Homeಮುಖಪುಟಮೋದಿ ದ್ವೇಷ ಭಾಷಣ: ಪ್ರಧಾನಮಂತ್ರಿಯ ವೆಬ್‌ಸೈಟ್‌ನಲ್ಲಿನ ಸಾರಾಂಶದಲ್ಲಿ ವಿವಾದಿತ ಹೇಳಿಕೆಗಳು ಕಾಣೆ!

ಮೋದಿ ದ್ವೇಷ ಭಾಷಣ: ಪ್ರಧಾನಮಂತ್ರಿಯ ವೆಬ್‌ಸೈಟ್‌ನಲ್ಲಿನ ಸಾರಾಂಶದಲ್ಲಿ ವಿವಾದಿತ ಹೇಳಿಕೆಗಳು ಕಾಣೆ!

- Advertisement -
- Advertisement -

ಬುಡಕಟ್ಟು ಜನಾಂಗದ ಜನರೇ ಬಹುಸಂಖ್ಯಾತರಾಗಿರುವ ರಾಜಸ್ಥಾನದ ಭನ್ಸ್ವಾರಾದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ವೇಳೆ ಮೋದಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣವನ್ನು ಮಾಡಿದ್ದರು. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಚುನಾವಣಾ ಆಯೋಗ ಮೌನವಾಗಿದೆ. ಆದರೆ, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟವಾದ ಉಲ್ಲಂಘನೆಯಾಗಿದೆ. ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ಪ್ರಧಾನ ಮಂತ್ರಿಯ ವೆಬ್‌ಸೈಟ್‌ನಲ್ಲಿನ ಇಂಗ್ಲಿಷ್ ಸಾರಾಂಶದಿಂದ ನೀತಿ ಸಂಹಿತೆ ಉಲ್ಲಂಘಿಸಿರುವ ಮೋದಿಯ ಭಾಷಣದ ತುಣುಕುಗಳು ಕಾಣೆಯಾಗಿವೆ.

ಮೋದಿ ಮುಸ್ಲಿಂ ಸಮುದಾಯವನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರು, ನುಸುಳುಕೋರರು ಎಂದು ಉಲ್ಲೇಖಿಸಿದ್ದಾರೆ. ಇದಲ್ಲದೆ ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿದ್ದರು ಎಂದು ಸುಳ್ಳು ಹೇಳಿದ್ದರು.

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುವ ಆ ವಿವಾದಾತ್ಮಕ ಭಾಗಗಳು ಅವರ ವೈಯಕ್ತಿಕ ವೆಬ್‌ಸೈಟ್ www.narendramodi.in ನಲ್ಲಿ ಇಂಗ್ಲಿಷ್‌ನಲ್ಲಿ ಅಪ್‌ಲೋಡ್ ಮಾಡಲಾದ ಮೋದಿಯವರ ಚುನಾವಣಾ ಭಾಷಣದ ದೀರ್ಘ ಸಾರಾಂಶದಿಂದ ಕಾಣೆಯಾಗಿದೆ.

ಭಾಷಣಗಳ ಇಂಗ್ಲಿಷ್ ಸಾರಾಂಶವು ಕೊನೆಯ ಪ್ಯಾರಾಗ್ರಾಫ್‌ನಲ್ಲಿ ಪ್ರಚೋದನಕಾರಿ ಭಾಗವನ್ನು ಉಲ್ಲೇಖಿಸಿದೆ, ಆದರೆ ‘ನುಸುಳುಕೋರರು’ ಮತ್ತು ‘ಮುಸ್ಲಿಮ್‌ಗಳಂತಹ ಪದಗಳನ್ನು ಒಳಗೊಂಡಂತೆ ಗಮನಾರ್ಹ ವಿವರಗಳನ್ನು ನಮೂದಿಸಿಲ್ಲ ಮತ್ತು ‘ಹೆಚ್ಚು ಮಕ್ಕಳನ್ನು ಹೊಂದಿರುವವರು’ ಮುಂತಾದ ಪದಗುಚ್ಛಗಳನ್ನು ಪ್ರಧಾನಿ ಬಳಸಿದ್ದಾರೆ. ಕಾಂಗ್ರೆಸ್ ನಮ್ಮ ತಾಯಂದಿರು ಮತ್ತು ಸಹೋದರಿಯರ ಮಂಗಳಸೂತ್ರವನ್ನು ಕಸಿದುಕೊಂಡು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ ಎಂದು ಅವರು ಹೇಳಿರುವುದನ್ನು ಉಲ್ಲೇಖಿಸಿಲ್ಲ.

ಭನ್ಸ್ವಾರಾದಲ್ಲಿ ಕಾಂಗ್ರೆಸ್‌ ವಿರುದ್ಧ ತೀವ್ರವಾಗಿ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಎಡಪಂಥೀಯರು ಮತ್ತು ನಗರ ನಕ್ಸಲರ ಕಪಿಮುಷ್ಠಿಯಲ್ಲಿ ಸಿಕ್ಕಿಹಾಕಿಕೊಂಡಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿರುವುದು ಗಂಭೀರ ಮತ್ತು ಆತಂಕಕಾರಿ ವಿಚಾರ, ಅವರು ಸರ್ಕಾರ ರಚಿಸಿದರೆ ಪ್ರತಿಯೊಬ್ಬ ವ್ಯಕ್ತಿಗೆ ಸೇರಿದ ಆಸ್ತಿಯ ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ನಮ್ಮ ಸಹೋದರಿಯರು ಎಷ್ಟು ಚಿನ್ನ ಹೊಂದಿದ್ದಾರೆ, ಸರ್ಕಾರಿ ನೌಕರರು ಎಷ್ಟು ಹಣ ಹೊಂದಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ನಮ್ಮ ಸಹೋದರಿಯರ ಚಿನ್ನಾಭರಣಗಳನ್ನು ಸಮಾನವಾಗಿ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ. ನಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆಯೇ? ಎಂದು ಉಲ್ಲೇಖಿಸಲಾಗಿದೆ.

www.narendramodi.in ವೆಬ್‌ಸೈಟ್ ಪ್ರಧಾನಿಯ ಪ್ರಚಾರ ಪೋರ್ಟಲ್ ಆಗಿ ಕಾರ್ಯನಿರ್ವಹಿಸುತ್ತದೆ. ಆದರೆ, ಮೋದಿಯವರು ಹಿಂದಿಯಲ್ಲಿ ಮಾಡಿದ ವಿವಾದಾತ್ಮಕ ಭಾಷಣಗಳ ವಿಡಿಯೋಗಳನ್ನು ಲಗತ್ತಿಸಿದೆ. ಜಾಲೋರ್‌ನಲ್ಲಿ ಮೋದಿ ಭಾಷಣದ ಪೂರ್ಣ ಹಿಂದಿ ಭಾಗವನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಆದರೆ ಅವರ ಭನ್ಸ್ವಾರಾದ ಭಾಷಣದ ಭಾಗ ಸ್ಪಷ್ಟವಾಗಿ ಕಾಣೆಯಾಗಿದೆ. ವೆಬ್‌ಸೈಟ್‌ಗೆ ಭೇಟಿ ನೀಡುವ ಇಂಗ್ಲಿಷ್‌ನಲ್ಲಿ ಮಾತ್ರ ಬಲ್ಲವರಿಗೆ ಪ್ರಧಾನಿ ಮಾಡಿದ ದ್ವೇಷದ ಭಾಷಣದ ಬಗ್ಗೆ ತಿಳಿಯುವುದು ಅಸಾಧ್ಯ, ಹಿಂದಿಯನ್ನು ಅರ್ಥಮಾಡಿಕೊಳ್ಳುವವರಿಗೆ ಮಾತ್ರ ವೀಡಿಯೊ ಕ್ಲಿಕ್ ಮಾಡಿದ ನಂತರ ಅವರ ನಿಖರವಾದ ಮಾತುಗಳನ್ನು ಕೇಳಬಹುದು.

ಏಪ್ರಿಲ್ 22ರ ಮಧ್ಯಾಹ್ನದವರೆಗೂ ಮೋದಿ ಅವರ ವಾಟ್ಸಾಪ್ ಚಾನೆಲ್ ಕೂಡ ಭಾಷಣವನ್ನು ಅಪ್‌ಲೋಡ್ ಮಾಡಿರಲಿಲ್ಲ ಎಂದು ವರದಿ ಉಲ್ಲೇಖಿಸಿದೆ. ಮೋದಿಯ ದ್ವೇಷದ ಭಾಷಣ ರಾಜಕೀಯ ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಏಕೆಂದರೆ ಮೋದಿ ಪ್ರಧಾನಿಯಾದಾಗಿನಿಂದ ಇಲ್ಲಿಯವರೆಗೆ ಹಿಂದೂ ಮತಗಳನ್ನು ಸೆಳೆಯಲು ತಮ್ಮ ಚುನಾವಣಾ ಭಾಷಣಗಳಲ್ಲಿ ನೇರವಾಗಿ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಿರಲಿಲ್ಲ. ಆದರೆ ಈ ಬಾರಿ ನೇರವಾಗಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣವನ್ನು ಮಾಡಿದ್ದಾರೆ. ಭಾರತದ ಚುನಾವಣಾ ಆಯೋಗವು ಈ ವಿಷಯದಲ್ಲಿ ಮೌನವಾಗಿದೆ.

ಇದನ್ನು ಓದಿ: ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ದ್ವೇಷ ಭಾಷಣ: ಮೋದಿ ವಿರುದ್ಧ ರಾಹುಲ್‌, ಖರ್ಗೆ ಸೇರಿ ಪ್ರತಿಪಕ್ಷಗಳ ನಾಯಕರಿಂದ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...