Homeಮುಖಪುಟದೇಶದಾದ್ಯಂತ ಪಕ್ಷದ ಸಂಘಟನೆ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಸಿಪಿಐ(ಎಂ)

ದೇಶದಾದ್ಯಂತ ಪಕ್ಷದ ಸಂಘಟನೆ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಸಿಪಿಐ(ಎಂ)

- Advertisement -
- Advertisement -

ಇತ್ತಿಚೆಗೆ ಆಯ್ಕೆಯಾದ ಹೊಸ ನಾಯಕತ್ವದೊಂದಿಗೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) [ಸಿಪಿಐ(ಎಂ)] ತನ್ನ ಪ್ರಭಾವವನ್ನು ಕಾಪಾಡಿಕೊಳ್ಳಲು ಮತ್ತು ವಿವಿಧ ರಾಜ್ಯಗಳಲ್ಲಿ ತನ್ನ ಬೆಂಬಲಿಗರ ನೆಲೆಯನ್ನು ವಿಸ್ತರಿಸಲು ಸಮಗ್ರ ಕಾರ್ಯಕ್ರಮವನ್ನು ರೂಪಿಸಿದೆ ಎಂದು TNIE ವರದಿ ಮಾಡಿದೆ. ದೇಶದಾದ್ಯಂತ ಪಕ್ಷದ ಸಂಘಟನೆ

ಒಂದು ತಿಂಗಳೊಳಗೆ, ಪಕ್ಷವು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸರಣಿ ಸಭೆಗಳ ಮೂಲಕ ಎಲ್ಲಾ 10 ಲಕ್ಷ ಸದಸ್ಯರನ್ನು ತೊಡಗಿಸಿ ಕೊಳ್ಳುವ ಗುರಿಯನ್ನು ಹೊಂದಿದ್ದು, ಪಕ್ಷದ ಇತ್ತಿಚಿನ ಮಹಾ ಅಧಿವೇಶನದಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

ಸಿಪಿಐ(ಎಂ) ತಾನು ವರ್ಷಗಳ ಕಾಲ ಆಡಳಿತ ನಡೆಸಿದ ರಾಜ್ಯಗಳಲ್ಲಿ ಪರಿಚಯಿಸಿದ ಸುಧಾರಣೆಗಳನ್ನು ಸಕ್ರಿಯವಾಗಿ ಎತ್ತಿ ತೋರಿಸಲು ಮತ್ತು ಅವುಗಳನ್ನು ಸಾರ್ವಜನಿಕರಿಗೆ ನೆನಪಿಸಲು ಯೋಜಿಸಿದೆ. ಪಂಜಾಬ್ ಮತ್ತು ಕೇರಳ ಎಂಬ ಎರಡು ರಾಜ್ಯಗಳಲ್ಲಿ ಈಗಾಗಲೇ ಈ ಬಗ್ಗೆ ಸಭೆಗಳು ನಡೆದಿವೆ ಎಂದು ವರದಿಯಾಗಿದೆ.

“ನಮ್ಮ ಕಾರ್ಯವನ್ನು ಶೀಘ್ರದಲ್ಲೇ ಗುರುತಿಸಲಾಗುವುದು. ಪಕ್ಷದ ಮಹಾ ಅಧಿವೇಶನದ ಪ್ರಮುಖ ನಿರ್ಧಾರಗಳನ್ನು ಪಕ್ಷದೊಳಗೆ ಹೇಗೆ ತಿಳಿಸಬೇಕು ಎಂಬುದನ್ನು ವಿವರಿಸುವ ಟಿಪ್ಪಣಿಯನ್ನು ನಾವು ಸಿದ್ಧಪಡಿಸಿದ್ದೇವೆ. ಜೂನ್ ಮಧ್ಯದ ವೇಳೆಗೆ ಸಂದೇಶವು ಇಡೀ ಸಂಘಟನೆಯನ್ನು ತಲುಪುತ್ತದೆ” ಎಂದು ಹೊಸದಾಗಿ ಆಯ್ಕೆಯಾದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಹೇಳಿದ್ದಾರೆ.

“ಸಂಘಟನೆ ವಿಸ್ತರಿಸಲು, ನಾವು ಬಡವರಲ್ಲಿ ಬಡವರೊಂದಿಗೆ ಕೆಲಸ ಮಾಡಬೇಕು. ಈ ಕೆಂಪು ಧ್ವಜದ ಪಕ್ಷವು ತಮ್ಮದು ಎಂದು ಅವರು ಭಾವಿಸಬೇಕು. ಮತ್ತು ಬೇರೆ ಯಾವುದೇ ಪಕ್ಷದ ಮೂಲಕ ಅವರು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂಬುವುದು ಅರಿಯಬೇಕು” ಎಂದು ಅವರು ಹೇಳಿದ್ದಾರೆ.

ರಾಜಕೀಯ ಆವೇಗವನ್ನು ಉಳಿಸಿಕೊಳ್ಳುವ ವಿಶಾಲ ಪ್ರಯತ್ನಗಳ ಭಾಗವಾಗಿ, ಪಕ್ಷದ ಅಸ್ತಿತ್ವದಲ್ಲಿರುವ ನೆಲೆಯನ್ನು ಬಲಪಡಿಸುವ ಅಗತ್ಯವನ್ನು ಬೇಬಿ ಒತ್ತಿ ಹೇಳಿದ್ದಾರೆ. “ನಮಗೆ ಯಾವುದೇ ಸ್ಥಳೀಯ ಪ್ರಭಾವವಿದ್ದರೂ, ಮತ್ತಷ್ಟು ಸವೆತ ಉಂಟಾಗದಂತೆ ನಾವು ಖಚಿತಪಡಿಸಿಕೊಳ್ಳಬೇಕು.” ಎಂದು ಅವರು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ, ಸಿಪಿಐಎಂ ತನ್ನ ಆಡಳಿತ ಸಾಧನೆಗಳನ್ನು, ವಿಶೇಷವಾಗಿ ಕೇರಳ ಕೃಷಿ ಸಂಬಂಧ ಮಸೂದೆ ಮತ್ತು ತ್ರಿಪುರ ಭೂ ಕಂದಾಯ ಮತ್ತು ಭೂ ಸುಧಾರಣಾ ಕಾಯ್ದೆಯಂತಹ ಐತಿಹಾಸಿಕ ಭೂಸುಧಾರಣೆಗಳನ್ನು ಪ್ರದರ್ಶಿಸುವ ಮೂಲಕ ಜನರೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಅಭಿಯಾನಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ.

ಪಕ್ಷವು ಈಗ ತನ್ನ ಐತಿಹಾಸಿಕ ಪಾತ್ರವನ್ನು ಪುನರುಚ್ಚರಿಸಲು ಉದ್ದೇಶಿಸಿದೆ ಎಂದು ಅವರು ಒತ್ತಿ ಹೇಳಿದ್ದಾರೆ. “ಸಿಪಿಎಂ ಅವರೊಂದಿಗೆ ನಿಂತಿದೆ ಎಂದು ನಾವು ಜನರಿಗೆ ತಿಳಿಸಬೇಕಾಗಿದೆ. ನಾವು ಜನರ ನಡುವೆ ಬದುಕಬೇಕು. ಸಿಪಿಎಂ ಯಾವಾಗಲೂ ಅವರ ಪರವಾಗಿ ನಿಂತಿದೆ, ಮತ್ತು ಅವರ ಬೇಡಿಕೆಗಳನ್ನು ಸಮರ್ಥಿಸುವ ಶಕ್ತಿ ನಾವು ಎಂದು ಅವರು ಅರಿತುಕೊಳ್ಳಬೇಕು.” ಎಂದು ಅವರು ಹೇಳಿದ್ದಾರೆ.

ಈ ನಡುವೆ ಸಂಸದ ಬ್ರಿಟ್ಟಾಸ್ ಅವರು ರಾಜ್ಯಸಭೆಯಲ್ಲಿ ಸಿಪಿಎಂ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಿಪಿಎಂ ತನ್ನ ರಾಜ್ಯಸಭಾ ಸಂಸದೀಯ ಪಕ್ಷದ ನಾಯಕರಾಗಿ ಜಾನ್ ಬ್ರಿಟ್ಟಾಸ್ ಅವರನ್ನು ನೇಮಿಸಿದೆ.

ಕೇರಳದ ಸಂಸದರಾಗಿರುವ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಬ್ರಿಟ್ಟಾಸ್ ಅವರು ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಉದ್ಯಮಗಳ ಸಮಿತಿ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಸಲಹಾ ಸಮಿತಿಯ ಸದಸ್ಯರಾಗಿದ್ದಾರೆ. ದೇಶದಾದ್ಯಂತ ಪಕ್ಷದ ಸಂಘಟನೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...