Homeಕರ್ನಾಟಕಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

- Advertisement -
- Advertisement -

Tಹಳಿಯಾಳದ ಸಕ್ಕರೆ ಕಾರ್ಖಾನೆ ತಮ್ಮ ಭಾಗ್ಯದ ಬಾಗಿಲನ್ನೇ ತೆರೆಯಲಿದೆಯೆಂದು ಸ್ಥಳೀಯ ಕಬ್ಬು ಬೆಳೆಗಾರರು ಕನಸು ಕಂಡಿದ್ದರು. ಆದರೆ ಹಳಿಯಾಳ, ದಾಂಡೇಲಿ, ಮುಂಡಗೋಡ ಸೀಮೆಯಲ್ಲಿ ಕಬ್ಬು ಬೆಳೆಯುವ ರೈತರ ಪಾಲಿಗೆ ಈ ಸಕ್ಕರೆ ಕಾರ್ಖಾನೆ ಘೋರ ಶಾಪವಾಗಿ ಈಗ ಪರಿಣಮಿಸಿದೆ! ಒಂದು ದಶಕದ ಹಿಂದೆ ಹಳಿಯಾಳದಲ್ಲಿ ಶುರುವಾದ ಸಕ್ಕರೆ ಕಾರ್ಖಾನೆಯ ಹಿಂದೆ ರೈತರ ಬಹುದೊಡ್ಡ ಹೋರಾಟದ ಇತಿಹಾಸವೇ ಇದೆ. ಸಹಕಾರ ತತ್ವದ ಒಂದು ಸಕ್ಕರೆ ಕಾರ್ಖಾನೆ ತಮ್ಮೂರಲ್ಲಿ ಸ್ಥಾಪನೆ ಆಗಬೇಕೆಂಬುದು ರೈತರ ಬೇಡಿಕೆಯಾಗಿತ್ತು. ಆದರೆ ದೀರ್ಘ ಕಾಲದಿಂದ ಹಳಿಯಾಳವನ್ನು ಆಳುತ್ತಿದ್ದ ಬಲಾಢ್ಯ ರಾಜಕಾರಣಿಯ ತಂಡಕ್ಕದು ಬೇಡವಾಗಿತ್ತು. ಸಹಕಾರಿ ರಂಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭವಾದರೆ ರೈತರು ರಾಜಕೀಯ ಮತ್ತು ಆರ್ಥಿಕವಾಗಿ ಸಬಲರಾಗಿ ತಮ್ಮ ಮಂಕು ಬೂದಿ ರಾಜಕಾರಣಕ್ಕೆ ಸವಾಲಾಗುತ್ತಾರೆಂಬ ದೂ(ದು)ರಾಲೋಚನೆ ಪಟ್ಟಭದ್ರರದಾಗಿತ್ತು.

PC : Public TV, (ಆರ್.ವಿ ದೇಶಪಾಂಡೆ)

ಚುನಾವಣೆ ಎದುರಾದಾಗ ಸ್ಥಳೀಯ ಶಾಸಕ ಕಮ್ ರಾಜ್ಯದ ಪ್ರಭಾವಿ ರಾಜಕಾರಣಿ ಪಟು ಆರ್.ವಿ ದೇಶಪಾಂಡೆ ಸಕ್ಕರೆ ಕಾರ್ಖಾನೆ ತೆರೆಯುವ ಮಾತಾಡುತ್ತಿದ್ದರು; ಫ್ಯಾಕ್ಟರಿಗೆ ಅಡಿಗಲ್ಲನ್ನು ಯಾವ್ಯಾವುದೋ ಸ್ವಾಮಿ ಮುಖಂಡರ ಕರೆತಂದು ಹಾಕಿಸುತ್ತಿದ್ದರು. ಎಲೆಕ್ಷನ್ ಮುಗಿದ ಮೇಲೆ ಸಕ್ಕರೆ ಕಾರ್ಖಾನೆ ಕೆಲಸ ಕಾಮಗಾರಿ ಮುಂದಕ್ಕೆ ಹೋಗುತ್ತಿರಲಿಲ್ಲ! ಈ ನಾಟಕದ ಹಿಂದಿನ ಹಿಕಮತ್ತು ರೈತರಿಗೆ ಅರ್ಥವಾದಾಗ ರೋಚಕ ಹೋರಾಟ ಚಳವಳಿಗಳೇ ಆಗಿಹೋದವು. ಅನಿವಾರ್ಯವಾಗಿ ಹಳಿಯಾಳದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಬೇಕಾಗಿ ಬಂತು. ಆದರದು ರೈತರ ಇಚ್ಛೆಯ ಸಹಕಾರಿ ಕಾರ್ಖಾನೆ ಆಗಿರಲಿಲ್ಲ ಬದಲಿಗೆ ಬಂಡವಾಳಶಾಹಿಗಳ ಖಾಸಗಿ ಫ್ಯಾಕ್ಟರಿಯಾಗಿತ್ತು. ಜೆಎಂಆರ್ ಗ್ರೂಪ್ ಹುಲ್ಲಟ್ಟಿ ಗ್ರಾಮದಲ್ಲಿ ಬರೋಬ್ಬರಿ 250 ಎಕರೆ ಭೂಮಿಯನ್ನು 60 ರೈತರಿಂದ ತೀರಾ ಅಗ್ಗಕ್ಕೆ ಖರೀದಿಸಿ ಕಾರ್ಖಾನೆ ನಿರ್ಮಿಸಿತ್ತು.

ಅಂದು ಬಲಾಢ್ಯ ಬೃಹತ್ ಕೈಗಾರಿಕಾ ಮಂತ್ರಿಯಾಗಿದ್ದ ದೇಶಪಾಂಡೆ ಬಂಡವಾಳಶಾಹಿಗಳಿಗೆ ಅನುಕೂಲವಾಗುವಂತೆ ನೋಡಿಕೊಂಡಿದ್ದರೆಂಬ ಪುಕಾರು ಇವತ್ತಿಗೂ ರೈತ ಸಮುದಾಯದಲ್ಲಿದೆ. ಬಡ ರೈತರಿಂದ ದುಗ್ಗಾಣಿ ಕಾಸಿಗೆ ಅಮೂಲ್ಯ ಜಾಗವನ್ನು ಜೆಎಂಆರ್ ಕಂಪನಿಗೆ ಕೊಡಿಸಿದ್ದ ರಾಜಕಾರಣಿ ತಾವೂ ಸಕ್ಕರೆ ಕಾರ್ಖಾನೆಯ ರಹಸ್ಯ ಪಾಲುದಾರಿಕೆ ಪಡೆದುಕೊಂಡಿದ್ದರು! ಭೂಮಿ ಕೊಟ್ಟ ರೈತ ಪರಿವಾರಕ್ಕೆ ಕಾರ್ಖಾನೆಯಲ್ಲಿ ನೌಕರಿ ಕೊಡಿಸುವ ಆಸೆಯೂ ತೋರಿಸಲಾಗಿತ್ತು. ಅದು ಇವತ್ತಿಗೂ ಈಡೇರಿಲ್ಲ! ಈ ಒಳ ಮಸಲತ್ತುಗಳೇನೇ ಇರಲಿ, ಸ್ಥಳೀಯ ಕಬ್ಬು ಬೆಳೆಗಾರರು ಮಾತ್ರ ಕಾರ್ಖಾನೆಯಿಂದ ತಮ್ಮ ಕಷ್ಟ ಕರಗಬಹುದೆಂದೇ ನಂಬಿಕೊಂಡಿದ್ದರು. ಆರಂಭದಲ್ಲಿ ಜೆಎಂಆರ್ ಕಂಪನಿಯೂ ರೈತರಿಗೆ ಅನುಕೂಲಕರವಾದ ಒಂದಿಷ್ಟು ಕಾರ್ಯಕ್ರಮ ಹಾಕಿಕೊಂಡಿತ್ತು.

ಆದರೆ ಬರಬರುತ್ತ ಜೆಎಂಆರ್ ಕಂಪನಿ ಕಾರ್ಖಾನೆ ನಡೆಸುವ ಆಸಕ್ತಿ ಕಳೆದುಕೊಂಡಿತ್ತು. ಸ್ಥಳೀಯ ಪ್ರಚಂಡ ಪುಢಾರಿಗಳು ಕಾರ್ಖಾನೆ ಆಡಳಿತದಲ್ಲಿ ಕೈಯ್ಯಾಡಿಸುತ್ತಿದ್ದುದು ಜೆಎಂಆರ್ ಕಂಪನಿಯವರಲ್ಲಿ ಜಿಗುಪ್ಸೆ ಮೂಡಿಸಿತ್ತು. ಬಚಾವಾಗಲು ಜೆಎಂಆರ್ ಪಾಲುದಾರ ಕಂಪನಿಗಾಗಿ ಹುಡುಕಾಡತೊಡಗಿತು. ಈ ಐಡಿ ಪ್ಯಾರಿ ಶುಗರ್ ಲಿಮಿಟೆಡ್ ಪಾಲುದಾರಿಕೆಗೆ ಸೇರಿಕೊಂಡಿತು. ಕೊನೆಗೊಂದು ದಿನ ಜೆಎಂಆರ್ ಕಂಪನಿಯವರು ಪ್ಯಾರಿ ಶುಗರ್ಸ್‌ಗೆ ಕಾರ್ಖಾನೆ ಮಾರಾಟಮಾಡಿ ಹೋದರು! ಆಗ ಆರಂಭವಾದ ರೈತರ ಗೋಳು ಇನ್ನೂ ಮುಗಿದಿಲ್ಲ. ಪ್ಯಾರಿ ಕಂಪನಿಯವರದು ಪಕ್ಕಾ ಲಾಭಬಡುಕ ನೀತಿ-ನಿಯಮ! ರೈತರನ್ನು ಶೋಷಿಸುವುದು ಮತ್ತು ವಂಚಿಸುವುದು ನಡೆಯುತ್ತಲೇ ಇದೆ ಎಂಬ ಆರೋಪಗಳಿಗೆ ಕೊನೆಯೇ ಇಲ್ಲ. ಪ್ಯಾರಿ ಕಂಪನಿಯ ಕರಾಮತ್ತಿನ ಆಡಳಿತದಿಂದ ರೋಸತ್ತು ಹೋಗಿರುವ ರೈತರು ಆರೋಪಿಸುತ್ತಲೇ ಹೇಳುತ್ತಿದ್ದಾರೆ.

ದುರಂತ ಎಂದರೆ, ಸುದೀರ್ಘ ಕಾಲದ ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆ, ಎಂಎಲ್‌ಸಿ ಎಸ್.ಎಲ್ ಘೋಟನೇಕರ್ ಮತ್ತು ಮಾಜಿ ಶಾಸಕ ಬಿಜೆಪಿಯ ಸುನಿಲ್ ಹೆಗಡೆಯಂಥ ಘಟಾನುಘಟಿಗಳು ರೈತರ ನೋವಿಗೆ ಸ್ಪಂದಿಸುತ್ತಿಲ್ಲ. ರೈತರು ತಮಗಾಗುತ್ತಿರುವ ಅನ್ಯಾಯ ಪ್ರತಿಭಟಿಸಿ ಬಂದ್, ರ್‍ಯಾಲಿ, ಸಭೆ, ಹೋರಾಟ ನಡೆಸುತ್ತಿದ್ದರೂ ಇವರ್‍ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕಾಟಾಚಾರಕ್ಕೆ ರೈತ ಪರ ಪೋಸು ಕೊಡುತ್ತಾರೆಯೇ ಹೊರತು ಪ್ಯಾರಿ ಶುಗರ್ಸ್ ಸರದಾರರಿಗೆ ಮೂಗುದಾರ ಹಾಕಲು ಯೋಚಿಸುತ್ತಿಲ್ಲ. ಸಕ್ಕರೆ ಧಣಿಗಳು ಎಲೆಕ್ಷನ್ ಫಂಡ್ ಪುಷ್ಕಳವಾಗಿ ಕೊಡುವುದೇ ಇದಕ್ಕೆಲ್ಲ ಕಾರಣವೆಂಬ ವಾದವೂ ಬಲವಾಗಿದೆ. ಬೇಡಿಕೆ ಈಡೇರಿಕೆಗೆ ರೈತರು ಸೊಲ್ಲೆತ್ತಿದ್ದರೆ ಕ್ರಿಮಿನಲ್ ಕೇಸ್ ಹಾಕಿ ಹಣಿಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ! ಕಷ್ಟ-ನಷ್ಟಕ್ಕೆ ಎದೆಯೊಡ್ಡಿ ರೈತರು ಹೋರಾಡುತ್ತಲೇ ಇದ್ದಾರೆ.

ಪ್ಯಾರಿ ಶುಗರ್ಸ್‌ನ ಪ್ರತಿ ನೀತಿ ನಿಯಮವೂ ಕಬ್ಬು ಬೆಳೆಗಾರರಿಗೆ ಕಂಟಕಕಾರಿಯಾಗಿದೆ. 2017ರಿಂದ ರೈತರಿಗೆ ಪ್ಯಾರಿಯವರು 20 ಕೋಟಿಯಷ್ಟು ಪ್ರೋತ್ಸಾಹಧನ ಕೊಡದೆ ಕಾಡುತ್ತಿದ್ದಾರೆ! ಪ್ರತಿ ವರ್ಷ ಕಬ್ಬು ನುರಿಯುವ ಹಂಗಾಮಿನ ಶುರುವಿನಲ್ಲಿ ಕಬ್ಬಿಗೆ ಬೆಲೆ ಕಾರ್ಖಾನೆಯವರು ನಿರ್ಧರಿಸಬೇಕೆಂಬ ಕಟ್ಟು ನಿಟ್ಟಿನ ನಿಯಮವಿದೆ. ಆದರೆ ಪ್ಯಾರಿ ಆಡಳಿತಗಾರರು ಬೇಕಂತಲೇ ಕಬ್ಬಿನ ಬೆಲೆ ನಿಗದಿಸದೇ ರೈತರಿಗೆ ಮೋಸ ಮಾಡಲು ಹವಣಿಸುತ್ತಾರೆ. ರಾಜ್ಯದ ಬೇರೆ ಬೇರೆ ಸಕ್ಕರೆ ಫ್ಯಾಕ್ಟರಿಯವರು ಪ್ರತಿ ಟನ್ ಕಬ್ಬಿಗೆ ಕಟ್ಟುವ ದರಕ್ಕೆ ಹೋಲಿಸಿದರೆ ಪ್ಯಾರಿಯವರದ್ದು ತೀರಾ ಕಮ್ಮಿ. ಮೊದಲ ಆದ್ಯತೆಯ ಮೇರೆಗೆ ಸ್ಥಳೀಯರ ಕಬ್ಬನ್ನು ಪ್ಯಾರಿ ಕೊಳ್ಳಬೇಕೆಂಬುದು ಕರಾರಿನ ಷರತ್ತು. ಆದರೆ ಪ್ಯಾರಿ ಸ್ಥಳೀಯ ರೈತರಿಗೆ ವಂಚನೆ ಮಾಡಿ ಪಕ್ಕದ ಧಾರವಾಡ, ಕಲಘಟಗಿ, ಅಳ್ನಾವರ, ಖಾನಾಪುರ ಮತ್ತು ಬೈಲಹೊಂಗಲದಿಂದ ಕಬ್ಬನ್ನು ಪ್ರಥಮ ಆದ್ಯತೆಯಲ್ಲಿ ತರಿಸಿಕೊಳ್ಳುತ್ತಿದೆ. ಹಳಿಯಾಳ ಸುತ್ತಮುತ್ತಲಿನಲ್ಲಿ ಸಾಕಷ್ಟು ಕಬ್ಬು ಇಳುವರಿ ಇದ್ದರೂ ಬೇರೆಡೆಯಿಂದ ಕಬ್ಬು ಖರೀದಿಸಿ ಸ್ಥಳೀಯ ರೈತರಿಗೆ ನಷ್ಟವುಂಟು ಮಾಡುತ್ತಿದೆ.

PC : The Hindu, (ಶಿವರಾಮ ಹೆಬ್ಬಾರ್)

ಸ್ಥಳೀಯ ಕಬ್ಬು ಕಟಾವುದಾರರಿಗೆ (ತೋಡ್ನಿ) ಅವಕಾಶ ಕೊಡದೆ, ಪ್ಯಾರಿ ಆಡಳಿತಗಾರರು ಮಹಾರಾಷ್ಟ್ರದ ಬೀಡ, ಸತಾರ ಮತ್ತು ರಾಜ್ಯದ ಬಳ್ಳಾರಿ ಕಡೆಯಿಂದ ಕೂಲಿಗಳನ್ನು ಕರೆಸಿಕೊಳ್ಳುತ್ತಿದೆ. ಇದರ ಬಗ್ಗೆ ಪ್ರಶ್ನಿಸಿದರೆ “ನೀವ್ಯಾರು ಕೇಳೋದಕ್ಕೆ. ಫ್ಯಾಕ್ಟರಿ ನಮ್ದು. ನಮ್ಮ ಖುಷಿ” ಎಂಬ ಅಧಿಕ ಪ್ರಸಂಗದ ಉತ್ತರ! ತಾಲ್ಲೂಕಿನ ರೈತರ ಕಬ್ಬು ಸಾಗಿಸುವ ವಾಹನಗಳಿಗೆ ದಿನದಲ್ಲಷ್ಟೇ ಫ್ಯಾಕ್ಟರಿ ಪ್ರವೇಶಕ್ಕೆ ಅವಕಾಶ ಕೊಡಲಾಗುತ್ತಿದೆ. ಇದರಿಂದ ಹಳಿಯಾಳ ಪಟ್ಟಣದಲ್ಲಿ ಹಾದುಹೋಗುವ ರಾಜ್ಯ ಹೆದ್ದಾರಿಯಲ್ಲಿ ಪ್ರತಿ ದಿನ ಕಬ್ಬು ತುಂಬಿದ ವಾಹನಗಳು ಸಾಲುಗಟ್ಟಿ ಪ್ಯಾರಿ ಪ್ರವೇಶಕ್ಕೆ ಕಾದು ನಿಲ್ಲುವಂತಾಗಿದೆ. ಈ ಎಡವಟ್ಟಿನಿಂದ ಹಳಿಯಾಳದಲ್ಲಿ ಸಂಚಾರ ಸಮಸ್ಯೆ ಬಿಗಡಾಯಿಸಿದೆ. ಪ್ಯಾರಿಯಿಂದ ಪರಿಸರ ಮಾಲಿನ್ಯವೂ ನಿರಂತರವಾಗಿ ಆಗುತ್ತಿದೆ. ಕಾರ್ಖಾನೆಯಿಂದ ಹೊರಬರುವ ಅಪಾಯಕಾರಿ ಹೊಗೆಯಿಂದ ವಾಯುಮಾಲಿನ್ಯ ಉಂಟಾಗಿ ಹಳಿಯಾಳ ಸುತ್ತಲಿನ ಹಲವು ಹಳ್ಳಿಗಳ ಆರೋಗ್ಯ ಹಾಳಾಗುತ್ತಿದೆ. ಫ್ಯಾಕ್ಟರಿಯ ಸಾಮಾಜಿಕ ಹೊಣೆಗಾರಿಕಾ ನಿಧಿಯನ್ನು ತಾಲ್ಲೂಕಿನ ಮೂಲಸೌಕರ್ಯ ಅಭಿವೃದ್ಧಿ ಪರಿಸರ ನಿರ್ವಹಣೆಗೆಗೂ ಬಳಸದ ಪ್ಯಾರಿ ಆಡಳಿತಗಾರರು ಸ್ಥಳೀಯರಿಗೆ ಉದ್ಯೋಗವನ್ನೂ ಕೊಡುತ್ತಿಲ್ಲ ಎಂಬ ಆರೋಪ ಇದೆ.

ಪ್ಯಾರಿ ಕಂಪನಿಯಿಂದ ಎದುರಾಗಿರುವ ಸಂಕಷ್ಟದ ಬಗ್ಗೆ ಮೊನ್ನೆಮೊನ್ನೆವರೆಗೂ ಸಕ್ಕರೆ ಸಚಿವರಾಗಿದ್ದ ಹಳಿಯಾಳದ ಪಕ್ಕದ ಕ್ಷೇತ್ರ ಶಾಸಕರೂ ಆಗಿರುವ ಶಿವರಾಮ ಹೆಬ್ಬಾರ್‌ಗೆ ರೈತರು ದೂರಿದ್ದರು. ಹೆಬ್ಬಾರ್ ಅದ್ಯಾಕೋ ಇದೆಲ್ಲ ತನಗೆ ಸಂಬಂಧಿಸಿದ್ದಲ್ಲ ಎಂಬಂತೆ ಸಾರಾಸಗಟಾಗಿ ಕಡೆಗಣಿಸಿ ಕೂತಿದ್ದರು! ನ್ಯಾಯಕ್ಕಾಗಿ ಹೋರಾಟ ಪ್ರತಿಭಟನೆ ವರ್ಷಾನುಗಟ್ಟಲೆಯಿಂದ ಮುಂದುವರೆಸುತ್ತಲೇ ಇರುವ ಕಬ್ಬು ಬೆಳೆಗಾರರು ಸಹನೆಗೆಡುವ ಮೊದಲೇ ಸಂಬಂಧಿಸಿದವರು ಎಚ್ಚತ್ತುಕೊಳ್ಳಬೇಕಿದೆ. ಅಭೂತಪೂರ್ವ ಚಳವಳಿಯಿಂದ ಸಕ್ಕರೆ ಕಾರ್ಖಾನೆ ಪಡೆದಿದ್ದ ಹಳಿಯಾಳದ ರೈತರಿಗೆ ಅದೇ ಕಾರ್ಖಾನೆ ನೆಮ್ಮದಿಗೆಡಿಸಿರುವುದು ದುರಂತ!


ಇದನ್ನೂ ಓದಿ: ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...