Homeಕರ್ನಾಟಕಸಂಸತ್ತಿನ ಭದ್ರತಾ ಲೋಪ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯೋರ್ವರ ಪುತ್ರ ಸೇರಿ ಮತ್ತಿಬ್ಬರ ಬಂಧನ

ಸಂಸತ್ತಿನ ಭದ್ರತಾ ಲೋಪ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯೋರ್ವರ ಪುತ್ರ ಸೇರಿ ಮತ್ತಿಬ್ಬರ ಬಂಧನ

- Advertisement -
- Advertisement -

ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು  ಕರ್ನಾಟಕದ ಬಾಗಲಕೋಟೆಯ ಮಾಜಿ ಪೊಲೀಸ್‌ ಅಧಿಕಾರಿಯೋರ್ವರ ಪುತ್ರ ಸೇರಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದರಿಂದಾಗಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 8 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದಂತಾಗಿದೆ.

ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮನೋರಂಜನ್ ಡಿ ಅವರ ಆತ್ಮೀಯ ಸ್ನೇಹಿತ ಮತ್ತು ಕರ್ನಾಟಕದ ಬಾಗಲಕೋಟೆಯ ಸಾಯಿಕೃಷ್ಣ ಮತ್ತು ಉತ್ತರಪ್ರದೇಶ ಮೂಲದ ಅತುಲ್ ಕುಲಶ್ರೇಷ್ಠ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಬಾಗಲಕೋಟೆಯ ಸಾಯಿಕೃಷ್ಣ ಕರ್ನಾಟಕದ ಬಾಗಲಕೋಟೆಯ ಮಾಜಿ ಡಿವೈಎಸ್‌ಪಿಯೋರ್ವರ ಪುತ್ರನಾಗಿದ್ದಾರೆ ಎನ್ನಲಾಗಿದೆ. ಈತನನ್ನು ನಿನ್ನೆ ರಾತ್ರಿ 10 ಗಂಟೆಗೆ ಬಾಗಲಕೋಟೆಯಲ್ಲಿರುವ ಆತನ ಮನೆಯಿಂದ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ವಿಚಾರಣೆಗಾಗಿ ರಾಷ್ಟ್ರ ರಾಜಧಾನಿಗೆ ಕರೆತರಲಾಗುತ್ತಿದೆ.

ಇದಲ್ಲದೆ ಉತ್ತರ ಪ್ರದೇಶದ ಜಲೌನ್‌ನ ಅತುಲ್ ಕುಲಶ್ರೇಷ್ಠ ಎಂಬಾತನಿಗೆ ಕೂಡ ಪೊಲೀಸರು ಬಂಧಿಸಿದ್ದಾರೆ. ‘ಬಚ್ಚಾ’ ಎಂದೂ ಕರೆಯಲ್ಪಡುವ ಅತುಲ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಮತ್ತು ಯಾವುದೇ ರಾಜಕೀಯ ಸಂಬಂಧವಿಲ್ಲ ಎನ್ನಲಾಗಿದೆ. ಆದರೆ ಆತ ಸಂಸತ್ತಿನ ಒಳನುಗ್ಗುವವರೊಂದಿಗೆ ಫೇಸ್‌ಬುಕ್‌ನಲ್ಲಿ ಸಂಪರ್ಕದಲ್ಲಿದ್ದ ಎನ್ನಲಾಗಿದೆ.

ಡಿ.13ರಂದು ಸಂಸತ್ತಿನಲ್ಲಿ ಭಾರೀ ಭದ್ರತ ಲೋಪ ನಡೆದಿದ್ದವು. ಇಬ್ಬರು ಯುವಕರು ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿ ಘೋಷಣೆಗಳನ್ನು ಕೂಗಿದರೆ ಇನ್ನಿಬ್ಬರು ಸಂಸತ್ತಿನ ಹೊರಗೆ ಗ್ಯಾಸ್‌ ಸ್ಪ್ರೇ ಮಾಡಿ ಸರ್ವಾಧಿಕಾರ, ನಿರುದ್ಯೋಗ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಸಂಸತ್ತಿನ ಒಳಗೆ ಲಕ್ನೋದ ಸಾಗರ್ ಶರ್ಮಾ(26) ಮತ್ತು ಬೆಂಗಳೂರಿನ ಇಂಜಿನಿಯರಿಂಗ್ ಪದವೀಧರ ಮನೋರಂಜನ್ ಡಿ(35) ಅವರನ್ನು ಬಂಧಿಸಲಾಗಿತ್ತು. ಸಂಸತ್ತಿನ ಹೊರಗೆ ಅಮೋಲ್ ಶಿಂಧೆ (25) ಮತ್ತು ನೀಲಮ್ ದೇವಿ (42) ಅವರನ್ನು ಬಂಧಿಸಲಾಗತ್ತು. ಇದಲ್ಲದೆ ಪ್ರಕರಣದಲ್ಲಿ ಸಹಕರಿಸಿದ ಆರೋಪದಲ್ಲಿ ವಿಶಾಲ್‌ ಶರ್ಮಾ, ಲಲಿತ್‌ ಝಾ ಸೇರಿ 6 ಮಂದಿಯನ್ನು ಬಂಧಿಸಲಾಗಿತ್ತು. ಬಂಧಿತ  ಆರು ಆರೋಪಿಗಳ ಪೈಕಿ ನಾಲ್ವರ ವಿರುದ್ಧ ಕಠಿಣ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಇದಕ್ಕೂ ಮೊದಲು ಪ್ರಕರಣದ ತನಿಖೆ ನಡೆಸುತ್ತಿದ್ದ ದೆಹಲಿ ಪೊಲೀಸರು ಮೈಸೂರಿಗೆ ಆಗಮಿಸಿದ್ದು, ಪ್ರಕರಣದ ಆರೋಪಿ ಮೈಸೂರು ನಿವಾಸಿ ಮನೋರಂಜನ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯನಗರದ 2ನೇ ಹಂತದಲ್ಲಿರುವ ಮನೋರಂಜನ್ ಮನೆಯಲ್ಲಿ ಪರಿಶೀಲನೆ ನಡೆಸಿರುವ ಪೊಲೀಸರು, ಪುಸ್ತಕ ಸೇರಿದಂತೆ ಮನೋರಂಜನ್ ಬಳಸುತ್ತಿದ್ದ ಕೆಲವು ವಸ್ತುಗಳನ್ನು ಪರಿಶೀಲಿಸಿದ್ದಾರೆ. ಇದಲ್ಲದೆ ಮನೋರಂಜನ್ ತಾಯಿ ಶೈಲಜಾ ಮತ್ತು ತಂದೆ ದೇವರಾಜೇಗೌಡ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಗುಪ್ತಚರ ಇಲಾಖೆಯ ಅಧಿಕಾರಿಗಳು, ಮನೋರಂಜನ್ ಬ್ಯಾಂಕ್ ಖಾತೆ, ಆತನ ಫೋನ್‍ ಕರೆ ಡಿಟೇಲ್ಸ್ ಮತ್ತು ಆತನ ಕುಟುಂಬದ ಹಿನ್ನೆಲೆ ಬಗ್ಗೆ ಮಾಹಿತಿಯನ್ನು ಕಲೆ ಹಾಕಿದ್ದಾರೆ.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತಿನ ಬೆನ್ನಲ್ಲಿ ಲೋಕಸಭೆಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...