Homeಕರ್ನಾಟಕಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

- Advertisement -
- Advertisement -

Tಹಳಿಯಾಳದ ಸಕ್ಕರೆ ಕಾರ್ಖಾನೆ ತಮ್ಮ ಭಾಗ್ಯದ ಬಾಗಿಲನ್ನೇ ತೆರೆಯಲಿದೆಯೆಂದು ಸ್ಥಳೀಯ ಕಬ್ಬು ಬೆಳೆಗಾರರು ಕನಸು ಕಂಡಿದ್ದರು. ಆದರೆ ಹಳಿಯಾಳ, ದಾಂಡೇಲಿ, ಮುಂಡಗೋಡ ಸೀಮೆಯಲ್ಲಿ ಕಬ್ಬು ಬೆಳೆಯುವ ರೈತರ ಪಾಲಿಗೆ ಈ ಸಕ್ಕರೆ ಕಾರ್ಖಾನೆ ಘೋರ ಶಾಪವಾಗಿ ಈಗ ಪರಿಣಮಿಸಿದೆ! ಒಂದು ದಶಕದ ಹಿಂದೆ ಹಳಿಯಾಳದಲ್ಲಿ ಶುರುವಾದ ಸಕ್ಕರೆ ಕಾರ್ಖಾನೆಯ ಹಿಂದೆ ರೈತರ ಬಹುದೊಡ್ಡ ಹೋರಾಟದ ಇತಿಹಾಸವೇ ಇದೆ. ಸಹಕಾರ ತತ್ವದ ಒಂದು ಸಕ್ಕರೆ ಕಾರ್ಖಾನೆ ತಮ್ಮೂರಲ್ಲಿ ಸ್ಥಾಪನೆ ಆಗಬೇಕೆಂಬುದು ರೈತರ ಬೇಡಿಕೆಯಾಗಿತ್ತು. ಆದರೆ ದೀರ್ಘ ಕಾಲದಿಂದ ಹಳಿಯಾಳವನ್ನು ಆಳುತ್ತಿದ್ದ ಬಲಾಢ್ಯ ರಾಜಕಾರಣಿಯ ತಂಡಕ್ಕದು ಬೇಡವಾಗಿತ್ತು. ಸಹಕಾರಿ ರಂಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭವಾದರೆ ರೈತರು ರಾಜಕೀಯ ಮತ್ತು ಆರ್ಥಿಕವಾಗಿ ಸಬಲರಾಗಿ ತಮ್ಮ ಮಂಕು ಬೂದಿ ರಾಜಕಾರಣಕ್ಕೆ ಸವಾಲಾಗುತ್ತಾರೆಂಬ ದೂ(ದು)ರಾಲೋಚನೆ ಪಟ್ಟಭದ್ರರದಾಗಿತ್ತು.

PC : Public TV, (ಆರ್.ವಿ ದೇಶಪಾಂಡೆ)

ಚುನಾವಣೆ ಎದುರಾದಾಗ ಸ್ಥಳೀಯ ಶಾಸಕ ಕಮ್ ರಾಜ್ಯದ ಪ್ರಭಾವಿ ರಾಜಕಾರಣಿ ಪಟು ಆರ್.ವಿ ದೇಶಪಾಂಡೆ ಸಕ್ಕರೆ ಕಾರ್ಖಾನೆ ತೆರೆಯುವ ಮಾತಾಡುತ್ತಿದ್ದರು; ಫ್ಯಾಕ್ಟರಿಗೆ ಅಡಿಗಲ್ಲನ್ನು ಯಾವ್ಯಾವುದೋ ಸ್ವಾಮಿ ಮುಖಂಡರ ಕರೆತಂದು ಹಾಕಿಸುತ್ತಿದ್ದರು. ಎಲೆಕ್ಷನ್ ಮುಗಿದ ಮೇಲೆ ಸಕ್ಕರೆ ಕಾರ್ಖಾನೆ ಕೆಲಸ ಕಾಮಗಾರಿ ಮುಂದಕ್ಕೆ ಹೋಗುತ್ತಿರಲಿಲ್ಲ! ಈ ನಾಟಕದ ಹಿಂದಿನ ಹಿಕಮತ್ತು ರೈತರಿಗೆ ಅರ್ಥವಾದಾಗ ರೋಚಕ ಹೋರಾಟ ಚಳವಳಿಗಳೇ ಆಗಿಹೋದವು. ಅನಿವಾರ್ಯವಾಗಿ ಹಳಿಯಾಳದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಬೇಕಾಗಿ ಬಂತು. ಆದರದು ರೈತರ ಇಚ್ಛೆಯ ಸಹಕಾರಿ ಕಾರ್ಖಾನೆ ಆಗಿರಲಿಲ್ಲ ಬದಲಿಗೆ ಬಂಡವಾಳಶಾಹಿಗಳ ಖಾಸಗಿ ಫ್ಯಾಕ್ಟರಿಯಾಗಿತ್ತು. ಜೆಎಂಆರ್ ಗ್ರೂಪ್ ಹುಲ್ಲಟ್ಟಿ ಗ್ರಾಮದಲ್ಲಿ ಬರೋಬ್ಬರಿ 250 ಎಕರೆ ಭೂಮಿಯನ್ನು 60 ರೈತರಿಂದ ತೀರಾ ಅಗ್ಗಕ್ಕೆ ಖರೀದಿಸಿ ಕಾರ್ಖಾನೆ ನಿರ್ಮಿಸಿತ್ತು.

ಅಂದು ಬಲಾಢ್ಯ ಬೃಹತ್ ಕೈಗಾರಿಕಾ ಮಂತ್ರಿಯಾಗಿದ್ದ ದೇಶಪಾಂಡೆ ಬಂಡವಾಳಶಾಹಿಗಳಿಗೆ ಅನುಕೂಲವಾಗುವಂತೆ ನೋಡಿಕೊಂಡಿದ್ದರೆಂಬ ಪುಕಾರು ಇವತ್ತಿಗೂ ರೈತ ಸಮುದಾಯದಲ್ಲಿದೆ. ಬಡ ರೈತರಿಂದ ದುಗ್ಗಾಣಿ ಕಾಸಿಗೆ ಅಮೂಲ್ಯ ಜಾಗವನ್ನು ಜೆಎಂಆರ್ ಕಂಪನಿಗೆ ಕೊಡಿಸಿದ್ದ ರಾಜಕಾರಣಿ ತಾವೂ ಸಕ್ಕರೆ ಕಾರ್ಖಾನೆಯ ರಹಸ್ಯ ಪಾಲುದಾರಿಕೆ ಪಡೆದುಕೊಂಡಿದ್ದರು! ಭೂಮಿ ಕೊಟ್ಟ ರೈತ ಪರಿವಾರಕ್ಕೆ ಕಾರ್ಖಾನೆಯಲ್ಲಿ ನೌಕರಿ ಕೊಡಿಸುವ ಆಸೆಯೂ ತೋರಿಸಲಾಗಿತ್ತು. ಅದು ಇವತ್ತಿಗೂ ಈಡೇರಿಲ್ಲ! ಈ ಒಳ ಮಸಲತ್ತುಗಳೇನೇ ಇರಲಿ, ಸ್ಥಳೀಯ ಕಬ್ಬು ಬೆಳೆಗಾರರು ಮಾತ್ರ ಕಾರ್ಖಾನೆಯಿಂದ ತಮ್ಮ ಕಷ್ಟ ಕರಗಬಹುದೆಂದೇ ನಂಬಿಕೊಂಡಿದ್ದರು. ಆರಂಭದಲ್ಲಿ ಜೆಎಂಆರ್ ಕಂಪನಿಯೂ ರೈತರಿಗೆ ಅನುಕೂಲಕರವಾದ ಒಂದಿಷ್ಟು ಕಾರ್ಯಕ್ರಮ ಹಾಕಿಕೊಂಡಿತ್ತು.

ಆದರೆ ಬರಬರುತ್ತ ಜೆಎಂಆರ್ ಕಂಪನಿ ಕಾರ್ಖಾನೆ ನಡೆಸುವ ಆಸಕ್ತಿ ಕಳೆದುಕೊಂಡಿತ್ತು. ಸ್ಥಳೀಯ ಪ್ರಚಂಡ ಪುಢಾರಿಗಳು ಕಾರ್ಖಾನೆ ಆಡಳಿತದಲ್ಲಿ ಕೈಯ್ಯಾಡಿಸುತ್ತಿದ್ದುದು ಜೆಎಂಆರ್ ಕಂಪನಿಯವರಲ್ಲಿ ಜಿಗುಪ್ಸೆ ಮೂಡಿಸಿತ್ತು. ಬಚಾವಾಗಲು ಜೆಎಂಆರ್ ಪಾಲುದಾರ ಕಂಪನಿಗಾಗಿ ಹುಡುಕಾಡತೊಡಗಿತು. ಈ ಐಡಿ ಪ್ಯಾರಿ ಶುಗರ್ ಲಿಮಿಟೆಡ್ ಪಾಲುದಾರಿಕೆಗೆ ಸೇರಿಕೊಂಡಿತು. ಕೊನೆಗೊಂದು ದಿನ ಜೆಎಂಆರ್ ಕಂಪನಿಯವರು ಪ್ಯಾರಿ ಶುಗರ್ಸ್‌ಗೆ ಕಾರ್ಖಾನೆ ಮಾರಾಟಮಾಡಿ ಹೋದರು! ಆಗ ಆರಂಭವಾದ ರೈತರ ಗೋಳು ಇನ್ನೂ ಮುಗಿದಿಲ್ಲ. ಪ್ಯಾರಿ ಕಂಪನಿಯವರದು ಪಕ್ಕಾ ಲಾಭಬಡುಕ ನೀತಿ-ನಿಯಮ! ರೈತರನ್ನು ಶೋಷಿಸುವುದು ಮತ್ತು ವಂಚಿಸುವುದು ನಡೆಯುತ್ತಲೇ ಇದೆ ಎಂಬ ಆರೋಪಗಳಿಗೆ ಕೊನೆಯೇ ಇಲ್ಲ. ಪ್ಯಾರಿ ಕಂಪನಿಯ ಕರಾಮತ್ತಿನ ಆಡಳಿತದಿಂದ ರೋಸತ್ತು ಹೋಗಿರುವ ರೈತರು ಆರೋಪಿಸುತ್ತಲೇ ಹೇಳುತ್ತಿದ್ದಾರೆ.

ದುರಂತ ಎಂದರೆ, ಸುದೀರ್ಘ ಕಾಲದ ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆ, ಎಂಎಲ್‌ಸಿ ಎಸ್.ಎಲ್ ಘೋಟನೇಕರ್ ಮತ್ತು ಮಾಜಿ ಶಾಸಕ ಬಿಜೆಪಿಯ ಸುನಿಲ್ ಹೆಗಡೆಯಂಥ ಘಟಾನುಘಟಿಗಳು ರೈತರ ನೋವಿಗೆ ಸ್ಪಂದಿಸುತ್ತಿಲ್ಲ. ರೈತರು ತಮಗಾಗುತ್ತಿರುವ ಅನ್ಯಾಯ ಪ್ರತಿಭಟಿಸಿ ಬಂದ್, ರ್‍ಯಾಲಿ, ಸಭೆ, ಹೋರಾಟ ನಡೆಸುತ್ತಿದ್ದರೂ ಇವರ್‍ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕಾಟಾಚಾರಕ್ಕೆ ರೈತ ಪರ ಪೋಸು ಕೊಡುತ್ತಾರೆಯೇ ಹೊರತು ಪ್ಯಾರಿ ಶುಗರ್ಸ್ ಸರದಾರರಿಗೆ ಮೂಗುದಾರ ಹಾಕಲು ಯೋಚಿಸುತ್ತಿಲ್ಲ. ಸಕ್ಕರೆ ಧಣಿಗಳು ಎಲೆಕ್ಷನ್ ಫಂಡ್ ಪುಷ್ಕಳವಾಗಿ ಕೊಡುವುದೇ ಇದಕ್ಕೆಲ್ಲ ಕಾರಣವೆಂಬ ವಾದವೂ ಬಲವಾಗಿದೆ. ಬೇಡಿಕೆ ಈಡೇರಿಕೆಗೆ ರೈತರು ಸೊಲ್ಲೆತ್ತಿದ್ದರೆ ಕ್ರಿಮಿನಲ್ ಕೇಸ್ ಹಾಕಿ ಹಣಿಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ! ಕಷ್ಟ-ನಷ್ಟಕ್ಕೆ ಎದೆಯೊಡ್ಡಿ ರೈತರು ಹೋರಾಡುತ್ತಲೇ ಇದ್ದಾರೆ.

ಪ್ಯಾರಿ ಶುಗರ್ಸ್‌ನ ಪ್ರತಿ ನೀತಿ ನಿಯಮವೂ ಕಬ್ಬು ಬೆಳೆಗಾರರಿಗೆ ಕಂಟಕಕಾರಿಯಾಗಿದೆ. 2017ರಿಂದ ರೈತರಿಗೆ ಪ್ಯಾರಿಯವರು 20 ಕೋಟಿಯಷ್ಟು ಪ್ರೋತ್ಸಾಹಧನ ಕೊಡದೆ ಕಾಡುತ್ತಿದ್ದಾರೆ! ಪ್ರತಿ ವರ್ಷ ಕಬ್ಬು ನುರಿಯುವ ಹಂಗಾಮಿನ ಶುರುವಿನಲ್ಲಿ ಕಬ್ಬಿಗೆ ಬೆಲೆ ಕಾರ್ಖಾನೆಯವರು ನಿರ್ಧರಿಸಬೇಕೆಂಬ ಕಟ್ಟು ನಿಟ್ಟಿನ ನಿಯಮವಿದೆ. ಆದರೆ ಪ್ಯಾರಿ ಆಡಳಿತಗಾರರು ಬೇಕಂತಲೇ ಕಬ್ಬಿನ ಬೆಲೆ ನಿಗದಿಸದೇ ರೈತರಿಗೆ ಮೋಸ ಮಾಡಲು ಹವಣಿಸುತ್ತಾರೆ. ರಾಜ್ಯದ ಬೇರೆ ಬೇರೆ ಸಕ್ಕರೆ ಫ್ಯಾಕ್ಟರಿಯವರು ಪ್ರತಿ ಟನ್ ಕಬ್ಬಿಗೆ ಕಟ್ಟುವ ದರಕ್ಕೆ ಹೋಲಿಸಿದರೆ ಪ್ಯಾರಿಯವರದ್ದು ತೀರಾ ಕಮ್ಮಿ. ಮೊದಲ ಆದ್ಯತೆಯ ಮೇರೆಗೆ ಸ್ಥಳೀಯರ ಕಬ್ಬನ್ನು ಪ್ಯಾರಿ ಕೊಳ್ಳಬೇಕೆಂಬುದು ಕರಾರಿನ ಷರತ್ತು. ಆದರೆ ಪ್ಯಾರಿ ಸ್ಥಳೀಯ ರೈತರಿಗೆ ವಂಚನೆ ಮಾಡಿ ಪಕ್ಕದ ಧಾರವಾಡ, ಕಲಘಟಗಿ, ಅಳ್ನಾವರ, ಖಾನಾಪುರ ಮತ್ತು ಬೈಲಹೊಂಗಲದಿಂದ ಕಬ್ಬನ್ನು ಪ್ರಥಮ ಆದ್ಯತೆಯಲ್ಲಿ ತರಿಸಿಕೊಳ್ಳುತ್ತಿದೆ. ಹಳಿಯಾಳ ಸುತ್ತಮುತ್ತಲಿನಲ್ಲಿ ಸಾಕಷ್ಟು ಕಬ್ಬು ಇಳುವರಿ ಇದ್ದರೂ ಬೇರೆಡೆಯಿಂದ ಕಬ್ಬು ಖರೀದಿಸಿ ಸ್ಥಳೀಯ ರೈತರಿಗೆ ನಷ್ಟವುಂಟು ಮಾಡುತ್ತಿದೆ.

PC : The Hindu, (ಶಿವರಾಮ ಹೆಬ್ಬಾರ್)

ಸ್ಥಳೀಯ ಕಬ್ಬು ಕಟಾವುದಾರರಿಗೆ (ತೋಡ್ನಿ) ಅವಕಾಶ ಕೊಡದೆ, ಪ್ಯಾರಿ ಆಡಳಿತಗಾರರು ಮಹಾರಾಷ್ಟ್ರದ ಬೀಡ, ಸತಾರ ಮತ್ತು ರಾಜ್ಯದ ಬಳ್ಳಾರಿ ಕಡೆಯಿಂದ ಕೂಲಿಗಳನ್ನು ಕರೆಸಿಕೊಳ್ಳುತ್ತಿದೆ. ಇದರ ಬಗ್ಗೆ ಪ್ರಶ್ನಿಸಿದರೆ “ನೀವ್ಯಾರು ಕೇಳೋದಕ್ಕೆ. ಫ್ಯಾಕ್ಟರಿ ನಮ್ದು. ನಮ್ಮ ಖುಷಿ” ಎಂಬ ಅಧಿಕ ಪ್ರಸಂಗದ ಉತ್ತರ! ತಾಲ್ಲೂಕಿನ ರೈತರ ಕಬ್ಬು ಸಾಗಿಸುವ ವಾಹನಗಳಿಗೆ ದಿನದಲ್ಲಷ್ಟೇ ಫ್ಯಾಕ್ಟರಿ ಪ್ರವೇಶಕ್ಕೆ ಅವಕಾಶ ಕೊಡಲಾಗುತ್ತಿದೆ. ಇದರಿಂದ ಹಳಿಯಾಳ ಪಟ್ಟಣದಲ್ಲಿ ಹಾದುಹೋಗುವ ರಾಜ್ಯ ಹೆದ್ದಾರಿಯಲ್ಲಿ ಪ್ರತಿ ದಿನ ಕಬ್ಬು ತುಂಬಿದ ವಾಹನಗಳು ಸಾಲುಗಟ್ಟಿ ಪ್ಯಾರಿ ಪ್ರವೇಶಕ್ಕೆ ಕಾದು ನಿಲ್ಲುವಂತಾಗಿದೆ. ಈ ಎಡವಟ್ಟಿನಿಂದ ಹಳಿಯಾಳದಲ್ಲಿ ಸಂಚಾರ ಸಮಸ್ಯೆ ಬಿಗಡಾಯಿಸಿದೆ. ಪ್ಯಾರಿಯಿಂದ ಪರಿಸರ ಮಾಲಿನ್ಯವೂ ನಿರಂತರವಾಗಿ ಆಗುತ್ತಿದೆ. ಕಾರ್ಖಾನೆಯಿಂದ ಹೊರಬರುವ ಅಪಾಯಕಾರಿ ಹೊಗೆಯಿಂದ ವಾಯುಮಾಲಿನ್ಯ ಉಂಟಾಗಿ ಹಳಿಯಾಳ ಸುತ್ತಲಿನ ಹಲವು ಹಳ್ಳಿಗಳ ಆರೋಗ್ಯ ಹಾಳಾಗುತ್ತಿದೆ. ಫ್ಯಾಕ್ಟರಿಯ ಸಾಮಾಜಿಕ ಹೊಣೆಗಾರಿಕಾ ನಿಧಿಯನ್ನು ತಾಲ್ಲೂಕಿನ ಮೂಲಸೌಕರ್ಯ ಅಭಿವೃದ್ಧಿ ಪರಿಸರ ನಿರ್ವಹಣೆಗೆಗೂ ಬಳಸದ ಪ್ಯಾರಿ ಆಡಳಿತಗಾರರು ಸ್ಥಳೀಯರಿಗೆ ಉದ್ಯೋಗವನ್ನೂ ಕೊಡುತ್ತಿಲ್ಲ ಎಂಬ ಆರೋಪ ಇದೆ.

ಪ್ಯಾರಿ ಕಂಪನಿಯಿಂದ ಎದುರಾಗಿರುವ ಸಂಕಷ್ಟದ ಬಗ್ಗೆ ಮೊನ್ನೆಮೊನ್ನೆವರೆಗೂ ಸಕ್ಕರೆ ಸಚಿವರಾಗಿದ್ದ ಹಳಿಯಾಳದ ಪಕ್ಕದ ಕ್ಷೇತ್ರ ಶಾಸಕರೂ ಆಗಿರುವ ಶಿವರಾಮ ಹೆಬ್ಬಾರ್‌ಗೆ ರೈತರು ದೂರಿದ್ದರು. ಹೆಬ್ಬಾರ್ ಅದ್ಯಾಕೋ ಇದೆಲ್ಲ ತನಗೆ ಸಂಬಂಧಿಸಿದ್ದಲ್ಲ ಎಂಬಂತೆ ಸಾರಾಸಗಟಾಗಿ ಕಡೆಗಣಿಸಿ ಕೂತಿದ್ದರು! ನ್ಯಾಯಕ್ಕಾಗಿ ಹೋರಾಟ ಪ್ರತಿಭಟನೆ ವರ್ಷಾನುಗಟ್ಟಲೆಯಿಂದ ಮುಂದುವರೆಸುತ್ತಲೇ ಇರುವ ಕಬ್ಬು ಬೆಳೆಗಾರರು ಸಹನೆಗೆಡುವ ಮೊದಲೇ ಸಂಬಂಧಿಸಿದವರು ಎಚ್ಚತ್ತುಕೊಳ್ಳಬೇಕಿದೆ. ಅಭೂತಪೂರ್ವ ಚಳವಳಿಯಿಂದ ಸಕ್ಕರೆ ಕಾರ್ಖಾನೆ ಪಡೆದಿದ್ದ ಹಳಿಯಾಳದ ರೈತರಿಗೆ ಅದೇ ಕಾರ್ಖಾನೆ ನೆಮ್ಮದಿಗೆಡಿಸಿರುವುದು ದುರಂತ!


ಇದನ್ನೂ ಓದಿ: ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....