Homeಮುಖಪುಟಎನ್‌ಪಿಆರ್, ಜನಗಣತಿ ಕುರಿತು ಜನರ ಆತಂಕ ನಿವಾರಿಸುವಂತೆ ಸರಕಾರಕ್ಕೆ ಸಂಸದೀಯ ಸಮಿತಿ ಸೂಚನೆ

ಎನ್‌ಪಿಆರ್, ಜನಗಣತಿ ಕುರಿತು ಜನರ ಆತಂಕ ನಿವಾರಿಸುವಂತೆ ಸರಕಾರಕ್ಕೆ ಸಂಸದೀಯ ಸಮಿತಿ ಸೂಚನೆ

ಜನಗಣತಿಯು ಸರಾಗವಾಗಿ ನಡೆಯುವಂತೆ ಒಂದು ದಾರಿಯನ್ನು ಕೇಂದ್ರ ಗೃಹ ಸಚಿವಾಲಯ ಕಂಡುಕೊಳ್ಳಬೇಕು; ಇಲ್ಲವಾದರೆ ಹಲವಾರು ರಾಜ್ಯಗಳಲ್ಲಿ ಇಡೀ ಪ್ರಕ್ರಿಯೆಯೇ ಬುಡಮೇಲಾಗಬಹುದು.

- Advertisement -
- Advertisement -

ಎನ್‌ಪಿಆರ್ ಮತ್ತು ಜನಗಣತಿಯ ಪ್ರಕ್ರಿಯೆ ಆರಂಭಿಸುವ ಮೊದಲು ಸಾರ್ವಜನಿಕರ ಆತಂಕ ನಿವಾರಣೆಗೆ ಸೂಕ್ತ ಯೋಜನೆಯೊಂದನ್ನು ರೂಪಿಸುವಂತೆ ಸಂಸದೀಯ ಸಮಿತಿಯೊಂದು ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿದೆ.

ಮುಂಬರಲಿರುವ ಎನ್‌ಪಿಆರ್ ಮತ್ತು ಜನಗಣತಿಯ ಕುರಿತು ಜನರಿಗೆ ಅತೃಪ್ತಿ ಮತ್ತು ಭಯವಿದ್ದು, ಯಾವುದೇ ಮಾಹಿತಿ ಸಂಗ್ರಹ ಆರಂಭಿಸುವ ಮೊದಲು ಈ ಭಯವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದೀಯ ಸಮಿತಿಯು ಸರಕಾರಕ್ಕೆ ಸಲಹೆ ಮಾಡಿದೆ. ಈ ಸಲಹೆಯನ್ನು ಮಾಡಿರುವುದು ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ.

ಜನಗಣತಿಯು ಸರಾಗವಾಗಿ ನಡೆಯುವಂತೆ ಒಂದು ದಾರಿಯನ್ನು ಕೇಂದ್ರ ಗೃಹ ಸಚಿವಾಲಯ ಕಂಡುಕೊಳ್ಳಬೇಕು; ಇಲ್ಲವಾದರೆ ಹಲವಾರು ರಾಜ್ಯಗಳಲ್ಲಿ ಇಡೀ ಪ್ರಕ್ರಿಯೆಯೇ ಬುಡಮೇಲಾಗಬಹುದು ಎಂದು ಸಮಿತಿಯು ಎಚ್ಚರಿಕೆ ನೀಡಿದೆ.

ಎನ್‌ಪಿಆರ್ ಎಂದರೇನು?: ಗೃಹ ಸಚಿವಾಲಯದ ವಾದ

ರಾಷ್ಟ್ರೀಯ ಒಮ್ಮತಕ್ಕೆ ಬರುವ ಸಲುವಾಗಿ ಎನ್‌ಪಿ‌ಆರ್‌ಗೆ ಸಂಬಂಧಿಸಿದಂತೆ ಇರುವ ವಿವಿಧ ವಿಷಯಗಳ ಬಗ್ಗೆ ಎಲ್ಲಾ ರಾಜ್ಯಗಳಿಗೆ ಸಂಪೂರ್ಣವಾಗಿ ಮನವರಿಕೆ ಮಾಡಬೇಕು ಎಂದು ಈ ಬಹುಪಕ್ಷೀಯ ಸಮಿತಿ ಹೇಳಿದೆ. ಈ ರೀತಿಯ ಒಮ್ಮತವು ದೇಶಾದ್ಯಂತ ಜನರಲ್ಲಿ ಇರುವ ಭಯವನ್ನು ನಿವಾರಿಸಿ, ಸಂಪೂರ್ಣ ಸ್ಪಷ್ಟತೆ ಮೂಡಿಸುವುದರಿಂದ ಸರಾಗವಾಗಿ ಈ ಪ್ರಕ್ರಿಯೆ ನಡೆಯಲು ಅನುಕೂಲವಾಗುವುದು ಎಂದು ಸಮಿತಿಯು ಹೇಳಿದೆ.

ಹೊಸದಾಗಿ ಮಾಹಿತಿ ಸಂಗ್ರಹ ಕಾರ್ಯಕ್ರಮಕ್ಕೆ ತಗಲುವ ಶ್ರಮ ಮತ್ತು ವೆಚ್ಚ ಮರುಕಳಿಸದಂತೆ ಮಾಡಲು ಆಧಾರ್ ಮಾಹಿತಿಗಳನ್ನೇ ಎನ್‌ಪಿಆರ್ ನವೀಕರಣಕ್ಕೆ ಬಳಸಿಕೊಳ್ಳುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಸಮಿತಿ ಹೇಳಿದೆ.

1955ರ ಪೌರತ್ವ ಕಾಯಿದೆಯ ಆಧಾರದಲ್ಲಿ- 2003ರ ಪೌರತ್ವ ನಿಯಮಗಳ ಅನ್ವಯ 2010ರಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಅಥವಾ ಎನ್‌ಪಿಆರ್ ಮಾಡಲಾಗಿತ್ತು ಮತ್ತು 2015ರಲ್ಲಿ ಅದನ್ನು ನವೀಕರಣ ಮಾಡಲಾಗಿತ್ತು.

“ಹುಟ್ಟು, ಸಾವು ಮತ್ತು ವಲಸೆ ಇತ್ಯಾದಿ ಕಾರಣಗಳಿಂದ ರಾಷ್ಟ್ರೀಯ ಅಂಕಿಅಂಶಗಳನ್ನು ಮತ್ತೊಮ್ಮೆ ನವೀಕರಣ ಮಾಡಬೇಕಾದ ಅಗತ್ಯವಿದ್ದು, ಸರಕಾರ ಎನ್‌ಪಿಆರ್ ನವೀಕರಣದ ನಿರ್ಧಾರ ಕೈಗೊಂಡಿದೆ” ಎಂದು ಗೃಹ ಸಚಿವಾಲಯ ವಾದಿಸಿತು.

ಎನ್‌ಪಿಆರ್ ನವೀಕರಣ ನಡೆಯುತ್ತಿದ್ದು, ಅದನ್ನು ಹೊಸದಾಗಿ ಮಾಡುತ್ತಿಲ್ಲವಾದುದರಿಂದ, ಆಧಾರ್ ಮಾಹಿತಿ ಸಂಗ್ರಹ ( ಡಾಟಾ ಬೇಸ್) ಪ್ರಯೋಜನಕ್ಕೆ ಬರುವುದಿಲ್ಲ ಮತ್ತು ಯಾವುದೇ ಮರುಕಳಿಕೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಗೃಹ ಸಚಿವಾಲಯ ವಾದಿಸಿತು.

ಅದಲ್ಲದೇ “ಆಧಾರ್ ವೈಯಕ್ತಿಕ ಮಾಹಿತಿಯನ್ನು ಹೊಂದಿದ್ದು, ಎನ್‌ಪಿಆರ್ ಕೌಟುಂಬಿಕ ಮಾಹಿತಿಯನ್ನು ಹೊಂದಿರುತ್ತದೆ. ಆಧಾರ್ ಮಾಹಿತಿ ಸಂಗ್ರಹದಿಂದ ಕೌಟುಂಬಿಕ ಮಾಹಿತಿ ಸಂಗ್ರಹ ಸ್ಥಾಪಿಸಲು ಪ್ರತೀ ಮನೆಗೆ ಭೇಟಿ ನೀಡುವ ಅಗತ್ಯವಿದೆ” ಎಂದೂ ಗೃಹ ಸಚಿವಾಲಯ ವಾದಿಸಿತು.

ಆಧಾರ್, ಮತದಾರರ ಗುರುತುಚೀಟಿ, ಪಾಸ್‌ಪೋರ್ಟ್ ಸಂಖ್ಯೆ, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿಗಳ ನಡುವೆ ಕಳೆದುಹೋಗಿರುವ ಕೊಂಡಿಯನ್ನು ಎನ್‌ಪಿಆರ್ ಮರಳಿ ಸ್ಥಾಪಿಸುವುದು, ಮತ್ತು ಮಾಹಿತಿಯ ಮರುಕಳಿಕೆಯನ್ನು ಕೂಡಾ ಅದು ನಿವಾರಿಸುವುದು ಎಂದು ಕೂಡಾ ಗೃಹ ಸಚಿವಾಲಯ ವಾದಿಸಿತು. ಎನ್‌ಪಿಆರ್ ಮಾಹಿತಿಯನ್ನು ಇನ್ನಷ್ಟು ವಿಶ್ವಾಸಾರ್ಹಗೊಳಿಸಿ, ಭವಿಷ್ಯದಲ್ಲಿ ವಿವಿಧ ಯೋಜನೆಗಳ ಅನುಷ್ಟಾನದ ವೇಳೆ ಸರಕಾರದ ಸಂಪನ್ಮೂಲಗಳನ್ನು ಉಳಿತಾಯ ಮಾಡುವುದು ಎಂದೂ ಗೃಹ ಸಚಿವಾಲಯ ವಾದಿಸಿತು.

ಜನನ ಮತ್ತು ಮರಣದ ಮಾಹಿತಿಗಳನ್ನು ಸಂಪರ್ಕಿಸಿ ಪ್ರಸ್ತುತ ಕಾಲದ ಜನಸಂಖ್ಯೆಯ ಪ್ರಸ್ತುತ ಕಾಲದ ಮಾಹಿತಿ ಸಂಗ್ರಹ ಸರಕಾರದ ಆಶಯವಾಗಿದೆ ಎಂದೂ ಗೃಹ ಸಚಿವಾಲಯ ವಾದಿಸಿದೆ.

ದೇಶದಾದ್ಯಂತ ಎಪ್ರಿಲ್ 1ರಿಂದ ಜನಗಣತಿಯ ಜೊತೆಯಲ್ಲಿ ಎನ್‌ಪಿಆರ್ ನಡೆಸುವ ಯೋಜನೆಯೇನೋ ಇದೆ. ಆದರೆ, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ ಮುಂತಾದ ಪ್ರತಿಪಕ್ಷಗಳಿರುವ ರಾಜ್ಯಗಳು ತಾವು ಎನ್‌ಪಿಆರ್ ಮಾಹಿತಿ ಸಂಗ್ರಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ.

ಎನ್‌ಪಿಆರ್ ಎಂಬುದು ಎನ್‌ಆರ್‌ಸಿಯ ಪೂರ್ವಭಾವಿ ಕಾರ್ಯಕ್ರಮ ಎಂದು ಪ್ರತಿಪಕ್ಷಗಳ ಆರೋಪವಾದರೆ, ರಾಷ್ಟ್ರೀಯ ಪೌರತ್ವ ದಾಖಲಾತಿ ಕುರಿತು ಯಾವುದೇ ನಿರ್ಧಾರವನ್ನು ಈ ತನಕ ತೆಗೆದುಕೊಳ್ಳಲಾಗಿಲ್ಲ ಎಂದು ಬಿಜೆಪಿ ನೇತೃತ್ವದ ಸರಕಾರ ಹೇಳುತ್ತಿದೆ.

ಕೇಳಲಾಗಲಿರುವ ಪ್ರಶ್ನಾವಳಿಯಲ್ಲಿ ಹೆತ್ತವರ ಜನನ ಸ್ಥಳ, ಜನನ ದಿನಾಂಕ ಇತ್ಯಾದಿ ಮಾಹಿತಿಗಳ ಕುರಿತು ಪ್ರಶ್ನೆಗಳನ್ನು ಹೊಸದಾಗಿ ಸೇರಿಸಿರುವುದಕ್ಕೆ ಹಲವಾರು ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಕೃಪೆ: ಕಮಲ್‌ಜಿತ್‌ ಕೌರ್‌ ಸಂಧು, ಇಂಡಿಯಾ ಟುಡೆ
ಕನ್ನಡಕ್ಕೆ : ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...