Homeಕರ್ನಾಟಕ‘ಪಕ್ಷ ನನಗೆ ದ್ರೋಹ ಮಾಡುತ್ತಿದೆ’: ರಾಜೀನಾಮೆಗೆ ಸಜ್ಜಾದ ಬಿಜೆಪಿ ಶಾಸಕ ಮಸಾಲೆ ಜಯರಾಮ

‘ಪಕ್ಷ ನನಗೆ ದ್ರೋಹ ಮಾಡುತ್ತಿದೆ’: ರಾಜೀನಾಮೆಗೆ ಸಜ್ಜಾದ ಬಿಜೆಪಿ ಶಾಸಕ ಮಸಾಲೆ ಜಯರಾಮ

- Advertisement -
- Advertisement -

ಬಿಜೆಪಿಯಲ್ಲಿ ಶಾಸಕರೊಬ್ಬರು ಬಂಡಾಯದ ಮುನ್ಸೂಚೆನೆ ನೀಡಿದ್ದು, ರಾಜೀನಾಮೆಯ ಬೆದರಿಕೆಯನ್ನು ಒಡ್ಡಿದ್ದಾರೆ. “ಪಕ್ಷ ನನಗೆ ದ್ರೋಹ ಮಾಡುತ್ತಿದೆ ಎಂದು ಅನಿಸುತ್ತಿದೆ. ಪಕ್ಷವು ನನ್ನನ್ನು ಗುರುತಿಸಿ ಒಳ್ಳೆಯ ಹುದ್ದೆಯನ್ನು ಕೊಟ್ಟರೆ ಸರಿ, ಇಲ್ಲವೆಂದರೆ ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂದು ನಮಗೂ ಗೊತ್ತಿದೆ” ಎಂದು ತುರುವೆಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಮ ಗುರುವಾರ ಹೇಳಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಪಕ್ಷ ನನಗೆ ದ್ರೋಹ ಮಾಡುತ್ತಿದೆ ಎಂದು ಅನಿಸುವ ಮಟ್ಟಿಗೆ ಬಂದಿದೆ. ಪಕ್ಷವು ನನ್ನನ್ನು ಗುರುತಿಸಿ ಸ್ಥಾನ ಕೊಟ್ಟರೆ ಸರಿ. ಇಲ್ಲವೆಂದರೆ ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂದು ನಮಗೂ ಗೊತ್ತಿದೆ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 2024ಕ್ಕೆ ರಾವಣನನ್ನು ಸಂಪೂರ್ಣವಾಗಿ ಸುಡುತ್ತೇವೆ: ಶಿವಸೇನೆ ಸಂಸದ ಸಂಜಯ್ ರಾವತ್

ನಾವು ಕೇಳುವವರೆಗೂ ಕೇಳಿದ್ದೇವೆ. ರಾಜ್ಯಾಧ್ಯಕ್ಷರಿಗೆ, ಮುಖ್ಯಮಂತ್ರಿಗೆ ಕೇಳಿದ್ದೇವೆ. ಅವರು ಕಡೆಗಣಿಸಿದರೆ ಯಾವುದೆ ಕಾರಣಕ್ಕೂ ನಾವು ಪಕ್ಷದಲ್ಲಿ ಇರಲ್ಲ ಎಂದು ಜಯರಾಮ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಸ್ಥಾನವನ್ನು ಕೊಡಲಿಲ್ಲ ಎಂದರೆ, ಈ ರಾಜಕೀಯವನ್ನೇ ಮುಗಿಸುತ್ತೇವೆ. ನಮ್ಮ ತಾಳ್ಮೆಗೂ ಮಿತಿ ಇರುತ್ತದೆ. ಈ ತಿಂಗಳ ಕೊನೆಗೆ ಕೊಡುತ್ತೇವೆ ಎಂದು ಹೇಳಿದ್ದಾರೆ. ಈ ತಿಂಗಳ ಕೊನೆಯವರೆಗೂ ನೋಡುತ್ತೇವೆ. ಸಚಿವ ಸ್ಥಾನ ಎಲ್ಲಾ ನಾವು ಕೇಳಿಲ್ಲ. ಕಡಿಮೆಯೆಂದರೂ, ಒಳ್ಳೆಯ ಹುದ್ದೆ, ನಿಗಮ ಕೊಡಿ ಎಂದು ಕೇಳಿದ್ದೇವೆ. ಅವರು ಕೊಟ್ಟರೆ ಕೊಡಲಿ, ಇಲ್ಲವೆಂದರೆ ಬೇರೆ ರೀತಿಯ ನಿರ್ಣಯ ತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

“ಮತದಾರರು ನೀಡಿರುವ ಓಟಿಗೆ ತೃಪ್ತಿಯಾಗುವಷ್ಟು ಕೆಲಸವನ್ನು ನಾನು ಮಾಡಿದ್ದೇನೆ. ಕೊಟ್ಟರೆ ಕೊಡಲಿ, ಕೊಡಲಿಲ್ಲ ಎಂದರೆ ಬೇಡ. ನಾನು ಹಾಗೆಯೆ ಕೆಲಸ ಮಾಡುತ್ತೆನೆ” ಎಂದು ಅವರು ಶಾಸಕ ಮಸಾಲೆ ಜಯರಾಮ ಬಂಡಾಯದ ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ತ್ವರಿತ ಕ್ರಮಕ್ಕೆ ಜಿಗ್ನೇಶ್ ಮೇವಾನಿ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...