Homeಮುಖಪುಟದೇಶದಾದ್ಯಂತ ಪಕ್ಷದ ಸಂಘಟನೆ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಸಿಪಿಐ(ಎಂ)

ದೇಶದಾದ್ಯಂತ ಪಕ್ಷದ ಸಂಘಟನೆ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಸಿಪಿಐ(ಎಂ)

- Advertisement -
- Advertisement -

ಇತ್ತಿಚೆಗೆ ಆಯ್ಕೆಯಾದ ಹೊಸ ನಾಯಕತ್ವದೊಂದಿಗೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) [ಸಿಪಿಐ(ಎಂ)] ತನ್ನ ಪ್ರಭಾವವನ್ನು ಕಾಪಾಡಿಕೊಳ್ಳಲು ಮತ್ತು ವಿವಿಧ ರಾಜ್ಯಗಳಲ್ಲಿ ತನ್ನ ಬೆಂಬಲಿಗರ ನೆಲೆಯನ್ನು ವಿಸ್ತರಿಸಲು ಸಮಗ್ರ ಕಾರ್ಯಕ್ರಮವನ್ನು ರೂಪಿಸಿದೆ ಎಂದು TNIE ವರದಿ ಮಾಡಿದೆ. ದೇಶದಾದ್ಯಂತ ಪಕ್ಷದ ಸಂಘಟನೆ

ಒಂದು ತಿಂಗಳೊಳಗೆ, ಪಕ್ಷವು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸರಣಿ ಸಭೆಗಳ ಮೂಲಕ ಎಲ್ಲಾ 10 ಲಕ್ಷ ಸದಸ್ಯರನ್ನು ತೊಡಗಿಸಿ ಕೊಳ್ಳುವ ಗುರಿಯನ್ನು ಹೊಂದಿದ್ದು, ಪಕ್ಷದ ಇತ್ತಿಚಿನ ಮಹಾ ಅಧಿವೇಶನದಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

ಸಿಪಿಐ(ಎಂ) ತಾನು ವರ್ಷಗಳ ಕಾಲ ಆಡಳಿತ ನಡೆಸಿದ ರಾಜ್ಯಗಳಲ್ಲಿ ಪರಿಚಯಿಸಿದ ಸುಧಾರಣೆಗಳನ್ನು ಸಕ್ರಿಯವಾಗಿ ಎತ್ತಿ ತೋರಿಸಲು ಮತ್ತು ಅವುಗಳನ್ನು ಸಾರ್ವಜನಿಕರಿಗೆ ನೆನಪಿಸಲು ಯೋಜಿಸಿದೆ. ಪಂಜಾಬ್ ಮತ್ತು ಕೇರಳ ಎಂಬ ಎರಡು ರಾಜ್ಯಗಳಲ್ಲಿ ಈಗಾಗಲೇ ಈ ಬಗ್ಗೆ ಸಭೆಗಳು ನಡೆದಿವೆ ಎಂದು ವರದಿಯಾಗಿದೆ.

“ನಮ್ಮ ಕಾರ್ಯವನ್ನು ಶೀಘ್ರದಲ್ಲೇ ಗುರುತಿಸಲಾಗುವುದು. ಪಕ್ಷದ ಮಹಾ ಅಧಿವೇಶನದ ಪ್ರಮುಖ ನಿರ್ಧಾರಗಳನ್ನು ಪಕ್ಷದೊಳಗೆ ಹೇಗೆ ತಿಳಿಸಬೇಕು ಎಂಬುದನ್ನು ವಿವರಿಸುವ ಟಿಪ್ಪಣಿಯನ್ನು ನಾವು ಸಿದ್ಧಪಡಿಸಿದ್ದೇವೆ. ಜೂನ್ ಮಧ್ಯದ ವೇಳೆಗೆ ಸಂದೇಶವು ಇಡೀ ಸಂಘಟನೆಯನ್ನು ತಲುಪುತ್ತದೆ” ಎಂದು ಹೊಸದಾಗಿ ಆಯ್ಕೆಯಾದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಹೇಳಿದ್ದಾರೆ.

“ಸಂಘಟನೆ ವಿಸ್ತರಿಸಲು, ನಾವು ಬಡವರಲ್ಲಿ ಬಡವರೊಂದಿಗೆ ಕೆಲಸ ಮಾಡಬೇಕು. ಈ ಕೆಂಪು ಧ್ವಜದ ಪಕ್ಷವು ತಮ್ಮದು ಎಂದು ಅವರು ಭಾವಿಸಬೇಕು. ಮತ್ತು ಬೇರೆ ಯಾವುದೇ ಪಕ್ಷದ ಮೂಲಕ ಅವರು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂಬುವುದು ಅರಿಯಬೇಕು” ಎಂದು ಅವರು ಹೇಳಿದ್ದಾರೆ.

ರಾಜಕೀಯ ಆವೇಗವನ್ನು ಉಳಿಸಿಕೊಳ್ಳುವ ವಿಶಾಲ ಪ್ರಯತ್ನಗಳ ಭಾಗವಾಗಿ, ಪಕ್ಷದ ಅಸ್ತಿತ್ವದಲ್ಲಿರುವ ನೆಲೆಯನ್ನು ಬಲಪಡಿಸುವ ಅಗತ್ಯವನ್ನು ಬೇಬಿ ಒತ್ತಿ ಹೇಳಿದ್ದಾರೆ. “ನಮಗೆ ಯಾವುದೇ ಸ್ಥಳೀಯ ಪ್ರಭಾವವಿದ್ದರೂ, ಮತ್ತಷ್ಟು ಸವೆತ ಉಂಟಾಗದಂತೆ ನಾವು ಖಚಿತಪಡಿಸಿಕೊಳ್ಳಬೇಕು.” ಎಂದು ಅವರು ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ, ಸಿಪಿಐಎಂ ತನ್ನ ಆಡಳಿತ ಸಾಧನೆಗಳನ್ನು, ವಿಶೇಷವಾಗಿ ಕೇರಳ ಕೃಷಿ ಸಂಬಂಧ ಮಸೂದೆ ಮತ್ತು ತ್ರಿಪುರ ಭೂ ಕಂದಾಯ ಮತ್ತು ಭೂ ಸುಧಾರಣಾ ಕಾಯ್ದೆಯಂತಹ ಐತಿಹಾಸಿಕ ಭೂಸುಧಾರಣೆಗಳನ್ನು ಪ್ರದರ್ಶಿಸುವ ಮೂಲಕ ಜನರೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಅಭಿಯಾನಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ.

ಪಕ್ಷವು ಈಗ ತನ್ನ ಐತಿಹಾಸಿಕ ಪಾತ್ರವನ್ನು ಪುನರುಚ್ಚರಿಸಲು ಉದ್ದೇಶಿಸಿದೆ ಎಂದು ಅವರು ಒತ್ತಿ ಹೇಳಿದ್ದಾರೆ. “ಸಿಪಿಎಂ ಅವರೊಂದಿಗೆ ನಿಂತಿದೆ ಎಂದು ನಾವು ಜನರಿಗೆ ತಿಳಿಸಬೇಕಾಗಿದೆ. ನಾವು ಜನರ ನಡುವೆ ಬದುಕಬೇಕು. ಸಿಪಿಎಂ ಯಾವಾಗಲೂ ಅವರ ಪರವಾಗಿ ನಿಂತಿದೆ, ಮತ್ತು ಅವರ ಬೇಡಿಕೆಗಳನ್ನು ಸಮರ್ಥಿಸುವ ಶಕ್ತಿ ನಾವು ಎಂದು ಅವರು ಅರಿತುಕೊಳ್ಳಬೇಕು.” ಎಂದು ಅವರು ಹೇಳಿದ್ದಾರೆ.

ಈ ನಡುವೆ ಸಂಸದ ಬ್ರಿಟ್ಟಾಸ್ ಅವರು ರಾಜ್ಯಸಭೆಯಲ್ಲಿ ಸಿಪಿಎಂ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಿಪಿಎಂ ತನ್ನ ರಾಜ್ಯಸಭಾ ಸಂಸದೀಯ ಪಕ್ಷದ ನಾಯಕರಾಗಿ ಜಾನ್ ಬ್ರಿಟ್ಟಾಸ್ ಅವರನ್ನು ನೇಮಿಸಿದೆ.

ಕೇರಳದ ಸಂಸದರಾಗಿರುವ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಬ್ರಿಟ್ಟಾಸ್ ಅವರು ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಉದ್ಯಮಗಳ ಸಮಿತಿ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಸಲಹಾ ಸಮಿತಿಯ ಸದಸ್ಯರಾಗಿದ್ದಾರೆ. ದೇಶದಾದ್ಯಂತ ಪಕ್ಷದ ಸಂಘಟನೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...