Homeಮುಖಪುಟಲೋಕಸಭೆ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿ ಸ್ಪರ್ಧೆ!

ಲೋಕಸಭೆ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿ ಸ್ಪರ್ಧೆ!

- Advertisement -
- Advertisement -

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) 2024ರ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರು ಹೇಳಿದ್ದು, ಮೈತ್ರಿ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದೆ. ಆದರೆ ಬಿಎಸ್ಪಿ INDIA ಮೈತ್ರಿ ಕೂಟ ಅಥವಾ ಎನ್‌ಡಿಎ ಮೈತ್ರಿ ಪಕ್ಷಗಳ ಜೊತೆ ಸೇರಿಕೊಂಡಿಲ್ಲ. ಎರಡೂ ಮೈತ್ರಿ ಪಕ್ಷಗಳಿಂದ ದೂರ ಉಳಿದುಕೊಂಡಿತ್ತು. ಈ ಮೊದಲು ಬಿಜೆಪಿ ಜೊತೆ ಬಿಎಸ್ಪಿ ಮೈತ್ರಿ ಬಗ್ಗೆ ಊಹಾಪೋಹಗಳು ಕೂಡ ಭುಗಿಲೆದ್ದಿದ್ದವು. ಬಳಿಕ INDIA ಮೈತ್ರಿ ಕೂಟದ ಜೊತೆ ಸೇರುವ ಬಗ್ಗೆಯೂ ಸುದ್ದಿಯಾಗಿತ್ತು.

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಮಾಯಾವತಿ ಇಂದು 68ನೇ ವರ್ಷಕ್ಕೆ ಕಾಲಿಟ್ಟಿದ್ದು, ರಾಜಕೀಯದಿಂದ ನಿವೃತ್ತಿಯಾಗುವ ಯಾವುದೇ ಯೋಚನೆ ಇಲ್ಲ ಎಂದು ಹೇಳಿದ್ದಾರೆ. ಮೈತ್ರಿ  ನಮಗೆ ಎಂದಿಗೂ ಪ್ರಯೋಜನಕಾರಿಯಾಗಿಲ್ಲ ಮತ್ತು ಮೈತ್ರಿಯಿಂದ ನಾವು ಹೆಚ್ಚು ನಷ್ಟವನ್ನು ಅನುಭವಿಸುತ್ತೇವೆ. ಈ ಕಾರಣಕ್ಕಾಗಿ ದೇಶದ ಬಹುತೇಕ ಪಕ್ಷಗಳು ಬಿಎಸ್ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಯಸುತ್ತವೆ. ಚುನಾವಣೆಯ ನಂತರ ಮೈತ್ರಿ ಮಾಡಿಕೊಳ್ಳಬಹುದು. ಸಾಧ್ಯವಾದರೆ ಚುನಾವಣೆಯ ನಂತರ ಬಿಎಸ್‌ಪಿ ತನ್ನ ಬೆಂಬಲವನ್ನು ನೀಡಬಹುದು. ಈಗ ಲೋಕಸಭೆ ಚುನಾವಣೆಗೆ ನಮ್ಮ ಪಕ್ಷ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ.

ಸೋಮವಾರ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಮಾಯಾವತಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದರು. ನಾನು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಬಯಸುತ್ತೇನೆ ಎಂದು ರಾಜನಾಥ್ ಸಿಂಗ್  ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಹೇಳಿದ್ದರು.

ಮಣಿಪುರದ ಇಂಫಾಲ್‌ನಲ್ಲಿ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಬಿಎಸ್‌ಪಿಯ ಅಮಾನತುಗೊಂಡ ಸಂಸದ ಡ್ಯಾನಿಶ್ ಅಲಿ ಅವರು ಸೇರ್ಪಡೆಗೊಂಡ ಬೆನ್ನಲ್ಲೇ ಮಾಯಾವತಿಯವರು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಲೋಕಸಭೆ ಸಂಸದ ಡ್ಯಾನಿಶ್ ಅಲಿ ಅವರನ್ನು ಇತ್ತೀಚೆಗೆ ಬಿಎಸ್‌ಪಿ ಅಮಾನತು ಮಾಡಿತ್ತು. ಭಾನುವಾರ ಡ್ಯಾನಿಶ್ ಅಲಿ, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಸೇರಿಕೊಂಡಿದ್ದರು.  ಏಕತೆ ಮತ್ತು ನ್ಯಾಯಕ್ಕಾಗಿರುವ ಈ ದೊಡ್ಡ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿಯಾಗಿ ನಾನು ಕರ್ತವ್ಯದಲ್ಲಿ ವಿಫಲ ನಾಗುತ್ತೇನೆ ಎಂದು ಹೇಳಿದ್ದರು.

ಮಾಯಾವತಿ ನೇತೃತ್ವದ ಬಿಎಸ್‌ಪಿಯು ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿರೋಧ ಪಕ್ಷವಾದ INDIA ಮೈತ್ರಿ ಕೂಟದಿಂದ ದೂರ ಉಳಿದಿದ್ದರೂ ಡ್ಯಾನಿಶ್ ಅಲಿ ವಿಪಕ್ಷಗಳ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಬಿಜೆಪಿ ಮತ್ತು ಕೇಂದ್ರ ಸರಕಾರದ ನಿಲುವುಗಳನ್ನು ವಿರೋಧಿಸುವಲ್ಲಿ ಪ್ರತಿಪಕ್ಷಗಳ ನಾಯಕರ ಜೊತೆ ಗುರುತಿಸಿಕೊಂಡಿದ್ದರು. ಇದರ ಬೆನ್ನಲ್ಲಿ ಇತ್ತೀಚೆಗೆ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅವರನ್ನು ಅಮಾನತುಗೊಳಿಸಲಾಗಿತ್ತು.

ಇತ್ತೀಚೆಗೆ ನಡೆದ ಪಕ್ಷದ ಸಭೆಯಲ್ಲಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಸೋದರಳಿಯ ಆಕಾಶ್ ಆನಂದ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಘೋಷಿಸಿದ್ದರು. ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಿದ್ದರು.

ಇದನ್ನು ಓದಿ: ಕಲಬುರಗಿ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಆರೋಪ; ಪ್ರಾಂಶುಪಾಲೆ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...