Homeಮುಖಪುಟ’ನೀತಿಗೆಟ್ಟವರು, ದ್ರೋಹಿಗಳ ಗುಂಪು ಪಕ್ಷ ನಡೆಸುತ್ತಿದೆ’: ಕೊಲ್ಕತ್ತಾ ಪಾಲಿಕೆ ಚುನಾವಣೆ ಸೋಲಿನ ಬಳಿಕ ಸ್ವಪಕ್ಷದ...

’ನೀತಿಗೆಟ್ಟವರು, ದ್ರೋಹಿಗಳ ಗುಂಪು ಪಕ್ಷ ನಡೆಸುತ್ತಿದೆ’: ಕೊಲ್ಕತ್ತಾ ಪಾಲಿಕೆ ಚುನಾವಣೆ ಸೋಲಿನ ಬಳಿಕ ಸ್ವಪಕ್ಷದ ವಿರುದ್ಧ ಬಿಜೆಪಿ ಹಿರಿಯ ನಾಯಕನ ಆಕ್ರೋಶ

- Advertisement -
- Advertisement -

ಪಶ್ಚಿಮ ಬಂಗಾಳದ ಕೊಲ್ಕತ್ತಾ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಬಳಿಕ ತಮ್ಮ ಸ್ವ ಪಕ್ಷದ ವಿರುದ್ಧವೇ ಹಿರಿಯ ಬಿಜೆಪಿ ನಾಯಕ ತಥಾಗತ ರಾಯ್ ಅವರು ರಾಜ್ಯ ನಾಯಕತ್ವವನ್ನು ಟೀಕಿಸಿದ್ದಾರೆ. ’ಪಕ್ಷವನ್ನು ಕೊಳೆತ ದುರಾಚಾರದ ಮತ್ತು ದ್ರೋಹಿಗಳ ಗುಂಪು ನಡೆಸುತ್ತಿದೆ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಂಗಳವಾರ, ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲವು 144 ಸದಸ್ಯರ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ ಚುನಾವಣೆಯ,ಲ್ಲಿ ಭರ್ಜರಿ ಜಯ ಗಳಿಸಿದೆ. ಒಟ್ಟು 134 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಳೆದ ಏಳು ತಿಂಗಳ ಹಿಂದೆ ನಡೆಸಿದ್ದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿಯೂ ಟಿಎಂಸಿ ಪ್ರಚಂಡ ವಿಜಯ ಗಳಿಸಿತ್ತು.

ವಿಧಾನಸಭಾ ಚುನಾವಣೆಯ ಸೋಲಿನ ನಂತರ ತನ್ನ ಶಕ್ತಿ ಕಳೆದುಕೊಂಡಿದ್ದ ಬಿಜೆಪಿ ಪಾಲಿಕೆ ಚುನಾವಣೆಯಲ್ಲಿ ಕೇವಲ ಮೂರು ವಾರ್ಡ್‌ಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಮತ್ತು ಸಿಪಿಐ (ಎಂ) ನೇತೃತ್ವದ ಎಡರಂಗ ತಲಾ ಎರಡು ಮತ್ತು ಸ್ವತಂತ್ರರು ಮೂರು ಸ್ಥಾನಗಳನ್ನು ಗೆದ್ದಿವೆ.

ಇದನ್ನೂ ಓದಿ: ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಟಿಎಂಸಿ ಅಭೂತಪೂರ್ವ ಜಯ; BJP ಹೀನಾಯ ಸೋಲು

ಬಿಜೆಪಿ ಸೋಲಿಗೆ ಆಕ್ರೋಶ ವ್ಯಕ್ತಪಡಿಸಿರುವ ತಥಾಗತ ರಾಯ್, “ಹಿಂದೂ ಬೆಂಗಾಲಿಗಳು ವಿನಾಶ ಮತ್ತು ಅಳಿವಿನತ್ತ ಸಾಗುತ್ತಿರುವಂತೆ ತೋರುತ್ತಿದೆ. ಅವರ ಪ್ರಮುಖ ವಾಸಸ್ಥಾನವಾದ ಪಶ್ಚಿಮ ಬಂಗಾಳ ಕಳೆದ 44 ವರ್ಷಗಳಿಂದ ಆತ್ಮ ವಿನಾಶಕಾರಿಗಳ ಗುಂಪಿನಿಂದ ಆಳಲ್ಪಟ್ಟಿದೆ. ಅತ್ಯಂತ ಕೆಟ್ಟ ವ್ಯಕ್ತಿಗಳು ಅಧಿಕಾರದಲ್ಲಿರುವ ಸರ್ಕಾರದ ಒಂದು ರೂಪ” ಎಂದು ತ್ರಿಪುರಾ ಮತ್ತು ಮೇಘಾಲಯದ ಮಾಜಿ ಗವರ್ನರ್ ತಥಾಗತ ರಾಯ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಅದನ್ನು ಪುನರುತ್ಥಾನಗೊಳಿಸಬಹುದಾಗಿದ್ದ ಬಿಜೆಪಿಯನ್ನು ಸಂಪೂರ್ಣವಾಗಿ ಕೊಳೆತ ಭ್ರಷ್ಟ-ದ್ರೋಹಿಗಳ ಗುಂಪು ನಡೆಸುತ್ತಿದೆ. ಇದರ ಫಲಿತಾಂಶವೇ 2021 ರ ವಿಧಾನಸಭಾ ಚುನಾವಣೆಯ ಸೋಲು. ಅದಾದ ನಂತರ ಗಂಭೀರವಾದ ಯಾವುದೇ ತಿದ್ದುಪಡಿಯಾಗದ ಕಾರಣ, ಪುರಸಭೆ ಚುನಾವಣೆಯಲ್ಲಿ ಸೋತಿದೆ” ಎಂದು ತಮ್ಮ ಪಕ್ಷದ ವಿರುದ್ಧ ಕಿಡಿ ಕಾರಿದ್ದಾರೆ.

ರಾಜ್ಯ ನಾಯಕತ್ವದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ರಾಯ್, ಹಲವು ಸಂದರ್ಭಗಳಲ್ಲಿ ಪಕ್ಷದ ವೇದಿಕೆಗಳಲ್ಲಿಯೇ ಲೋಪದೋಷಗಳನ್ನು ಎತ್ತಿ ತೋರಿಸಿದ್ದರೂ, ತಪ್ಪುಗಳನ್ನು ಸರಿಪಡಿಸಲು ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

“ಬಿಜೆಪಿ ವಿರುದ್ಧ ಸಾರ್ವಜನಿಕವಾಗಿ ನಾನು ಮಾಡಿದ ಹೇಳಿಕೆಗಳ ಬಗ್ಗೆ ಕೆಲವರು ಅಸಮಾಧಾನ ಹೊಂದಿದ್ದಾರೆ. ನನಗೂ ಅಸಮಾಧಾನವಿದೆ. ಆದರೆ ಬೇರೆ ದಾರಿಯಿಲ್ಲ, ನಾನು ಪಕ್ಷದ ವೇದಿಕೆಗಳಲ್ಲಿ ಗುಟ್ಟಾಗಿ ಆ ವಿಷಯಗಳನ್ನು ಹೇಳಿದ್ದೇನೆ, ಆದರೆ ಅದು ಯಾವುದೇ ಫಲಿತಾಂಶವನ್ನು ನೀಡಲಿಲ್ಲ. ನಾನು ಬದುಕಿದ್ದೇನೆಯೇ ಅಥವಾ ಸತ್ತಿದ್ದೇನೆಯೇ ಎಂಬುದು ಮುಖ್ಯವಲ್ಲ, ಹಿಂದೂ ಬೆಂಗಾಲಿಗಳ ಸೋಲು ಸನ್ನಿಹಿತವಾಗಿದೆ ಎಂಬುದು ಮುಖ್ಯ” ಎಂದು ಬರೆದಿದ್ದಾರೆ.

ಬಿಜೆಪಿಯ ಕೈಲಾಶ್ ವಿಜಯವರ್ಗಿಯಾ, ಈಗ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಮತ್ತು ಹಿರಿಯ ನಾಯಕರಾದ ಅರವಿಂದ್ ಮೆನನ್ ಮತ್ತು ಶಿವಪ್ರಕಾಶ್ ಅವರು ತೆಗೆದುಕೊಂಡ ನಿರ್ಧಾರಗಳನ್ನು, ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನವನ್ನು ತಥಾಗತ ರಾಯ್ ಈ ಹಿಂದೆಯೂ ಟೀಕಿಸಿದ್ದರು.


ಇದನ್ನೂ ಓದಿ: ನ್ಯಾಯಾಂಗದ ನೇಮಕಾತಿಯನ್ನು ನೋಡಿ ಅಂಬೇಡ್ಕರ್‌ ಆತ್ಮ ಕೊರಗುತ್ತಿರಬಹುದು: ಸಿಪಿಐ(ಎಂ) ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...