Homeಮುಖಪುಟಎನ್‌ಪಿಆರ್, ಜನಗಣತಿ ಕುರಿತು ಜನರ ಆತಂಕ ನಿವಾರಿಸುವಂತೆ ಸರಕಾರಕ್ಕೆ ಸಂಸದೀಯ ಸಮಿತಿ ಸೂಚನೆ

ಎನ್‌ಪಿಆರ್, ಜನಗಣತಿ ಕುರಿತು ಜನರ ಆತಂಕ ನಿವಾರಿಸುವಂತೆ ಸರಕಾರಕ್ಕೆ ಸಂಸದೀಯ ಸಮಿತಿ ಸೂಚನೆ

ಜನಗಣತಿಯು ಸರಾಗವಾಗಿ ನಡೆಯುವಂತೆ ಒಂದು ದಾರಿಯನ್ನು ಕೇಂದ್ರ ಗೃಹ ಸಚಿವಾಲಯ ಕಂಡುಕೊಳ್ಳಬೇಕು; ಇಲ್ಲವಾದರೆ ಹಲವಾರು ರಾಜ್ಯಗಳಲ್ಲಿ ಇಡೀ ಪ್ರಕ್ರಿಯೆಯೇ ಬುಡಮೇಲಾಗಬಹುದು.

- Advertisement -
- Advertisement -

ಎನ್‌ಪಿಆರ್ ಮತ್ತು ಜನಗಣತಿಯ ಪ್ರಕ್ರಿಯೆ ಆರಂಭಿಸುವ ಮೊದಲು ಸಾರ್ವಜನಿಕರ ಆತಂಕ ನಿವಾರಣೆಗೆ ಸೂಕ್ತ ಯೋಜನೆಯೊಂದನ್ನು ರೂಪಿಸುವಂತೆ ಸಂಸದೀಯ ಸಮಿತಿಯೊಂದು ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿದೆ.

ಮುಂಬರಲಿರುವ ಎನ್‌ಪಿಆರ್ ಮತ್ತು ಜನಗಣತಿಯ ಕುರಿತು ಜನರಿಗೆ ಅತೃಪ್ತಿ ಮತ್ತು ಭಯವಿದ್ದು, ಯಾವುದೇ ಮಾಹಿತಿ ಸಂಗ್ರಹ ಆರಂಭಿಸುವ ಮೊದಲು ಈ ಭಯವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದೀಯ ಸಮಿತಿಯು ಸರಕಾರಕ್ಕೆ ಸಲಹೆ ಮಾಡಿದೆ. ಈ ಸಲಹೆಯನ್ನು ಮಾಡಿರುವುದು ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ.

ಜನಗಣತಿಯು ಸರಾಗವಾಗಿ ನಡೆಯುವಂತೆ ಒಂದು ದಾರಿಯನ್ನು ಕೇಂದ್ರ ಗೃಹ ಸಚಿವಾಲಯ ಕಂಡುಕೊಳ್ಳಬೇಕು; ಇಲ್ಲವಾದರೆ ಹಲವಾರು ರಾಜ್ಯಗಳಲ್ಲಿ ಇಡೀ ಪ್ರಕ್ರಿಯೆಯೇ ಬುಡಮೇಲಾಗಬಹುದು ಎಂದು ಸಮಿತಿಯು ಎಚ್ಚರಿಕೆ ನೀಡಿದೆ.

ಎನ್‌ಪಿಆರ್ ಎಂದರೇನು?: ಗೃಹ ಸಚಿವಾಲಯದ ವಾದ

ರಾಷ್ಟ್ರೀಯ ಒಮ್ಮತಕ್ಕೆ ಬರುವ ಸಲುವಾಗಿ ಎನ್‌ಪಿ‌ಆರ್‌ಗೆ ಸಂಬಂಧಿಸಿದಂತೆ ಇರುವ ವಿವಿಧ ವಿಷಯಗಳ ಬಗ್ಗೆ ಎಲ್ಲಾ ರಾಜ್ಯಗಳಿಗೆ ಸಂಪೂರ್ಣವಾಗಿ ಮನವರಿಕೆ ಮಾಡಬೇಕು ಎಂದು ಈ ಬಹುಪಕ್ಷೀಯ ಸಮಿತಿ ಹೇಳಿದೆ. ಈ ರೀತಿಯ ಒಮ್ಮತವು ದೇಶಾದ್ಯಂತ ಜನರಲ್ಲಿ ಇರುವ ಭಯವನ್ನು ನಿವಾರಿಸಿ, ಸಂಪೂರ್ಣ ಸ್ಪಷ್ಟತೆ ಮೂಡಿಸುವುದರಿಂದ ಸರಾಗವಾಗಿ ಈ ಪ್ರಕ್ರಿಯೆ ನಡೆಯಲು ಅನುಕೂಲವಾಗುವುದು ಎಂದು ಸಮಿತಿಯು ಹೇಳಿದೆ.

ಹೊಸದಾಗಿ ಮಾಹಿತಿ ಸಂಗ್ರಹ ಕಾರ್ಯಕ್ರಮಕ್ಕೆ ತಗಲುವ ಶ್ರಮ ಮತ್ತು ವೆಚ್ಚ ಮರುಕಳಿಸದಂತೆ ಮಾಡಲು ಆಧಾರ್ ಮಾಹಿತಿಗಳನ್ನೇ ಎನ್‌ಪಿಆರ್ ನವೀಕರಣಕ್ಕೆ ಬಳಸಿಕೊಳ್ಳುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಸಮಿತಿ ಹೇಳಿದೆ.

1955ರ ಪೌರತ್ವ ಕಾಯಿದೆಯ ಆಧಾರದಲ್ಲಿ- 2003ರ ಪೌರತ್ವ ನಿಯಮಗಳ ಅನ್ವಯ 2010ರಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಅಥವಾ ಎನ್‌ಪಿಆರ್ ಮಾಡಲಾಗಿತ್ತು ಮತ್ತು 2015ರಲ್ಲಿ ಅದನ್ನು ನವೀಕರಣ ಮಾಡಲಾಗಿತ್ತು.

“ಹುಟ್ಟು, ಸಾವು ಮತ್ತು ವಲಸೆ ಇತ್ಯಾದಿ ಕಾರಣಗಳಿಂದ ರಾಷ್ಟ್ರೀಯ ಅಂಕಿಅಂಶಗಳನ್ನು ಮತ್ತೊಮ್ಮೆ ನವೀಕರಣ ಮಾಡಬೇಕಾದ ಅಗತ್ಯವಿದ್ದು, ಸರಕಾರ ಎನ್‌ಪಿಆರ್ ನವೀಕರಣದ ನಿರ್ಧಾರ ಕೈಗೊಂಡಿದೆ” ಎಂದು ಗೃಹ ಸಚಿವಾಲಯ ವಾದಿಸಿತು.

ಎನ್‌ಪಿಆರ್ ನವೀಕರಣ ನಡೆಯುತ್ತಿದ್ದು, ಅದನ್ನು ಹೊಸದಾಗಿ ಮಾಡುತ್ತಿಲ್ಲವಾದುದರಿಂದ, ಆಧಾರ್ ಮಾಹಿತಿ ಸಂಗ್ರಹ ( ಡಾಟಾ ಬೇಸ್) ಪ್ರಯೋಜನಕ್ಕೆ ಬರುವುದಿಲ್ಲ ಮತ್ತು ಯಾವುದೇ ಮರುಕಳಿಕೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಗೃಹ ಸಚಿವಾಲಯ ವಾದಿಸಿತು.

ಅದಲ್ಲದೇ “ಆಧಾರ್ ವೈಯಕ್ತಿಕ ಮಾಹಿತಿಯನ್ನು ಹೊಂದಿದ್ದು, ಎನ್‌ಪಿಆರ್ ಕೌಟುಂಬಿಕ ಮಾಹಿತಿಯನ್ನು ಹೊಂದಿರುತ್ತದೆ. ಆಧಾರ್ ಮಾಹಿತಿ ಸಂಗ್ರಹದಿಂದ ಕೌಟುಂಬಿಕ ಮಾಹಿತಿ ಸಂಗ್ರಹ ಸ್ಥಾಪಿಸಲು ಪ್ರತೀ ಮನೆಗೆ ಭೇಟಿ ನೀಡುವ ಅಗತ್ಯವಿದೆ” ಎಂದೂ ಗೃಹ ಸಚಿವಾಲಯ ವಾದಿಸಿತು.

ಆಧಾರ್, ಮತದಾರರ ಗುರುತುಚೀಟಿ, ಪಾಸ್‌ಪೋರ್ಟ್ ಸಂಖ್ಯೆ, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿಗಳ ನಡುವೆ ಕಳೆದುಹೋಗಿರುವ ಕೊಂಡಿಯನ್ನು ಎನ್‌ಪಿಆರ್ ಮರಳಿ ಸ್ಥಾಪಿಸುವುದು, ಮತ್ತು ಮಾಹಿತಿಯ ಮರುಕಳಿಕೆಯನ್ನು ಕೂಡಾ ಅದು ನಿವಾರಿಸುವುದು ಎಂದು ಕೂಡಾ ಗೃಹ ಸಚಿವಾಲಯ ವಾದಿಸಿತು. ಎನ್‌ಪಿಆರ್ ಮಾಹಿತಿಯನ್ನು ಇನ್ನಷ್ಟು ವಿಶ್ವಾಸಾರ್ಹಗೊಳಿಸಿ, ಭವಿಷ್ಯದಲ್ಲಿ ವಿವಿಧ ಯೋಜನೆಗಳ ಅನುಷ್ಟಾನದ ವೇಳೆ ಸರಕಾರದ ಸಂಪನ್ಮೂಲಗಳನ್ನು ಉಳಿತಾಯ ಮಾಡುವುದು ಎಂದೂ ಗೃಹ ಸಚಿವಾಲಯ ವಾದಿಸಿತು.

ಜನನ ಮತ್ತು ಮರಣದ ಮಾಹಿತಿಗಳನ್ನು ಸಂಪರ್ಕಿಸಿ ಪ್ರಸ್ತುತ ಕಾಲದ ಜನಸಂಖ್ಯೆಯ ಪ್ರಸ್ತುತ ಕಾಲದ ಮಾಹಿತಿ ಸಂಗ್ರಹ ಸರಕಾರದ ಆಶಯವಾಗಿದೆ ಎಂದೂ ಗೃಹ ಸಚಿವಾಲಯ ವಾದಿಸಿದೆ.

ದೇಶದಾದ್ಯಂತ ಎಪ್ರಿಲ್ 1ರಿಂದ ಜನಗಣತಿಯ ಜೊತೆಯಲ್ಲಿ ಎನ್‌ಪಿಆರ್ ನಡೆಸುವ ಯೋಜನೆಯೇನೋ ಇದೆ. ಆದರೆ, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ ಮುಂತಾದ ಪ್ರತಿಪಕ್ಷಗಳಿರುವ ರಾಜ್ಯಗಳು ತಾವು ಎನ್‌ಪಿಆರ್ ಮಾಹಿತಿ ಸಂಗ್ರಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ.

ಎನ್‌ಪಿಆರ್ ಎಂಬುದು ಎನ್‌ಆರ್‌ಸಿಯ ಪೂರ್ವಭಾವಿ ಕಾರ್ಯಕ್ರಮ ಎಂದು ಪ್ರತಿಪಕ್ಷಗಳ ಆರೋಪವಾದರೆ, ರಾಷ್ಟ್ರೀಯ ಪೌರತ್ವ ದಾಖಲಾತಿ ಕುರಿತು ಯಾವುದೇ ನಿರ್ಧಾರವನ್ನು ಈ ತನಕ ತೆಗೆದುಕೊಳ್ಳಲಾಗಿಲ್ಲ ಎಂದು ಬಿಜೆಪಿ ನೇತೃತ್ವದ ಸರಕಾರ ಹೇಳುತ್ತಿದೆ.

ಕೇಳಲಾಗಲಿರುವ ಪ್ರಶ್ನಾವಳಿಯಲ್ಲಿ ಹೆತ್ತವರ ಜನನ ಸ್ಥಳ, ಜನನ ದಿನಾಂಕ ಇತ್ಯಾದಿ ಮಾಹಿತಿಗಳ ಕುರಿತು ಪ್ರಶ್ನೆಗಳನ್ನು ಹೊಸದಾಗಿ ಸೇರಿಸಿರುವುದಕ್ಕೆ ಹಲವಾರು ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಕೃಪೆ: ಕಮಲ್‌ಜಿತ್‌ ಕೌರ್‌ ಸಂಧು, ಇಂಡಿಯಾ ಟುಡೆ
ಕನ್ನಡಕ್ಕೆ : ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...