Homeಮುಖಪುಟ’ನೀತಿಗೆಟ್ಟವರು, ದ್ರೋಹಿಗಳ ಗುಂಪು ಪಕ್ಷ ನಡೆಸುತ್ತಿದೆ’: ಕೊಲ್ಕತ್ತಾ ಪಾಲಿಕೆ ಚುನಾವಣೆ ಸೋಲಿನ ಬಳಿಕ ಸ್ವಪಕ್ಷದ...

’ನೀತಿಗೆಟ್ಟವರು, ದ್ರೋಹಿಗಳ ಗುಂಪು ಪಕ್ಷ ನಡೆಸುತ್ತಿದೆ’: ಕೊಲ್ಕತ್ತಾ ಪಾಲಿಕೆ ಚುನಾವಣೆ ಸೋಲಿನ ಬಳಿಕ ಸ್ವಪಕ್ಷದ ವಿರುದ್ಧ ಬಿಜೆಪಿ ಹಿರಿಯ ನಾಯಕನ ಆಕ್ರೋಶ

- Advertisement -
- Advertisement -

ಪಶ್ಚಿಮ ಬಂಗಾಳದ ಕೊಲ್ಕತ್ತಾ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಬಳಿಕ ತಮ್ಮ ಸ್ವ ಪಕ್ಷದ ವಿರುದ್ಧವೇ ಹಿರಿಯ ಬಿಜೆಪಿ ನಾಯಕ ತಥಾಗತ ರಾಯ್ ಅವರು ರಾಜ್ಯ ನಾಯಕತ್ವವನ್ನು ಟೀಕಿಸಿದ್ದಾರೆ. ’ಪಕ್ಷವನ್ನು ಕೊಳೆತ ದುರಾಚಾರದ ಮತ್ತು ದ್ರೋಹಿಗಳ ಗುಂಪು ನಡೆಸುತ್ತಿದೆ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಂಗಳವಾರ, ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲವು 144 ಸದಸ್ಯರ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ ಚುನಾವಣೆಯ,ಲ್ಲಿ ಭರ್ಜರಿ ಜಯ ಗಳಿಸಿದೆ. ಒಟ್ಟು 134 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಳೆದ ಏಳು ತಿಂಗಳ ಹಿಂದೆ ನಡೆಸಿದ್ದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿಯೂ ಟಿಎಂಸಿ ಪ್ರಚಂಡ ವಿಜಯ ಗಳಿಸಿತ್ತು.

ವಿಧಾನಸಭಾ ಚುನಾವಣೆಯ ಸೋಲಿನ ನಂತರ ತನ್ನ ಶಕ್ತಿ ಕಳೆದುಕೊಂಡಿದ್ದ ಬಿಜೆಪಿ ಪಾಲಿಕೆ ಚುನಾವಣೆಯಲ್ಲಿ ಕೇವಲ ಮೂರು ವಾರ್ಡ್‌ಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಮತ್ತು ಸಿಪಿಐ (ಎಂ) ನೇತೃತ್ವದ ಎಡರಂಗ ತಲಾ ಎರಡು ಮತ್ತು ಸ್ವತಂತ್ರರು ಮೂರು ಸ್ಥಾನಗಳನ್ನು ಗೆದ್ದಿವೆ.

ಇದನ್ನೂ ಓದಿ: ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಟಿಎಂಸಿ ಅಭೂತಪೂರ್ವ ಜಯ; BJP ಹೀನಾಯ ಸೋಲು

ಬಿಜೆಪಿ ಸೋಲಿಗೆ ಆಕ್ರೋಶ ವ್ಯಕ್ತಪಡಿಸಿರುವ ತಥಾಗತ ರಾಯ್, “ಹಿಂದೂ ಬೆಂಗಾಲಿಗಳು ವಿನಾಶ ಮತ್ತು ಅಳಿವಿನತ್ತ ಸಾಗುತ್ತಿರುವಂತೆ ತೋರುತ್ತಿದೆ. ಅವರ ಪ್ರಮುಖ ವಾಸಸ್ಥಾನವಾದ ಪಶ್ಚಿಮ ಬಂಗಾಳ ಕಳೆದ 44 ವರ್ಷಗಳಿಂದ ಆತ್ಮ ವಿನಾಶಕಾರಿಗಳ ಗುಂಪಿನಿಂದ ಆಳಲ್ಪಟ್ಟಿದೆ. ಅತ್ಯಂತ ಕೆಟ್ಟ ವ್ಯಕ್ತಿಗಳು ಅಧಿಕಾರದಲ್ಲಿರುವ ಸರ್ಕಾರದ ಒಂದು ರೂಪ” ಎಂದು ತ್ರಿಪುರಾ ಮತ್ತು ಮೇಘಾಲಯದ ಮಾಜಿ ಗವರ್ನರ್ ತಥಾಗತ ರಾಯ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಅದನ್ನು ಪುನರುತ್ಥಾನಗೊಳಿಸಬಹುದಾಗಿದ್ದ ಬಿಜೆಪಿಯನ್ನು ಸಂಪೂರ್ಣವಾಗಿ ಕೊಳೆತ ಭ್ರಷ್ಟ-ದ್ರೋಹಿಗಳ ಗುಂಪು ನಡೆಸುತ್ತಿದೆ. ಇದರ ಫಲಿತಾಂಶವೇ 2021 ರ ವಿಧಾನಸಭಾ ಚುನಾವಣೆಯ ಸೋಲು. ಅದಾದ ನಂತರ ಗಂಭೀರವಾದ ಯಾವುದೇ ತಿದ್ದುಪಡಿಯಾಗದ ಕಾರಣ, ಪುರಸಭೆ ಚುನಾವಣೆಯಲ್ಲಿ ಸೋತಿದೆ” ಎಂದು ತಮ್ಮ ಪಕ್ಷದ ವಿರುದ್ಧ ಕಿಡಿ ಕಾರಿದ್ದಾರೆ.

ರಾಜ್ಯ ನಾಯಕತ್ವದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ರಾಯ್, ಹಲವು ಸಂದರ್ಭಗಳಲ್ಲಿ ಪಕ್ಷದ ವೇದಿಕೆಗಳಲ್ಲಿಯೇ ಲೋಪದೋಷಗಳನ್ನು ಎತ್ತಿ ತೋರಿಸಿದ್ದರೂ, ತಪ್ಪುಗಳನ್ನು ಸರಿಪಡಿಸಲು ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

“ಬಿಜೆಪಿ ವಿರುದ್ಧ ಸಾರ್ವಜನಿಕವಾಗಿ ನಾನು ಮಾಡಿದ ಹೇಳಿಕೆಗಳ ಬಗ್ಗೆ ಕೆಲವರು ಅಸಮಾಧಾನ ಹೊಂದಿದ್ದಾರೆ. ನನಗೂ ಅಸಮಾಧಾನವಿದೆ. ಆದರೆ ಬೇರೆ ದಾರಿಯಿಲ್ಲ, ನಾನು ಪಕ್ಷದ ವೇದಿಕೆಗಳಲ್ಲಿ ಗುಟ್ಟಾಗಿ ಆ ವಿಷಯಗಳನ್ನು ಹೇಳಿದ್ದೇನೆ, ಆದರೆ ಅದು ಯಾವುದೇ ಫಲಿತಾಂಶವನ್ನು ನೀಡಲಿಲ್ಲ. ನಾನು ಬದುಕಿದ್ದೇನೆಯೇ ಅಥವಾ ಸತ್ತಿದ್ದೇನೆಯೇ ಎಂಬುದು ಮುಖ್ಯವಲ್ಲ, ಹಿಂದೂ ಬೆಂಗಾಲಿಗಳ ಸೋಲು ಸನ್ನಿಹಿತವಾಗಿದೆ ಎಂಬುದು ಮುಖ್ಯ” ಎಂದು ಬರೆದಿದ್ದಾರೆ.

ಬಿಜೆಪಿಯ ಕೈಲಾಶ್ ವಿಜಯವರ್ಗಿಯಾ, ಈಗ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಮತ್ತು ಹಿರಿಯ ನಾಯಕರಾದ ಅರವಿಂದ್ ಮೆನನ್ ಮತ್ತು ಶಿವಪ್ರಕಾಶ್ ಅವರು ತೆಗೆದುಕೊಂಡ ನಿರ್ಧಾರಗಳನ್ನು, ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನವನ್ನು ತಥಾಗತ ರಾಯ್ ಈ ಹಿಂದೆಯೂ ಟೀಕಿಸಿದ್ದರು.


ಇದನ್ನೂ ಓದಿ: ನ್ಯಾಯಾಂಗದ ನೇಮಕಾತಿಯನ್ನು ನೋಡಿ ಅಂಬೇಡ್ಕರ್‌ ಆತ್ಮ ಕೊರಗುತ್ತಿರಬಹುದು: ಸಿಪಿಐ(ಎಂ) ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...