Homeಮುಖಪುಟಪಕ್ಷದ ಬಹಿರಂಗ ಟೀಕೆ; ಐಟಿ ಸೆಲ್ ಮುಖ್ಯಸ್ಥನನ್ನು ಉಚ್ಚಾಟಿಸಿದ ಕೇರಳ ಕಾಂಗ್ರೆಸ್

ಪಕ್ಷದ ಬಹಿರಂಗ ಟೀಕೆ; ಐಟಿ ಸೆಲ್ ಮುಖ್ಯಸ್ಥನನ್ನು ಉಚ್ಚಾಟಿಸಿದ ಕೇರಳ ಕಾಂಗ್ರೆಸ್

- Advertisement -
- Advertisement -

ಕೇರಳದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕತ್ವವನ್ನು ಸಾರ್ವಜನಿಕವಾಗಿ ಟೀಕಿಸಿದ್ದಕ್ಕಾಗಿ ಪಕ್ಷದ ಡಿಜಿಟಲ್ ಮೀಡಿಯಾ ಸೆಲ್ ಸಂಚಾಲಕ ಪಿ ಸರಿನ್ ಅವರನ್ನು ಉಚ್ಚಾಟಿಸಿದೆ. ಪಕ್ಷದಿಂದ ಉಚ್ಷಾಟಿಸಲ್ಪಟ್ಟ ಸರಿನ್ ಈಗ ರಾಜ್ಯದ ಆಡಳಿತಾರೂಢ ಎಲ್‌ಡಿಎಫ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿವೆ.ಪಕ್ಷದ ಬಹಿರಂಗ ಟೀಕೆ

“ನನಗೆ ಅವಕಾಶ ಸಿಕ್ಕರೆ, ನಾನು ಎಡ ಪಂಥೀಯರೊಂದಿಗೆ ನಿಂತು ಜನರ ಸೇವೆ ಮಾಡಲು ಸಿದ್ಧನಿದ್ದೇನೆ. ನನಗೆ ಜಾಗವಿದೆಯೇ ಎಂದು ನಾನು ಎಲ್‌ಡಿಎಫ್‌ಗೆ ಕೇಳಿದ್ದೇನೆ. ಅವರ ಪ್ರತಿಕ್ರಿಯೆಗಾಗಿ ನಾನು ಕಾಯುತ್ತಿದ್ದೇನೆ” ಎಂದು ಸರಿನ್ ಗುರುವಾರ ಮಾಧ್ಯಮಗಳಿಗೆ ಹೇಳಿದ್ದಾರೆ.ಪಕ್ಷದ ಬಹಿರಂಗ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳದ ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಟೀಕಿಸಿದ ಅವರು, “ಕೇರಳದಲ್ಲಿ ಕಾಂಗ್ರೆಸ್ ಅವನತಿಗೆ ಅವರೇ ಜವಾಬ್ದಾರರು. ಸತೀಶನ್ ಅವರು ಪಕ್ಷವನ್ನು ಹೈಜಾಕ್ ಮಾಡಿದ್ದು, ಪಕ್ಷದ ಕಾರ್ಯಕರ್ತರನ್ನು ವಂಚಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಬುಧವಾರದಂದು ಸರಿನ್ ಅವರು ಪತ್ರಿಕಾಗೋಷ್ಠಿ ನಡೆಸಿ ಪಕ್ಷದ ನಾಯಕತ್ವವನ್ನು ಕಟುವಾಗಿ ಟೀಕಿಸಿದ್ದರು. ಅದರಲ್ಲೂ ಮುಖ್ಯವಾಗಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಹುಲ್ ಮಂಕೂಟತಿಲ್ ಅವರನ್ನು ಪಾಲಕ್ಕಾಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪಕ್ಷದ ನಿರ್ಧಾರವನ್ನು ಅವರು ಖಂಡಿಸಿದ್ದರು.

ಪಕ್ಷದ ಅಭ್ಯರ್ಥಿ ರಾಹುಲ್‌ಗಿಂತ ಉಪಚುನಾವಣೆಯಲ್ಲಿ ಗೆಲ್ಲುವ ಉತ್ತಮ ಅವಕಾಶ ನನಗಿದೆ ಎಂದು ಪ್ರತಿಪಾದಿಸಿದ ಅವರು, ಕಾಂಗ್ರೆಸ್ ತನ್ನ ಅಭ್ಯರ್ಥಿ ಆಯ್ಕೆಯನ್ನು ಮರುಪರಿಶೀಲಿಸದಿದ್ದರೆ ಹರಿಯಾಣದಂತೆಯೇ ಇಲ್ಲಿಯೂ ಭವಿಷ್ಯದಲ್ಲಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಗುರುವಾರ ಅಧಿಕೃತ ಉಚ್ಚಾಟನೆ ಪತ್ರವನ್ನು ಹೊರಡಿಸುವ ಮೂಲಕ ಸರಿನ್ ಅವರ ಭಿನ್ನಾಭಿಪ್ರಾಯಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. “ಗಂಭೀರ ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ಅಶಿಸ್ತಿನ ಕಾರಣದಿಂದ ಸರಿನ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ” ಕೆಪಿಸಿಸಿ ಅಧ್ಯಕ್ಷ ಕೆ ಸುಧಾಕರನ್ ಅವರು ಹೇಳಿದ್ದಾರೆ.

ಆದಾಗ್ಯೂ, ಸರಿನ್ ಅವರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದು, “ಕಾಂಗ್ರೆಸ್‌ಗೆ ಕೇರಳದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ. ಅದನ್ನು ಎಡಪಕ್ಷಗಳು ಮಾಡಬಲ್ಲುದು” ಎಂದು ಪ್ರತಿಪಾದಿಸಿದ್ದಾರೆ.

ರಾಹುಲ್ ಮಂಕೂಟತಿಲ್ ಅವರನ್ನು ಟೀಕಿಸಿದ ಅವರು, “ಕೇವಲ ಸಾಮಾಜಿಕ ಮಾಧ್ಯಮದ ರೀಲ್‌ಗಳನ್ನು ಪೋಸ್ಟ್ ಮಾಡುವುದು ಮತ್ತು ಜೈಲಿಗೆ ಹೋಗುವುದು ಒಬ್ಬ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸುವ ಮಾನದಂಡವಲ್ಲ” ಎಂದು ಹೇಳಿದ್ದಾರೆ. ಅಷ್ಟೆ ಅಲ್ಲದೆ, ಎಲ್‌ಡಿಎಫ್‌ನ ಭಿನ್ನಮತೀಯ ಶಾಸಕ ಪಿವಿ ಅನ್ವರ್ ಮತ್ತು ಬಿಜೆಪಿಯ ಸದಸ್ಯರು ಕೂಡಾ ತಮ್ಮನ್ನು ಅವರೊಂದಿಗೆ ಸೇರಲು ಸಂಪರ್ಕಿಸಿದ್ದಾರೆ ಎಂದು ಸರಿನ್ ಹೇಳಿದ್ದಾರೆ.

ಇದನ್ನೂ ಓದಿ: FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...