Homeಕರ್ನಾಟಕಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

- Advertisement -
- Advertisement -

Tಹಳಿಯಾಳದ ಸಕ್ಕರೆ ಕಾರ್ಖಾನೆ ತಮ್ಮ ಭಾಗ್ಯದ ಬಾಗಿಲನ್ನೇ ತೆರೆಯಲಿದೆಯೆಂದು ಸ್ಥಳೀಯ ಕಬ್ಬು ಬೆಳೆಗಾರರು ಕನಸು ಕಂಡಿದ್ದರು. ಆದರೆ ಹಳಿಯಾಳ, ದಾಂಡೇಲಿ, ಮುಂಡಗೋಡ ಸೀಮೆಯಲ್ಲಿ ಕಬ್ಬು ಬೆಳೆಯುವ ರೈತರ ಪಾಲಿಗೆ ಈ ಸಕ್ಕರೆ ಕಾರ್ಖಾನೆ ಘೋರ ಶಾಪವಾಗಿ ಈಗ ಪರಿಣಮಿಸಿದೆ! ಒಂದು ದಶಕದ ಹಿಂದೆ ಹಳಿಯಾಳದಲ್ಲಿ ಶುರುವಾದ ಸಕ್ಕರೆ ಕಾರ್ಖಾನೆಯ ಹಿಂದೆ ರೈತರ ಬಹುದೊಡ್ಡ ಹೋರಾಟದ ಇತಿಹಾಸವೇ ಇದೆ. ಸಹಕಾರ ತತ್ವದ ಒಂದು ಸಕ್ಕರೆ ಕಾರ್ಖಾನೆ ತಮ್ಮೂರಲ್ಲಿ ಸ್ಥಾಪನೆ ಆಗಬೇಕೆಂಬುದು ರೈತರ ಬೇಡಿಕೆಯಾಗಿತ್ತು. ಆದರೆ ದೀರ್ಘ ಕಾಲದಿಂದ ಹಳಿಯಾಳವನ್ನು ಆಳುತ್ತಿದ್ದ ಬಲಾಢ್ಯ ರಾಜಕಾರಣಿಯ ತಂಡಕ್ಕದು ಬೇಡವಾಗಿತ್ತು. ಸಹಕಾರಿ ರಂಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭವಾದರೆ ರೈತರು ರಾಜಕೀಯ ಮತ್ತು ಆರ್ಥಿಕವಾಗಿ ಸಬಲರಾಗಿ ತಮ್ಮ ಮಂಕು ಬೂದಿ ರಾಜಕಾರಣಕ್ಕೆ ಸವಾಲಾಗುತ್ತಾರೆಂಬ ದೂ(ದು)ರಾಲೋಚನೆ ಪಟ್ಟಭದ್ರರದಾಗಿತ್ತು.

PC : Public TV, (ಆರ್.ವಿ ದೇಶಪಾಂಡೆ)

ಚುನಾವಣೆ ಎದುರಾದಾಗ ಸ್ಥಳೀಯ ಶಾಸಕ ಕಮ್ ರಾಜ್ಯದ ಪ್ರಭಾವಿ ರಾಜಕಾರಣಿ ಪಟು ಆರ್.ವಿ ದೇಶಪಾಂಡೆ ಸಕ್ಕರೆ ಕಾರ್ಖಾನೆ ತೆರೆಯುವ ಮಾತಾಡುತ್ತಿದ್ದರು; ಫ್ಯಾಕ್ಟರಿಗೆ ಅಡಿಗಲ್ಲನ್ನು ಯಾವ್ಯಾವುದೋ ಸ್ವಾಮಿ ಮುಖಂಡರ ಕರೆತಂದು ಹಾಕಿಸುತ್ತಿದ್ದರು. ಎಲೆಕ್ಷನ್ ಮುಗಿದ ಮೇಲೆ ಸಕ್ಕರೆ ಕಾರ್ಖಾನೆ ಕೆಲಸ ಕಾಮಗಾರಿ ಮುಂದಕ್ಕೆ ಹೋಗುತ್ತಿರಲಿಲ್ಲ! ಈ ನಾಟಕದ ಹಿಂದಿನ ಹಿಕಮತ್ತು ರೈತರಿಗೆ ಅರ್ಥವಾದಾಗ ರೋಚಕ ಹೋರಾಟ ಚಳವಳಿಗಳೇ ಆಗಿಹೋದವು. ಅನಿವಾರ್ಯವಾಗಿ ಹಳಿಯಾಳದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಬೇಕಾಗಿ ಬಂತು. ಆದರದು ರೈತರ ಇಚ್ಛೆಯ ಸಹಕಾರಿ ಕಾರ್ಖಾನೆ ಆಗಿರಲಿಲ್ಲ ಬದಲಿಗೆ ಬಂಡವಾಳಶಾಹಿಗಳ ಖಾಸಗಿ ಫ್ಯಾಕ್ಟರಿಯಾಗಿತ್ತು. ಜೆಎಂಆರ್ ಗ್ರೂಪ್ ಹುಲ್ಲಟ್ಟಿ ಗ್ರಾಮದಲ್ಲಿ ಬರೋಬ್ಬರಿ 250 ಎಕರೆ ಭೂಮಿಯನ್ನು 60 ರೈತರಿಂದ ತೀರಾ ಅಗ್ಗಕ್ಕೆ ಖರೀದಿಸಿ ಕಾರ್ಖಾನೆ ನಿರ್ಮಿಸಿತ್ತು.

ಅಂದು ಬಲಾಢ್ಯ ಬೃಹತ್ ಕೈಗಾರಿಕಾ ಮಂತ್ರಿಯಾಗಿದ್ದ ದೇಶಪಾಂಡೆ ಬಂಡವಾಳಶಾಹಿಗಳಿಗೆ ಅನುಕೂಲವಾಗುವಂತೆ ನೋಡಿಕೊಂಡಿದ್ದರೆಂಬ ಪುಕಾರು ಇವತ್ತಿಗೂ ರೈತ ಸಮುದಾಯದಲ್ಲಿದೆ. ಬಡ ರೈತರಿಂದ ದುಗ್ಗಾಣಿ ಕಾಸಿಗೆ ಅಮೂಲ್ಯ ಜಾಗವನ್ನು ಜೆಎಂಆರ್ ಕಂಪನಿಗೆ ಕೊಡಿಸಿದ್ದ ರಾಜಕಾರಣಿ ತಾವೂ ಸಕ್ಕರೆ ಕಾರ್ಖಾನೆಯ ರಹಸ್ಯ ಪಾಲುದಾರಿಕೆ ಪಡೆದುಕೊಂಡಿದ್ದರು! ಭೂಮಿ ಕೊಟ್ಟ ರೈತ ಪರಿವಾರಕ್ಕೆ ಕಾರ್ಖಾನೆಯಲ್ಲಿ ನೌಕರಿ ಕೊಡಿಸುವ ಆಸೆಯೂ ತೋರಿಸಲಾಗಿತ್ತು. ಅದು ಇವತ್ತಿಗೂ ಈಡೇರಿಲ್ಲ! ಈ ಒಳ ಮಸಲತ್ತುಗಳೇನೇ ಇರಲಿ, ಸ್ಥಳೀಯ ಕಬ್ಬು ಬೆಳೆಗಾರರು ಮಾತ್ರ ಕಾರ್ಖಾನೆಯಿಂದ ತಮ್ಮ ಕಷ್ಟ ಕರಗಬಹುದೆಂದೇ ನಂಬಿಕೊಂಡಿದ್ದರು. ಆರಂಭದಲ್ಲಿ ಜೆಎಂಆರ್ ಕಂಪನಿಯೂ ರೈತರಿಗೆ ಅನುಕೂಲಕರವಾದ ಒಂದಿಷ್ಟು ಕಾರ್ಯಕ್ರಮ ಹಾಕಿಕೊಂಡಿತ್ತು.

ಆದರೆ ಬರಬರುತ್ತ ಜೆಎಂಆರ್ ಕಂಪನಿ ಕಾರ್ಖಾನೆ ನಡೆಸುವ ಆಸಕ್ತಿ ಕಳೆದುಕೊಂಡಿತ್ತು. ಸ್ಥಳೀಯ ಪ್ರಚಂಡ ಪುಢಾರಿಗಳು ಕಾರ್ಖಾನೆ ಆಡಳಿತದಲ್ಲಿ ಕೈಯ್ಯಾಡಿಸುತ್ತಿದ್ದುದು ಜೆಎಂಆರ್ ಕಂಪನಿಯವರಲ್ಲಿ ಜಿಗುಪ್ಸೆ ಮೂಡಿಸಿತ್ತು. ಬಚಾವಾಗಲು ಜೆಎಂಆರ್ ಪಾಲುದಾರ ಕಂಪನಿಗಾಗಿ ಹುಡುಕಾಡತೊಡಗಿತು. ಈ ಐಡಿ ಪ್ಯಾರಿ ಶುಗರ್ ಲಿಮಿಟೆಡ್ ಪಾಲುದಾರಿಕೆಗೆ ಸೇರಿಕೊಂಡಿತು. ಕೊನೆಗೊಂದು ದಿನ ಜೆಎಂಆರ್ ಕಂಪನಿಯವರು ಪ್ಯಾರಿ ಶುಗರ್ಸ್‌ಗೆ ಕಾರ್ಖಾನೆ ಮಾರಾಟಮಾಡಿ ಹೋದರು! ಆಗ ಆರಂಭವಾದ ರೈತರ ಗೋಳು ಇನ್ನೂ ಮುಗಿದಿಲ್ಲ. ಪ್ಯಾರಿ ಕಂಪನಿಯವರದು ಪಕ್ಕಾ ಲಾಭಬಡುಕ ನೀತಿ-ನಿಯಮ! ರೈತರನ್ನು ಶೋಷಿಸುವುದು ಮತ್ತು ವಂಚಿಸುವುದು ನಡೆಯುತ್ತಲೇ ಇದೆ ಎಂಬ ಆರೋಪಗಳಿಗೆ ಕೊನೆಯೇ ಇಲ್ಲ. ಪ್ಯಾರಿ ಕಂಪನಿಯ ಕರಾಮತ್ತಿನ ಆಡಳಿತದಿಂದ ರೋಸತ್ತು ಹೋಗಿರುವ ರೈತರು ಆರೋಪಿಸುತ್ತಲೇ ಹೇಳುತ್ತಿದ್ದಾರೆ.

ದುರಂತ ಎಂದರೆ, ಸುದೀರ್ಘ ಕಾಲದ ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆ, ಎಂಎಲ್‌ಸಿ ಎಸ್.ಎಲ್ ಘೋಟನೇಕರ್ ಮತ್ತು ಮಾಜಿ ಶಾಸಕ ಬಿಜೆಪಿಯ ಸುನಿಲ್ ಹೆಗಡೆಯಂಥ ಘಟಾನುಘಟಿಗಳು ರೈತರ ನೋವಿಗೆ ಸ್ಪಂದಿಸುತ್ತಿಲ್ಲ. ರೈತರು ತಮಗಾಗುತ್ತಿರುವ ಅನ್ಯಾಯ ಪ್ರತಿಭಟಿಸಿ ಬಂದ್, ರ್‍ಯಾಲಿ, ಸಭೆ, ಹೋರಾಟ ನಡೆಸುತ್ತಿದ್ದರೂ ಇವರ್‍ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕಾಟಾಚಾರಕ್ಕೆ ರೈತ ಪರ ಪೋಸು ಕೊಡುತ್ತಾರೆಯೇ ಹೊರತು ಪ್ಯಾರಿ ಶುಗರ್ಸ್ ಸರದಾರರಿಗೆ ಮೂಗುದಾರ ಹಾಕಲು ಯೋಚಿಸುತ್ತಿಲ್ಲ. ಸಕ್ಕರೆ ಧಣಿಗಳು ಎಲೆಕ್ಷನ್ ಫಂಡ್ ಪುಷ್ಕಳವಾಗಿ ಕೊಡುವುದೇ ಇದಕ್ಕೆಲ್ಲ ಕಾರಣವೆಂಬ ವಾದವೂ ಬಲವಾಗಿದೆ. ಬೇಡಿಕೆ ಈಡೇರಿಕೆಗೆ ರೈತರು ಸೊಲ್ಲೆತ್ತಿದ್ದರೆ ಕ್ರಿಮಿನಲ್ ಕೇಸ್ ಹಾಕಿ ಹಣಿಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ! ಕಷ್ಟ-ನಷ್ಟಕ್ಕೆ ಎದೆಯೊಡ್ಡಿ ರೈತರು ಹೋರಾಡುತ್ತಲೇ ಇದ್ದಾರೆ.

ಪ್ಯಾರಿ ಶುಗರ್ಸ್‌ನ ಪ್ರತಿ ನೀತಿ ನಿಯಮವೂ ಕಬ್ಬು ಬೆಳೆಗಾರರಿಗೆ ಕಂಟಕಕಾರಿಯಾಗಿದೆ. 2017ರಿಂದ ರೈತರಿಗೆ ಪ್ಯಾರಿಯವರು 20 ಕೋಟಿಯಷ್ಟು ಪ್ರೋತ್ಸಾಹಧನ ಕೊಡದೆ ಕಾಡುತ್ತಿದ್ದಾರೆ! ಪ್ರತಿ ವರ್ಷ ಕಬ್ಬು ನುರಿಯುವ ಹಂಗಾಮಿನ ಶುರುವಿನಲ್ಲಿ ಕಬ್ಬಿಗೆ ಬೆಲೆ ಕಾರ್ಖಾನೆಯವರು ನಿರ್ಧರಿಸಬೇಕೆಂಬ ಕಟ್ಟು ನಿಟ್ಟಿನ ನಿಯಮವಿದೆ. ಆದರೆ ಪ್ಯಾರಿ ಆಡಳಿತಗಾರರು ಬೇಕಂತಲೇ ಕಬ್ಬಿನ ಬೆಲೆ ನಿಗದಿಸದೇ ರೈತರಿಗೆ ಮೋಸ ಮಾಡಲು ಹವಣಿಸುತ್ತಾರೆ. ರಾಜ್ಯದ ಬೇರೆ ಬೇರೆ ಸಕ್ಕರೆ ಫ್ಯಾಕ್ಟರಿಯವರು ಪ್ರತಿ ಟನ್ ಕಬ್ಬಿಗೆ ಕಟ್ಟುವ ದರಕ್ಕೆ ಹೋಲಿಸಿದರೆ ಪ್ಯಾರಿಯವರದ್ದು ತೀರಾ ಕಮ್ಮಿ. ಮೊದಲ ಆದ್ಯತೆಯ ಮೇರೆಗೆ ಸ್ಥಳೀಯರ ಕಬ್ಬನ್ನು ಪ್ಯಾರಿ ಕೊಳ್ಳಬೇಕೆಂಬುದು ಕರಾರಿನ ಷರತ್ತು. ಆದರೆ ಪ್ಯಾರಿ ಸ್ಥಳೀಯ ರೈತರಿಗೆ ವಂಚನೆ ಮಾಡಿ ಪಕ್ಕದ ಧಾರವಾಡ, ಕಲಘಟಗಿ, ಅಳ್ನಾವರ, ಖಾನಾಪುರ ಮತ್ತು ಬೈಲಹೊಂಗಲದಿಂದ ಕಬ್ಬನ್ನು ಪ್ರಥಮ ಆದ್ಯತೆಯಲ್ಲಿ ತರಿಸಿಕೊಳ್ಳುತ್ತಿದೆ. ಹಳಿಯಾಳ ಸುತ್ತಮುತ್ತಲಿನಲ್ಲಿ ಸಾಕಷ್ಟು ಕಬ್ಬು ಇಳುವರಿ ಇದ್ದರೂ ಬೇರೆಡೆಯಿಂದ ಕಬ್ಬು ಖರೀದಿಸಿ ಸ್ಥಳೀಯ ರೈತರಿಗೆ ನಷ್ಟವುಂಟು ಮಾಡುತ್ತಿದೆ.

PC : The Hindu, (ಶಿವರಾಮ ಹೆಬ್ಬಾರ್)

ಸ್ಥಳೀಯ ಕಬ್ಬು ಕಟಾವುದಾರರಿಗೆ (ತೋಡ್ನಿ) ಅವಕಾಶ ಕೊಡದೆ, ಪ್ಯಾರಿ ಆಡಳಿತಗಾರರು ಮಹಾರಾಷ್ಟ್ರದ ಬೀಡ, ಸತಾರ ಮತ್ತು ರಾಜ್ಯದ ಬಳ್ಳಾರಿ ಕಡೆಯಿಂದ ಕೂಲಿಗಳನ್ನು ಕರೆಸಿಕೊಳ್ಳುತ್ತಿದೆ. ಇದರ ಬಗ್ಗೆ ಪ್ರಶ್ನಿಸಿದರೆ “ನೀವ್ಯಾರು ಕೇಳೋದಕ್ಕೆ. ಫ್ಯಾಕ್ಟರಿ ನಮ್ದು. ನಮ್ಮ ಖುಷಿ” ಎಂಬ ಅಧಿಕ ಪ್ರಸಂಗದ ಉತ್ತರ! ತಾಲ್ಲೂಕಿನ ರೈತರ ಕಬ್ಬು ಸಾಗಿಸುವ ವಾಹನಗಳಿಗೆ ದಿನದಲ್ಲಷ್ಟೇ ಫ್ಯಾಕ್ಟರಿ ಪ್ರವೇಶಕ್ಕೆ ಅವಕಾಶ ಕೊಡಲಾಗುತ್ತಿದೆ. ಇದರಿಂದ ಹಳಿಯಾಳ ಪಟ್ಟಣದಲ್ಲಿ ಹಾದುಹೋಗುವ ರಾಜ್ಯ ಹೆದ್ದಾರಿಯಲ್ಲಿ ಪ್ರತಿ ದಿನ ಕಬ್ಬು ತುಂಬಿದ ವಾಹನಗಳು ಸಾಲುಗಟ್ಟಿ ಪ್ಯಾರಿ ಪ್ರವೇಶಕ್ಕೆ ಕಾದು ನಿಲ್ಲುವಂತಾಗಿದೆ. ಈ ಎಡವಟ್ಟಿನಿಂದ ಹಳಿಯಾಳದಲ್ಲಿ ಸಂಚಾರ ಸಮಸ್ಯೆ ಬಿಗಡಾಯಿಸಿದೆ. ಪ್ಯಾರಿಯಿಂದ ಪರಿಸರ ಮಾಲಿನ್ಯವೂ ನಿರಂತರವಾಗಿ ಆಗುತ್ತಿದೆ. ಕಾರ್ಖಾನೆಯಿಂದ ಹೊರಬರುವ ಅಪಾಯಕಾರಿ ಹೊಗೆಯಿಂದ ವಾಯುಮಾಲಿನ್ಯ ಉಂಟಾಗಿ ಹಳಿಯಾಳ ಸುತ್ತಲಿನ ಹಲವು ಹಳ್ಳಿಗಳ ಆರೋಗ್ಯ ಹಾಳಾಗುತ್ತಿದೆ. ಫ್ಯಾಕ್ಟರಿಯ ಸಾಮಾಜಿಕ ಹೊಣೆಗಾರಿಕಾ ನಿಧಿಯನ್ನು ತಾಲ್ಲೂಕಿನ ಮೂಲಸೌಕರ್ಯ ಅಭಿವೃದ್ಧಿ ಪರಿಸರ ನಿರ್ವಹಣೆಗೆಗೂ ಬಳಸದ ಪ್ಯಾರಿ ಆಡಳಿತಗಾರರು ಸ್ಥಳೀಯರಿಗೆ ಉದ್ಯೋಗವನ್ನೂ ಕೊಡುತ್ತಿಲ್ಲ ಎಂಬ ಆರೋಪ ಇದೆ.

ಪ್ಯಾರಿ ಕಂಪನಿಯಿಂದ ಎದುರಾಗಿರುವ ಸಂಕಷ್ಟದ ಬಗ್ಗೆ ಮೊನ್ನೆಮೊನ್ನೆವರೆಗೂ ಸಕ್ಕರೆ ಸಚಿವರಾಗಿದ್ದ ಹಳಿಯಾಳದ ಪಕ್ಕದ ಕ್ಷೇತ್ರ ಶಾಸಕರೂ ಆಗಿರುವ ಶಿವರಾಮ ಹೆಬ್ಬಾರ್‌ಗೆ ರೈತರು ದೂರಿದ್ದರು. ಹೆಬ್ಬಾರ್ ಅದ್ಯಾಕೋ ಇದೆಲ್ಲ ತನಗೆ ಸಂಬಂಧಿಸಿದ್ದಲ್ಲ ಎಂಬಂತೆ ಸಾರಾಸಗಟಾಗಿ ಕಡೆಗಣಿಸಿ ಕೂತಿದ್ದರು! ನ್ಯಾಯಕ್ಕಾಗಿ ಹೋರಾಟ ಪ್ರತಿಭಟನೆ ವರ್ಷಾನುಗಟ್ಟಲೆಯಿಂದ ಮುಂದುವರೆಸುತ್ತಲೇ ಇರುವ ಕಬ್ಬು ಬೆಳೆಗಾರರು ಸಹನೆಗೆಡುವ ಮೊದಲೇ ಸಂಬಂಧಿಸಿದವರು ಎಚ್ಚತ್ತುಕೊಳ್ಳಬೇಕಿದೆ. ಅಭೂತಪೂರ್ವ ಚಳವಳಿಯಿಂದ ಸಕ್ಕರೆ ಕಾರ್ಖಾನೆ ಪಡೆದಿದ್ದ ಹಳಿಯಾಳದ ರೈತರಿಗೆ ಅದೇ ಕಾರ್ಖಾನೆ ನೆಮ್ಮದಿಗೆಡಿಸಿರುವುದು ದುರಂತ!


ಇದನ್ನೂ ಓದಿ: ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...