Homeಮುಖಪುಟಪಕ್ಷದ ಬಹಿರಂಗ ಟೀಕೆ; ಐಟಿ ಸೆಲ್ ಮುಖ್ಯಸ್ಥನನ್ನು ಉಚ್ಚಾಟಿಸಿದ ಕೇರಳ ಕಾಂಗ್ರೆಸ್

ಪಕ್ಷದ ಬಹಿರಂಗ ಟೀಕೆ; ಐಟಿ ಸೆಲ್ ಮುಖ್ಯಸ್ಥನನ್ನು ಉಚ್ಚಾಟಿಸಿದ ಕೇರಳ ಕಾಂಗ್ರೆಸ್

- Advertisement -
- Advertisement -

ಕೇರಳದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕತ್ವವನ್ನು ಸಾರ್ವಜನಿಕವಾಗಿ ಟೀಕಿಸಿದ್ದಕ್ಕಾಗಿ ಪಕ್ಷದ ಡಿಜಿಟಲ್ ಮೀಡಿಯಾ ಸೆಲ್ ಸಂಚಾಲಕ ಪಿ ಸರಿನ್ ಅವರನ್ನು ಉಚ್ಚಾಟಿಸಿದೆ. ಪಕ್ಷದಿಂದ ಉಚ್ಷಾಟಿಸಲ್ಪಟ್ಟ ಸರಿನ್ ಈಗ ರಾಜ್ಯದ ಆಡಳಿತಾರೂಢ ಎಲ್‌ಡಿಎಫ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿವೆ.ಪಕ್ಷದ ಬಹಿರಂಗ ಟೀಕೆ

“ನನಗೆ ಅವಕಾಶ ಸಿಕ್ಕರೆ, ನಾನು ಎಡ ಪಂಥೀಯರೊಂದಿಗೆ ನಿಂತು ಜನರ ಸೇವೆ ಮಾಡಲು ಸಿದ್ಧನಿದ್ದೇನೆ. ನನಗೆ ಜಾಗವಿದೆಯೇ ಎಂದು ನಾನು ಎಲ್‌ಡಿಎಫ್‌ಗೆ ಕೇಳಿದ್ದೇನೆ. ಅವರ ಪ್ರತಿಕ್ರಿಯೆಗಾಗಿ ನಾನು ಕಾಯುತ್ತಿದ್ದೇನೆ” ಎಂದು ಸರಿನ್ ಗುರುವಾರ ಮಾಧ್ಯಮಗಳಿಗೆ ಹೇಳಿದ್ದಾರೆ.ಪಕ್ಷದ ಬಹಿರಂಗ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳದ ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಟೀಕಿಸಿದ ಅವರು, “ಕೇರಳದಲ್ಲಿ ಕಾಂಗ್ರೆಸ್ ಅವನತಿಗೆ ಅವರೇ ಜವಾಬ್ದಾರರು. ಸತೀಶನ್ ಅವರು ಪಕ್ಷವನ್ನು ಹೈಜಾಕ್ ಮಾಡಿದ್ದು, ಪಕ್ಷದ ಕಾರ್ಯಕರ್ತರನ್ನು ವಂಚಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಬುಧವಾರದಂದು ಸರಿನ್ ಅವರು ಪತ್ರಿಕಾಗೋಷ್ಠಿ ನಡೆಸಿ ಪಕ್ಷದ ನಾಯಕತ್ವವನ್ನು ಕಟುವಾಗಿ ಟೀಕಿಸಿದ್ದರು. ಅದರಲ್ಲೂ ಮುಖ್ಯವಾಗಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಹುಲ್ ಮಂಕೂಟತಿಲ್ ಅವರನ್ನು ಪಾಲಕ್ಕಾಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪಕ್ಷದ ನಿರ್ಧಾರವನ್ನು ಅವರು ಖಂಡಿಸಿದ್ದರು.

ಪಕ್ಷದ ಅಭ್ಯರ್ಥಿ ರಾಹುಲ್‌ಗಿಂತ ಉಪಚುನಾವಣೆಯಲ್ಲಿ ಗೆಲ್ಲುವ ಉತ್ತಮ ಅವಕಾಶ ನನಗಿದೆ ಎಂದು ಪ್ರತಿಪಾದಿಸಿದ ಅವರು, ಕಾಂಗ್ರೆಸ್ ತನ್ನ ಅಭ್ಯರ್ಥಿ ಆಯ್ಕೆಯನ್ನು ಮರುಪರಿಶೀಲಿಸದಿದ್ದರೆ ಹರಿಯಾಣದಂತೆಯೇ ಇಲ್ಲಿಯೂ ಭವಿಷ್ಯದಲ್ಲಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗುರುವಾರ ಅಧಿಕೃತ ಉಚ್ಚಾಟನೆ ಪತ್ರವನ್ನು ಹೊರಡಿಸುವ ಮೂಲಕ ಸರಿನ್ ಅವರ ಭಿನ್ನಾಭಿಪ್ರಾಯಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. “ಗಂಭೀರ ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ಅಶಿಸ್ತಿನ ಕಾರಣದಿಂದ ಸರಿನ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ” ಕೆಪಿಸಿಸಿ ಅಧ್ಯಕ್ಷ ಕೆ ಸುಧಾಕರನ್ ಅವರು ಹೇಳಿದ್ದಾರೆ.

ಆದಾಗ್ಯೂ, ಸರಿನ್ ಅವರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದು, “ಕಾಂಗ್ರೆಸ್‌ಗೆ ಕೇರಳದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ. ಅದನ್ನು ಎಡಪಕ್ಷಗಳು ಮಾಡಬಲ್ಲುದು” ಎಂದು ಪ್ರತಿಪಾದಿಸಿದ್ದಾರೆ.

ರಾಹುಲ್ ಮಂಕೂಟತಿಲ್ ಅವರನ್ನು ಟೀಕಿಸಿದ ಅವರು, “ಕೇವಲ ಸಾಮಾಜಿಕ ಮಾಧ್ಯಮದ ರೀಲ್‌ಗಳನ್ನು ಪೋಸ್ಟ್ ಮಾಡುವುದು ಮತ್ತು ಜೈಲಿಗೆ ಹೋಗುವುದು ಒಬ್ಬ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸುವ ಮಾನದಂಡವಲ್ಲ” ಎಂದು ಹೇಳಿದ್ದಾರೆ. ಅಷ್ಟೆ ಅಲ್ಲದೆ, ಎಲ್‌ಡಿಎಫ್‌ನ ಭಿನ್ನಮತೀಯ ಶಾಸಕ ಪಿವಿ ಅನ್ವರ್ ಮತ್ತು ಬಿಜೆಪಿಯ ಸದಸ್ಯರು ಕೂಡಾ ತಮ್ಮನ್ನು ಅವರೊಂದಿಗೆ ಸೇರಲು ಸಂಪರ್ಕಿಸಿದ್ದಾರೆ ಎಂದು ಸರಿನ್ ಹೇಳಿದ್ದಾರೆ.

ಇದನ್ನೂ ಓದಿ: FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...