Homeಮುಖಪುಟಪರ್ವೇಶ್ ದ್ವೇಷ ಭಾಷಣಕ್ಕೆ ತೀವ್ರ ಹಿನ್ನಡೆ : ಸಂಸದನ ಕ್ಷೇತ್ರದ ಎಲ್ಲಾ ಹತ್ತು ಸ್ಥಾನಗಳನ್ನು ಕಳೆದುಕೊಂಡ...

ಪರ್ವೇಶ್ ದ್ವೇಷ ಭಾಷಣಕ್ಕೆ ತೀವ್ರ ಹಿನ್ನಡೆ : ಸಂಸದನ ಕ್ಷೇತ್ರದ ಎಲ್ಲಾ ಹತ್ತು ಸ್ಥಾನಗಳನ್ನು ಕಳೆದುಕೊಂಡ ಬಿಜೆಪಿ

- Advertisement -
- Advertisement -

ತಮ್ಮ “ದ್ವೇಷ ಭಾಷಣಗಳಿಗಾಗಿ” ಚುನಾವಣಾ ಆಯೋಗದಿಂದ ಎರಡು ಬಾರಿ ನಿಷೇದಕ್ಕೊಳಪಟ್ಟಿದ್ದ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರ ದ್ವೇಷ ಭಾಷಣಗಳು ಯಾವುದೇ ಫಲವನ್ನು ನೀಡಲಿಲ್ಲ. ಅಲ್ಲದೇ ಬಿಜೆಪಿ ತನ್ನ ಪಶ್ಚಿಮ ದೆಹಲಿ ಸಂಸದೀಯ ಕ್ಷೇತ್ರದ ಎಲ್ಲ ಹತ್ತು ಸ್ಥಾನಗಳನ್ನೂ ಸೋತುಕೊಂಡಿದೆ.

ಸಂಸದ ಪರ್ವೇಶ್ ವರ್ಮಾ ಅವರ ಪಶ್ಚಿಮ ದೆಹಲಿ ಲೋಕಸಭಾ ಕ್ಷೇತ್ರದ ಸ್ಥಾನಗಳಿಂದ ಬಿಜೆಪಿಯ ಪ್ರಮುಖ ಅಭ್ಯರ್ಥಿಗಳಾದ ತಾಜಿಂದರ್ ಬಗ್ಗಾ, ರಾಜೀವ್ ಬಬ್ಬರ್ ಮತ್ತು ಆಶಿಶ್ ಸೂದ್ ಅವರನ್ನು ಕಣಕ್ಕಿಳಿಸಿತ್ತು.

ಪರ್ವೇಶ್ ವರ್ಮ ಶಾಹೀನ್ ಬಾಗ್ ನ ಪ್ರತಿಭಟನಾಕಾರರನ್ನು “ಅತ್ಯಾಚಾರಿಗಳು ಮತ್ತು ಕೊಲೆಗಾರರು” ಎಂದು ಕರೆದಿದ್ದಕ್ಕೆ ತೀವ್ರವಾಗಿ ಟೀಕೆಗೊಳಪಟ್ಟಿದ್ದರು. ಅಲ್ಲದೆ ಮತದಾನದ ದಿನದಂದು ಶಾಹೀನ್ ಬಾಗ್ ಮತದಾರರನ್ನು ಸೂಚಿಸಿ ಅವರ ಟ್ವಿಟ್ಟರ್ ನಲ್ಲಿ ವೀಡಿಯೋ  ಪೋಸ್ಟೊಂದನ್ನು ಹಾಕಿ “ಶಾಹೀನ್ ಬಾಗ್ ಜನರು ದೀರ್ಘ ಸರತಿ ಸಾಲಿನಲ್ಲಿ ನಿಂತು ಎಎಪಿ ನೀಡಿದ್ದ ಬಿರಿಯಾನಿಯ ಸಾಲ ತೀರಿಸುತ್ತಿದ್ದಾರೆ. ರಾಷ್ಟ್ರವಾದಿ ಹಾಗೂ ದೇಶಭಕ್ತರಾದ ದೆಹಲಿಯ ಜನರೆ ನೀವೂ ದೊಡ್ಡ ದೊಡ್ಡ ಸಾಲುಗಳಲ್ಲಿ ನಿಂತು ರಾಷ್ಟ್ರೀಯವಾದಿ ಪಕ್ಷಕ್ಕೆ ಮತ ಚಲಾಯಿಸುವಂತೆ” ಜನರನ್ನು ಒತ್ತಾಯಿಸಿದ್ದರು. ವರ್ಮಾ ಅವರು ತನ್ನ ಹೆಚ್ಚಿನ ಸಮಯವನ್ನು ಪಶ್ಚಿಮ ದೆಹಲಿ ಕ್ಷೇತ್ರದ ಪ್ರಚಾರಕ್ಕಾಗಿ ಕಳೆದಿದ್ದರು.

ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತಮ್ಮ ಕ್ಷೇತ್ರದಲ್ಲಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿದ ಮಸೀದಿಗಳನ್ನು ನೆಲಸಮ ಮಾಡುವುದಾಗಿ ವಿಧಾನಸಭಾ ಚುನಾವಣೆಗೆ ಮುನ್ನ ವರ್ಮಾ ಭರವಸೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...