Homeಮುಖಪುಟಚುನಾವಣಾ ಬಾಂಡ್‌ಗಳಲ್ಲದೆ 7,726 ಕೋಟಿ ರೂ.ದೇಣಿಗೆ: 65% ದೇಣಿಗೆ ಬಿಜೆಪಿ ಪಾಲು

ಚುನಾವಣಾ ಬಾಂಡ್‌ಗಳಲ್ಲದೆ 7,726 ಕೋಟಿ ರೂ.ದೇಣಿಗೆ: 65% ದೇಣಿಗೆ ಬಿಜೆಪಿ ಪಾಲು

- Advertisement -
- Advertisement -

ಭಾರತೀಯ ಚುನಾವಣಾ ಆಯೋಗದ (ಇಸಿಐ) ಅಂಕಿಅಂಶಗಳ ಪ್ರಕಾರ 2013-2023ರ ನಡುವೆ ರಾಜಕೀಯ ಪಕ್ಷಗಳು 7,726 ಕೋಟಿ ರೂ. ಎಲೆಕ್ಟೋರಲ್ ಬಾಂಡ್ ರಹಿತವಾಗಿ ದೇಣಿಗೆಯಾಗಿ ಪಡೆದಿವೆ ಎಂದು ಬಿಸಿನೆಸ್‌ಲೈನ್ ವರದಿ ಮಾಡಿದೆ. ಚುನಾವಣಾ ಬಾಂಡ್‌ ಮೂಲಕ ಬಿಜೆಪಿ ಒಟ್ಟು ನಿಧಿಯ 50% ದೇಣಿಗೆ ಪಡೆದಿರುವುದು ಬಯಲಾಗತ್ತು, ಇದೀಗ ಎಲೆಕ್ಟೋಲ್‌ ಬಾಂಡ್‌ಗಳಲ್ಲಿ ಇತರ ದೇಣಿಗೆಗಳ ಮೂಲಕ ಬಿಜೆಪಿ ಅತಿ ಹೆಚ್ಚು ನಿಧಿಯನ್ನು ಪಡೆದುಕೊಂಡಿರುವುದು ಬಯಲಾಗಿದೆ.

7,726 ಕೋಟಿ ರೂ.ಗಳಲ್ಲಿ ಬಿಜೆಪಿ ಸುಮಾರು 5,000 ಕೋಟಿ ಅಥವಾ 64.7% ಪಡೆದರೆ, ಕಾಂಗ್ರೆಸ್ (10.7%), ಭಾರತ್ ರಾಷ್ಟ್ರ ಸಮಿತಿ (3.3%) ಮತ್ತು ಆಮ್ ಆದ್ಮಿ ಪಕ್ಷ (3.1%) ದೇಣಿಗೆಯನ್ನು ಪಡೆದಿದೆ. ಈ ದೇಣಿಗೆಗಳನ್ನು ರಾಜಕೀಯ ನಿಧಿಯ ಪಾರದರ್ಶಕ ವಿಧಾನಗಳ ಮೂಲಕ ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

2018ರಲ್ಲಿ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಪರಿಚಯಿಸುವ ಮೊದಲು, ಭಾರತೀಯ ಜನತಾ ಪಾರ್ಟಿ ನೇತೃತ್ವದ ಸರ್ಕಾರವು 2003ರಲ್ಲಿ ಜಾರಿಗೆ ತಂದ ರಾಜಕೀಯ ಹಣಕಾಸು ಕಾನೂನುಗಳ ಅಡಿಯಲ್ಲಿ 20,000 ರೂಪಾಯಿಗಳನ್ನು ಮೀರಿದ ದೇಣಿಗೆಯನ್ನು ಘೋಷಿಸಬೇಕಾಗಿತ್ತು. ಈ ದೇಣಿಗೆಗಳು, 100% ತೆರಿಗೆ ವಿನಾಯಿತಿಯನ್ನು ಹೊಂದಿದ್ದವು. ವರ್ಷಗಳಲ್ಲಿ ಗಮನಾರ್ಹ ಹೆಚ್ಚಳವನ್ನು ಕಂಡಿತು, 2014ರ ಆರ್ಥಿಕ ವರ್ಷದಲ್ಲಿ 309 ಕೋಟಿಗಳಿಂದ 2020ರ ಆರ್ಥಿಕ ವರ್ಷದಲ್ಲಿ 1,247 ಕೋಟಿ ರೂ.ಗೆ ಗಣನೀಯವಾಗಿ ಹೆಚ್ಚಳವಾಗಿದೆ. ಆದರೆ 2023ರ ಆರ್ಥಿಕ ವರ್ಷದಲ್ಲಿ ದೇಣಿಗೆಗಳು 1,101 ಕೋಟಿ ರೂ.ಗೆ ಇಳಿದಿದ್ದು, 2020ರ ಆರ್ಥಿಕ ವರ್ಷಕ್ಕೆ ಹೋಲಿಕೆ ಮಾಡಿದರೆ ಸ್ವಲ್ಪ ಇಳಿಕೆ ಕಂಡಿವೆ ಎಂದು ವರದಿ ತಿಳಿಸಿದೆ.

ಕಾರ್ಪೊರೇಟ್ ದೇಣಿಗೆಗಳು ಸಹ ಮಹತ್ವದ ಪಾತ್ರವನ್ನು ವಹಿಸುತ್ತವೆ, ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ (ಪಿಇಟಿ) ನಂತಹ ಘಟಕಗಳು ಪ್ರಮುಖ ಕೊಡುಗೆದಾರರಾಗಿದ್ದಾರೆ. 2023ರಲ್ಲಿ  PET ಬಿಜೆಪಿಗೆ 256 ಕೋಟಿ ರೂಪಾಯಿಗಳನ್ನು ಮತ್ತು ಬಿಆರ್‌ಎಸ್‌ಗೆ 90 ಕೋಟಿ ರೂಪಾಯಿಗಳನ್ನು ನೀಡಿದೆ. ಹೆಚ್ಚುವರಿಯಾಗಿ, M/S MKJ ಎಂಟರ್‌ಪ್ರೈಸಸ್ ಲಿಮಿಟೆಡ್ ಕಾಂಗ್ರೆಸ್‌ಗೆ  45 ಕೋಟಿ ರೂ.ವನ್ನು ನೀಡಿದೆ. B.G. ಶಿರ್ಕೆ ಕನ್‌ಸ್ಟ್ರಕ್ಷನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಬಿಜೆಪಿಗೆ 35 ಕೋಟಿ ದೇಣಿಗೆ ನೀಡಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ ಮುಖ್ಯಸ್ಥ ಅನಿಲ್ ವರ್ಮಾ, ಭಾರತದಲ್ಲಿ ಪಕ್ಷ ರಾಜಕೀಯವು ಸ್ಪರ್ಧಾತ್ಮಕವಾಗಿದೆ, ಇದು ಚುನಾವಣೆಗಳಿಗಾಗಿ ಪಕ್ಷದ ವೆಚ್ಚದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಹೆಚ್ಚುತ್ತಿರುವ ವೆಚ್ಚಗಳನ್ನು ಪೂರೈಸಲು, ಪಕ್ಷಗಳು ಹೆಚ್ಚಾಗಿ ಕಾರ್ಪೊರೇಟ್ ವಲಯ  ಸಂಪನ್ಮೂಲಗಳನ್ನು ಅವಲಂಬಿಸುತ್ತದೆ. ಯಾವ ರಾಜಕೀಯ ಪಕ್ಷ ಅಧಿಕಾರದಲ್ಲಿದೆ, ಅವರು ತಮ್ಮ ಅನುಕೂಲಕ್ಕಾಗಿ ನಿಧಿಯ ಕಾರ್ಯವಿಧಾನಗಳನ್ನು ಬಳಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಪೊಲಿಟಿಕಲ್ ಫೈನಾನ್ಸ್ ಇನ್ ಇಂಡಿಯಾದ ಲೇಖಕರಾದ ಈಶ್ವರನ್ ಶ್ರೀಧರನ್ ಮತ್ತು ಮಿಲನ್ ವೈಷ್ಣವ್ ಅವರ ಪ್ರಕಾರ, ಆರು ರಾಷ್ಟ್ರೀಯ ಪಕ್ಷಗಳು ಸ್ವೀಕರಿಸಿದ ಸುಮಾರು 75% ಹಣವು 20,000ರೂ. ಮಿತಿಗಿಂತ ಕಡಿಮೆ ಇರುವ ಅನಾಮಧೇಯ ದೇಣಿಗೆಗಳ ಮೂಲಕ ಬರುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಿಎಂ ಕೃಷ್ಣಗೆ ‘ಸಂಗೀತ ಕಲಾನಿಧಿ’ ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...