Homeಕರ್ನಾಟಕಸಂಸತ್ತಿನ ಭದ್ರತಾ ಲೋಪ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯೋರ್ವರ ಪುತ್ರ ಸೇರಿ ಮತ್ತಿಬ್ಬರ ಬಂಧನ

ಸಂಸತ್ತಿನ ಭದ್ರತಾ ಲೋಪ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯೋರ್ವರ ಪುತ್ರ ಸೇರಿ ಮತ್ತಿಬ್ಬರ ಬಂಧನ

- Advertisement -
- Advertisement -

ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು  ಕರ್ನಾಟಕದ ಬಾಗಲಕೋಟೆಯ ಮಾಜಿ ಪೊಲೀಸ್‌ ಅಧಿಕಾರಿಯೋರ್ವರ ಪುತ್ರ ಸೇರಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದರಿಂದಾಗಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 8 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದಂತಾಗಿದೆ.

ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮನೋರಂಜನ್ ಡಿ ಅವರ ಆತ್ಮೀಯ ಸ್ನೇಹಿತ ಮತ್ತು ಕರ್ನಾಟಕದ ಬಾಗಲಕೋಟೆಯ ಸಾಯಿಕೃಷ್ಣ ಮತ್ತು ಉತ್ತರಪ್ರದೇಶ ಮೂಲದ ಅತುಲ್ ಕುಲಶ್ರೇಷ್ಠ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಬಾಗಲಕೋಟೆಯ ಸಾಯಿಕೃಷ್ಣ ಕರ್ನಾಟಕದ ಬಾಗಲಕೋಟೆಯ ಮಾಜಿ ಡಿವೈಎಸ್‌ಪಿಯೋರ್ವರ ಪುತ್ರನಾಗಿದ್ದಾರೆ ಎನ್ನಲಾಗಿದೆ. ಈತನನ್ನು ನಿನ್ನೆ ರಾತ್ರಿ 10 ಗಂಟೆಗೆ ಬಾಗಲಕೋಟೆಯಲ್ಲಿರುವ ಆತನ ಮನೆಯಿಂದ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ವಿಚಾರಣೆಗಾಗಿ ರಾಷ್ಟ್ರ ರಾಜಧಾನಿಗೆ ಕರೆತರಲಾಗುತ್ತಿದೆ.

ಇದಲ್ಲದೆ ಉತ್ತರ ಪ್ರದೇಶದ ಜಲೌನ್‌ನ ಅತುಲ್ ಕುಲಶ್ರೇಷ್ಠ ಎಂಬಾತನಿಗೆ ಕೂಡ ಪೊಲೀಸರು ಬಂಧಿಸಿದ್ದಾರೆ. ‘ಬಚ್ಚಾ’ ಎಂದೂ ಕರೆಯಲ್ಪಡುವ ಅತುಲ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಮತ್ತು ಯಾವುದೇ ರಾಜಕೀಯ ಸಂಬಂಧವಿಲ್ಲ ಎನ್ನಲಾಗಿದೆ. ಆದರೆ ಆತ ಸಂಸತ್ತಿನ ಒಳನುಗ್ಗುವವರೊಂದಿಗೆ ಫೇಸ್‌ಬುಕ್‌ನಲ್ಲಿ ಸಂಪರ್ಕದಲ್ಲಿದ್ದ ಎನ್ನಲಾಗಿದೆ.

ಡಿ.13ರಂದು ಸಂಸತ್ತಿನಲ್ಲಿ ಭಾರೀ ಭದ್ರತ ಲೋಪ ನಡೆದಿದ್ದವು. ಇಬ್ಬರು ಯುವಕರು ಸಂಸತ್ತಿನಲ್ಲಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಡಬ್ಬಗಳಿಂದ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿ ಘೋಷಣೆಗಳನ್ನು ಕೂಗಿದರೆ ಇನ್ನಿಬ್ಬರು ಸಂಸತ್ತಿನ ಹೊರಗೆ ಗ್ಯಾಸ್‌ ಸ್ಪ್ರೇ ಮಾಡಿ ಸರ್ವಾಧಿಕಾರ, ನಿರುದ್ಯೋಗ, ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಸಂಸತ್ತಿನ ಒಳಗೆ ಲಕ್ನೋದ ಸಾಗರ್ ಶರ್ಮಾ(26) ಮತ್ತು ಬೆಂಗಳೂರಿನ ಇಂಜಿನಿಯರಿಂಗ್ ಪದವೀಧರ ಮನೋರಂಜನ್ ಡಿ(35) ಅವರನ್ನು ಬಂಧಿಸಲಾಗಿತ್ತು. ಸಂಸತ್ತಿನ ಹೊರಗೆ ಅಮೋಲ್ ಶಿಂಧೆ (25) ಮತ್ತು ನೀಲಮ್ ದೇವಿ (42) ಅವರನ್ನು ಬಂಧಿಸಲಾಗತ್ತು. ಇದಲ್ಲದೆ ಪ್ರಕರಣದಲ್ಲಿ ಸಹಕರಿಸಿದ ಆರೋಪದಲ್ಲಿ ವಿಶಾಲ್‌ ಶರ್ಮಾ, ಲಲಿತ್‌ ಝಾ ಸೇರಿ 6 ಮಂದಿಯನ್ನು ಬಂಧಿಸಲಾಗಿತ್ತು. ಬಂಧಿತ  ಆರು ಆರೋಪಿಗಳ ಪೈಕಿ ನಾಲ್ವರ ವಿರುದ್ಧ ಕಠಿಣ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಇದಕ್ಕೂ ಮೊದಲು ಪ್ರಕರಣದ ತನಿಖೆ ನಡೆಸುತ್ತಿದ್ದ ದೆಹಲಿ ಪೊಲೀಸರು ಮೈಸೂರಿಗೆ ಆಗಮಿಸಿದ್ದು, ಪ್ರಕರಣದ ಆರೋಪಿ ಮೈಸೂರು ನಿವಾಸಿ ಮನೋರಂಜನ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯನಗರದ 2ನೇ ಹಂತದಲ್ಲಿರುವ ಮನೋರಂಜನ್ ಮನೆಯಲ್ಲಿ ಪರಿಶೀಲನೆ ನಡೆಸಿರುವ ಪೊಲೀಸರು, ಪುಸ್ತಕ ಸೇರಿದಂತೆ ಮನೋರಂಜನ್ ಬಳಸುತ್ತಿದ್ದ ಕೆಲವು ವಸ್ತುಗಳನ್ನು ಪರಿಶೀಲಿಸಿದ್ದಾರೆ. ಇದಲ್ಲದೆ ಮನೋರಂಜನ್ ತಾಯಿ ಶೈಲಜಾ ಮತ್ತು ತಂದೆ ದೇವರಾಜೇಗೌಡ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಗುಪ್ತಚರ ಇಲಾಖೆಯ ಅಧಿಕಾರಿಗಳು, ಮನೋರಂಜನ್ ಬ್ಯಾಂಕ್ ಖಾತೆ, ಆತನ ಫೋನ್‍ ಕರೆ ಡಿಟೇಲ್ಸ್ ಮತ್ತು ಆತನ ಕುಟುಂಬದ ಹಿನ್ನೆಲೆ ಬಗ್ಗೆ ಮಾಹಿತಿಯನ್ನು ಕಲೆ ಹಾಕಿದ್ದಾರೆ.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತಿನ ಬೆನ್ನಲ್ಲಿ ಲೋಕಸಭೆಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....