Homeಮುಖಪುಟಕುನಾಲ್ ಕಮ್ರಾ ಟ್ವೀಟ್‌‌ಗಳನ್ನು ಅನುಮತಿಸಿದ್ದಕ್ಕಾಗಿ ಟ್ವಿಟ್ಟರನ್ನು ತರಾಟೆಗೆ ಪಡೆದ ಸಂಸದೀಯ ಸಮಿತಿ!

ಕುನಾಲ್ ಕಮ್ರಾ ಟ್ವೀಟ್‌‌ಗಳನ್ನು ಅನುಮತಿಸಿದ್ದಕ್ಕಾಗಿ ಟ್ವಿಟ್ಟರನ್ನು ತರಾಟೆಗೆ ಪಡೆದ ಸಂಸದೀಯ ಸಮಿತಿ!

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯನ್ನು ಗುರಿಯಾಗಿಸಿಕೊಂಡು ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರು ಇತ್ತೀಚೆಗೆ ನಡೆಸಿದ “ಅಶ್ಲೀಲ” ಟ್ವೀಟ್‌ಳ ಬಗ್ಗೆ ಸಂಸದೀಯ ಸಮಿತಿಯು ಟ್ವಿಟ್ಟರ್ ಅನ್ನು ಪ್ರಶ್ನಿಸಿದ್ದು, ಈ ವಿಷಯದ ಬಗ್ಗೆ ಅವರಿಂದ ಏಳು ದಿನಗಳಲ್ಲಿ ಉತ್ತರ ಕೋರಿದೆ ಎಂದು ಸಂಸದೀಯ ಸಮಿತಿಯ ಅಧ್ಯಕ್ಷೆಯಾಗಿರುವ ಮೀನಾಕ್ಷಿ ಲೇಖಿ ಮಾಹಿತಿ ನೀಡಿದ್ದಾರೆ.

ಡೇಟಾ ಸಂರಕ್ಷಣಾ ಮಸೂದೆ ಕುರಿತು ಟ್ವಿಟರ್ ಇಂಡಿಯಾ ಪ್ರತಿನಿಧಿಗಳು ಸಂಸತ್ತಿನ ಜಂಟಿ ಸಮಿತಿಯ ಮುಂದೆ ಇಂದು ಲಿಖಿತ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:  ಕಾಮೇಡಿಯನ್ ’ಕುನಾಲ್ ಕಮ್ರ’ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ

“ಸುಪ್ರೀಂ ಕೋರ್ಟ್ ಮತ್ತು ಸಿಜೆಐ ವಿರುದ್ಧ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರಂತಹ ಅಶ್ಲೀಲ ಟೀಕೆಗಳಿಗೆ ಟ್ವಿಟರ್ ತನ್ನ ವೇದಿಕೆಯನ್ನು ಅನುಮತಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಸುಪ್ರೀಂ ಕೋರ್ಟ್ ಮತ್ತು ಸಿಜೆಐನಂತಹ ಉನ್ನತ ಸಾಂವಿಧಾನಿಕ ಅಧಿಕಾರಿಗಳನ್ನು ನಿಂದಿಸುವುದಕ್ಕಾಗಿ ಟ್ವಿಟರ್ ತನ್ನ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳಲು ಅವಕಾಶ ನೀಡುತ್ತಿದೆ” ಎಂದು ಅವರು ಟ್ವಿಟ್ಟರ್‌‌ ಅನ್ನು ತರಾಟೆಗೆ ಪಡೆದಿದ್ದಾರೆ.

ಕಾಂಗ್ರೆಸ್ ಸಂಸದ ವಿವೇಕ್ ತಂಖಾ, ಬಿಎಸ್ಪಿ ಸಂಸದ ರಿತೇಶ್ ಪಾಂಡೆ ಮತ್ತು ಬಿಜೆಡಿ ಸಂಸದ ಭಾತ್ರುಹರಿ ಮಹತಾಬ್ ಸೇರಿದಂತೆ ಈ ಸಮಿತಿಯ ಇತರ ಸದಸ್ಯರು ಕೂಡಾ ವಿಷಯದ ಬಗ್ಗೆ ಟ್ವಿಟರ್ ಪ್ರತಿನಿಧಿಗಳನ್ನು ತರಾಟೆಗೆ ಪಡೆದುಕೊಂಡರು ಎಂದು ಅವರು ಹೇಳಿದ್ದಾರೆ.

ಹ್ಯಾಂಡಲ್ ಮತ್ತು ಟ್ವೀಟ್‌ಗಳನ್ನು ನಿಷೇಧಿಸುವ ಬಗ್ಗೆ ಟ್ವಿಟರ್‌ನ ವಿವರಣೆಯು ಅಸಮರ್ಪಕವಾಗಿದೆ ಎಂದು ಮೀನಾಕ್ಷಿ ಹೇಳಿದ್ದಾರೆ.

ಇದನ್ನೂ ಓದಿ: ಎಬಿಪಿ ನ್ಯೂಸ್‍ಗೆ ನಾವು ಪಾಠ ಕಲಿಸ್ತೀವಿ

ನಿನ್ನೆ ಟ್ವೀಟ್ ಮಾಡಿದ್ದ ಕುನಾಲ್ ಕಮ್ರಾ, “ಎರಡು ಬೆರಳುಗಳಲ್ಲಿ ಒಂದು ಬೆರಳು ಭಾರತದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅರವಿಂದ್‌ ಬೋಬ್ಡೆ ಅವರಿಗೆ. ಸರಿ ಇನ್ನು ಗೊಂದಲಕ್ಕೆ ಒಳಗಾಗದಿರಿ, ಅದು ನಡುಬೆರಳು” ಎಂದು ಬರೆದು, ಎರಡು ಬೆರಳುಗಳ ಚಿತ್ರವನ್ನು ಟ್ವೀಟ್‌‌ನಲ್ಲಿ ಪೋಸ್ಟ್‌ ಮಾಡಿದ್ದರು.

ಈ ಮಧ್ಯೆ, ಕುನಾಲ್ ಕಮ್ರಾ ಸುಪ್ರೀಂ ಕೋರ್ಟ್ ವಿರುದ್ಧದ ವಿವಾದಾತ್ಮಕ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳುವುದಿಲ್ಲ ಹಾಗೂ ಕ್ಷಮೆ ಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ, ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟನ್ನು ಸರಣಿ ಟ್ವೀಟ್‌ಗಳಲ್ಲಿ ಟೀಕಿಸಿದ್ದ ಕಾರಣಕ್ಕಾಗಿ ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್, ಕುನಾಲ್ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...