Homeಮುಖಪುಟ’ನೀತಿಗೆಟ್ಟವರು, ದ್ರೋಹಿಗಳ ಗುಂಪು ಪಕ್ಷ ನಡೆಸುತ್ತಿದೆ’: ಕೊಲ್ಕತ್ತಾ ಪಾಲಿಕೆ ಚುನಾವಣೆ ಸೋಲಿನ ಬಳಿಕ ಸ್ವಪಕ್ಷದ...

’ನೀತಿಗೆಟ್ಟವರು, ದ್ರೋಹಿಗಳ ಗುಂಪು ಪಕ್ಷ ನಡೆಸುತ್ತಿದೆ’: ಕೊಲ್ಕತ್ತಾ ಪಾಲಿಕೆ ಚುನಾವಣೆ ಸೋಲಿನ ಬಳಿಕ ಸ್ವಪಕ್ಷದ ವಿರುದ್ಧ ಬಿಜೆಪಿ ಹಿರಿಯ ನಾಯಕನ ಆಕ್ರೋಶ

- Advertisement -
- Advertisement -

ಪಶ್ಚಿಮ ಬಂಗಾಳದ ಕೊಲ್ಕತ್ತಾ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಬಳಿಕ ತಮ್ಮ ಸ್ವ ಪಕ್ಷದ ವಿರುದ್ಧವೇ ಹಿರಿಯ ಬಿಜೆಪಿ ನಾಯಕ ತಥಾಗತ ರಾಯ್ ಅವರು ರಾಜ್ಯ ನಾಯಕತ್ವವನ್ನು ಟೀಕಿಸಿದ್ದಾರೆ. ’ಪಕ್ಷವನ್ನು ಕೊಳೆತ ದುರಾಚಾರದ ಮತ್ತು ದ್ರೋಹಿಗಳ ಗುಂಪು ನಡೆಸುತ್ತಿದೆ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಂಗಳವಾರ, ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲವು 144 ಸದಸ್ಯರ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ ಚುನಾವಣೆಯ,ಲ್ಲಿ ಭರ್ಜರಿ ಜಯ ಗಳಿಸಿದೆ. ಒಟ್ಟು 134 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಳೆದ ಏಳು ತಿಂಗಳ ಹಿಂದೆ ನಡೆಸಿದ್ದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿಯೂ ಟಿಎಂಸಿ ಪ್ರಚಂಡ ವಿಜಯ ಗಳಿಸಿತ್ತು.

ವಿಧಾನಸಭಾ ಚುನಾವಣೆಯ ಸೋಲಿನ ನಂತರ ತನ್ನ ಶಕ್ತಿ ಕಳೆದುಕೊಂಡಿದ್ದ ಬಿಜೆಪಿ ಪಾಲಿಕೆ ಚುನಾವಣೆಯಲ್ಲಿ ಕೇವಲ ಮೂರು ವಾರ್ಡ್‌ಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಮತ್ತು ಸಿಪಿಐ (ಎಂ) ನೇತೃತ್ವದ ಎಡರಂಗ ತಲಾ ಎರಡು ಮತ್ತು ಸ್ವತಂತ್ರರು ಮೂರು ಸ್ಥಾನಗಳನ್ನು ಗೆದ್ದಿವೆ.

ಇದನ್ನೂ ಓದಿ: ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಟಿಎಂಸಿ ಅಭೂತಪೂರ್ವ ಜಯ; BJP ಹೀನಾಯ ಸೋಲು

ಬಿಜೆಪಿ ಸೋಲಿಗೆ ಆಕ್ರೋಶ ವ್ಯಕ್ತಪಡಿಸಿರುವ ತಥಾಗತ ರಾಯ್, “ಹಿಂದೂ ಬೆಂಗಾಲಿಗಳು ವಿನಾಶ ಮತ್ತು ಅಳಿವಿನತ್ತ ಸಾಗುತ್ತಿರುವಂತೆ ತೋರುತ್ತಿದೆ. ಅವರ ಪ್ರಮುಖ ವಾಸಸ್ಥಾನವಾದ ಪಶ್ಚಿಮ ಬಂಗಾಳ ಕಳೆದ 44 ವರ್ಷಗಳಿಂದ ಆತ್ಮ ವಿನಾಶಕಾರಿಗಳ ಗುಂಪಿನಿಂದ ಆಳಲ್ಪಟ್ಟಿದೆ. ಅತ್ಯಂತ ಕೆಟ್ಟ ವ್ಯಕ್ತಿಗಳು ಅಧಿಕಾರದಲ್ಲಿರುವ ಸರ್ಕಾರದ ಒಂದು ರೂಪ” ಎಂದು ತ್ರಿಪುರಾ ಮತ್ತು ಮೇಘಾಲಯದ ಮಾಜಿ ಗವರ್ನರ್ ತಥಾಗತ ರಾಯ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಅದನ್ನು ಪುನರುತ್ಥಾನಗೊಳಿಸಬಹುದಾಗಿದ್ದ ಬಿಜೆಪಿಯನ್ನು ಸಂಪೂರ್ಣವಾಗಿ ಕೊಳೆತ ಭ್ರಷ್ಟ-ದ್ರೋಹಿಗಳ ಗುಂಪು ನಡೆಸುತ್ತಿದೆ. ಇದರ ಫಲಿತಾಂಶವೇ 2021 ರ ವಿಧಾನಸಭಾ ಚುನಾವಣೆಯ ಸೋಲು. ಅದಾದ ನಂತರ ಗಂಭೀರವಾದ ಯಾವುದೇ ತಿದ್ದುಪಡಿಯಾಗದ ಕಾರಣ, ಪುರಸಭೆ ಚುನಾವಣೆಯಲ್ಲಿ ಸೋತಿದೆ” ಎಂದು ತಮ್ಮ ಪಕ್ಷದ ವಿರುದ್ಧ ಕಿಡಿ ಕಾರಿದ್ದಾರೆ.

ರಾಜ್ಯ ನಾಯಕತ್ವದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ರಾಯ್, ಹಲವು ಸಂದರ್ಭಗಳಲ್ಲಿ ಪಕ್ಷದ ವೇದಿಕೆಗಳಲ್ಲಿಯೇ ಲೋಪದೋಷಗಳನ್ನು ಎತ್ತಿ ತೋರಿಸಿದ್ದರೂ, ತಪ್ಪುಗಳನ್ನು ಸರಿಪಡಿಸಲು ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

“ಬಿಜೆಪಿ ವಿರುದ್ಧ ಸಾರ್ವಜನಿಕವಾಗಿ ನಾನು ಮಾಡಿದ ಹೇಳಿಕೆಗಳ ಬಗ್ಗೆ ಕೆಲವರು ಅಸಮಾಧಾನ ಹೊಂದಿದ್ದಾರೆ. ನನಗೂ ಅಸಮಾಧಾನವಿದೆ. ಆದರೆ ಬೇರೆ ದಾರಿಯಿಲ್ಲ, ನಾನು ಪಕ್ಷದ ವೇದಿಕೆಗಳಲ್ಲಿ ಗುಟ್ಟಾಗಿ ಆ ವಿಷಯಗಳನ್ನು ಹೇಳಿದ್ದೇನೆ, ಆದರೆ ಅದು ಯಾವುದೇ ಫಲಿತಾಂಶವನ್ನು ನೀಡಲಿಲ್ಲ. ನಾನು ಬದುಕಿದ್ದೇನೆಯೇ ಅಥವಾ ಸತ್ತಿದ್ದೇನೆಯೇ ಎಂಬುದು ಮುಖ್ಯವಲ್ಲ, ಹಿಂದೂ ಬೆಂಗಾಲಿಗಳ ಸೋಲು ಸನ್ನಿಹಿತವಾಗಿದೆ ಎಂಬುದು ಮುಖ್ಯ” ಎಂದು ಬರೆದಿದ್ದಾರೆ.

ಬಿಜೆಪಿಯ ಕೈಲಾಶ್ ವಿಜಯವರ್ಗಿಯಾ, ಈಗ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಮತ್ತು ಹಿರಿಯ ನಾಯಕರಾದ ಅರವಿಂದ್ ಮೆನನ್ ಮತ್ತು ಶಿವಪ್ರಕಾಶ್ ಅವರು ತೆಗೆದುಕೊಂಡ ನಿರ್ಧಾರಗಳನ್ನು, ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನವನ್ನು ತಥಾಗತ ರಾಯ್ ಈ ಹಿಂದೆಯೂ ಟೀಕಿಸಿದ್ದರು.


ಇದನ್ನೂ ಓದಿ: ನ್ಯಾಯಾಂಗದ ನೇಮಕಾತಿಯನ್ನು ನೋಡಿ ಅಂಬೇಡ್ಕರ್‌ ಆತ್ಮ ಕೊರಗುತ್ತಿರಬಹುದು: ಸಿಪಿಐ(ಎಂ) ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...