Homeಮುಖಪುಟಚುನಾವಣಾ ಬಾಂಡ್‌ಗಳಲ್ಲದೆ 7,726 ಕೋಟಿ ರೂ.ದೇಣಿಗೆ: 65% ದೇಣಿಗೆ ಬಿಜೆಪಿ ಪಾಲು

ಚುನಾವಣಾ ಬಾಂಡ್‌ಗಳಲ್ಲದೆ 7,726 ಕೋಟಿ ರೂ.ದೇಣಿಗೆ: 65% ದೇಣಿಗೆ ಬಿಜೆಪಿ ಪಾಲು

- Advertisement -
- Advertisement -

ಭಾರತೀಯ ಚುನಾವಣಾ ಆಯೋಗದ (ಇಸಿಐ) ಅಂಕಿಅಂಶಗಳ ಪ್ರಕಾರ 2013-2023ರ ನಡುವೆ ರಾಜಕೀಯ ಪಕ್ಷಗಳು 7,726 ಕೋಟಿ ರೂ. ಎಲೆಕ್ಟೋರಲ್ ಬಾಂಡ್ ರಹಿತವಾಗಿ ದೇಣಿಗೆಯಾಗಿ ಪಡೆದಿವೆ ಎಂದು ಬಿಸಿನೆಸ್‌ಲೈನ್ ವರದಿ ಮಾಡಿದೆ. ಚುನಾವಣಾ ಬಾಂಡ್‌ ಮೂಲಕ ಬಿಜೆಪಿ ಒಟ್ಟು ನಿಧಿಯ 50% ದೇಣಿಗೆ ಪಡೆದಿರುವುದು ಬಯಲಾಗತ್ತು, ಇದೀಗ ಎಲೆಕ್ಟೋಲ್‌ ಬಾಂಡ್‌ಗಳಲ್ಲಿ ಇತರ ದೇಣಿಗೆಗಳ ಮೂಲಕ ಬಿಜೆಪಿ ಅತಿ ಹೆಚ್ಚು ನಿಧಿಯನ್ನು ಪಡೆದುಕೊಂಡಿರುವುದು ಬಯಲಾಗಿದೆ.

7,726 ಕೋಟಿ ರೂ.ಗಳಲ್ಲಿ ಬಿಜೆಪಿ ಸುಮಾರು 5,000 ಕೋಟಿ ಅಥವಾ 64.7% ಪಡೆದರೆ, ಕಾಂಗ್ರೆಸ್ (10.7%), ಭಾರತ್ ರಾಷ್ಟ್ರ ಸಮಿತಿ (3.3%) ಮತ್ತು ಆಮ್ ಆದ್ಮಿ ಪಕ್ಷ (3.1%) ದೇಣಿಗೆಯನ್ನು ಪಡೆದಿದೆ. ಈ ದೇಣಿಗೆಗಳನ್ನು ರಾಜಕೀಯ ನಿಧಿಯ ಪಾರದರ್ಶಕ ವಿಧಾನಗಳ ಮೂಲಕ ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

2018ರಲ್ಲಿ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಪರಿಚಯಿಸುವ ಮೊದಲು, ಭಾರತೀಯ ಜನತಾ ಪಾರ್ಟಿ ನೇತೃತ್ವದ ಸರ್ಕಾರವು 2003ರಲ್ಲಿ ಜಾರಿಗೆ ತಂದ ರಾಜಕೀಯ ಹಣಕಾಸು ಕಾನೂನುಗಳ ಅಡಿಯಲ್ಲಿ 20,000 ರೂಪಾಯಿಗಳನ್ನು ಮೀರಿದ ದೇಣಿಗೆಯನ್ನು ಘೋಷಿಸಬೇಕಾಗಿತ್ತು. ಈ ದೇಣಿಗೆಗಳು, 100% ತೆರಿಗೆ ವಿನಾಯಿತಿಯನ್ನು ಹೊಂದಿದ್ದವು. ವರ್ಷಗಳಲ್ಲಿ ಗಮನಾರ್ಹ ಹೆಚ್ಚಳವನ್ನು ಕಂಡಿತು, 2014ರ ಆರ್ಥಿಕ ವರ್ಷದಲ್ಲಿ 309 ಕೋಟಿಗಳಿಂದ 2020ರ ಆರ್ಥಿಕ ವರ್ಷದಲ್ಲಿ 1,247 ಕೋಟಿ ರೂ.ಗೆ ಗಣನೀಯವಾಗಿ ಹೆಚ್ಚಳವಾಗಿದೆ. ಆದರೆ 2023ರ ಆರ್ಥಿಕ ವರ್ಷದಲ್ಲಿ ದೇಣಿಗೆಗಳು 1,101 ಕೋಟಿ ರೂ.ಗೆ ಇಳಿದಿದ್ದು, 2020ರ ಆರ್ಥಿಕ ವರ್ಷಕ್ಕೆ ಹೋಲಿಕೆ ಮಾಡಿದರೆ ಸ್ವಲ್ಪ ಇಳಿಕೆ ಕಂಡಿವೆ ಎಂದು ವರದಿ ತಿಳಿಸಿದೆ.

ಕಾರ್ಪೊರೇಟ್ ದೇಣಿಗೆಗಳು ಸಹ ಮಹತ್ವದ ಪಾತ್ರವನ್ನು ವಹಿಸುತ್ತವೆ, ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ (ಪಿಇಟಿ) ನಂತಹ ಘಟಕಗಳು ಪ್ರಮುಖ ಕೊಡುಗೆದಾರರಾಗಿದ್ದಾರೆ. 2023ರಲ್ಲಿ  PET ಬಿಜೆಪಿಗೆ 256 ಕೋಟಿ ರೂಪಾಯಿಗಳನ್ನು ಮತ್ತು ಬಿಆರ್‌ಎಸ್‌ಗೆ 90 ಕೋಟಿ ರೂಪಾಯಿಗಳನ್ನು ನೀಡಿದೆ. ಹೆಚ್ಚುವರಿಯಾಗಿ, M/S MKJ ಎಂಟರ್‌ಪ್ರೈಸಸ್ ಲಿಮಿಟೆಡ್ ಕಾಂಗ್ರೆಸ್‌ಗೆ  45 ಕೋಟಿ ರೂ.ವನ್ನು ನೀಡಿದೆ. B.G. ಶಿರ್ಕೆ ಕನ್‌ಸ್ಟ್ರಕ್ಷನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಬಿಜೆಪಿಗೆ 35 ಕೋಟಿ ದೇಣಿಗೆ ನೀಡಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ ಮುಖ್ಯಸ್ಥ ಅನಿಲ್ ವರ್ಮಾ, ಭಾರತದಲ್ಲಿ ಪಕ್ಷ ರಾಜಕೀಯವು ಸ್ಪರ್ಧಾತ್ಮಕವಾಗಿದೆ, ಇದು ಚುನಾವಣೆಗಳಿಗಾಗಿ ಪಕ್ಷದ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಹೆಚ್ಚುತ್ತಿರುವ ವೆಚ್ಚಗಳನ್ನು ಪೂರೈಸಲು, ಪಕ್ಷಗಳು ಹೆಚ್ಚಾಗಿ ಕಾರ್ಪೊರೇಟ್ ವಲಯ  ಸಂಪನ್ಮೂಲಗಳನ್ನು ಅವಲಂಬಿಸುತ್ತದೆ. ಯಾವ ರಾಜಕೀಯ ಪಕ್ಷ ಅಧಿಕಾರದಲ್ಲಿದೆ, ಅವರು ತಮ್ಮ ಅನುಕೂಲಕ್ಕಾಗಿ ನಿಧಿಯ ಕಾರ್ಯವಿಧಾನಗಳನ್ನು ಬಳಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಪೊಲಿಟಿಕಲ್ ಫೈನಾನ್ಸ್ ಇನ್ ಇಂಡಿಯಾದ ಲೇಖಕರಾದ ಈಶ್ವರನ್ ಶ್ರೀಧರನ್ ಮತ್ತು ಮಿಲನ್ ವೈಷ್ಣವ್ ಅವರ ಪ್ರಕಾರ, ಆರು ರಾಷ್ಟ್ರೀಯ ಪಕ್ಷಗಳು ಸ್ವೀಕರಿಸಿದ ಸುಮಾರು 75% ಹಣವು 20,000ರೂ. ಮಿತಿಗಿಂತ ಕಡಿಮೆ ಇರುವ ಅನಾಮಧೇಯ ದೇಣಿಗೆಗಳ ಮೂಲಕ ಬರುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಿಎಂ ಕೃಷ್ಣಗೆ ‘ಸಂಗೀತ ಕಲಾನಿಧಿ’ ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...