Homeಮುಖಪುಟಪ್ರಧಾನಿ ಮೋದಿ ಕುರಿತ 'ದಿ ವೈರ್'ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

- Advertisement -
- Advertisement -

ಸುದ್ದಿ ಸಂಸ್ಥೆ ‘ದಿ ವೈರ್’ ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ.

ಸೋಮವಾರ (ಫೆ.10) ಸಂಜೆ ಸುಮಾರು ಎರಡು ಗಂಟೆಗಳ ಕಾಲ ವೈರ್‌ನ ಇನ್‌ಸ್ಟಾಗ್ರಾಮ್ ಖಾತೆ ಭಾರತದಲ್ಲಿ ಕಾಣಿಸುತ್ತಿರಲಿಲ್ಲ ಎಂದು ವರದಿಯಾಗಿದೆ.

“ಈ ಪೇಜ್ ಭಾರತದಲ್ಲಿ ‘ಲಭ್ಯವಿಲ್ಲ’, ಏಕೆಂದರೆ ಈ ವಿಷಯವನ್ನು ನಿರ್ಬಂಧಿಸಲು ಬಂದಿರುವ ‘ಕಾನೂನಾತ್ಮಕ ವಿನಂತಿಗೆ’ ಪ್ಲಾಟ್‌ಫಾರ್ಮ್ ಬದ್ಧವಾಗಿದೆ” ಎಂಬ ಸಂದೇಶವನ್ನು ವೈರ್ ಪೇಜ್‌ಗೆ ಭೇಟಿ ನೀಡಿದವರು ನೋಡಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

ಭಾರತದಿಂದ ಹೊರಗಿರುವ ಬಳಕೆದಾರರು ಮತ್ತು ವಿಪಿಎನ್ ಬಳಸುವವರಿಗೆ ಮಾತ್ರ ಪೇಜ್ ಕಾಣಿಸುತ್ತಿತ್ತು ಎಂದು ದಿ ವೈರ್ ವರದಿ ಹೇಳಿದೆ.

ದಿ ವೈರಲ್ ಶನಿವಾರ (ಫೆ.7) ಸಂಜೆ ಸುಮಾರು 6:30ಕ್ಕೆ ತನ್ನ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ಅಪ್ಲೋಡ್ ಮಾಡಿದ್ದ 52 ಸೆಕೆಂಡ್‌ಗಳ ಅನಿಮೇಟೆಡ್ ವಿಡಿಯೋವನ್ನು ಮೂರೂ ವೇದಿಕೆಗಳಲ್ಲಿ ನಿರ್ಬಂಧಿಸಲಾಗಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ ವೈರ್‌ನ ಇನ್‌ಸ್ಟಾಗ್ರಾಮ್ ಖಾತೆ ಮರುಸ್ಥಾಪಿಸಲಾಗಿದೆ. ಆದರೆ, ಅಪ್ಲೋಡ್ ಮಾಡಲಾಗಿದ್ದ ವಿಡಂಬನಾತ್ಮಕ ಅನಿಮೇಷನ್ ಮಾತ್ರ ಮೂರೂ ಪ್ಲಾಟ್‌ಫಾರ್ಮ್‌ಗಳಲ್ಲಿ ಕಾಣಿಸುತ್ತಿಲ್ಲ ಎನ್ನಲಾಗಿದೆ.

ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯ ಬಗ್ಗೆ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸದೆ ತಪ್ಪಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ವೈರ್‌ನ ಅನಿಮೇಷನ್ ವಿಡಂಬನೆ ಮಾಡಿತ್ತು.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ತನ್ನ ಖಾತೆಯನ್ನು ನಿರ್ಬಂಧಿಸಲು ನಿರ್ದಿಷ್ಟವಾಗಿ ಆದೇಶಿಸಿಲ್ಲ ಎಂದು ತನಗೆ ತಿಳಿಸಿದೆ ಎಂದು ಸೋಮವಾರ ‘ದಿ ವೈರ್’ ಹೇಳಿದೆ.

ಆದಾಗ್ಯೂ, ಸಚಿವಾಲಯ ಕೇವಲ 52 ಸೆಕೆಂಡ್‌ಗಳ ವಿಡಂಬನಾತ್ಮಕ ಕಾರ್ಟೂನ್ ಅನ್ನು ನಿರ್ಬಂಧಿಸುವಂತೆ ಮೆಟಾ ಸಂಸ್ಥೆಗೆ ಸೂಚಿಸಿತ್ತು. ಕಂಪನಿ ತಪ್ಪಾಗಿ ಇಡೀ ಇನ್‌ಸ್ಟಾಗ್ರಾಮ್ ಖಾತೆಯನ್ನೇ ನಿರ್ಬಂಧಿಸಿದೆ ಎಂಬ ವಿಷಯ ತನಗೆ ಅನಧಿಕೃತ ಮೂಲಗಳಿಂದ ತಿಳಿದುಬಂದಿದೆ ಎಂದು ದಿ ವೈರ್ ತಿಳಿಸಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ನಿರ್ದಿಷ್ಟ ವಿಷಯ ಅಥವಾ ಪೋಸ್ಟ್ ಅನ್ನು ನಿರ್ಬಂಧಿಸುವ ಮೊದಲು ಕೇಂದ್ರ ಸರ್ಕಾರ ಪೋಸ್ಟ್ ಮಾಡಿದವರಿಗೆ ಮುಂಚಿತವಾಗಿ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಆದರೆ, ಈ ವಿಷಯಕ್ಕೆ ಸಂಬಂಧಿಸಿದಂತೆ ತನಗೆ ಯಾವುದೇ ರೀತಿಯ ಲಿಖಿತ ಮಾಹಿತಿ ಬಂದಿಲ್ಲ ಎಂದು ‘ದಿ ವೈರ್’ ಹೇಳಿಕೊಂಡಿದೆ.

ಬುಧವಾರ (ಫೆ.11) ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ದಿ ವೈರ್ ಸಂಪಾದಕ ಸಿದ್ಧಾರ್ಥ್ ವರದರಾಜನ್, “ನಮ್ಮ ಕಾರ್ಟೂನ್ ಮೇಲೆ ನರೇಂದ್ರ ಮೋದಿಯವರು ಹೇರಿರುವ ಅಸಂಬದ್ಧ ಮತ್ತು ಸರ್ವಾಧಿಕಾರಿ ಧೋರಣೆಯ ನಿಷೇಧದ ವಿರುದ್ಧ ನಾವು ಹೋರಾಡುತ್ತಿದ್ದೇವೆ. ‘ದಿ ವೈರ್’ ಮತ್ತು ತಮ್ಮ ವಾಕ್ ಸ್ವಾತಂತ್ರ್ಯ ಹಾಗೂ ನಗುವಿನ ಹಕ್ಕನ್ನು ಪ್ರೀತಿಸುವ ಸಾರ್ವಜನಿಕರು ಈ ಹೋರಾಟದಲ್ಲಿ ಗೆಲ್ಲಲು ದಯವಿಟ್ಟು ಉದಾರವಾಗಿ ದೇಣಿಗೆ ನೀಡಿ” ಎಂದು ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...