Homeಕರ್ನಾಟಕಸಂಸತ್ತಿನ ಭದ್ರತಾ ಲೋಪ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯೋರ್ವರ ಪುತ್ರ ಸೇರಿ ಮತ್ತಿಬ್ಬರ ಬಂಧನ

ಸಂಸತ್ತಿನ ಭದ್ರತಾ ಲೋಪ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯೋರ್ವರ ಪುತ್ರ ಸೇರಿ ಮತ್ತಿಬ್ಬರ ಬಂಧನ

- Advertisement -
- Advertisement -

ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು  ಕರ್ನಾಟಕದ ಬಾಗಲಕೋಟೆಯ ಮಾಜಿ ಪೊಲೀಸ್‌ ಅಧಿಕಾರಿಯೋರ್ವರ ಪುತ್ರ ಸೇರಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದರಿಂದಾಗಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 8 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದಂತಾಗಿದೆ.

ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮನೋರಂಜನ್ ಡಿ ಅವರ ಆತ್ಮೀಯ ಸ್ನೇಹಿತ ಮತ್ತು ಕರ್ನಾಟಕದ ಬಾಗಲಕೋಟೆಯ ಸಾಯಿಕೃಷ್ಣ ಮತ್ತು ಉತ್ತರಪ್ರದೇಶ ಮೂಲದ ಅತುಲ್ ಕುಲಶ್ರೇಷ್ಠ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಬಾಗಲಕೋಟೆಯ ಸಾಯಿಕೃಷ್ಣ ಕರ್ನಾಟಕದ ಬಾಗಲಕೋಟೆಯ ಮಾಜಿ ಡಿವೈಎಸ್‌ಪಿಯೋರ್ವರ ಪುತ್ರನಾಗಿದ್ದಾರೆ ಎನ್ನಲಾಗಿದೆ. ಈತನನ್ನು ನಿನ್ನೆ ರಾತ್ರಿ 10 ಗಂಟೆಗೆ ಬಾಗಲಕೋಟೆಯಲ್ಲಿರುವ ಆತನ ಮನೆಯಿಂದ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ವಿಚಾರಣೆಗಾಗಿ ರಾಷ್ಟ್ರ ರಾಜಧಾನಿಗೆ ಕರೆತರಲಾಗುತ್ತಿದೆ.

ಇದಲ್ಲದೆ ಉತ್ತರ ಪ್ರದೇಶದ ಜಲೌನ್‌ನ ಅತುಲ್ ಕುಲಶ್ರೇಷ್ಠ ಎಂಬಾತನಿಗೆ ಕೂಡ ಪೊಲೀಸರು ಬಂಧಿಸಿದ್ದಾರೆ. ‘ಬಚ್ಚಾ’ ಎಂದೂ ಕರೆಯಲ್ಪಡುವ ಅತುಲ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಮತ್ತು ಯಾವುದೇ ರಾಜಕೀಯ ಸಂಬಂಧವಿಲ್ಲ ಎನ್ನಲಾಗಿದೆ. ಆದರೆ ಆತ ಸಂಸತ್ತಿನ ಒಳನುಗ್ಗುವವರೊಂದಿಗೆ ಫೇಸ್‌ಬುಕ್‌ನಲ್ಲಿ ಸಂಪರ್ಕದಲ್ಲಿದ್ದ ಎನ್ನಲಾಗಿದೆ.

ಡಿ.13ರಂದು ಸಂಸತ್ತಿನಲ್ಲಿ ಭಾರೀ ಭದ್ರತ ಲೋಪ ನಡೆದಿದ್ದವು. ಇಬ್ಬರು ಯುವಕರು ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿ ಘೋಷಣೆಗಳನ್ನು ಕೂಗಿದರೆ ಇನ್ನಿಬ್ಬರು ಸಂಸತ್ತಿನ ಹೊರಗೆ ಗ್ಯಾಸ್‌ ಸ್ಪ್ರೇ ಮಾಡಿ ಸರ್ವಾಧಿಕಾರ, ನಿರುದ್ಯೋಗ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಸಂಸತ್ತಿನ ಒಳಗೆ ಲಕ್ನೋದ ಸಾಗರ್ ಶರ್ಮಾ(26) ಮತ್ತು ಬೆಂಗಳೂರಿನ ಇಂಜಿನಿಯರಿಂಗ್ ಪದವೀಧರ ಮನೋರಂಜನ್ ಡಿ(35) ಅವರನ್ನು ಬಂಧಿಸಲಾಗಿತ್ತು. ಸಂಸತ್ತಿನ ಹೊರಗೆ ಅಮೋಲ್ ಶಿಂಧೆ (25) ಮತ್ತು ನೀಲಮ್ ದೇವಿ (42) ಅವರನ್ನು ಬಂಧಿಸಲಾಗತ್ತು. ಇದಲ್ಲದೆ ಪ್ರಕರಣದಲ್ಲಿ ಸಹಕರಿಸಿದ ಆರೋಪದಲ್ಲಿ ವಿಶಾಲ್‌ ಶರ್ಮಾ, ಲಲಿತ್‌ ಝಾ ಸೇರಿ 6 ಮಂದಿಯನ್ನು ಬಂಧಿಸಲಾಗಿತ್ತು. ಬಂಧಿತ  ಆರು ಆರೋಪಿಗಳ ಪೈಕಿ ನಾಲ್ವರ ವಿರುದ್ಧ ಕಠಿಣ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಇದಕ್ಕೂ ಮೊದಲು ಪ್ರಕರಣದ ತನಿಖೆ ನಡೆಸುತ್ತಿದ್ದ ದೆಹಲಿ ಪೊಲೀಸರು ಮೈಸೂರಿಗೆ ಆಗಮಿಸಿದ್ದು, ಪ್ರಕರಣದ ಆರೋಪಿ ಮೈಸೂರು ನಿವಾಸಿ ಮನೋರಂಜನ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯನಗರದ 2ನೇ ಹಂತದಲ್ಲಿರುವ ಮನೋರಂಜನ್ ಮನೆಯಲ್ಲಿ ಪರಿಶೀಲನೆ ನಡೆಸಿರುವ ಪೊಲೀಸರು, ಪುಸ್ತಕ ಸೇರಿದಂತೆ ಮನೋರಂಜನ್ ಬಳಸುತ್ತಿದ್ದ ಕೆಲವು ವಸ್ತುಗಳನ್ನು ಪರಿಶೀಲಿಸಿದ್ದಾರೆ. ಇದಲ್ಲದೆ ಮನೋರಂಜನ್ ತಾಯಿ ಶೈಲಜಾ ಮತ್ತು ತಂದೆ ದೇವರಾಜೇಗೌಡ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಗುಪ್ತಚರ ಇಲಾಖೆಯ ಅಧಿಕಾರಿಗಳು, ಮನೋರಂಜನ್ ಬ್ಯಾಂಕ್ ಖಾತೆ, ಆತನ ಫೋನ್‍ ಕರೆ ಡಿಟೇಲ್ಸ್ ಮತ್ತು ಆತನ ಕುಟುಂಬದ ಹಿನ್ನೆಲೆ ಬಗ್ಗೆ ಮಾಹಿತಿಯನ್ನು ಕಲೆ ಹಾಕಿದ್ದಾರೆ.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತಿನ ಬೆನ್ನಲ್ಲಿ ಲೋಕಸಭೆಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...