Homeಕರ್ನಾಟಕಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

- Advertisement -
- Advertisement -

Tಹಳಿಯಾಳದ ಸಕ್ಕರೆ ಕಾರ್ಖಾನೆ ತಮ್ಮ ಭಾಗ್ಯದ ಬಾಗಿಲನ್ನೇ ತೆರೆಯಲಿದೆಯೆಂದು ಸ್ಥಳೀಯ ಕಬ್ಬು ಬೆಳೆಗಾರರು ಕನಸು ಕಂಡಿದ್ದರು. ಆದರೆ ಹಳಿಯಾಳ, ದಾಂಡೇಲಿ, ಮುಂಡಗೋಡ ಸೀಮೆಯಲ್ಲಿ ಕಬ್ಬು ಬೆಳೆಯುವ ರೈತರ ಪಾಲಿಗೆ ಈ ಸಕ್ಕರೆ ಕಾರ್ಖಾನೆ ಘೋರ ಶಾಪವಾಗಿ ಈಗ ಪರಿಣಮಿಸಿದೆ! ಒಂದು ದಶಕದ ಹಿಂದೆ ಹಳಿಯಾಳದಲ್ಲಿ ಶುರುವಾದ ಸಕ್ಕರೆ ಕಾರ್ಖಾನೆಯ ಹಿಂದೆ ರೈತರ ಬಹುದೊಡ್ಡ ಹೋರಾಟದ ಇತಿಹಾಸವೇ ಇದೆ. ಸಹಕಾರ ತತ್ವದ ಒಂದು ಸಕ್ಕರೆ ಕಾರ್ಖಾನೆ ತಮ್ಮೂರಲ್ಲಿ ಸ್ಥಾಪನೆ ಆಗಬೇಕೆಂಬುದು ರೈತರ ಬೇಡಿಕೆಯಾಗಿತ್ತು. ಆದರೆ ದೀರ್ಘ ಕಾಲದಿಂದ ಹಳಿಯಾಳವನ್ನು ಆಳುತ್ತಿದ್ದ ಬಲಾಢ್ಯ ರಾಜಕಾರಣಿಯ ತಂಡಕ್ಕದು ಬೇಡವಾಗಿತ್ತು. ಸಹಕಾರಿ ರಂಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭವಾದರೆ ರೈತರು ರಾಜಕೀಯ ಮತ್ತು ಆರ್ಥಿಕವಾಗಿ ಸಬಲರಾಗಿ ತಮ್ಮ ಮಂಕು ಬೂದಿ ರಾಜಕಾರಣಕ್ಕೆ ಸವಾಲಾಗುತ್ತಾರೆಂಬ ದೂ(ದು)ರಾಲೋಚನೆ ಪಟ್ಟಭದ್ರರದಾಗಿತ್ತು.

PC : Public TV, (ಆರ್.ವಿ ದೇಶಪಾಂಡೆ)

ಚುನಾವಣೆ ಎದುರಾದಾಗ ಸ್ಥಳೀಯ ಶಾಸಕ ಕಮ್ ರಾಜ್ಯದ ಪ್ರಭಾವಿ ರಾಜಕಾರಣಿ ಪಟು ಆರ್.ವಿ ದೇಶಪಾಂಡೆ ಸಕ್ಕರೆ ಕಾರ್ಖಾನೆ ತೆರೆಯುವ ಮಾತಾಡುತ್ತಿದ್ದರು; ಫ್ಯಾಕ್ಟರಿಗೆ ಅಡಿಗಲ್ಲನ್ನು ಯಾವ್ಯಾವುದೋ ಸ್ವಾಮಿ ಮುಖಂಡರ ಕರೆತಂದು ಹಾಕಿಸುತ್ತಿದ್ದರು. ಎಲೆಕ್ಷನ್ ಮುಗಿದ ಮೇಲೆ ಸಕ್ಕರೆ ಕಾರ್ಖಾನೆ ಕೆಲಸ ಕಾಮಗಾರಿ ಮುಂದಕ್ಕೆ ಹೋಗುತ್ತಿರಲಿಲ್ಲ! ಈ ನಾಟಕದ ಹಿಂದಿನ ಹಿಕಮತ್ತು ರೈತರಿಗೆ ಅರ್ಥವಾದಾಗ ರೋಚಕ ಹೋರಾಟ ಚಳವಳಿಗಳೇ ಆಗಿಹೋದವು. ಅನಿವಾರ್ಯವಾಗಿ ಹಳಿಯಾಳದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಬೇಕಾಗಿ ಬಂತು. ಆದರದು ರೈತರ ಇಚ್ಛೆಯ ಸಹಕಾರಿ ಕಾರ್ಖಾನೆ ಆಗಿರಲಿಲ್ಲ ಬದಲಿಗೆ ಬಂಡವಾಳಶಾಹಿಗಳ ಖಾಸಗಿ ಫ್ಯಾಕ್ಟರಿಯಾಗಿತ್ತು. ಜೆಎಂಆರ್ ಗ್ರೂಪ್ ಹುಲ್ಲಟ್ಟಿ ಗ್ರಾಮದಲ್ಲಿ ಬರೋಬ್ಬರಿ 250 ಎಕರೆ ಭೂಮಿಯನ್ನು 60 ರೈತರಿಂದ ತೀರಾ ಅಗ್ಗಕ್ಕೆ ಖರೀದಿಸಿ ಕಾರ್ಖಾನೆ ನಿರ್ಮಿಸಿತ್ತು.

ಅಂದು ಬಲಾಢ್ಯ ಬೃಹತ್ ಕೈಗಾರಿಕಾ ಮಂತ್ರಿಯಾಗಿದ್ದ ದೇಶಪಾಂಡೆ ಬಂಡವಾಳಶಾಹಿಗಳಿಗೆ ಅನುಕೂಲವಾಗುವಂತೆ ನೋಡಿಕೊಂಡಿದ್ದರೆಂಬ ಪುಕಾರು ಇವತ್ತಿಗೂ ರೈತ ಸಮುದಾಯದಲ್ಲಿದೆ. ಬಡ ರೈತರಿಂದ ದುಗ್ಗಾಣಿ ಕಾಸಿಗೆ ಅಮೂಲ್ಯ ಜಾಗವನ್ನು ಜೆಎಂಆರ್ ಕಂಪನಿಗೆ ಕೊಡಿಸಿದ್ದ ರಾಜಕಾರಣಿ ತಾವೂ ಸಕ್ಕರೆ ಕಾರ್ಖಾನೆಯ ರಹಸ್ಯ ಪಾಲುದಾರಿಕೆ ಪಡೆದುಕೊಂಡಿದ್ದರು! ಭೂಮಿ ಕೊಟ್ಟ ರೈತ ಪರಿವಾರಕ್ಕೆ ಕಾರ್ಖಾನೆಯಲ್ಲಿ ನೌಕರಿ ಕೊಡಿಸುವ ಆಸೆಯೂ ತೋರಿಸಲಾಗಿತ್ತು. ಅದು ಇವತ್ತಿಗೂ ಈಡೇರಿಲ್ಲ! ಈ ಒಳ ಮಸಲತ್ತುಗಳೇನೇ ಇರಲಿ, ಸ್ಥಳೀಯ ಕಬ್ಬು ಬೆಳೆಗಾರರು ಮಾತ್ರ ಕಾರ್ಖಾನೆಯಿಂದ ತಮ್ಮ ಕಷ್ಟ ಕರಗಬಹುದೆಂದೇ ನಂಬಿಕೊಂಡಿದ್ದರು. ಆರಂಭದಲ್ಲಿ ಜೆಎಂಆರ್ ಕಂಪನಿಯೂ ರೈತರಿಗೆ ಅನುಕೂಲಕರವಾದ ಒಂದಿಷ್ಟು ಕಾರ್ಯಕ್ರಮ ಹಾಕಿಕೊಂಡಿತ್ತು.

ಆದರೆ ಬರಬರುತ್ತ ಜೆಎಂಆರ್ ಕಂಪನಿ ಕಾರ್ಖಾನೆ ನಡೆಸುವ ಆಸಕ್ತಿ ಕಳೆದುಕೊಂಡಿತ್ತು. ಸ್ಥಳೀಯ ಪ್ರಚಂಡ ಪುಢಾರಿಗಳು ಕಾರ್ಖಾನೆ ಆಡಳಿತದಲ್ಲಿ ಕೈಯ್ಯಾಡಿಸುತ್ತಿದ್ದುದು ಜೆಎಂಆರ್ ಕಂಪನಿಯವರಲ್ಲಿ ಜಿಗುಪ್ಸೆ ಮೂಡಿಸಿತ್ತು. ಬಚಾವಾಗಲು ಜೆಎಂಆರ್ ಪಾಲುದಾರ ಕಂಪನಿಗಾಗಿ ಹುಡುಕಾಡತೊಡಗಿತು. ಈ ಐಡಿ ಪ್ಯಾರಿ ಶುಗರ್ ಲಿಮಿಟೆಡ್ ಪಾಲುದಾರಿಕೆಗೆ ಸೇರಿಕೊಂಡಿತು. ಕೊನೆಗೊಂದು ದಿನ ಜೆಎಂಆರ್ ಕಂಪನಿಯವರು ಪ್ಯಾರಿ ಶುಗರ್ಸ್‌ಗೆ ಕಾರ್ಖಾನೆ ಮಾರಾಟಮಾಡಿ ಹೋದರು! ಆಗ ಆರಂಭವಾದ ರೈತರ ಗೋಳು ಇನ್ನೂ ಮುಗಿದಿಲ್ಲ. ಪ್ಯಾರಿ ಕಂಪನಿಯವರದು ಪಕ್ಕಾ ಲಾಭಬಡುಕ ನೀತಿ-ನಿಯಮ! ರೈತರನ್ನು ಶೋಷಿಸುವುದು ಮತ್ತು ವಂಚಿಸುವುದು ನಡೆಯುತ್ತಲೇ ಇದೆ ಎಂಬ ಆರೋಪಗಳಿಗೆ ಕೊನೆಯೇ ಇಲ್ಲ. ಪ್ಯಾರಿ ಕಂಪನಿಯ ಕರಾಮತ್ತಿನ ಆಡಳಿತದಿಂದ ರೋಸತ್ತು ಹೋಗಿರುವ ರೈತರು ಆರೋಪಿಸುತ್ತಲೇ ಹೇಳುತ್ತಿದ್ದಾರೆ.

ದುರಂತ ಎಂದರೆ, ಸುದೀರ್ಘ ಕಾಲದ ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆ, ಎಂಎಲ್‌ಸಿ ಎಸ್.ಎಲ್ ಘೋಟನೇಕರ್ ಮತ್ತು ಮಾಜಿ ಶಾಸಕ ಬಿಜೆಪಿಯ ಸುನಿಲ್ ಹೆಗಡೆಯಂಥ ಘಟಾನುಘಟಿಗಳು ರೈತರ ನೋವಿಗೆ ಸ್ಪಂದಿಸುತ್ತಿಲ್ಲ. ರೈತರು ತಮಗಾಗುತ್ತಿರುವ ಅನ್ಯಾಯ ಪ್ರತಿಭಟಿಸಿ ಬಂದ್, ರ್‍ಯಾಲಿ, ಸಭೆ, ಹೋರಾಟ ನಡೆಸುತ್ತಿದ್ದರೂ ಇವರ್‍ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕಾಟಾಚಾರಕ್ಕೆ ರೈತ ಪರ ಪೋಸು ಕೊಡುತ್ತಾರೆಯೇ ಹೊರತು ಪ್ಯಾರಿ ಶುಗರ್ಸ್ ಸರದಾರರಿಗೆ ಮೂಗುದಾರ ಹಾಕಲು ಯೋಚಿಸುತ್ತಿಲ್ಲ. ಸಕ್ಕರೆ ಧಣಿಗಳು ಎಲೆಕ್ಷನ್ ಫಂಡ್ ಪುಷ್ಕಳವಾಗಿ ಕೊಡುವುದೇ ಇದಕ್ಕೆಲ್ಲ ಕಾರಣವೆಂಬ ವಾದವೂ ಬಲವಾಗಿದೆ. ಬೇಡಿಕೆ ಈಡೇರಿಕೆಗೆ ರೈತರು ಸೊಲ್ಲೆತ್ತಿದ್ದರೆ ಕ್ರಿಮಿನಲ್ ಕೇಸ್ ಹಾಕಿ ಹಣಿಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ! ಕಷ್ಟ-ನಷ್ಟಕ್ಕೆ ಎದೆಯೊಡ್ಡಿ ರೈತರು ಹೋರಾಡುತ್ತಲೇ ಇದ್ದಾರೆ.

ಪ್ಯಾರಿ ಶುಗರ್ಸ್‌ನ ಪ್ರತಿ ನೀತಿ ನಿಯಮವೂ ಕಬ್ಬು ಬೆಳೆಗಾರರಿಗೆ ಕಂಟಕಕಾರಿಯಾಗಿದೆ. 2017ರಿಂದ ರೈತರಿಗೆ ಪ್ಯಾರಿಯವರು 20 ಕೋಟಿಯಷ್ಟು ಪ್ರೋತ್ಸಾಹಧನ ಕೊಡದೆ ಕಾಡುತ್ತಿದ್ದಾರೆ! ಪ್ರತಿ ವರ್ಷ ಕಬ್ಬು ನುರಿಯುವ ಹಂಗಾಮಿನ ಶುರುವಿನಲ್ಲಿ ಕಬ್ಬಿಗೆ ಬೆಲೆ ಕಾರ್ಖಾನೆಯವರು ನಿರ್ಧರಿಸಬೇಕೆಂಬ ಕಟ್ಟು ನಿಟ್ಟಿನ ನಿಯಮವಿದೆ. ಆದರೆ ಪ್ಯಾರಿ ಆಡಳಿತಗಾರರು ಬೇಕಂತಲೇ ಕಬ್ಬಿನ ಬೆಲೆ ನಿಗದಿಸದೇ ರೈತರಿಗೆ ಮೋಸ ಮಾಡಲು ಹವಣಿಸುತ್ತಾರೆ. ರಾಜ್ಯದ ಬೇರೆ ಬೇರೆ ಸಕ್ಕರೆ ಫ್ಯಾಕ್ಟರಿಯವರು ಪ್ರತಿ ಟನ್ ಕಬ್ಬಿಗೆ ಕಟ್ಟುವ ದರಕ್ಕೆ ಹೋಲಿಸಿದರೆ ಪ್ಯಾರಿಯವರದ್ದು ತೀರಾ ಕಮ್ಮಿ. ಮೊದಲ ಆದ್ಯತೆಯ ಮೇರೆಗೆ ಸ್ಥಳೀಯರ ಕಬ್ಬನ್ನು ಪ್ಯಾರಿ ಕೊಳ್ಳಬೇಕೆಂಬುದು ಕರಾರಿನ ಷರತ್ತು. ಆದರೆ ಪ್ಯಾರಿ ಸ್ಥಳೀಯ ರೈತರಿಗೆ ವಂಚನೆ ಮಾಡಿ ಪಕ್ಕದ ಧಾರವಾಡ, ಕಲಘಟಗಿ, ಅಳ್ನಾವರ, ಖಾನಾಪುರ ಮತ್ತು ಬೈಲಹೊಂಗಲದಿಂದ ಕಬ್ಬನ್ನು ಪ್ರಥಮ ಆದ್ಯತೆಯಲ್ಲಿ ತರಿಸಿಕೊಳ್ಳುತ್ತಿದೆ. ಹಳಿಯಾಳ ಸುತ್ತಮುತ್ತಲಿನಲ್ಲಿ ಸಾಕಷ್ಟು ಕಬ್ಬು ಇಳುವರಿ ಇದ್ದರೂ ಬೇರೆಡೆಯಿಂದ ಕಬ್ಬು ಖರೀದಿಸಿ ಸ್ಥಳೀಯ ರೈತರಿಗೆ ನಷ್ಟವುಂಟು ಮಾಡುತ್ತಿದೆ.

PC : The Hindu, (ಶಿವರಾಮ ಹೆಬ್ಬಾರ್)

ಸ್ಥಳೀಯ ಕಬ್ಬು ಕಟಾವುದಾರರಿಗೆ (ತೋಡ್ನಿ) ಅವಕಾಶ ಕೊಡದೆ, ಪ್ಯಾರಿ ಆಡಳಿತಗಾರರು ಮಹಾರಾಷ್ಟ್ರದ ಬೀಡ, ಸತಾರ ಮತ್ತು ರಾಜ್ಯದ ಬಳ್ಳಾರಿ ಕಡೆಯಿಂದ ಕೂಲಿಗಳನ್ನು ಕರೆಸಿಕೊಳ್ಳುತ್ತಿದೆ. ಇದರ ಬಗ್ಗೆ ಪ್ರಶ್ನಿಸಿದರೆ “ನೀವ್ಯಾರು ಕೇಳೋದಕ್ಕೆ. ಫ್ಯಾಕ್ಟರಿ ನಮ್ದು. ನಮ್ಮ ಖುಷಿ” ಎಂಬ ಅಧಿಕ ಪ್ರಸಂಗದ ಉತ್ತರ! ತಾಲ್ಲೂಕಿನ ರೈತರ ಕಬ್ಬು ಸಾಗಿಸುವ ವಾಹನಗಳಿಗೆ ದಿನದಲ್ಲಷ್ಟೇ ಫ್ಯಾಕ್ಟರಿ ಪ್ರವೇಶಕ್ಕೆ ಅವಕಾಶ ಕೊಡಲಾಗುತ್ತಿದೆ. ಇದರಿಂದ ಹಳಿಯಾಳ ಪಟ್ಟಣದಲ್ಲಿ ಹಾದುಹೋಗುವ ರಾಜ್ಯ ಹೆದ್ದಾರಿಯಲ್ಲಿ ಪ್ರತಿ ದಿನ ಕಬ್ಬು ತುಂಬಿದ ವಾಹನಗಳು ಸಾಲುಗಟ್ಟಿ ಪ್ಯಾರಿ ಪ್ರವೇಶಕ್ಕೆ ಕಾದು ನಿಲ್ಲುವಂತಾಗಿದೆ. ಈ ಎಡವಟ್ಟಿನಿಂದ ಹಳಿಯಾಳದಲ್ಲಿ ಸಂಚಾರ ಸಮಸ್ಯೆ ಬಿಗಡಾಯಿಸಿದೆ. ಪ್ಯಾರಿಯಿಂದ ಪರಿಸರ ಮಾಲಿನ್ಯವೂ ನಿರಂತರವಾಗಿ ಆಗುತ್ತಿದೆ. ಕಾರ್ಖಾನೆಯಿಂದ ಹೊರಬರುವ ಅಪಾಯಕಾರಿ ಹೊಗೆಯಿಂದ ವಾಯುಮಾಲಿನ್ಯ ಉಂಟಾಗಿ ಹಳಿಯಾಳ ಸುತ್ತಲಿನ ಹಲವು ಹಳ್ಳಿಗಳ ಆರೋಗ್ಯ ಹಾಳಾಗುತ್ತಿದೆ. ಫ್ಯಾಕ್ಟರಿಯ ಸಾಮಾಜಿಕ ಹೊಣೆಗಾರಿಕಾ ನಿಧಿಯನ್ನು ತಾಲ್ಲೂಕಿನ ಮೂಲಸೌಕರ್ಯ ಅಭಿವೃದ್ಧಿ ಪರಿಸರ ನಿರ್ವಹಣೆಗೆಗೂ ಬಳಸದ ಪ್ಯಾರಿ ಆಡಳಿತಗಾರರು ಸ್ಥಳೀಯರಿಗೆ ಉದ್ಯೋಗವನ್ನೂ ಕೊಡುತ್ತಿಲ್ಲ ಎಂಬ ಆರೋಪ ಇದೆ.

ಪ್ಯಾರಿ ಕಂಪನಿಯಿಂದ ಎದುರಾಗಿರುವ ಸಂಕಷ್ಟದ ಬಗ್ಗೆ ಮೊನ್ನೆಮೊನ್ನೆವರೆಗೂ ಸಕ್ಕರೆ ಸಚಿವರಾಗಿದ್ದ ಹಳಿಯಾಳದ ಪಕ್ಕದ ಕ್ಷೇತ್ರ ಶಾಸಕರೂ ಆಗಿರುವ ಶಿವರಾಮ ಹೆಬ್ಬಾರ್‌ಗೆ ರೈತರು ದೂರಿದ್ದರು. ಹೆಬ್ಬಾರ್ ಅದ್ಯಾಕೋ ಇದೆಲ್ಲ ತನಗೆ ಸಂಬಂಧಿಸಿದ್ದಲ್ಲ ಎಂಬಂತೆ ಸಾರಾಸಗಟಾಗಿ ಕಡೆಗಣಿಸಿ ಕೂತಿದ್ದರು! ನ್ಯಾಯಕ್ಕಾಗಿ ಹೋರಾಟ ಪ್ರತಿಭಟನೆ ವರ್ಷಾನುಗಟ್ಟಲೆಯಿಂದ ಮುಂದುವರೆಸುತ್ತಲೇ ಇರುವ ಕಬ್ಬು ಬೆಳೆಗಾರರು ಸಹನೆಗೆಡುವ ಮೊದಲೇ ಸಂಬಂಧಿಸಿದವರು ಎಚ್ಚತ್ತುಕೊಳ್ಳಬೇಕಿದೆ. ಅಭೂತಪೂರ್ವ ಚಳವಳಿಯಿಂದ ಸಕ್ಕರೆ ಕಾರ್ಖಾನೆ ಪಡೆದಿದ್ದ ಹಳಿಯಾಳದ ರೈತರಿಗೆ ಅದೇ ಕಾರ್ಖಾನೆ ನೆಮ್ಮದಿಗೆಡಿಸಿರುವುದು ದುರಂತ!


ಇದನ್ನೂ ಓದಿ: ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....