Homeಮುಖಪುಟಸಂಸದೀಯ ಸಮಿತಿ ಮುಂದೆ ಹಾಜರಾಗಲಿರುವ ಸೆಬಿ ಮುಖ್ಯಸ್ಥೆ ಮಧಬಿ ಪುರಿ ಬುಚ್

ಸಂಸದೀಯ ಸಮಿತಿ ಮುಂದೆ ಹಾಜರಾಗಲಿರುವ ಸೆಬಿ ಮುಖ್ಯಸ್ಥೆ ಮಧಬಿ ಪುರಿ ಬುಚ್

- Advertisement -
- Advertisement -

ಸೆಬಿ ಅಧ್ಯಕ್ಷೆ ಮಧಬಿ ಪುರಿ ಬುಚ್ ಅವರು ಗುರುವಾರ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮುಂದೆ ಹಾಜರಾಗಲಿದ್ದಾರೆ ಎಂದು ವರದಿಯಾಗಿದೆ. ಸಮಿತಿಯ ಅಧ್ಯಕ್ಷರಾದ ಕಾಂಗ್ರೆಸ್ ಸಂಸದ ಕೆಸಿ ವೇಣುಗೋಪಾಲ್ ಅವರು ಕೈಗೊಂಡಿದ್ದ ಈ ಕ್ರಮ ರಾಜಕೀಯ ಪ್ರೇರಿತ ಎಂದು ಬಿಜೆಪಿಯ ಹಿರಿಯ ಸದಸ್ಯರು ಆರೋಪಿಸಿದ್ದು, ಸಭೆಯಯಲ್ಲಿ ಬಿರುಸಿನ ಚರ್ಚೆ ನಡೆಯುವ ಬಗ್ಗೆ ನಿರೀಕ್ಷೆಯಿದೆ. ಸಂಸದೀಯ ಸಮಿತಿ

ಹಣಕಾಸು ಸಚಿವಾಲಯ ಮತ್ತು ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI)ದ ಪ್ರತಿನಿಧಿಗಳ ಮೌಖಿಕ ಪುರಾವೆಗಳ ಬಗ್ಗೆ ಸಭೆಯ ಕಾರ್ಯಸೂಚಿಯು ಒಳಗೊಂಡಿದೆ. “ಸಂಸತ್ತಿನ ಕಾಯಿದೆಯಿಂದ ಸ್ಥಾಪಿಸಲಾದ ನಿಯಂತ್ರಕ ಸಂಸ್ಥೆಗಳ ಕಾರ್ಯಕ್ಷಮತೆಯ ಪರಿಶೀಲನೆ” ನಡೆಸುವುದು ಸಮಿತಿಯ ನಿರ್ಧಾರವಾದೆ. ಸಂಸದೀಯ ಸಮಿತಿ

ಕಾಯ್ದೆಯಗಳ ಮೂಲಕ ಸ್ಥಾಪಿಸಲಾದ ನಿಯಂತ್ರಕ ಸಂಸ್ಥೆಗಳ ಕಾರ್ಯಕ್ಷಮತೆಯ ಪರಿಶೀಲನೆಯನ್ನು ತನ್ನ ಕಾರ್ಯಸೂಚಿಯಲ್ಲಿ ಸೇರಿಸಿರುವ ಸಮಿತಿಯ ನಿರ್ಧಾರದ ವಿರುದ್ಧ ಯಾವುದೆ ಪ್ರತಿಭಟನೆ ದಾಖಲಾಗದಿದ್ದರೂ, ಬುಚ್ ಅವರಿಗೆ ಸಮನ್ಸ್ ನೀಡಿರುವ ಸಮಿತಿಯ ಅಧ್ಯಕ್ಷ ವೇಣುಗೋಪಾಲ್ ಅವರ ನಿರ್ಧಾರ ಬಿಜೆಪಿಯನ್ನು ಕೆರಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಮೆರಿಕಾದ ಸಂಸ್ಥೆ ಹಿಂಡೆನ್‌ಬರ್ಗ್‌ ವರದಿಯ ನಂತರ ಸೆಬಿ ಮುಖ್ಯಸ್ಥೆ ಬುಚ್ ವಿರುದ್ಧ ನಿರಂತರ ಆರೋಪಗಳನ್ನು ಮಾಡಲಾಗುತ್ತಿದೆ. ಸೆಬಿ ಮುಖ್ಯಸ್ಥೆ ಬುಚ್ ಅವರು ಅದಾನಿ ಅವರ ಕಂಪೆನಿಗೆ ಸಹಾಯ ಮಾಡಿದ್ದಾರೆ ಎಂದು ಹಿಂಡೆನ್‌ಬರ್ಗ್ ವರದಿ ಮಾಡಿದ್ದು, ಇದಕ್ಕಾಗಿ ಬುಚ್ ಅವರಿಗೆ ಅದಾನಿ ಶೇರ್‌ಗಳನ್ನು ನೀಡಿತ್ತು ಎಂದು ಆರೋಪಿಸಲಾಗಿದೆ.

ಈ ನಡುವೆ ಸಮಿತಿಯ ಸದಸ್ಯ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ವೇಣುಗೋಪಾಲ್ ವಿರುದ್ಧ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಕೇಂದ್ರ ಸರ್ಕಾರವನ್ನು ದೂಷಿಸಲು ಮತ್ತು ದೇಶದ ಆರ್ಥಿಕ ರಚನೆ ಮತ್ತು ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಅಸ್ತಿತ್ವದಲ್ಲಿಲ್ಲದ ವಿಷಯಗಳನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

ಗುರುವಾರದ ಸಮಿತಿಯ ಕಾರ್ಯಸೂಚಿಯಲ್ಲಿ ಬುಚ್ ನೇತೃತ್ವದ ಸೆಬಿ ಸೇರಿದಂತೆ, ಸಂವಹನ ಸಚಿವಾಲಯ ಮತ್ತು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ ಪ್ರತಿನಿಧಿಗಳಿಂದ ಮೌಖಿಕ ಸಾಕ್ಷ್ಯವನ್ನು ಪಡೆಯುವುದು ಸಹ ಒಳಗೊಂಡಿದೆ.

ಇದನ್ನೂ ಓದಿ: ‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

‘ಇಂಡಸ್ಟ್ರಿಯಲ್ ಆಲ್ಕೋಹಾಲ್’ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ಕಾನೂನು ರೂಪಿಸಬಹುದು: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...