Homeಮುಖಪುಟಎನ್‌ಪಿಆರ್, ಜನಗಣತಿ ಕುರಿತು ಜನರ ಆತಂಕ ನಿವಾರಿಸುವಂತೆ ಸರಕಾರಕ್ಕೆ ಸಂಸದೀಯ ಸಮಿತಿ ಸೂಚನೆ

ಎನ್‌ಪಿಆರ್, ಜನಗಣತಿ ಕುರಿತು ಜನರ ಆತಂಕ ನಿವಾರಿಸುವಂತೆ ಸರಕಾರಕ್ಕೆ ಸಂಸದೀಯ ಸಮಿತಿ ಸೂಚನೆ

ಜನಗಣತಿಯು ಸರಾಗವಾಗಿ ನಡೆಯುವಂತೆ ಒಂದು ದಾರಿಯನ್ನು ಕೇಂದ್ರ ಗೃಹ ಸಚಿವಾಲಯ ಕಂಡುಕೊಳ್ಳಬೇಕು; ಇಲ್ಲವಾದರೆ ಹಲವಾರು ರಾಜ್ಯಗಳಲ್ಲಿ ಇಡೀ ಪ್ರಕ್ರಿಯೆಯೇ ಬುಡಮೇಲಾಗಬಹುದು.

- Advertisement -
- Advertisement -

ಎನ್‌ಪಿಆರ್ ಮತ್ತು ಜನಗಣತಿಯ ಪ್ರಕ್ರಿಯೆ ಆರಂಭಿಸುವ ಮೊದಲು ಸಾರ್ವಜನಿಕರ ಆತಂಕ ನಿವಾರಣೆಗೆ ಸೂಕ್ತ ಯೋಜನೆಯೊಂದನ್ನು ರೂಪಿಸುವಂತೆ ಸಂಸದೀಯ ಸಮಿತಿಯೊಂದು ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿದೆ.

ಮುಂಬರಲಿರುವ ಎನ್‌ಪಿಆರ್ ಮತ್ತು ಜನಗಣತಿಯ ಕುರಿತು ಜನರಿಗೆ ಅತೃಪ್ತಿ ಮತ್ತು ಭಯವಿದ್ದು, ಯಾವುದೇ ಮಾಹಿತಿ ಸಂಗ್ರಹ ಆರಂಭಿಸುವ ಮೊದಲು ಈ ಭಯವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದೀಯ ಸಮಿತಿಯು ಸರಕಾರಕ್ಕೆ ಸಲಹೆ ಮಾಡಿದೆ. ಈ ಸಲಹೆಯನ್ನು ಮಾಡಿರುವುದು ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ.

ಜನಗಣತಿಯು ಸರಾಗವಾಗಿ ನಡೆಯುವಂತೆ ಒಂದು ದಾರಿಯನ್ನು ಕೇಂದ್ರ ಗೃಹ ಸಚಿವಾಲಯ ಕಂಡುಕೊಳ್ಳಬೇಕು; ಇಲ್ಲವಾದರೆ ಹಲವಾರು ರಾಜ್ಯಗಳಲ್ಲಿ ಇಡೀ ಪ್ರಕ್ರಿಯೆಯೇ ಬುಡಮೇಲಾಗಬಹುದು ಎಂದು ಸಮಿತಿಯು ಎಚ್ಚರಿಕೆ ನೀಡಿದೆ.

ಎನ್‌ಪಿಆರ್ ಎಂದರೇನು?: ಗೃಹ ಸಚಿವಾಲಯದ ವಾದ

ರಾಷ್ಟ್ರೀಯ ಒಮ್ಮತಕ್ಕೆ ಬರುವ ಸಲುವಾಗಿ ಎನ್‌ಪಿ‌ಆರ್‌ಗೆ ಸಂಬಂಧಿಸಿದಂತೆ ಇರುವ ವಿವಿಧ ವಿಷಯಗಳ ಬಗ್ಗೆ ಎಲ್ಲಾ ರಾಜ್ಯಗಳಿಗೆ ಸಂಪೂರ್ಣವಾಗಿ ಮನವರಿಕೆ ಮಾಡಬೇಕು ಎಂದು ಈ ಬಹುಪಕ್ಷೀಯ ಸಮಿತಿ ಹೇಳಿದೆ. ಈ ರೀತಿಯ ಒಮ್ಮತವು ದೇಶಾದ್ಯಂತ ಜನರಲ್ಲಿ ಇರುವ ಭಯವನ್ನು ನಿವಾರಿಸಿ, ಸಂಪೂರ್ಣ ಸ್ಪಷ್ಟತೆ ಮೂಡಿಸುವುದರಿಂದ ಸರಾಗವಾಗಿ ಈ ಪ್ರಕ್ರಿಯೆ ನಡೆಯಲು ಅನುಕೂಲವಾಗುವುದು ಎಂದು ಸಮಿತಿಯು ಹೇಳಿದೆ.

ಹೊಸದಾಗಿ ಮಾಹಿತಿ ಸಂಗ್ರಹ ಕಾರ್ಯಕ್ರಮಕ್ಕೆ ತಗಲುವ ಶ್ರಮ ಮತ್ತು ವೆಚ್ಚ ಮರುಕಳಿಸದಂತೆ ಮಾಡಲು ಆಧಾರ್ ಮಾಹಿತಿಗಳನ್ನೇ ಎನ್‌ಪಿಆರ್ ನವೀಕರಣಕ್ಕೆ ಬಳಸಿಕೊಳ್ಳುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಸಮಿತಿ ಹೇಳಿದೆ.

1955ರ ಪೌರತ್ವ ಕಾಯಿದೆಯ ಆಧಾರದಲ್ಲಿ- 2003ರ ಪೌರತ್ವ ನಿಯಮಗಳ ಅನ್ವಯ 2010ರಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಅಥವಾ ಎನ್‌ಪಿಆರ್ ಮಾಡಲಾಗಿತ್ತು ಮತ್ತು 2015ರಲ್ಲಿ ಅದನ್ನು ನವೀಕರಣ ಮಾಡಲಾಗಿತ್ತು.

“ಹುಟ್ಟು, ಸಾವು ಮತ್ತು ವಲಸೆ ಇತ್ಯಾದಿ ಕಾರಣಗಳಿಂದ ರಾಷ್ಟ್ರೀಯ ಅಂಕಿಅಂಶಗಳನ್ನು ಮತ್ತೊಮ್ಮೆ ನವೀಕರಣ ಮಾಡಬೇಕಾದ ಅಗತ್ಯವಿದ್ದು, ಸರಕಾರ ಎನ್‌ಪಿಆರ್ ನವೀಕರಣದ ನಿರ್ಧಾರ ಕೈಗೊಂಡಿದೆ” ಎಂದು ಗೃಹ ಸಚಿವಾಲಯ ವಾದಿಸಿತು.

ಎನ್‌ಪಿಆರ್ ನವೀಕರಣ ನಡೆಯುತ್ತಿದ್ದು, ಅದನ್ನು ಹೊಸದಾಗಿ ಮಾಡುತ್ತಿಲ್ಲವಾದುದರಿಂದ, ಆಧಾರ್ ಮಾಹಿತಿ ಸಂಗ್ರಹ ( ಡಾಟಾ ಬೇಸ್) ಪ್ರಯೋಜನಕ್ಕೆ ಬರುವುದಿಲ್ಲ ಮತ್ತು ಯಾವುದೇ ಮರುಕಳಿಕೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಗೃಹ ಸಚಿವಾಲಯ ವಾದಿಸಿತು.

ಅದಲ್ಲದೇ “ಆಧಾರ್ ವೈಯಕ್ತಿಕ ಮಾಹಿತಿಯನ್ನು ಹೊಂದಿದ್ದು, ಎನ್‌ಪಿಆರ್ ಕೌಟುಂಬಿಕ ಮಾಹಿತಿಯನ್ನು ಹೊಂದಿರುತ್ತದೆ. ಆಧಾರ್ ಮಾಹಿತಿ ಸಂಗ್ರಹದಿಂದ ಕೌಟುಂಬಿಕ ಮಾಹಿತಿ ಸಂಗ್ರಹ ಸ್ಥಾಪಿಸಲು ಪ್ರತೀ ಮನೆಗೆ ಭೇಟಿ ನೀಡುವ ಅಗತ್ಯವಿದೆ” ಎಂದೂ ಗೃಹ ಸಚಿವಾಲಯ ವಾದಿಸಿತು.

ಆಧಾರ್, ಮತದಾರರ ಗುರುತುಚೀಟಿ, ಪಾಸ್‌ಪೋರ್ಟ್ ಸಂಖ್ಯೆ, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿಗಳ ನಡುವೆ ಕಳೆದುಹೋಗಿರುವ ಕೊಂಡಿಯನ್ನು ಎನ್‌ಪಿಆರ್ ಮರಳಿ ಸ್ಥಾಪಿಸುವುದು, ಮತ್ತು ಮಾಹಿತಿಯ ಮರುಕಳಿಕೆಯನ್ನು ಕೂಡಾ ಅದು ನಿವಾರಿಸುವುದು ಎಂದು ಕೂಡಾ ಗೃಹ ಸಚಿವಾಲಯ ವಾದಿಸಿತು. ಎನ್‌ಪಿಆರ್ ಮಾಹಿತಿಯನ್ನು ಇನ್ನಷ್ಟು ವಿಶ್ವಾಸಾರ್ಹಗೊಳಿಸಿ, ಭವಿಷ್ಯದಲ್ಲಿ ವಿವಿಧ ಯೋಜನೆಗಳ ಅನುಷ್ಟಾನದ ವೇಳೆ ಸರಕಾರದ ಸಂಪನ್ಮೂಲಗಳನ್ನು ಉಳಿತಾಯ ಮಾಡುವುದು ಎಂದೂ ಗೃಹ ಸಚಿವಾಲಯ ವಾದಿಸಿತು.

ಜನನ ಮತ್ತು ಮರಣದ ಮಾಹಿತಿಗಳನ್ನು ಸಂಪರ್ಕಿಸಿ ಪ್ರಸ್ತುತ ಕಾಲದ ಜನಸಂಖ್ಯೆಯ ಪ್ರಸ್ತುತ ಕಾಲದ ಮಾಹಿತಿ ಸಂಗ್ರಹ ಸರಕಾರದ ಆಶಯವಾಗಿದೆ ಎಂದೂ ಗೃಹ ಸಚಿವಾಲಯ ವಾದಿಸಿದೆ.

ದೇಶದಾದ್ಯಂತ ಎಪ್ರಿಲ್ 1ರಿಂದ ಜನಗಣತಿಯ ಜೊತೆಯಲ್ಲಿ ಎನ್‌ಪಿಆರ್ ನಡೆಸುವ ಯೋಜನೆಯೇನೋ ಇದೆ. ಆದರೆ, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ ಮುಂತಾದ ಪ್ರತಿಪಕ್ಷಗಳಿರುವ ರಾಜ್ಯಗಳು ತಾವು ಎನ್‌ಪಿಆರ್ ಮಾಹಿತಿ ಸಂಗ್ರಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ.

ಎನ್‌ಪಿಆರ್ ಎಂಬುದು ಎನ್‌ಆರ್‌ಸಿಯ ಪೂರ್ವಭಾವಿ ಕಾರ್ಯಕ್ರಮ ಎಂದು ಪ್ರತಿಪಕ್ಷಗಳ ಆರೋಪವಾದರೆ, ರಾಷ್ಟ್ರೀಯ ಪೌರತ್ವ ದಾಖಲಾತಿ ಕುರಿತು ಯಾವುದೇ ನಿರ್ಧಾರವನ್ನು ಈ ತನಕ ತೆಗೆದುಕೊಳ್ಳಲಾಗಿಲ್ಲ ಎಂದು ಬಿಜೆಪಿ ನೇತೃತ್ವದ ಸರಕಾರ ಹೇಳುತ್ತಿದೆ.

ಕೇಳಲಾಗಲಿರುವ ಪ್ರಶ್ನಾವಳಿಯಲ್ಲಿ ಹೆತ್ತವರ ಜನನ ಸ್ಥಳ, ಜನನ ದಿನಾಂಕ ಇತ್ಯಾದಿ ಮಾಹಿತಿಗಳ ಕುರಿತು ಪ್ರಶ್ನೆಗಳನ್ನು ಹೊಸದಾಗಿ ಸೇರಿಸಿರುವುದಕ್ಕೆ ಹಲವಾರು ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಕೃಪೆ: ಕಮಲ್‌ಜಿತ್‌ ಕೌರ್‌ ಸಂಧು, ಇಂಡಿಯಾ ಟುಡೆ
ಕನ್ನಡಕ್ಕೆ : ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...