Homeಮುಖಪುಟಮೋದಿ ದ್ವೇಷ ಭಾಷಣ: ಪ್ರಧಾನಮಂತ್ರಿಯ ವೆಬ್‌ಸೈಟ್‌ನಲ್ಲಿನ ಸಾರಾಂಶದಲ್ಲಿ ವಿವಾದಿತ ಹೇಳಿಕೆಗಳು ಕಾಣೆ!

ಮೋದಿ ದ್ವೇಷ ಭಾಷಣ: ಪ್ರಧಾನಮಂತ್ರಿಯ ವೆಬ್‌ಸೈಟ್‌ನಲ್ಲಿನ ಸಾರಾಂಶದಲ್ಲಿ ವಿವಾದಿತ ಹೇಳಿಕೆಗಳು ಕಾಣೆ!

- Advertisement -
- Advertisement -

ಬುಡಕಟ್ಟು ಜನಾಂಗದ ಜನರೇ ಬಹುಸಂಖ್ಯಾತರಾಗಿರುವ ರಾಜಸ್ಥಾನದ ಭನ್ಸ್ವಾರಾದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ವೇಳೆ ಮೋದಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣವನ್ನು ಮಾಡಿದ್ದರು. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಚುನಾವಣಾ ಆಯೋಗ ಮೌನವಾಗಿದೆ. ಆದರೆ, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟವಾದ ಉಲ್ಲಂಘನೆಯಾಗಿದೆ. ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ಪ್ರಧಾನ ಮಂತ್ರಿಯ ವೆಬ್‌ಸೈಟ್‌ನಲ್ಲಿನ ಇಂಗ್ಲಿಷ್ ಸಾರಾಂಶದಿಂದ ನೀತಿ ಸಂಹಿತೆ ಉಲ್ಲಂಘಿಸಿರುವ ಮೋದಿಯ ಭಾಷಣದ ತುಣುಕುಗಳು ಕಾಣೆಯಾಗಿವೆ.

ಮೋದಿ ಮುಸ್ಲಿಂ ಸಮುದಾಯವನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರು, ನುಸುಳುಕೋರರು ಎಂದು ಉಲ್ಲೇಖಿಸಿದ್ದಾರೆ. ಇದಲ್ಲದೆ ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿದ್ದರು ಎಂದು ಸುಳ್ಳು ಹೇಳಿದ್ದರು.

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುವ ಆ ವಿವಾದಾತ್ಮಕ ಭಾಗಗಳು ಅವರ ವೈಯಕ್ತಿಕ ವೆಬ್‌ಸೈಟ್ www.narendramodi.in ನಲ್ಲಿ ಇಂಗ್ಲಿಷ್‌ನಲ್ಲಿ ಅಪ್‌ಲೋಡ್ ಮಾಡಲಾದ ಮೋದಿಯವರ ಚುನಾವಣಾ ಭಾಷಣದ ದೀರ್ಘ ಸಾರಾಂಶದಿಂದ ಕಾಣೆಯಾಗಿದೆ.

ಭಾಷಣಗಳ ಇಂಗ್ಲಿಷ್ ಸಾರಾಂಶವು ಕೊನೆಯ ಪ್ಯಾರಾಗ್ರಾಫ್‌ನಲ್ಲಿ ಪ್ರಚೋದನಕಾರಿ ಭಾಗವನ್ನು ಉಲ್ಲೇಖಿಸಿದೆ, ಆದರೆ ‘ನುಸುಳುಕೋರರು’ ಮತ್ತು ‘ಮುಸ್ಲಿಮ್‌ಗಳಂತಹ ಪದಗಳನ್ನು ಒಳಗೊಂಡಂತೆ ಗಮನಾರ್ಹ ವಿವರಗಳನ್ನು ನಮೂದಿಸಿಲ್ಲ ಮತ್ತು ‘ಹೆಚ್ಚು ಮಕ್ಕಳನ್ನು ಹೊಂದಿರುವವರು’ ಮುಂತಾದ ಪದಗುಚ್ಛಗಳನ್ನು ಪ್ರಧಾನಿ ಬಳಸಿದ್ದಾರೆ. ಕಾಂಗ್ರೆಸ್ ನಮ್ಮ ತಾಯಂದಿರು ಮತ್ತು ಸಹೋದರಿಯರ ಮಂಗಳಸೂತ್ರವನ್ನು ಕಸಿದುಕೊಂಡು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ ಎಂದು ಅವರು ಹೇಳಿರುವುದನ್ನು ಉಲ್ಲೇಖಿಸಿಲ್ಲ.

ಭನ್ಸ್ವಾರಾದಲ್ಲಿ ಕಾಂಗ್ರೆಸ್‌ ವಿರುದ್ಧ ತೀವ್ರವಾಗಿ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಎಡಪಂಥೀಯರು ಮತ್ತು ನಗರ ನಕ್ಸಲರ ಕಪಿಮುಷ್ಠಿಯಲ್ಲಿ ಸಿಕ್ಕಿಹಾಕಿಕೊಂಡಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವುದು ಗಂಭೀರ ಮತ್ತು ಆತಂಕಕಾರಿ ವಿಚಾರ, ಅವರು ಸರ್ಕಾರ ರಚಿಸಿದರೆ ಪ್ರತಿಯೊಬ್ಬ ವ್ಯಕ್ತಿಗೆ ಸೇರಿದ ಆಸ್ತಿಯ ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ನಮ್ಮ ಸಹೋದರಿಯರು ಎಷ್ಟು ಚಿನ್ನ ಹೊಂದಿದ್ದಾರೆ, ಸರ್ಕಾರಿ ನೌಕರರು ಎಷ್ಟು ಹಣ ಹೊಂದಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ನಮ್ಮ ಸಹೋದರಿಯರ ಚಿನ್ನಾಭರಣಗಳನ್ನು ಸಮಾನವಾಗಿ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ. ನಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆಯೇ? ಎಂದು ಉಲ್ಲೇಖಿಸಲಾಗಿದೆ.

www.narendramodi.in ವೆಬ್‌ಸೈಟ್ ಪ್ರಧಾನಿಯ ಪ್ರಚಾರ ಪೋರ್ಟಲ್ ಆಗಿ ಕಾರ್ಯನಿರ್ವಹಿಸುತ್ತದೆ. ಆದರೆ, ಮೋದಿಯವರು ಹಿಂದಿಯಲ್ಲಿ ಮಾಡಿದ ವಿವಾದಾತ್ಮಕ ಭಾಷಣಗಳ ವಿಡಿಯೋಗಳನ್ನು ಲಗತ್ತಿಸಿದೆ. ಜಾಲೋರ್‌ನಲ್ಲಿ ಮೋದಿ ಭಾಷಣದ ಪೂರ್ಣ ಹಿಂದಿ ಭಾಗವನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಆದರೆ ಅವರ ಭನ್ಸ್ವಾರಾದ ಭಾಷಣದ ಭಾಗ ಸ್ಪಷ್ಟವಾಗಿ ಕಾಣೆಯಾಗಿದೆ. ವೆಬ್‌ಸೈಟ್‌ಗೆ ಭೇಟಿ ನೀಡುವ ಇಂಗ್ಲಿಷ್‌ನಲ್ಲಿ ಮಾತ್ರ ಬಲ್ಲವರಿಗೆ ಪ್ರಧಾನಿ ಮಾಡಿದ ದ್ವೇಷದ ಭಾಷಣದ ಬಗ್ಗೆ ತಿಳಿಯುವುದು ಅಸಾಧ್ಯ, ಹಿಂದಿಯನ್ನು ಅರ್ಥಮಾಡಿಕೊಳ್ಳುವವರಿಗೆ ಮಾತ್ರ ವೀಡಿಯೊ ಕ್ಲಿಕ್ ಮಾಡಿದ ನಂತರ ಅವರ ನಿಖರವಾದ ಮಾತುಗಳನ್ನು ಕೇಳಬಹುದು.

ಏಪ್ರಿಲ್ 22ರ ಮಧ್ಯಾಹ್ನದವರೆಗೂ ಮೋದಿ ಅವರ ವಾಟ್ಸಾಪ್ ಚಾನೆಲ್ ಕೂಡ ಭಾಷಣವನ್ನು ಅಪ್‌ಲೋಡ್ ಮಾಡಿರಲಿಲ್ಲ ಎಂದು ವರದಿ ಉಲ್ಲೇಖಿಸಿದೆ. ಮೋದಿಯ ದ್ವೇಷದ ಭಾಷಣ ರಾಜಕೀಯ ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಏಕೆಂದರೆ ಮೋದಿ ಪ್ರಧಾನಿಯಾದಾಗಿನಿಂದ ಇಲ್ಲಿಯವರೆಗೆ ಹಿಂದೂ ಮತಗಳನ್ನು ಸೆಳೆಯಲು ತಮ್ಮ ಚುನಾವಣಾ ಭಾಷಣಗಳಲ್ಲಿ ನೇರವಾಗಿ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಿರಲಿಲ್ಲ. ಆದರೆ ಈ ಬಾರಿ ನೇರವಾಗಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣವನ್ನು ಮಾಡಿದ್ದಾರೆ. ಭಾರತದ ಚುನಾವಣಾ ಆಯೋಗವು ಈ ವಿಷಯದಲ್ಲಿ ಮೌನವಾಗಿದೆ.

ಇದನ್ನು ಓದಿ: ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ದ್ವೇಷ ಭಾಷಣ: ಮೋದಿ ವಿರುದ್ಧ ರಾಹುಲ್‌, ಖರ್ಗೆ ಸೇರಿ ಪ್ರತಿಪಕ್ಷಗಳ ನಾಯಕರಿಂದ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...