Homeಮುಖಪುಟಮೋದಿ ದ್ವೇಷ ಭಾಷಣ: ಪ್ರಧಾನಮಂತ್ರಿಯ ವೆಬ್‌ಸೈಟ್‌ನಲ್ಲಿನ ಸಾರಾಂಶದಲ್ಲಿ ವಿವಾದಿತ ಹೇಳಿಕೆಗಳು ಕಾಣೆ!

ಮೋದಿ ದ್ವೇಷ ಭಾಷಣ: ಪ್ರಧಾನಮಂತ್ರಿಯ ವೆಬ್‌ಸೈಟ್‌ನಲ್ಲಿನ ಸಾರಾಂಶದಲ್ಲಿ ವಿವಾದಿತ ಹೇಳಿಕೆಗಳು ಕಾಣೆ!

- Advertisement -
- Advertisement -

ಬುಡಕಟ್ಟು ಜನಾಂಗದ ಜನರೇ ಬಹುಸಂಖ್ಯಾತರಾಗಿರುವ ರಾಜಸ್ಥಾನದ ಭನ್ಸ್ವಾರಾದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ವೇಳೆ ಮೋದಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣವನ್ನು ಮಾಡಿದ್ದರು. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಚುನಾವಣಾ ಆಯೋಗ ಮೌನವಾಗಿದೆ. ಆದರೆ, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟವಾದ ಉಲ್ಲಂಘನೆಯಾಗಿದೆ. ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ಪ್ರಧಾನ ಮಂತ್ರಿಯ ವೆಬ್‌ಸೈಟ್‌ನಲ್ಲಿನ ಇಂಗ್ಲಿಷ್ ಸಾರಾಂಶದಿಂದ ನೀತಿ ಸಂಹಿತೆ ಉಲ್ಲಂಘಿಸಿರುವ ಮೋದಿಯ ಭಾಷಣದ ತುಣುಕುಗಳು ಕಾಣೆಯಾಗಿವೆ.

ಮೋದಿ ಮುಸ್ಲಿಂ ಸಮುದಾಯವನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರು, ನುಸುಳುಕೋರರು ಎಂದು ಉಲ್ಲೇಖಿಸಿದ್ದಾರೆ. ಇದಲ್ಲದೆ ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿದ್ದರು ಎಂದು ಸುಳ್ಳು ಹೇಳಿದ್ದರು.

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುವ ಆ ವಿವಾದಾತ್ಮಕ ಭಾಗಗಳು ಅವರ ವೈಯಕ್ತಿಕ ವೆಬ್‌ಸೈಟ್ www.narendramodi.in ನಲ್ಲಿ ಇಂಗ್ಲಿಷ್‌ನಲ್ಲಿ ಅಪ್‌ಲೋಡ್ ಮಾಡಲಾದ ಮೋದಿಯವರ ಚುನಾವಣಾ ಭಾಷಣದ ದೀರ್ಘ ಸಾರಾಂಶದಿಂದ ಕಾಣೆಯಾಗಿದೆ.

ಭಾಷಣಗಳ ಇಂಗ್ಲಿಷ್ ಸಾರಾಂಶವು ಕೊನೆಯ ಪ್ಯಾರಾಗ್ರಾಫ್‌ನಲ್ಲಿ ಪ್ರಚೋದನಕಾರಿ ಭಾಗವನ್ನು ಉಲ್ಲೇಖಿಸಿದೆ, ಆದರೆ ‘ನುಸುಳುಕೋರರು’ ಮತ್ತು ‘ಮುಸ್ಲಿಮ್‌ಗಳಂತಹ ಪದಗಳನ್ನು ಒಳಗೊಂಡಂತೆ ಗಮನಾರ್ಹ ವಿವರಗಳನ್ನು ನಮೂದಿಸಿಲ್ಲ ಮತ್ತು ‘ಹೆಚ್ಚು ಮಕ್ಕಳನ್ನು ಹೊಂದಿರುವವರು’ ಮುಂತಾದ ಪದಗುಚ್ಛಗಳನ್ನು ಪ್ರಧಾನಿ ಬಳಸಿದ್ದಾರೆ. ಕಾಂಗ್ರೆಸ್ ನಮ್ಮ ತಾಯಂದಿರು ಮತ್ತು ಸಹೋದರಿಯರ ಮಂಗಳಸೂತ್ರವನ್ನು ಕಸಿದುಕೊಂಡು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ ಎಂದು ಅವರು ಹೇಳಿರುವುದನ್ನು ಉಲ್ಲೇಖಿಸಿಲ್ಲ.

ಭನ್ಸ್ವಾರಾದಲ್ಲಿ ಕಾಂಗ್ರೆಸ್‌ ವಿರುದ್ಧ ತೀವ್ರವಾಗಿ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಎಡಪಂಥೀಯರು ಮತ್ತು ನಗರ ನಕ್ಸಲರ ಕಪಿಮುಷ್ಠಿಯಲ್ಲಿ ಸಿಕ್ಕಿಹಾಕಿಕೊಂಡಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವುದು ಗಂಭೀರ ಮತ್ತು ಆತಂಕಕಾರಿ ವಿಚಾರ, ಅವರು ಸರ್ಕಾರ ರಚಿಸಿದರೆ ಪ್ರತಿಯೊಬ್ಬ ವ್ಯಕ್ತಿಗೆ ಸೇರಿದ ಆಸ್ತಿಯ ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ನಮ್ಮ ಸಹೋದರಿಯರು ಎಷ್ಟು ಚಿನ್ನ ಹೊಂದಿದ್ದಾರೆ, ಸರ್ಕಾರಿ ನೌಕರರು ಎಷ್ಟು ಹಣ ಹೊಂದಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ನಮ್ಮ ಸಹೋದರಿಯರ ಚಿನ್ನಾಭರಣಗಳನ್ನು ಸಮಾನವಾಗಿ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ. ನಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆಯೇ? ಎಂದು ಉಲ್ಲೇಖಿಸಲಾಗಿದೆ.

www.narendramodi.in ವೆಬ್‌ಸೈಟ್ ಪ್ರಧಾನಿಯ ಪ್ರಚಾರ ಪೋರ್ಟಲ್ ಆಗಿ ಕಾರ್ಯನಿರ್ವಹಿಸುತ್ತದೆ. ಆದರೆ, ಮೋದಿಯವರು ಹಿಂದಿಯಲ್ಲಿ ಮಾಡಿದ ವಿವಾದಾತ್ಮಕ ಭಾಷಣಗಳ ವಿಡಿಯೋಗಳನ್ನು ಲಗತ್ತಿಸಿದೆ. ಜಾಲೋರ್‌ನಲ್ಲಿ ಮೋದಿ ಭಾಷಣದ ಪೂರ್ಣ ಹಿಂದಿ ಭಾಗವನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಆದರೆ ಅವರ ಭನ್ಸ್ವಾರಾದ ಭಾಷಣದ ಭಾಗ ಸ್ಪಷ್ಟವಾಗಿ ಕಾಣೆಯಾಗಿದೆ. ವೆಬ್‌ಸೈಟ್‌ಗೆ ಭೇಟಿ ನೀಡುವ ಇಂಗ್ಲಿಷ್‌ನಲ್ಲಿ ಮಾತ್ರ ಬಲ್ಲವರಿಗೆ ಪ್ರಧಾನಿ ಮಾಡಿದ ದ್ವೇಷದ ಭಾಷಣದ ಬಗ್ಗೆ ತಿಳಿಯುವುದು ಅಸಾಧ್ಯ, ಹಿಂದಿಯನ್ನು ಅರ್ಥಮಾಡಿಕೊಳ್ಳುವವರಿಗೆ ಮಾತ್ರ ವೀಡಿಯೊ ಕ್ಲಿಕ್ ಮಾಡಿದ ನಂತರ ಅವರ ನಿಖರವಾದ ಮಾತುಗಳನ್ನು ಕೇಳಬಹುದು.

ಏಪ್ರಿಲ್ 22ರ ಮಧ್ಯಾಹ್ನದವರೆಗೂ ಮೋದಿ ಅವರ ವಾಟ್ಸಾಪ್ ಚಾನೆಲ್ ಕೂಡ ಭಾಷಣವನ್ನು ಅಪ್‌ಲೋಡ್ ಮಾಡಿರಲಿಲ್ಲ ಎಂದು ವರದಿ ಉಲ್ಲೇಖಿಸಿದೆ. ಮೋದಿಯ ದ್ವೇಷದ ಭಾಷಣ ರಾಜಕೀಯ ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಏಕೆಂದರೆ ಮೋದಿ ಪ್ರಧಾನಿಯಾದಾಗಿನಿಂದ ಇಲ್ಲಿಯವರೆಗೆ ಹಿಂದೂ ಮತಗಳನ್ನು ಸೆಳೆಯಲು ತಮ್ಮ ಚುನಾವಣಾ ಭಾಷಣಗಳಲ್ಲಿ ನೇರವಾಗಿ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಿರಲಿಲ್ಲ. ಆದರೆ ಈ ಬಾರಿ ನೇರವಾಗಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣವನ್ನು ಮಾಡಿದ್ದಾರೆ. ಭಾರತದ ಚುನಾವಣಾ ಆಯೋಗವು ಈ ವಿಷಯದಲ್ಲಿ ಮೌನವಾಗಿದೆ.

ಇದನ್ನು ಓದಿ: ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ದ್ವೇಷ ಭಾಷಣ: ಮೋದಿ ವಿರುದ್ಧ ರಾಹುಲ್‌, ಖರ್ಗೆ ಸೇರಿ ಪ್ರತಿಪಕ್ಷಗಳ ನಾಯಕರಿಂದ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...