Homeಮುಖಪುಟಎನ್‌ಪಿಆರ್, ಜನಗಣತಿ ಕುರಿತು ಜನರ ಆತಂಕ ನಿವಾರಿಸುವಂತೆ ಸರಕಾರಕ್ಕೆ ಸಂಸದೀಯ ಸಮಿತಿ ಸೂಚನೆ

ಎನ್‌ಪಿಆರ್, ಜನಗಣತಿ ಕುರಿತು ಜನರ ಆತಂಕ ನಿವಾರಿಸುವಂತೆ ಸರಕಾರಕ್ಕೆ ಸಂಸದೀಯ ಸಮಿತಿ ಸೂಚನೆ

ಜನಗಣತಿಯು ಸರಾಗವಾಗಿ ನಡೆಯುವಂತೆ ಒಂದು ದಾರಿಯನ್ನು ಕೇಂದ್ರ ಗೃಹ ಸಚಿವಾಲಯ ಕಂಡುಕೊಳ್ಳಬೇಕು; ಇಲ್ಲವಾದರೆ ಹಲವಾರು ರಾಜ್ಯಗಳಲ್ಲಿ ಇಡೀ ಪ್ರಕ್ರಿಯೆಯೇ ಬುಡಮೇಲಾಗಬಹುದು.

- Advertisement -
- Advertisement -

ಎನ್‌ಪಿಆರ್ ಮತ್ತು ಜನಗಣತಿಯ ಪ್ರಕ್ರಿಯೆ ಆರಂಭಿಸುವ ಮೊದಲು ಸಾರ್ವಜನಿಕರ ಆತಂಕ ನಿವಾರಣೆಗೆ ಸೂಕ್ತ ಯೋಜನೆಯೊಂದನ್ನು ರೂಪಿಸುವಂತೆ ಸಂಸದೀಯ ಸಮಿತಿಯೊಂದು ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿದೆ.

ಮುಂಬರಲಿರುವ ಎನ್‌ಪಿಆರ್ ಮತ್ತು ಜನಗಣತಿಯ ಕುರಿತು ಜನರಿಗೆ ಅತೃಪ್ತಿ ಮತ್ತು ಭಯವಿದ್ದು, ಯಾವುದೇ ಮಾಹಿತಿ ಸಂಗ್ರಹ ಆರಂಭಿಸುವ ಮೊದಲು ಈ ಭಯವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದೀಯ ಸಮಿತಿಯು ಸರಕಾರಕ್ಕೆ ಸಲಹೆ ಮಾಡಿದೆ. ಈ ಸಲಹೆಯನ್ನು ಮಾಡಿರುವುದು ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ.

ಜನಗಣತಿಯು ಸರಾಗವಾಗಿ ನಡೆಯುವಂತೆ ಒಂದು ದಾರಿಯನ್ನು ಕೇಂದ್ರ ಗೃಹ ಸಚಿವಾಲಯ ಕಂಡುಕೊಳ್ಳಬೇಕು; ಇಲ್ಲವಾದರೆ ಹಲವಾರು ರಾಜ್ಯಗಳಲ್ಲಿ ಇಡೀ ಪ್ರಕ್ರಿಯೆಯೇ ಬುಡಮೇಲಾಗಬಹುದು ಎಂದು ಸಮಿತಿಯು ಎಚ್ಚರಿಕೆ ನೀಡಿದೆ.

ಎನ್‌ಪಿಆರ್ ಎಂದರೇನು?: ಗೃಹ ಸಚಿವಾಲಯದ ವಾದ

ರಾಷ್ಟ್ರೀಯ ಒಮ್ಮತಕ್ಕೆ ಬರುವ ಸಲುವಾಗಿ ಎನ್‌ಪಿ‌ಆರ್‌ಗೆ ಸಂಬಂಧಿಸಿದಂತೆ ಇರುವ ವಿವಿಧ ವಿಷಯಗಳ ಬಗ್ಗೆ ಎಲ್ಲಾ ರಾಜ್ಯಗಳಿಗೆ ಸಂಪೂರ್ಣವಾಗಿ ಮನವರಿಕೆ ಮಾಡಬೇಕು ಎಂದು ಈ ಬಹುಪಕ್ಷೀಯ ಸಮಿತಿ ಹೇಳಿದೆ. ಈ ರೀತಿಯ ಒಮ್ಮತವು ದೇಶಾದ್ಯಂತ ಜನರಲ್ಲಿ ಇರುವ ಭಯವನ್ನು ನಿವಾರಿಸಿ, ಸಂಪೂರ್ಣ ಸ್ಪಷ್ಟತೆ ಮೂಡಿಸುವುದರಿಂದ ಸರಾಗವಾಗಿ ಈ ಪ್ರಕ್ರಿಯೆ ನಡೆಯಲು ಅನುಕೂಲವಾಗುವುದು ಎಂದು ಸಮಿತಿಯು ಹೇಳಿದೆ.

ಹೊಸದಾಗಿ ಮಾಹಿತಿ ಸಂಗ್ರಹ ಕಾರ್ಯಕ್ರಮಕ್ಕೆ ತಗಲುವ ಶ್ರಮ ಮತ್ತು ವೆಚ್ಚ ಮರುಕಳಿಸದಂತೆ ಮಾಡಲು ಆಧಾರ್ ಮಾಹಿತಿಗಳನ್ನೇ ಎನ್‌ಪಿಆರ್ ನವೀಕರಣಕ್ಕೆ ಬಳಸಿಕೊಳ್ಳುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಸಮಿತಿ ಹೇಳಿದೆ.

1955ರ ಪೌರತ್ವ ಕಾಯಿದೆಯ ಆಧಾರದಲ್ಲಿ- 2003ರ ಪೌರತ್ವ ನಿಯಮಗಳ ಅನ್ವಯ 2010ರಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಅಥವಾ ಎನ್‌ಪಿಆರ್ ಮಾಡಲಾಗಿತ್ತು ಮತ್ತು 2015ರಲ್ಲಿ ಅದನ್ನು ನವೀಕರಣ ಮಾಡಲಾಗಿತ್ತು.

“ಹುಟ್ಟು, ಸಾವು ಮತ್ತು ವಲಸೆ ಇತ್ಯಾದಿ ಕಾರಣಗಳಿಂದ ರಾಷ್ಟ್ರೀಯ ಅಂಕಿಅಂಶಗಳನ್ನು ಮತ್ತೊಮ್ಮೆ ನವೀಕರಣ ಮಾಡಬೇಕಾದ ಅಗತ್ಯವಿದ್ದು, ಸರಕಾರ ಎನ್‌ಪಿಆರ್ ನವೀಕರಣದ ನಿರ್ಧಾರ ಕೈಗೊಂಡಿದೆ” ಎಂದು ಗೃಹ ಸಚಿವಾಲಯ ವಾದಿಸಿತು.

ಎನ್‌ಪಿಆರ್ ನವೀಕರಣ ನಡೆಯುತ್ತಿದ್ದು, ಅದನ್ನು ಹೊಸದಾಗಿ ಮಾಡುತ್ತಿಲ್ಲವಾದುದರಿಂದ, ಆಧಾರ್ ಮಾಹಿತಿ ಸಂಗ್ರಹ ( ಡಾಟಾ ಬೇಸ್) ಪ್ರಯೋಜನಕ್ಕೆ ಬರುವುದಿಲ್ಲ ಮತ್ತು ಯಾವುದೇ ಮರುಕಳಿಕೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಗೃಹ ಸಚಿವಾಲಯ ವಾದಿಸಿತು.

ಅದಲ್ಲದೇ “ಆಧಾರ್ ವೈಯಕ್ತಿಕ ಮಾಹಿತಿಯನ್ನು ಹೊಂದಿದ್ದು, ಎನ್‌ಪಿಆರ್ ಕೌಟುಂಬಿಕ ಮಾಹಿತಿಯನ್ನು ಹೊಂದಿರುತ್ತದೆ. ಆಧಾರ್ ಮಾಹಿತಿ ಸಂಗ್ರಹದಿಂದ ಕೌಟುಂಬಿಕ ಮಾಹಿತಿ ಸಂಗ್ರಹ ಸ್ಥಾಪಿಸಲು ಪ್ರತೀ ಮನೆಗೆ ಭೇಟಿ ನೀಡುವ ಅಗತ್ಯವಿದೆ” ಎಂದೂ ಗೃಹ ಸಚಿವಾಲಯ ವಾದಿಸಿತು.

ಆಧಾರ್, ಮತದಾರರ ಗುರುತುಚೀಟಿ, ಪಾಸ್‌ಪೋರ್ಟ್ ಸಂಖ್ಯೆ, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿಗಳ ನಡುವೆ ಕಳೆದುಹೋಗಿರುವ ಕೊಂಡಿಯನ್ನು ಎನ್‌ಪಿಆರ್ ಮರಳಿ ಸ್ಥಾಪಿಸುವುದು, ಮತ್ತು ಮಾಹಿತಿಯ ಮರುಕಳಿಕೆಯನ್ನು ಕೂಡಾ ಅದು ನಿವಾರಿಸುವುದು ಎಂದು ಕೂಡಾ ಗೃಹ ಸಚಿವಾಲಯ ವಾದಿಸಿತು. ಎನ್‌ಪಿಆರ್ ಮಾಹಿತಿಯನ್ನು ಇನ್ನಷ್ಟು ವಿಶ್ವಾಸಾರ್ಹಗೊಳಿಸಿ, ಭವಿಷ್ಯದಲ್ಲಿ ವಿವಿಧ ಯೋಜನೆಗಳ ಅನುಷ್ಟಾನದ ವೇಳೆ ಸರಕಾರದ ಸಂಪನ್ಮೂಲಗಳನ್ನು ಉಳಿತಾಯ ಮಾಡುವುದು ಎಂದೂ ಗೃಹ ಸಚಿವಾಲಯ ವಾದಿಸಿತು.

ಜನನ ಮತ್ತು ಮರಣದ ಮಾಹಿತಿಗಳನ್ನು ಸಂಪರ್ಕಿಸಿ ಪ್ರಸ್ತುತ ಕಾಲದ ಜನಸಂಖ್ಯೆಯ ಪ್ರಸ್ತುತ ಕಾಲದ ಮಾಹಿತಿ ಸಂಗ್ರಹ ಸರಕಾರದ ಆಶಯವಾಗಿದೆ ಎಂದೂ ಗೃಹ ಸಚಿವಾಲಯ ವಾದಿಸಿದೆ.

ದೇಶದಾದ್ಯಂತ ಎಪ್ರಿಲ್ 1ರಿಂದ ಜನಗಣತಿಯ ಜೊತೆಯಲ್ಲಿ ಎನ್‌ಪಿಆರ್ ನಡೆಸುವ ಯೋಜನೆಯೇನೋ ಇದೆ. ಆದರೆ, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ ಮುಂತಾದ ಪ್ರತಿಪಕ್ಷಗಳಿರುವ ರಾಜ್ಯಗಳು ತಾವು ಎನ್‌ಪಿಆರ್ ಮಾಹಿತಿ ಸಂಗ್ರಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ.

ಎನ್‌ಪಿಆರ್ ಎಂಬುದು ಎನ್‌ಆರ್‌ಸಿಯ ಪೂರ್ವಭಾವಿ ಕಾರ್ಯಕ್ರಮ ಎಂದು ಪ್ರತಿಪಕ್ಷಗಳ ಆರೋಪವಾದರೆ, ರಾಷ್ಟ್ರೀಯ ಪೌರತ್ವ ದಾಖಲಾತಿ ಕುರಿತು ಯಾವುದೇ ನಿರ್ಧಾರವನ್ನು ಈ ತನಕ ತೆಗೆದುಕೊಳ್ಳಲಾಗಿಲ್ಲ ಎಂದು ಬಿಜೆಪಿ ನೇತೃತ್ವದ ಸರಕಾರ ಹೇಳುತ್ತಿದೆ.

ಕೇಳಲಾಗಲಿರುವ ಪ್ರಶ್ನಾವಳಿಯಲ್ಲಿ ಹೆತ್ತವರ ಜನನ ಸ್ಥಳ, ಜನನ ದಿನಾಂಕ ಇತ್ಯಾದಿ ಮಾಹಿತಿಗಳ ಕುರಿತು ಪ್ರಶ್ನೆಗಳನ್ನು ಹೊಸದಾಗಿ ಸೇರಿಸಿರುವುದಕ್ಕೆ ಹಲವಾರು ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಕೃಪೆ: ಕಮಲ್‌ಜಿತ್‌ ಕೌರ್‌ ಸಂಧು, ಇಂಡಿಯಾ ಟುಡೆ
ಕನ್ನಡಕ್ಕೆ : ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...