Homeಮುಖಪುಟಪಕ್ಷದ ಬಹಿರಂಗ ಟೀಕೆ; ಐಟಿ ಸೆಲ್ ಮುಖ್ಯಸ್ಥನನ್ನು ಉಚ್ಚಾಟಿಸಿದ ಕೇರಳ ಕಾಂಗ್ರೆಸ್

ಪಕ್ಷದ ಬಹಿರಂಗ ಟೀಕೆ; ಐಟಿ ಸೆಲ್ ಮುಖ್ಯಸ್ಥನನ್ನು ಉಚ್ಚಾಟಿಸಿದ ಕೇರಳ ಕಾಂಗ್ರೆಸ್

- Advertisement -
- Advertisement -

ಕೇರಳದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕತ್ವವನ್ನು ಸಾರ್ವಜನಿಕವಾಗಿ ಟೀಕಿಸಿದ್ದಕ್ಕಾಗಿ ಪಕ್ಷದ ಡಿಜಿಟಲ್ ಮೀಡಿಯಾ ಸೆಲ್ ಸಂಚಾಲಕ ಪಿ ಸರಿನ್ ಅವರನ್ನು ಉಚ್ಚಾಟಿಸಿದೆ. ಪಕ್ಷದಿಂದ ಉಚ್ಷಾಟಿಸಲ್ಪಟ್ಟ ಸರಿನ್ ಈಗ ರಾಜ್ಯದ ಆಡಳಿತಾರೂಢ ಎಲ್‌ಡಿಎಫ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿವೆ.ಪಕ್ಷದ ಬಹಿರಂಗ ಟೀಕೆ

“ನನಗೆ ಅವಕಾಶ ಸಿಕ್ಕರೆ, ನಾನು ಎಡ ಪಂಥೀಯರೊಂದಿಗೆ ನಿಂತು ಜನರ ಸೇವೆ ಮಾಡಲು ಸಿದ್ಧನಿದ್ದೇನೆ. ನನಗೆ ಜಾಗವಿದೆಯೇ ಎಂದು ನಾನು ಎಲ್‌ಡಿಎಫ್‌ಗೆ ಕೇಳಿದ್ದೇನೆ. ಅವರ ಪ್ರತಿಕ್ರಿಯೆಗಾಗಿ ನಾನು ಕಾಯುತ್ತಿದ್ದೇನೆ” ಎಂದು ಸರಿನ್ ಗುರುವಾರ ಮಾಧ್ಯಮಗಳಿಗೆ ಹೇಳಿದ್ದಾರೆ.ಪಕ್ಷದ ಬಹಿರಂಗ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳದ ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಟೀಕಿಸಿದ ಅವರು, “ಕೇರಳದಲ್ಲಿ ಕಾಂಗ್ರೆಸ್ ಅವನತಿಗೆ ಅವರೇ ಜವಾಬ್ದಾರರು. ಸತೀಶನ್ ಅವರು ಪಕ್ಷವನ್ನು ಹೈಜಾಕ್ ಮಾಡಿದ್ದು, ಪಕ್ಷದ ಕಾರ್ಯಕರ್ತರನ್ನು ವಂಚಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಬುಧವಾರದಂದು ಸರಿನ್ ಅವರು ಪತ್ರಿಕಾಗೋಷ್ಠಿ ನಡೆಸಿ ಪಕ್ಷದ ನಾಯಕತ್ವವನ್ನು ಕಟುವಾಗಿ ಟೀಕಿಸಿದ್ದರು. ಅದರಲ್ಲೂ ಮುಖ್ಯವಾಗಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಹುಲ್ ಮಂಕೂಟತಿಲ್ ಅವರನ್ನು ಪಾಲಕ್ಕಾಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪಕ್ಷದ ನಿರ್ಧಾರವನ್ನು ಅವರು ಖಂಡಿಸಿದ್ದರು.

ಪಕ್ಷದ ಅಭ್ಯರ್ಥಿ ರಾಹುಲ್‌ಗಿಂತ ಉಪಚುನಾವಣೆಯಲ್ಲಿ ಗೆಲ್ಲುವ ಉತ್ತಮ ಅವಕಾಶ ನನಗಿದೆ ಎಂದು ಪ್ರತಿಪಾದಿಸಿದ ಅವರು, ಕಾಂಗ್ರೆಸ್ ತನ್ನ ಅಭ್ಯರ್ಥಿ ಆಯ್ಕೆಯನ್ನು ಮರುಪರಿಶೀಲಿಸದಿದ್ದರೆ ಹರಿಯಾಣದಂತೆಯೇ ಇಲ್ಲಿಯೂ ಭವಿಷ್ಯದಲ್ಲಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗುರುವಾರ ಅಧಿಕೃತ ಉಚ್ಚಾಟನೆ ಪತ್ರವನ್ನು ಹೊರಡಿಸುವ ಮೂಲಕ ಸರಿನ್ ಅವರ ಭಿನ್ನಾಭಿಪ್ರಾಯಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. “ಗಂಭೀರ ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ಅಶಿಸ್ತಿನ ಕಾರಣದಿಂದ ಸರಿನ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ” ಕೆಪಿಸಿಸಿ ಅಧ್ಯಕ್ಷ ಕೆ ಸುಧಾಕರನ್ ಅವರು ಹೇಳಿದ್ದಾರೆ.

ಆದಾಗ್ಯೂ, ಸರಿನ್ ಅವರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದು, “ಕಾಂಗ್ರೆಸ್‌ಗೆ ಕೇರಳದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ. ಅದನ್ನು ಎಡಪಕ್ಷಗಳು ಮಾಡಬಲ್ಲುದು” ಎಂದು ಪ್ರತಿಪಾದಿಸಿದ್ದಾರೆ.

ರಾಹುಲ್ ಮಂಕೂಟತಿಲ್ ಅವರನ್ನು ಟೀಕಿಸಿದ ಅವರು, “ಕೇವಲ ಸಾಮಾಜಿಕ ಮಾಧ್ಯಮದ ರೀಲ್‌ಗಳನ್ನು ಪೋಸ್ಟ್ ಮಾಡುವುದು ಮತ್ತು ಜೈಲಿಗೆ ಹೋಗುವುದು ಒಬ್ಬ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸುವ ಮಾನದಂಡವಲ್ಲ” ಎಂದು ಹೇಳಿದ್ದಾರೆ. ಅಷ್ಟೆ ಅಲ್ಲದೆ, ಎಲ್‌ಡಿಎಫ್‌ನ ಭಿನ್ನಮತೀಯ ಶಾಸಕ ಪಿವಿ ಅನ್ವರ್ ಮತ್ತು ಬಿಜೆಪಿಯ ಸದಸ್ಯರು ಕೂಡಾ ತಮ್ಮನ್ನು ಅವರೊಂದಿಗೆ ಸೇರಲು ಸಂಪರ್ಕಿಸಿದ್ದಾರೆ ಎಂದು ಸರಿನ್ ಹೇಳಿದ್ದಾರೆ.

ಇದನ್ನೂ ಓದಿ: FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...