃಹ ಸಚಿವಾಲಯ ವಾದಿಸಿದೆ.

ದೇಶದಾದ್ಯಂತ ಎಪ್ರಿಲ್ 1ರಿಂದ ಜನಗಣತಿಯ ಜೊತೆಯಲ್ಲಿ ಎನ್‌ಪಿಆರ್ ನಡೆಸುವ ಯೋಜನೆಯೇನೋ ಇದೆ. ಆದರೆ, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ ಮುಂತಾದ ಪ್ರತಿಪಕ್ಷಗಳಿರುವ ರಾಜ್ಯಗಳು ತಾವು ಎನ್‌ಪಿಆರ್ ಮಾಹಿತಿ ಸಂಗ್ರಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ.

ಎನ್‌ಪಿಆರ್ ಎಂಬುದು ಎನ್‌ಆರ್‌ಸಿಯ ಪೂರ್ವಭಾವಿ ಕಾರ್ಯಕ್ರಮ ಎಂದು ಪ್ರತಿಪಕ್ಷಗಳ ಆರೋಪವಾದರೆ, ರಾಷ್ಟ್ರೀಯ ಪೌರತ್ವ ದಾಖಲಾತಿ ಕುರಿತು ಯಾವುದೇ ನಿರ್ಧಾರವನ್ನು ಈ ತನಕ ತೆಗೆದುಕೊಳ್ಳಲಾಗಿಲ್ಲ ಎಂದು ಬಿಜೆಪಿ ನೇತೃತ್ವದ ಸರಕಾರ ಹೇಳುತ್ತಿದೆ.

ಕೇಳಲಾಗಲಿರುವ ಪ್ರಶ್ನಾವಳಿಯಲ್ಲಿ ಹೆತ್ತವರ ಜನನ ಸ್ಥಳ, ಜನನ ದಿನಾಂಕ ಇತ್ಯಾದಿ ಮಾಹಿತಿಗಳ ಕುರಿತು ಪ್ರಶ್ನೆಗಳನ್ನು ಹೊಸದಾಗಿ ಸೇರಿಸಿರುವುದಕ್ಕೆ ಹಲವಾರು ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಕೃಪೆ: ಕಮಲ್‌ಜಿತ್‌ ಕೌರ್‌ ಸಂಧು, ಇಂಡಿಯಾ ಟುಡೆ
ಕನ್ನಡಕ್ಕೆ : ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...