Homeಮುಖಪುಟಸಂಸದೀಯ ಸಮಿತಿ ಮುಂದೆ ಹಾಜರಾಗಲಿರುವ ಸೆಬಿ ಮುಖ್ಯಸ್ಥೆ ಮಧಬಿ ಪುರಿ ಬುಚ್

ಸಂಸದೀಯ ಸಮಿತಿ ಮುಂದೆ ಹಾಜರಾಗಲಿರುವ ಸೆಬಿ ಮುಖ್ಯಸ್ಥೆ ಮಧಬಿ ಪುರಿ ಬುಚ್

- Advertisement -
- Advertisement -

ಸೆಬಿ ಅಧ್ಯಕ್ಷೆ ಮಧಬಿ ಪುರಿ ಬುಚ್ ಅವರು ಗುರುವಾರ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮುಂದೆ ಹಾಜರಾಗಲಿದ್ದಾರೆ ಎಂದು ವರದಿಯಾಗಿದೆ. ಸಮಿತಿಯ ಅಧ್ಯಕ್ಷರಾದ ಕಾಂಗ್ರೆಸ್ ಸಂಸದ ಕೆಸಿ ವೇಣುಗೋಪಾಲ್ ಅವರು ಕೈಗೊಂಡಿದ್ದ ಈ ಕ್ರಮ ರಾಜಕೀಯ ಪ್ರೇರಿತ ಎಂದು ಬಿಜೆಪಿಯ ಹಿರಿಯ ಸದಸ್ಯರು ಆರೋಪಿಸಿದ್ದು, ಸಭೆಯಯಲ್ಲಿ ಬಿರುಸಿನ ಚರ್ಚೆ ನಡೆಯುವ ಬಗ್ಗೆ ನಿರೀಕ್ಷೆಯಿದೆ. ಸಂಸದೀಯ ಸಮಿತಿ

ಹಣಕಾಸು ಸಚಿವಾಲಯ ಮತ್ತು ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI)ದ ಪ್ರತಿನಿಧಿಗಳ ಮೌಖಿಕ ಪುರಾವೆಗಳ ಬಗ್ಗೆ ಸಭೆಯ ಕಾರ್ಯಸೂಚಿಯು ಒಳಗೊಂಡಿದೆ. “ಸಂಸತ್ತಿನ ಕಾಯಿದೆಯಿಂದ ಸ್ಥಾಪಿಸಲಾದ ನಿಯಂತ್ರಕ ಸಂಸ್ಥೆಗಳ ಕಾರ್ಯಕ್ಷಮತೆಯ ಪರಿಶೀಲನೆ” ನಡೆಸುವುದು ಸಮಿತಿಯ ನಿರ್ಧಾರವಾದೆ. ಸಂಸದೀಯ ಸಮಿತಿ

ಕಾಯ್ದೆಯಗಳ ಮೂಲಕ ಸ್ಥಾಪಿಸಲಾದ ನಿಯಂತ್ರಕ ಸಂಸ್ಥೆಗಳ ಕಾರ್ಯಕ್ಷಮತೆಯ ಪರಿಶೀಲನೆಯನ್ನು ತನ್ನ ಕಾರ್ಯಸೂಚಿಯಲ್ಲಿ ಸೇರಿಸಿರುವ ಸಮಿತಿಯ ನಿರ್ಧಾರದ ವಿರುದ್ಧ ಯಾವುದೆ ಪ್ರತಿಭಟನೆ ದಾಖಲಾಗದಿದ್ದರೂ, ಬುಚ್ ಅವರಿಗೆ ಸಮನ್ಸ್ ನೀಡಿರುವ ಸಮಿತಿಯ ಅಧ್ಯಕ್ಷ ವೇಣುಗೋಪಾಲ್ ಅವರ ನಿರ್ಧಾರ ಬಿಜೆಪಿಯನ್ನು ಕೆರಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಮೆರಿಕಾದ ಸಂಸ್ಥೆ ಹಿಂಡೆನ್‌ಬರ್ಗ್‌ ವರದಿಯ ನಂತರ ಸೆಬಿ ಮುಖ್ಯಸ್ಥೆ ಬುಚ್ ವಿರುದ್ಧ ನಿರಂತರ ಆರೋಪಗಳನ್ನು ಮಾಡಲಾಗುತ್ತಿದೆ. ಸೆಬಿ ಮುಖ್ಯಸ್ಥೆ ಬುಚ್ ಅವರು ಅದಾನಿ ಅವರ ಕಂಪೆನಿಗೆ ಸಹಾಯ ಮಾಡಿದ್ದಾರೆ ಎಂದು ಹಿಂಡೆನ್‌ಬರ್ಗ್ ವರದಿ ಮಾಡಿದ್ದು, ಇದಕ್ಕಾಗಿ ಬುಚ್ ಅವರಿಗೆ ಅದಾನಿ ಶೇರ್‌ಗಳನ್ನು ನೀಡಿತ್ತು ಎಂದು ಆರೋಪಿಸಲಾಗಿದೆ.

ಈ ನಡುವೆ ಸಮಿತಿಯ ಸದಸ್ಯ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ವೇಣುಗೋಪಾಲ್ ವಿರುದ್ಧ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಕೇಂದ್ರ ಸರ್ಕಾರವನ್ನು ದೂಷಿಸಲು ಮತ್ತು ದೇಶದ ಆರ್ಥಿಕ ರಚನೆ ಮತ್ತು ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಅಸ್ತಿತ್ವದಲ್ಲಿಲ್ಲದ ವಿಷಯಗಳನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

ಗುರುವಾರದ ಸಮಿತಿಯ ಕಾರ್ಯಸೂಚಿಯಲ್ಲಿ ಬುಚ್ ನೇತೃತ್ವದ ಸೆಬಿ ಸೇರಿದಂತೆ, ಸಂವಹನ ಸಚಿವಾಲಯ ಮತ್ತು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ ಪ್ರತಿನಿಧಿಗಳಿಂದ ಮೌಖಿಕ ಸಾಕ್ಷ್ಯವನ್ನು ಪಡೆಯುವುದು ಸಹ ಒಳಗೊಂಡಿದೆ.

ಇದನ್ನೂ ಓದಿ: ‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...