Homeಮುಖಪುಟಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

- Advertisement -
- Advertisement -

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ ವಿವಾದಗಳನ್ನು ಸುಪ್ರೀಂ ಕೋರ್ಟ್ ವಿಶೇಷ ಲೋಕ ಅದಾಲತ್‌ಗೆ ಒಪ್ಪಿಸಿದೆ. “ಸಮಾಧಾನ್ ಸಮಾರೋಹ್” ಎಂಬ ಹೆಸರಿನ ಈ ವಿಶೇಷ ಲೋಕ ಅದಾಲತ್ ಆಗಸ್ಟ್ 21ರಿಂದ 23ರವರೆಗೆ ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆಯಲಿದೆ.

ಮೂರು ವಿವಾದಗಳನ್ನು ‘ಸುಪ್ರೀಂ ಕೋರ್ಟ್ ಆಕ್ಷನ್ ಫಾರ್ ಮೀಡಿಯೇಟೆಡ್ ಅಡ್ಜುಡಿಕೇಶನ್ ಆಂಡ್ ಡಿಸ್ಪ್ಯೂಟ್ಸ್ ಹಾರ್ಮೋನೈಸೇಶನ್ ಅಕ್ರಾಸ್ ನೇಷನ್-ಸಮಾಧಾನ್ ಸಮಾರೋಹ್ 2026’ ಅಡಿಯಲ್ಲಿ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ (ಆಡಳಿತಾತ್ಮಕ ವಿಭಾಗ) ಸಂಬಂಧಪಟ್ಟ ಪಕ್ಷಗಾರರಿಗೆ ಪತ್ರ ಬರೆದಿದೆ ಎಂದು livelaw.in ವರದಿ ಮಾಡಿದೆ.

ಈ “ಸಮಾಧಾನ್ ಸಮಾರೋಹ್”ವು ಮುಕ್ತ ಸಂವಾದ ಮತ್ತು ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಲು ನೆರವಾಗುವ ಒಂದು ವೇದಿಕೆಯಾಗಿದೆ. ಆದರೆ, ಯಾವುದೇ ಅಂತಿಮ ನಿರ್ಧಾರ ಅಥವಾ ರಾಜಿ ಸಂಧಾನವು ಸಂಪೂರ್ಣವಾಗಿ ಇದರಲ್ಲಿ ಭಾಗಿಯಾಗಿರುವ ಪಕ್ಷಗಾರರ ಪರಸ್ಪರ ಒಪ್ಪಿಗೆಯನ್ನು ಅವಲಂಬಿಸಿರುತ್ತದೆ.

ವರದಿಗಳ ಪ್ರಕಾರ, ಉಭಯ ಪಕ್ಷಗಳೂ (ಹಿಂದೂ-ಮುಸ್ಲಿಂ) ಮಧ್ಯಸ್ಥಿಕೆಯ ಮೂಲಕ ರಾಜಿ ಸಂಧಾನ ಮಾಡಿಕೊಳ್ಳುವುದನ್ನು ವಿರೋಧಿಸಿದ್ದು, ಈ ವಿಷಯವನ್ನು ಕಾನೂನು ಅರ್ಹತೆಯ ಆಧಾರದ ಮೇಲೆ ನ್ಯಾಯಾಲಯದ ಹೋರಾಟದ ಮೂಲಕವೇ ಬಗೆಹರಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಜ್ಞಾನವಾಪಿ ವಿವಾದದ ಮುಸ್ಲಿಂ ಪಕ್ಷಗಾರರಾದ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪವನ್ನು ತಿರಸ್ಕರಿಸಿರುವುದಾಗಿ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

“ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಲಕ್ಷಾಂತರ ಪ್ರಕರಣಗಳ ಹೊರೆಯನ್ನು ಕಡಿಮೆ ಮಾಡಲು, ಗೌರವಾನ್ವಿತ ಸುಪ್ರೀಂ ಕೋರ್ಟ್ ಪರಸ್ಪರ ಒಪ್ಪಿಗೆಯ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲು ‘ಸಮಾಧಾನ್ ಸಮಾರೋಹ್‌’ ಅನ್ನು ಪ್ರಾರಂಭಿಸಿದೆ. ಇದರಲ್ಲಿ, ಜಿಲ್ಲಾ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಟ್ಟದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪರಸ್ಪರ ಒಪ್ಪಿಗೆಯ ಆಧಾರದ ಮೇಲೆ ವಿಶೇಷ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಬೇಕಾಗಿದೆ. ಜ್ಞಾನವಾಪಿ ಮಸೀದಿಯಂತಹ ಅತ್ಯಂತ ಸೂಕ್ಷ್ಮ ಪ್ರಕರಣಗಳನ್ನೂ ಇದರಲ್ಲಿ ಸೇರಿಸಲಾಗಿದೆ. ಜ್ಞಾನವಾಪಿ ಮಸೀದಿ ಪ್ರಕರಣವು ಸುದ್ದಿಯಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗಿರುವುದರಿಂದ ಸಾಮಾನ್ಯ ಮುಸ್ಲಿಮರಲ್ಲಿ ಚರ್ಚೆಯ ವಿಷಯವಾಗಿದೆ. ಈ ಆಹ್ವಾನವು ಕಡ್ಡಾಯವಾಗಿ ಪಾಲಿಸಬೇಕಾದದ್ದಲ್ಲ ಎಂಬುದನ್ನು ಇಲ್ಲಿ ಉಲ್ಲೇಖಿಸುವುದು ಮುಖ್ಯವಾಗಿದೆ, ಆದ್ದರಿಂದ ಅಂಜುಮನ್ ಇಂತೇಜಾಮಿಯಾ ಮಸೀದಿಯು ಈ ಸಮಾಧಾನ ಸಮಾರೋಹದಲ್ಲಿ ಯಾವುದೇ ಮಟ್ಟದಲ್ಲೂ ಭಾಗವಹಿಸದಿರಲು ನಿರ್ಧರಿಸಿದೆ” ಎಂದು ಜ್ಞಾನವಾಪಿ ಪಕ್ಷಗಾರರು ಹೇಳಿರುವುದಾಗಿ livelaw.in ವರದಿ ಮಾಡಿದೆ.

ವಿವಾದಗಳ ಬಗ್ಗೆ

ಸಂಭಾಲ್ ಮಸೀದಿ

ಅಲಹಾಬಾದ್ ಹೈಕೋರ್ಟ್‌ನ 2025 ಮೇ 19ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಗೆ ಸಂಬಂಧಿಸಿದ ಸಿವಿಲ್ ದಾವೆಗೆ ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991ರ ಅಡಿಯಲ್ಲಿ ಯಾವುದೇ ತಡೆಯಿಲ್ಲ ಮತ್ತು ಈ ದಾವೆಯ ವಿಚಾರಣೆಯನ್ನು ಮುಂದುವರಿಸಬಹುದು ಎಂದು ಆದೇಶಿಸಿತ್ತು.

ಮಸೀದಿಯನ್ನು 1526ರಲ್ಲಿ ಕಲ್ಕಿ ದೇವರಿಗೆ ಸಮರ್ಪಿತವಾಗಿದ್ದ ದೇವಸ್ಥಾನವನ್ನು ಭಾಗಶಃ ಧ್ವಂಸಗೊಳಿಸಿ ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿ ಎಂಟು ಜನ ಹಿಂದೂ ವಾದಿಗಳು ಈ ದಾವೆಯನ್ನು ಹೂಡಿದ್ದಾರೆ. ಅವರು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ನಿವೇಶನಗಳು ಹಾಗೂ ಅವಶೇಷಗಳ ಕಾಯ್ದೆ, 1958ರ ಅಡಿಯಲ್ಲಿ ಸಂರಕ್ಷಿತ ಸ್ಮಾರಕವಾಗಿರುವ ಈ ಸ್ಥಳಕ್ಕೆ ಪ್ರವೇಶಾವಕಾಶವನ್ನು ಕೋರಿದ್ದಾರೆ.

ವಿಚಾರಣಾ ನ್ಯಾಯಾಲಯ ಮಸೀದಿಯ ಆವರಣದ ಸ್ಥಳೀಯ ತನಿಖೆ ನಡೆಸಲು ಅಡ್ವೊಕೇಟ್ ಕಮಿಷನರ್ ಒಬ್ಬರನ್ನು ನೇಮಿಸಿತ್ತು, ಇದು ನವೆಂಬರ್ 2024ರಲ್ಲಿ ಕೋಮು ಹಿಂಸಾಚಾರಕ್ಕೆ ಕಾರಣವಾಗಿತ್ತು. ಸಮೀಕ್ಷೆಯ ಆದೇಶವನ್ನು ವಿರೋಧಿಸಿ ಮಸೀದಿ ಸಮಿತಿಯು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ಬಾಕಿ ಇರುವಾಗ, ಸುಪ್ರೀಂ ಕೋರ್ಟ್ ನಂತರ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಿತ್ತು. ಪ್ರಸ್ತುತ, ಮಸೀದಿಯ ವಿರುದ್ಧ ಹಿಂದೂ ವಾದಿಗಳು ಹೂಡಿರುವ ದಾವೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶ ಜಾರಿಯಲ್ಲಿದೆ.

ಜ್ಞಾನವಾಪಿ ಮಸೀದಿ

ಜ್ಞಾನವಾಪಿ ಪ್ರಕರಣದಲ್ಲಿ, ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991ರ ಅಡಿಯಲ್ಲಿ ಜ್ಞಾನವಾಪಿ ವಿವಾದಕ್ಕೆ ಸಂಬಂಧಿಸಿದ ಸಿವಿಲ್ ದಾವೆಗಳ ವಿಚಾರಣೆಗೆ ಯಾವುದೇ ತಡೆಯಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಆಗಸ್ಟ್ 15, 1947ರಂದು ಇದ್ದಂತೆ ಈ ಸಂಕೀರ್ಣದ ಧಾರ್ಮಿಕ ಸ್ವರೂಪವನ್ನು ವಾರಣಾಸಿ ಸಿವಿಲ್ ನ್ಯಾಯಾಲಯವು ನಿರ್ಧರಿಸಬೇಕಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವಿಚಾರಣಾ ನ್ಯಾಯಾಲಯ ಪ್ರಸ್ತುತ ಮಾಲೀಕತ್ವ, ಧಾರ್ಮಿಕ ಸ್ವರೂಪ ಮತ್ತು ಪೂಜಾ ಹಕ್ಕುಗಳಿಗೆ ಸಂಬಂಧಿಸಿದ ದಾವೆಯ ವಿಚಾರಣೆಯನ್ನು ನಡೆಸುತ್ತಿದೆ.

ಹೈಕೋರ್ಟ್ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಜ್ಞಾನವಾಪಿ ಸಂಕೀರ್ಣದ ಸಮೀಕ್ಷೆಯನ್ನು ಮುಂದುವರಿಸಲು ಅನುಮತಿ ನೀಡಿತ್ತು. ಮಸೀದಿ ನಿರ್ಮಾಣಕ್ಕೂ ಮುನ್ನ ಆ ಸ್ಥಳದಲ್ಲಿ ದೇವಸ್ಥಾನವಿತ್ತು ಎಂದು ಎಎಸ್‌ಐ ವರದಿ ತಿಳಿಸಿತ್ತು. ನಂತರ ವಿಚಾರಣಾ ನ್ಯಾಯಾಲಯವು ವ್ಯಾಸ್ ತೆಹಖಾನಾದಲ್ಲಿ (ಜ್ಞಾನವಾಪಿ ಮಸೀದಿಯ ದಕ್ಷಿಣದ ನೆಲಮಾಳಿಗೆ) ಪೂಜೆ ಸಲ್ಲಿಸಲು ಅನುಮತಿ ನೀಡಿತ್ತು.

ನಂತರ, ಸುಪ್ರೀಂ ಕೋರ್ಟ್ ಮಸೀದಿಯಲ್ಲಿ ನಮಾಝ್ ಮತ್ತು ನೆಲಮಾಳಿಗೆಯಲ್ಲಿ ಪೂಜೆ ನಡೆಸುವುದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿತ್ತು.

ಶ್ರೀ ಕೃಷ್ಣ ಜನ್ಮಭೂಮಿ – ಶಾಹಿ ಇದ್ಗಾ

ಕೃಷ್ಣ ಜನ್ಮಭೂಮಿ ಶಾಹಿ ಇದ್ಗಾ ಮಸೀದಿ ವಿವಾದದಲ್ಲಿ, ಭಗವಾನ್ ಕೃಷ್ಣನ ಜನ್ಮಸ್ಥಳವಾಗಿದ್ದ ದೇವಸ್ಥಾನವನ್ನು ಮೊಘಲ್ ಚಕ್ರವರ್ತಿ ಔರಂಗಜೇಬನು ಧ್ವಂಸಗೊಳಿಸಿ ಈ ಶಾಹಿ ಇದ್ಗಾ ಮಸೀದಿಯನ್ನು ನಿರ್ಮಿಸಿದ್ದಾನೆ ಎಂದು ಪ್ರತಿಪಾದಿಸಿರುವ ವಾದಿಗಳು, ಮಸೀದಿಯನ್ನು ಅಲ್ಲಿಂದ ತೆರವುಗೊಳಿಸುವಂತೆ ಕೋರಿದ್ದಾರೆ. ವಾದಿಗಳು ಆ ಸ್ಥಳದಲ್ಲಿ ಮಸೀದಿ ಮುಂದುವರಿಯಲು ಅನುಮತಿ ನೀಡಿದ್ದ 1968ರ ರಾಜಿ ತೀರ್ಪನ್ನು ಪ್ರಶ್ನಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಒಟ್ಟು 18 ದಾವೆಗಳಿದ್ದು, ಅಲಹಾಬಾದ್ ಹೈಕೋರ್ಟ್ ಅವುಗಳನ್ನು ತನ್ನ ವ್ಯಾಪ್ತಿಗೆ ವರ್ಗಾಯಿಸಿಕೊಂಡಿದೆ. ಇವುಗಳಲ್ಲಿ ಒಂದು ದಾವೆಯನ್ನು ದೇವರ ಹೆಸರಿನಲ್ಲಿ ‘ಭಗವಾನ್ ಶ್ರೀಕೃಷ್ಣ ವಿರಾಜಮಾನ್’ ಪರವಾಗಿ ಆಪ್ತ ಸ್ನೇಹಿತನ ಮೂಲಕ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...