Homeಅಂತರಾಷ್ಟ್ರೀಯಹಿಂದೂ ಧಾರ್ಮಿಕ ಸಮಾರಂಭದಲ್ಲಿ ಭಾಗಿ - ಬೆದರಿಕೆಗೆ ಮಣಿದು ಕ್ಷಮೆ ಕೇಳಿದ ಮುಸ್ಲಿಂ ಕ್ರಿಕೆಟಿಗ!

ಹಿಂದೂ ಧಾರ್ಮಿಕ ಸಮಾರಂಭದಲ್ಲಿ ಭಾಗಿ – ಬೆದರಿಕೆಗೆ ಮಣಿದು ಕ್ಷಮೆ ಕೇಳಿದ ಮುಸ್ಲಿಂ ಕ್ರಿಕೆಟಿಗ!

- Advertisement -
- Advertisement -

ಭಾರತದ ಹಿಂದೂ ಧಾರ್ಮಿಕ ಸಮಾರಂಭವೊಂದರಲ್ಲಿ ಭಾಗವಹಿಸಿದ್ದಕ್ಕಾಗಿ ಬೆದರಿಕೆಗಳನ್ನು ಎದುರಿಸಿದ್ದ ಬಾಂಗ್ಲಾದೇಶದ ಪ್ರಖ್ಯಾತ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಈಗ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಕಲ್ಕತ್ತಾದಲ್ಲಿ ನಡೆದ ಹಿಂದೂ ದೇವತೆಯ ಆರಾಧನೆಯ ಸಮಾರಂಭದಲ್ಲಿ ಅವರು ಭಾಗಹಿಸಿದ್ದರು.

ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಬಾಂಗ್ಲಾದೇಶದ ಮುಸ್ಲಿಂ ಮೂಲಭೂತವಾದಿಗಳು ಆಕ್ರೋಶಗೊಂಡಿದ್ದರು. ಮುಸ್ಲಿಮರು ಅನ್ಯ ಧರ್ಮಗಳ ಸಮಾರಂಭಗಳಿಗೆ ಹಾಜರಾಗಬಾರದು ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

“ನಾನು ಕೇವಲ ಎರಡು ನಿಮಿಷಗಳ ಕಾಲ ವೇದಿಕೆಯಲ್ಲಿದ್ದೆ ಅಷ್ಟೆ. ನಾನು ಅದನ್ನು ಉದ್ಘಾಟಿಸಿದ್ದೇನೆ ಎಂದು ಎಲ್ಲರೂ ಭಾವಿಸಿದ್ದಾರೆ. ಆದರೆ ನಾನೊಬ್ಬ ಮುಸ್ಲಿಂ ಆಗಿರುವುದರಿಂದ ಪ್ರಜ್ಞಾಪೂರ್ವಕವಾಗಿಯೇ ಇದನ್ನು ಮಾಡಲು ಸಾಧ್ಯವಿಲ್ಲ. ಬಹುಶಃ ನಾನು ಅಲ್ಲಿಗೆ ಹೋಗಬಾರದಿತ್ತು. ಇದಕ್ಕಾಗಿ ನಾನು ವಿಷಾದಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ” ಎಂದು ಶಕೀಬ್ ಸೋಮವಾರ ತಡರಾತ್ರಿ ತಿಳಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

“ನಾನು ಒಬ್ಬ ಮುಸ್ಲಿಂ ಆಗಿ ನನ್ನ ಧಾರ್ಮಿಕ ಪದ್ಧತಿಗಳನ್ನು ಯಾವಾಗಲೂ ಅನುಸರಿಸುತ್ತೇನೆ. ನಾನು ಏನಾದರೂ ತಪ್ಪು ಮಾಡಿದ್ದರೆ ದಯವಿಟ್ಟು ಕ್ಷಮಿಸಿ” ಎಂದು ಕ್ಷಮೆ ಕೇಳಿದ್ದಾರೆ.

ಫೇಸ್‌ಬುಕ್ ಲೈವ್‌ನಲ್ಲಿ ವ್ಯಕ್ತಿಯೊಬ್ಬ, “ಕ್ರಿಕೆಟಿಗ ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡಿದ್ದಾರೆ” ಎಂದು ಆರೋಪಿಸಿ, ಶಕೀಬ್‌ಗೆ ಬೆದರಿಕೆ ಹಾಕಿದ್ದ. ನಂತರ ಕ್ಷಮೆಯಾಚಿಸಿ ತಲೆಮರೆಸಿಕೊಂಡಿದ್ದ. ಆದರೆ ಇಂದು ಪೊಲೀಸರು ಆತನನ್ನು ಸುನಮ್‌ಗಂಜ್‌ನಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: ಫ್ಯಾಸಿಜ಼ಮ್‍ನ ನಿಜವಾದ ಗೆಲುವು…

ಪ್ರಸ್ತುತ ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಆಲ್‌ರೌಂಡರ್ ವಿಭಾಗದಲ್ಲಿ ಅಗ್ರ ಸ್ಥಾನದಲ್ಲಿದ್ದ ಶಕೀಬ್, 2019ರ ಅಕ್ಟೋಬರ್‌ನಲ್ಲಿ ಐಸಿಸಿ ನಿಯಮವನ್ನು ಉಲ್ಲಂಘಿಸಿದ್ದರು ಎಂದು 2 ವರ್ಷಗಳ ನಿಷೇದ ಮತ್ತು 1 ವರ್ಷ ಅಮಾನತುಗೊಂಡಿದ್ದರು.

2015 ರಲ್ಲಿ ಐಸಿಸಿಯ ಅಲ್‌ರೌಂಡರ್ ವಿಭಾಗದಲ್ಲಿ ಅಂತರಾಷ್ಟ್ರೀಯ ಟೆಸ್ಟ್, ಏಕದಿನ ಮತ್ತು ಟ್ವೆಂಟಿ -20 ಪಂದ್ಯಗಳಲ್ಲಿ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದ್ದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.


ಇದನ್ನೂ ಓದಿ: ಸರ್ವಜನಾಂಗದ ಶಾಂತಿಯ ತೋಟದಲ್ಲಿ ಕೂಡುಬದುಕಿನ ನೆನಪು : ರಹಮತ್‌ ತರೀಕೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...