Homeಮುಖಪುಟಮೋದಿ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್‌ ಬಿಡುಗಡೆ: 8 ಪ್ರಮುಖ ದೋಷಾರೋಪಗಳ ಉಲ್ಲೇಖ

ಮೋದಿ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್‌ ಬಿಡುಗಡೆ: 8 ಪ್ರಮುಖ ದೋಷಾರೋಪಗಳ ಉಲ್ಲೇಖ

- Advertisement -
- Advertisement -

ಸಂಸದೀಯ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಿದ್ದಕ್ಕಾಗಿ ಮುಖ್ಯವಾಹಿನಿಯ ಹಲವು ಸಾಮಾಜಿಕ ಸಂಘಟನೆಗಳು ಹಾಗೂ ಸಾಮಾಜಿಕ ಹೋರಾಟಗಾರರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್‌ನ್ನು ಬಿಡುಗಡೆ ಮಾಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಪ್ರಜಾತಾಂತ್ರಿಕ ಮೌಲ್ಯಗಳನ್ನು ಉಲ್ಲಂಘಿಸಿರುವ ಎಂಟು ಪ್ರಮುಖ ದೋಷಾರೋಪಗಳನ್ನು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಚಾರ್ಜ್‌ಶೀಟ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ 8 ಆರೋಪಗಳನ್ನು ಹೊರಿಸಲಾಗಿದ್ದು, ಅದನ್ನು ಸಮರ್ಥಿಸುವ ಸಾಕ್ಷ್ಯಗಳನ್ನು ಒದಗಿಸಲಾಗಿದೆ. ಈ ಚಾರ್ಜ್‌ಶೀಟ್ ಸರಕಾರದ ತಪ್ಪು ಕ್ರಮಗಳ ಪಟ್ಟಿಯಾಗಿದ್ದು, ಇದರಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ. ಈ ದೋಷಾರೋಪ ಪಟ್ಟಿಯನ್ನು ಸಾಮಾಜಿಕ ಸಂಘಟನೆಗಳು ಹಾಗೂ ಗಣ್ಯ ವ್ಯಕ್ತಿಗಳು ಅನುಮೋದಿಸಿದ್ದಾರೆ. ಈ ಪೈಕಿ ನ್ಯಾಯಕ್ಕಾಗಿ ಅಖಿಲ ಭಾರತೀಯ ವಕೀಲರ ಸಂಘಟನೆ, ಅಖಿಲ ಭಾರತ ಭಾರತೀಯ ಪ್ರಜೆಗಳ ವಿಜ್ಞಾನ ಜಾಲ, ನಾಗರಿಕ ಹಕ್ಕುಗಳ ರಕ್ಷಣಾ ಒಕ್ಕೂಟ ಸೇರಿದಂತೆ ಒಟ್ಟು 22 ಸಂಘಟನೆಗಳು ಸೇರಿವೆ.

‘ವೀ ದಿ ಪೀಪಲ್ ಆಫ್ ಇಂಡಿಯಾ ವರ್ಸಸ್ ಇಂಡಿಯಾ ಸರ್ಕಾರ’ ಎಂಬ ಶೀರ್ಷಿಕೆಯ ಚಾರ್ಜ್ ಶೀಟ್‌ನಲ್ಲಿ, ಹಲವಾರು ನಾಗರಿಕ ಸಮಾಜದ ಗುಂಪುಗಳು ಮತ್ತು ಕಾರ್ಯಕರ್ತರು, ಸಂಸದೀಯ ಪ್ರಜಾಪ್ರಭುತ್ವದ ಮೇಲೆ ವ್ಯವಸ್ಥಿತ ದಾಳಿಗಾಗಿ ಸರ್ಕಾರವನ್ನು ಟೀಕಿಸಿದ್ದಾರೆ. ಆಡಳಿತ ಪಕ್ಷದ ಉದ್ದೇಶಪೂರ್ವಕ ಪ್ರಕ್ರಿಯೆಗಳು ಮತ್ತು ಕಾನೂನುಗಳಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿಯಾಗಿರುವುದನ್ನು ಎತ್ತಿ ತೋರಿಸುವುದು ಚಾರ್ಜ್ ಶೀಟ್‌ನ ಉದ್ದೇಶವಾಗಿದೆ ಎಂದು ಹೇಳಲಾಗಿದೆ.

ಚಾರ್ಜ್ ಶೀಟ್‌ನ್ನು ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಗಿದೆ. ಸಂಸತ್ತಿನ
ಹೊಸ ಕಟ್ಟಡದಲ್ಲಿ ಸದನ ನಡೆಯುವ ಈ ಸನ್ನಿವೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಮೇಲೆ ಕಳೆದ ಹತ್ತು ವರ್ಷಗಳಿಂದ ಸತತವಾಗಿ ದಾಳಿ ಮಾಡಲಾಗುತ್ತಿದೆ ಎಂದು ಹೇಳಿದೆ. ಸಂಸತ್ತನ್ನು ಬಹುಮತದ ಮತ್ತು ಪ್ರಜಾಪ್ರಭುತ್ವ ವಿರೋಧಿ ಕಾನೂನು ರಚನೆಯ ಸಾಧನವಾಗಿ ಪರಿವರ್ತಿಸುವ ಸರ್ಕಾರದ ಉದ್ದೇಶಪೂರ್ವಕ ಕಾರ್ಯವಿಧಾನಗಳು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ಚಾರ್ಜ್ ಶೀಟ್ ಸೂಚಿಸುತ್ತದೆ. ಸಂಸದೀಯ ಪ್ರಜಾಪ್ರಭುತ್ವದ ಇಂತಹ ಕ್ರಮಗಳು ಪ್ರಜಾಪ್ರಭುತ್ವದ ಪತನಕ್ಕೆ ಕಾರಣವಾಗುತ್ತದೆ.
ಚರ್ಚೆಗೆ ಅವಕಾಶವನ್ನು ನಿರ್ಬಂಧಿಸಲಾಗುತ್ತಿದೆ, ಕಳೆದ ಎರಡು ಲೋಕಸಭೆ ಅವಧಿಗಳಲ್ಲಿ ಕಡಿಮೆ ಸಂಖ್ಯೆಯ ಅಧಿವೇಶನಗಳನ್ನು ನಡೆಸಲಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿತ ಅಂಶಗಳು:

ದೋಷಾರೋಪ 1: ಉಪ ಲೋಕಸಭಾಧ್ಯಕ್ಷರನ್ನು ನೇಮಕ ಮಾಡಿಲ್ಲ:

2019ರಲ್ಲಿ 17ನೇ ಲೋಕಸಭೆಯು ಅಸ್ತಿತ್ವಕ್ಕೆ ಬಂದ ಬಳಿಕ ಲೋಕಸಭೆಯಲ್ಲಿ ಉಪ ಲೋಕಸಭಾಧ್ಯಕ್ಷರನ್ನು ಚುನಾಯಿಸಿಲ್ಲ. ಭಾರತದ ಸಂವಿಧಾನದ 97ನೇ ವಿಧಿಯ ಪ್ರಕಾರ, ಲೋಕಸಭಾಧ್ಯಕ್ಷ ಹಾಗೂ ಉಪ ಲೋಕಸಭಾಧ್ಯಕ್ಷರನ್ನು ಚುನಾಯಿಸುವುದು ಕಡ್ಡಾಯವಾಗಿದೆ. ಸ್ವಾತಂತ್ರ್ಯದ ಬಳಿಕ ಇದೇ ಮೊದಲ ಬಾರಿಗೆ ಉಪ ಲೋಕಸಭಾಧ್ಯಕ್ಷರಿಲ್ಲದೆ ಸರಕಾರ ತನ್ನ ಅವಧಿಯನ್ನು ಮುಗಿಸಿದೆ. ಲೋಕಸಭಾಧ್ಯಕ್ಷರು ಸರಕಾರದ ನಾಮನಿರ್ದೇಶಿತರಾಗಿದ್ದರೆ, ಉಪ ಸಭಾಧ್ಯಕ್ಷರು ವಿರೋಧ ಪಕ್ಷಗಳ ನಾಮ ನಿರ್ದೇಶಿತರಾಗಿರುತ್ತಾರೆ.

ದೋಷಾರೋಪ 2: ಕಡಿಮೆ ಸಂಖ್ಯೆಯ ಅಧಿವೇಶನ

ಲೋಕಸಭೆಯ ಪೂರ್ಣಾವಧಿಯಲ್ಲಿ ಕಡಿಮೆ ಸಂಖ್ಯೆಯ ಅಧಿವೇಶನಗಳನ್ನು ನಡೆಸುವುದರೊಂದಿಗೆ ಸಂಸತ್ತನ್ನು ತನ್ನ ಇಚ್ಛೆಗನುಸಾರವಾಗಿ ನಿಯಂತ್ರಿಸಲಾಗಿದೆ. ಲೋಕಸಭೆಯ ಅವಧಿಯಾದ 2014-2019ರ ಐದು ವರ್ಷಗಳ ನಡುವೆ ಕೇವಲ 331 ಅಧಿವೇಶವನಗಳನ್ನು ಮಾತ್ರ ನಡೆಸಲಾಗಿದೆ. ಆದರೆ 17ನೇ ಲೋಕಸಭೆಯು ಅದಕ್ಕಿಂತ ಕಡಿಮೆ ಸಂಖ್ಯೆಯ ಅಧಿವೇಶನ ಅಂದರೆ 278 ಅಧಿವೇಶನಗಳನ್ನು ಮಾತ್ರ ನಡೆಸಲಾಗಿದೆ.

ದೋಷಾರೋಪ 3: ಹೆಚ್ಚು ಸುಗ್ರೀವಾಜ್ಞೆ ಜಾರಿಗೊಳಿಸಿರುವುದು

ಮೋದಿ ಆಡಳಿತದಲ್ಲಿ ಹೆಚ್ಚು ಸುಗ್ರೀವಾಜ್ಞೆಗಳನ್ನು ಜಾರಿಗೊಳಿಸಲಾಗಿದೆ.  2014-2021ರ ಅವಧಿಯಲ್ಲಿ 76 ಸುಗ್ರೀವಾಜ್ಞೆಗಳನ್ನು ಜಾರಿಗೊಳಿಸಲಾಗಿದೆ.

ದೋಷಾರೋಪ 4: ಚರ್ಚೆಗಳಿಲ್ಲದೆ ಮಸೂದೆಗಳನ್ನು ಅಂಗೀಕರಿಸುವುದು

ವಿರೋಧ ಪಕ್ಷಗಳ ಸಂಸದರ ಅನುಪಸ್ಥಿತಿಯಲ್ಲಿ ಪ್ರಜಾಸತ್ತಾತ್ಮಕ ಚರ್ಚೆಯಿಲ್ಲದೆ ಮೋದಿ ಆಡಳಿತದಲ್ಲಿ ಮಸೂದೆಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ. 17ನೇ ಲೋಕಸಭಾ ಅವಧಿಯಲ್ಲಿ ಲೋಕಸಭೆಯಲ್ಲಿ 86 ಮಸೂದೆಗಳು ಹಾಗೂ ರಾಜ್ಯಸಭೆಯಲ್ಲಿ 103 ಮಸೂದೆಗಳು ಯಾವುದೇ ಚರ್ಚೆಯಿಲ್ಲದೆ ಅಂಗೀಕಾರಗೊಂಡಿವೆ. 2023ರ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಹೆಚ್ಚಿನ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಉಭಯ ಸದನಗಳಲ್ಲಿ 14 ಮಸೂದೆಗಳನ್ನು ಕೇವಲ 3 ದಿನಗಳಲ್ಲಿ ಅಂಗೀಕರಿಸಲಾಗಿದೆ.

ದೋಷಾರೋಪ 5: ಶಾಸನ ರೂಪಿಸುವಾಗ ಪಾರದರ್ಶಕತೆ ಕೊರತೆ

ಶಾಸನ ರೂಪಿಸುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಕೊರತೆ, ಸೂಕ್ತ ರೀತಿಯಲ್ಲಿ ಸಾರ್ವಜನಿಕ ಸಮಾಲೋಚನೆ ನಡೆಸದಿರುವುದು, ಶಾಸನ ಪೂರ್ವ ಸಮಾಲೋಚನಾ ನೀತಿಯ ಉಲ್ಲಂಘನೆ ಹಾಗೂ ಮಸೂದೆಗಳನ್ನು ಸ್ಥಾಯಿ ಸಮಿತಿಗಳಿಗೆ ರವಾನಿಸದಿರುವುದು ಕಂಡು ಬಂದಿದೆ. 2009-2014ರ ಅವಧಿಯಲ್ಲಿ ಶೇ. 71ರಷ್ಟು ಮಸೂದೆಗಳನ್ನು ಸ್ಥಾಯಿ ಸಮಿತಿಗೆ ಶಿಫಾರಸು ಮಾಡಲಾಗಿದೆ, 2019ರಿಂದ ಕೇವಲ ಶೇ.16ರಷ್ಟು ಮಸೂದೆಗಳನ್ನು ಮಾತ್ರ ಸ್ಥಾಯಿ ಸಮಿತಿಗೆ ಶಿಫಾರಸು ಮಾಡಲಾಗಿದೆ. ಲೋಕಸಭೆಯಲ್ಲಿ ಮಂಡಿಸಲಾಗಿರುವ 301 ಮಸೂದೆಗಳ ಪೈಕಿ ಕೇವಲ 74 ಮಸೂದೆಗಳು ಅಂದರೆ ಶೇ. 24.5ರಷ್ಟು ಮಸೂದೆಗಳನ್ನು ಮಾತ್ರ 2014-2021ರ ನಡುವೆ ಸಾರ್ವಜನಿಕ ಸಮಾಲೋಚನೆಗೆ ಬಿಡುಗಡೆ ಮಾಡಲಾಗಿದೆ. 74 ಮಸೂದೆಗಳ ಪೈಕಿ ಕನಿಷ್ಠ 40 ಮಸೂದೆಗಳನ್ನು ಶಾಸನಪೂರ್ವ ಸಮಾಲೋಚನಾ ನೀತಿಯ ಪ್ರಕಾರ 30 ದಿನಗಳ ಕಾಲ ಸಮಾಲೋಚನೆಗಾಗಿ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಲಾಗಿದೆ.

ದೋಷಾರೋಪ 6: ಚುನಾವಣಾ ಬಾಂಡ್ ಹಾಗೂ ಹಣಕಾಸು ಮಸೂದೆ ಸೇರಿದಂತೆ ನಿರ್ಣಾಯಕ ಮಸೂದೆಗಳನ್ನು ಸಾಕಷ್ಟು ಪರಿಶೀಲನೆ ನಡೆಸದೆ ಅಂಗೀಕಾರ

2016-2023ರ ಮಧ್ಯೆ ಸರಾಸರಿ ಶೇ.79ರಷ್ಟು ಬಜೆಟ್‌ನ್ನು ಯಾವುದೇ ಚರ್ಚೆ ಇಲ್ಲದೆ ಅಂಗೀಕರಿಸಲಾಗಿದೆ.  ಕಡಿಮೆ ಸಂಖ್ಯೆಯ ಅಧಿವೇಶನ, ಕಡಿಮೆ ಅವಧಿಯ ಬಜೆಟ್ ಅಧಿವೇಶನಗಳು, ಕಳಪೆಯಾಗಿ ಯೋಜಿಸಲಾದ ಕಾರ್ಯಸೂಚಿಗಳ ಮೂಲಕ ಬಜೆಟ್‌ನ ಕೆಲ ಭಾಗವನ್ನು ಮಾತ್ರ ವಿಸ್ತೃತವಾಗಿ ಚರ್ಚಿಸಿ, ದೊಡ್ಡ ಭಾಗವನ್ನು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ.

ದೋಷಾರೋಪ 7: ವಿರೋಧ ಪಕ್ಷಗಳ ಸಂಸದರ ಸಾಮೂಹಿಕ ಅಮಾನತು

2023ರ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆಯ ಇತಿಹಾಸದಲ್ಲೇ ಅತಿಹೆಚ್ಚು ಸಂಸದರನ್ನು ಅಮಾನತು ಮಾಡಲಾಗಿತ್ತು. ಸಂಸತ್ತಿನ ಭದ್ರತಾ ವೈಫಲ್ಯದ ಕುರಿತು ವಿರೋಧ ಪಕ್ಷಗಳ ಸಂಸದರು ಚರ್ಚೆಗೆ ಆಗ್ರಹಿಸಿದಾಗ, ಈ ಹಿಂದೆಂದೂ ಇಲ್ಲದಂತೆ 146 ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಯಿತು. ಇದು ಇಲ್ಲಿಯವರೆಗೆ ಅಮಾನತುಗೊಂಡಿರುವ ಸಂಸದರ ಗರಿಷ್ಠ ಸಂಖ್ಯೆಯಾಗಿದೆ. ಇದು ಲೋಕಸಭೆಯ ಉಭಯ ಸದನಗಳ ಸದಸ್ಯ ಬಲದ ಶೇ. 20ರಷ್ಟಾಗಿದ್ದು, ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಲ್ಲದ ಸ್ಥಿತಿಯಾಗಿತ್ತು. ಇದೇ ವೇಳೆ ನಿರ್ಣಾಯಕ ಮಸೂದೆಗಳನ್ನು ಯಾವುದೇ ಚರ್ಚೆ ಇಲ್ಲದೆ ಅಂಗೀಕರಿಸಲಾಗಿತ್ತು.

ದೋಷಾರೋಪ 8: ವಿರೋಧ ಪಕ್ಷಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡದಿರುವುದು

ವಿರೋಧ ಪಕ್ಷಗಳು ಕೇಳಿದ ಪ್ರಶ್ನೆಗಳನ್ನು ಅಳಿಸಿ ಹಾಕುವುದು, ಸಚಿವಾಲಯಗಳು ಪ್ರಶ್ನೆಗಳಿಗೆ ಹಾರಿಕೆಯ ಉತ್ತರ ನೀಡುವುದು ಮೋದಿ ಆಡಳಿತದ ಅವಧಿಯಲ್ಲಿ ಕಂಡು ಬಂದಿದೆ. 2023ರ ಚಳಿಗಾಲದ ಅಧಿವೇಶನದ ವೇಳೆ ವಿರೋಧ ಪಕ್ಷಗಳ ಸಂಸದರನ್ನು ಅಮಾನತುಗೊಳಿಸಿದ ನಂತರ ಅವರು ಕೇಳಿದ್ದ 290 ಪ್ರಶ್ನೆಗಳನ್ನು ಅಳಿಸಿ ಹಾಕಲಾಗಿತ್ತು.

ಇದನ್ನು ಓದಿ: ಪತ್ರಕರ್ತ ನಿಖಿಲ್ ವಾಗ್ಲೆ ಕಾರಿನ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು: ಪ್ರತಿಪಕ್ಷಗಳಿಂದ ಖಂಡನೆ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...